Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾನೇಕೆ ರಾಜೀನಾಮೆ ಕೋಡಬೇಕೆಂದ ಸಿಎಂ ಸಿದ್ದರಾಮಯ್ಯ.
    Trending

    ನಾನೇಕೆ ರಾಜೀನಾಮೆ ಕೋಡಬೇಕೆಂದ ಸಿಎಂ ಸಿದ್ದರಾಮಯ್ಯ.

    vartha chakraBy vartha chakraಜುಲೈ 22, 20244 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.22-
    ಮಹರ್ಷಿ ವಾಲ್ಮೀಕಿ  ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣಕ್ಕೂ ನನಗೂ  ಸಂಬಂಧವೇ ಇಲ್ಲ ಎಂದ ಮೇಲೆ ನಾನೇಕೆ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷದವರನ್ನು ಪ್ರಶ್ನಿಸಿದ್ದಾರೆ.
    ಅಕ್ರಮ ಕುರಿತಂತೆ ವಿಧಾನ ಪರಿಷತ್ತಿನಲ್ಲಿ ನಿಯಮ 68ರಡಿ ಲೆ ಸುದೀರ್ಘ ಉತ್ತರ ನೀಡಿದ ಅವರು ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದಿರುವ ಪ್ರಕರಣಕ್ಕೂ ನನಗೂ ಸಂಬಂಧವೇ ಇಲ್ಲ. ಆದರೂ ಪ್ರತಿಪಕ್ಷದವರು ನನ್ನ ರಾಜೀನಾಮೆಯನ್ನು ಕೇಳುತ್ತಿರುವುದು  ಆಶ್ಚರ್ಯ ಉಂಟು ಮಾಡಿದೆ ಎಂದು ಹೇಳಿದರು.
    ಈ ಹೇಳಿಕೆಯಿಂದ ಸಿಡಿಮಿಡಿಗೊಂಡ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಮುಖ್ಯಮಂತ್ರಿಗಳು ನುಣುಚಿಕೊಳ್ಳುವ ಯತ್ನ ಮಾಡುತ್ತಿದ್ದಾರೆ ಎಂದು ಹೇಳಿದ್ದರಿಂದ ಸದನದಲ್ಲಿ ಕೋಲಾಹಲ, ಗದ್ದಲ, ಮಾತಿನ ಚಕಮಕಿ, ಆರೋಪ, ಪ್ರತ್ಯಾರೋಪ ನಡೆಯಿತು.
    ಇದರ ನಡುವೆ ಮಾತನಾಡಿದ ಸಿ.ಟಿ.ರವಿ, ಹಗರಣ  ನಡೆದಿರುವುದು ಸುಳ್ಳಾ? ಹಾಗಾದರೆ ಮಾಜಿ ಸಚಿವ ಬಿ.ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದು ಏಕೆ? ಶಾಸಕ ಬಸನಗೌಡ ದದ್ದಲ್ ಇಡಿ ವಿಚಾರಣೆ ಎದುರಿಸಿದ್ದು ಸುಳ್ಳಾ? ಎಂದು ಪ್ರಶ್ನೆ ಮಾಡಿದರು.
    ಇದಕ್ಕೆ ದನಿಗೂಡಿಸಿದ ಎನ್.ರವಿಕುಮಾರ್ ಮುಖ್ಯಮಂತ್ರಿಗಳು ಹಗರಣ ನಡೆದಿಲ್ಲ ಎಂದು ಸದನಕ್ಕೆ ಸುಳ್ಳು ಹೇಳುತ್ತಿದ್ದಾರೆ. ಅವರ ಸ್ಥಿತಿ ನೋಡಿದರೆ ಅಸಹಾಯಕರಾಗಿದ್ದಾರೆ. ಹೀಗಾಗಿಯೇ ಸಚಿವರು ಮತ್ತು ಸದಸ್ಯರು ಎದ್ದು ನಿಲ್ಲುತ್ತಾರೆಂದು ವ್ಯಂಗ್ಯವಾಡಿದರು.
    ಇದರಿಂದ ಆಕ್ರೋಶಗೊಂಡ ಸಿದ್ದರಾಮಯ್ಯ, ಏಯ್ ಕುಳ್ತೊಕೊಳಯ್ಯ ನನಗೂ ಗೊತ್ತು ಎಂದು ಕಿಡಿಕಾರಿದರು ನನ್ನನ್ನು ದಾರಿ ತಪ್ಪಿಸಲೆಂದೇ ಬಿಜೆಪಿಯವರು ಷಡ್ಯಂತರ ಮಾಡುತ್ತಿದ್ದಾರೆ.  .
    ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ.  ನಾನು ಅಕ್ರಮ  ನಡೆದಿಲ್ಲ ಎಂದು ಹೇಳೀಯೇ ಇಲ್ಲ. ಇದರಲ್ಲಿ ಯಾರೇ ತಪ್ಪು ಮಾಡಿದರೂ ಶಿಕ್ಷೆಯಾಗುತ್ತದೆ.  ಉಪ್ಪು ತಿಂದವನ್ನು ನೀರು ಕುಡಿಯಲೇಬೇಕು ಎಂದು ಹೇಳಿದರು
    ಪ್ರಕರಣದಲ್ಲಿ ಯಾರೇ ಭಾಗಿಯಾದರೂ ನ್ಯಾಯಾಲಯದ ಮೂಲಕವೇ ಶಿಕ್ಷೆ ಕೊಡಿಸುತ್ತೇವೆ. ಯಾರನ್ನು ಕೂಡ ರಕ್ಷಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
    ಬಿಜೆಪಿಯವರು ಗೋಬೆಲ್ಸ್‌ ತಂತ್ರಗಾರಿಕೆ ಮಾಡುತ್ತಿದ್ದಾರೆ. ಸುಳ್ಳನ್ನು ನೂರು ಬಾರಿ ಹೇಳಿ ಸತ್ಯ ಮಾಡಲು ಮುಂದಾಗಿದ್ದಾರೆ ಎಂದಾಗ ಪುನಃ ಅಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಭಾರೀ ಗದ್ದಲ ಉಂಟಾಗಿ ಯಾರು ಏನು ಹೇಳುತ್ತಿದ್ದಾರೆ ಎಂಬುದೇ ತಿಳಿಯದಾಯಿತು.
    ಆಗ ಆಡಳಿತ ಪಕ್ಷದ ಸದಸ್ಯರು ಎದ್ದು ನಿಂತು ಪ್ರತಿಪಕ್ಷದ ಸದಸ್ಯರನ್ನು ಸದನದಿಂದ ಹೊರ ಹಾಕಿ. ಮುಖ್ಯಮಂತ್ರಿಗಳು ಮಾತನಾಡುತ್ತಿದ್ದರೂ ಅಡ್ಡಿಪಡಿಸುತ್ತಿದ್ದಾರೆ ಎಂದು ಸಭಾಪತಿಗೆ ಮನವಿ ಮಾಡಿದರು.
    ಇದರಿಂದ ಸದನದಲ್ಲಿ ಮತ್ತಷ್ಟು  ಗದ್ದಲ ಉಂಟಾಯಿತು. ಕನಿಷ್ಟ ಪಕ್ಷ ನನಗೆ ಗೌರವ ಕೊಟ್ಟಾದರೂ ಕುಳಿತುಕೊಳ್ಳಿ  ಎಂದು ಸಭಾಪತಿ ಬಸವರಾಜ ಹೊರಟ್ಟಿ  ಎದ್ದು ನಿಂತು ಮನವಿ ಮಾಡಿಕೊಂಡರು.
    ಇದಾದ ನಂತರ ಮಾತು ಮುಂದುವರೆಸಿದ ಸಿದ್ದರಾಮಯ್ಯ ನನ್ನ ಮುಖಕ್ಕೆ ಮಸಿ ಬಳಿಯಬೇಕು. ಎಸ್ಸಿ-ಎಸ್ಟಿ ಹಿಂದುಳಿದ ವರ್ಗಗಳಿಗೆ ನಮ್ಮ ಸರ್ಕಾರ ವಿರುದ್ದವಾಗಿದೆ ಎಂದು ಬಿಂಬಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ.  ಅವರು ಎಂದು ಕೂಡ ಸಾಮಾಜಿಕ ನ್ಯಾಯದ ಪರವಾಗಿದ್ದವರಲ್ಲ. ಸಂವಿಧಾನವನ್ನೇ ವಿರೋಧ ಮಾಡಿದವರು.
    ವಾಲ್ಮೀಕಿ ಹಗರಣ ಮುಂದಿಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ವಿರುದ್ಧ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆಪಾದಿಸಿದರು
    ಎಸ್‌ಟಿ, ಎಸ್‌ಟಿಪಿ-ಟಿಎಸ್‌ಪಿ ಯೋಜನೆಯನ್ನು ಜಾರಿ ತಂದವರು ನಾವು. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯದಲ್ಲಿ ಈ ಕಾಯ್ದೆಯನ್ನು ಏಕೆ ಜಾರಿ ಮಾಡಿಲ್ಲ. ಕೇಂದ್ರದಲ್ಲಿ ನಿಮ್ಮ ಮೋದಿ ಸರ್ಕಾರಕ್ಕೂ ಈ ಕಾಯ್ದೆ ಜಾರಿ ಮಾಡಲು ಒತ್ತಡ ಹಾಕಿ ಎಂದು ಸವಾಲು ಹಾಕಿದರು.
    ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ನಮ್ಮ ಸರ್ಕಾರ ಅನೇಕ ಯೋಜನೆಗಳನ್ನು ಜಾರಿ ಮಾಡಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ನಮ್ಮ ಸರ್ಕಾರ ನಡೆದುಕೊಳ್ಳುತ್ತದೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಂತೆ ಬಿಜೆಪಿಯ ಎನ್.ರವಿಕುಮಾರ್, ನಾವು ಪರಿಶಿಷ್ಟ ಜಾತಿಗಳ ವಿರೋಧಿಯಲ್ಲ. ಗ್ಯಾರಂಟಿಗೆ ಆ ಸಮುದಾಯದ ಹಣವನ್ನು ಬಳಸಿಕೊಂಡಿದ್ದೀರಿ ಎಂದು ಆರೋಪಿಸಿದರು.

    Bangalore Congress Government Karnataka News Politics Trending Varthachakra ಇಡಿ ಕಾಂಗ್ರೆಸ್ ಕಾನೂನು ಚುನಾವಣೆ ಜೆಡಿಎಸ್ ನ್ಯಾಯ ಬಸವರಾಜ ಹೊರಟ್ಟಿ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleವಾಲ್ಮೀಕಿ ನಿಗಮದಲ್ಲಿ ಇಲ್ಲದ ವ್ಯಕ್ತಿ ಹೆಸರಲ್ಲಿ ನಡೆದಿದ್ದಾದರೂ ಏನು..?
    Next Article ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ.
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    4 ಪ್ರತಿಕ್ರಿಯೆಗಳು

    1. 78cps on ಜೂನ್ 7, 2025 2:27 ಫೂರ್ವಾಹ್ನ

      how to buy generic clomiphene no prescription where can i get cheap clomid pill how to get cheap clomid without dr prescription how to get clomid no prescription can i purchase generic clomiphene pills get clomid for sale order generic clomid pills

      Reply
    2. does flagyl make you bloated on ಜೂನ್ 11, 2025 2:57 ಫೂರ್ವಾಹ್ನ

      The thoroughness in this section is noteworthy.

      Reply
    3. 9r1is on ಜೂನ್ 18, 2025 10:57 ಫೂರ್ವಾಹ್ನ

      buy generic propranolol over the counter – plavix 150mg price methotrexate 5mg generic

      Reply
    4. icyic on ಜೂನ್ 23, 2025 11:47 ಫೂರ್ವಾಹ್ನ

      zithromax pill – how to get tindamax without a prescription bystolic 20mg over the counter

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Chriswot ರಲ್ಲಿ ಬಿಜೆಪಿ ಭಿನ್ನಮತಕ್ಕೆ ಸುರಿದ ತುಪ್ಪ | BJP Karnataka
    • y2nl4 ರಲ್ಲಿ ರಾಜ್ಯದ 195 ತಾಲ್ಲೂಕುಗಳು ಬರ ಪೀಡಿತ | Drought
    • Williamreosy ರಲ್ಲಿ ಕುಡಿದು ಮಾಡಿದ ರಂಪಾಟ.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe