Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಮಪತ್ರ ಸಲ್ಲಿಕೆಯ ಭರಾಟೆ.
    ಚುನಾವಣೆ

    ನಾಮಪತ್ರ ಸಲ್ಲಿಕೆಯ ಭರಾಟೆ.

    vartha chakraBy vartha chakraಅಕ್ಟೋಬರ್ 24, 20243 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.24:
    ತೀವ್ರ ಕುತೂಹಲ ಕೆರಳಿಸಿರುವ ವಿಧಾನಸಭೆಯ ಮೂರು ಕ್ಷೇತ್ರಗಳ ಉಪಚುನಾವಣೆಗೆ ಉಮೇದುವಾರಿಕೆ ಸಲ್ಲಿಸಲು ಒಂದು ದಿನ ಬಾಕಿ ಇರುವಂತೆಯೇ ಅಭ್ಯರ್ಥಿಗಳು ಭರಾಟೆ ರೋಡ್ ಶೋನ ಶಕ್ತಿ ಪ್ರದರ್ಶನದೊಂದಿಗೆ ನಾಮಪತ್ರ ಸಲ್ಲಿಸಿದರು.
    ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಯೋಗೇಶ್ವರ್‌ ಶಿಗ್ಗಾಂವಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುತ್ರ ಭರತ್‌ ಬಸವರಾಜ ಬೊಮಾಯಿ ಸೇರಿದಂತೆ ಪ್ರಮುಖರು ನಾಮಪತ್ರ ಸಲ್ಲಿಸಿದರು.
    ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಸಂಸದ ತುಕಾರಾಂ ಅವರ ಪತ್ನಿ ಅನ್ನಪೂರ್ಣ ಇ.ತುಕಾರಾಂ ಕಾಂಗ್ರೆಸ್‌‍ ಅಭ್ಯರ್ಥಿಯಾಗಿ ಉಮೇದುವಾರಿಕೆಯನ್ನು ಸಲ್ಲಿಸಿದರೆ, ರಾಜ್ಯ ಬಿಜೆಪಿ ಎಸ್ ಟಿ ಮೋರ್ಚಾ ಅಧ್ಯಕ್ಷ ಬಂಗಾರು ಹನುಮಂತು ಅವರು ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
    ಜಿದ್ದಾಜಿದ್ದಿನ ಅಖಾಡವಾಗಿ ಪರಿಣಮಿಸಿರುವ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆ ಕಾರ್ಯ ಬೃಹತ್ ಶಕ್ತಿ ಪ್ರದರ್ಶನದ ವೇದಿಕೆಯಾಗಿ ಪರಿಣಮಿಸಿತು.
    ತಾಲ್ಲೂಕು ಕಾಂಗ್ರೆಸ್ ಕಚೇರಿಯಿಂದ ತಹಶೀಲ್ದಾರ್ ಕಚೇರಿವರೆಗೆ ಒಂದು‌ ಕಿಲೋಮೀಟರ್‌ಗೂ ದೂರ ನಡೆದ ರೋಡ್ ಷೋನಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು
    ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ವಿರುದ್ಧ ಸ್ವತಃ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ, ಅವರ ಪತ್ನಿ, ಪುತ್ರ ಸೇರಿದಂತೆ ಯಾರೇ ಸ್ಪರ್ಧಿಸಿದರೂ ಸೋಲು ಖಚಿತ ಎಂದು ಹೇಳಿದರು
    ಕ್ಷೇತ್ರದಿಂದ ಎರಡು ಸಲ ಗೆದ್ದು ಒಮ್ಮೆ ಮುಖ್ಯಮಂತ್ರಿಯಾದರೂ ಕುಮಾರಸ್ವಾಮಿ ತಾಲ್ಲೂಕಿನಲ್ಲಿ ಯಾವುದೇ ಅಭಿವೃದ್ಧಿ ಮಾಡಲಿಲ್ಲ. ಈಗ ಎಲ್ಲಾ ಬಿಟ್ಟು ಮಂಡ್ಯ ಹಿಡಿದುಕೊಂಡಿದ್ದಾರೆ‌. ಈ ಕ್ಷೇತ್ರದಲ್ಲಿ ಕೆರೆಗಳು ತುಂಬಿದ್ದರೆ ಅದಕ್ಕೆ ಯೋಗೇಶ್ವರ್ ಕಾರಣ.‌ ಅಭಿವೃದ್ಧಿ ಪರ ಕೆಲಸ ಮಾಡುವ ಇಂತಹ ನಮ್ಮ ಅಭ್ಯರ್ಥಿಯನ್ನು ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಕರೆ ನೀಡಿದರು.
    ಐದು ಸಲ ಶಾಸಕರಾಗಿ, ಎರಡು ಸಲ ಸಚಿವರಾಗಿರುವ ಯೋಗೇಶ್ವರ್ ಮೂಲತಃ ಕಾಂಗ್ರೆಸ್ ನವರು. ನಮ್ಮ ಪಕ್ಷಕ್ಕೆ ವಾಪಸ್ ಬಂದ ಅವರನ್ನು ಅಭ್ಯರ್ಥಿ ಮಾಡಿದ್ದೇವೆ. ಚನ್ನಪಟ್ಟಣದಲ್ಲಿ ಯೋಗೇಶ್ವರ್ ಜನಪ್ರಿಯ ರಾಜಕಾರಣಿ. ಅವರಿಂದ ಕ್ಷೇತ್ರವು ಮತ್ತಷ್ಟು ಅಭಿವೃದ್ಧಿಯಾಗಲಿದೆ ಎಂದರು
    ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ಯೋಗೇಶ್ವರ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿರುವುದರಿಂದ ತಾಲ್ಲೂಕಿನ ಜನರಿಗೆ ಹೊಸ ಹುರುಪು ಬಂದಿದೆ. ಲೋಕಸಭಾ ಚುನಾವಣೆಯಲ್ಲಿ ಡಿ.ಕೆ. ಸುರೇಶ್‌ಗೆ 85 ಸಾವಿರಕ್ಕೂ ಹೆಚ್ಚು ಮತ ಹಾಕಿ ಆಶೀರ್ವಾದ ಮಾಡಲು ಪ್ರಯತ್ನ ಮಾಡಿದಿರಿ. ಆದರೂ ಗೆಲ್ಲಲು ಆಗಲಿಲ್ಲ. ಆದರೂ ನಾವು ಕ್ಷೇತ್ರದ ಅಭಿವೃದ್ಧಿಯ ಬದ್ಧತೆ ಬಿಟ್ಟಿಲ್ಲ ಎಂದು ಹೇಳಿದರು.
    ನನ್ನ ಮತ್ತು ಸುರೇಶ್ ನಂಬಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಸಹ ನಮ್ಮೊಂದಿಗೆ ಕೈ ಜೋಡಿಸುತ್ತಿದ್ದಾರೆ. ಅವರ ಕೈ ಬಲಪಡಿಸಿಕೊಂಡು ಮುಂದಕ್ಕೆ ಕರೆದೊಯ್ಯುತ್ತೇವೆ. ಸೋಲುವ ಭಯದಿಂದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ-ಜೆಡಿಎಸ್ ಒಂದಾಗಿವೆಯೇ ಹೊರತು, ಅವರಿಗೆ ಅಭಿವೃದ್ಧಿಯ ಬದ್ಧತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
    ಸಂಡೂರು,:
    ಗಣಿನಾಡು ಸಂಡೂರಿನಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಶಕ್ತಿ ಪ್ರದರ್ಶನ ನಡೆಸಿದರು ಸಚಿವರಾದ ಸಂತೋಷ್ ಲಾಡ್ ಜಮೀರ್ ಅಹ್ಮದ್ ಖಾನ್ ಅವರು ಮಾಜಿ ಸಚಿವರಾದ ನಾಗೇಂದ್ರ ಮತ್ತು ಅಲ್ಲಂ ವೀರಭದ್ರಪ್ಪ ಅವರೊಂದಿಗೆ ಬೃಹತ್ ರೋಡ್ ಶೋ ನಡೆಸಿ ಗಮನ ಸೆಳೆದರು.
    ಸಂಡೂರಿನ ಎಪಿಎಂಸಿಯಿಂದ ತಾಲೂಕು ಆಡಳಿತದ ಕಚೇರಿವರೆಗೂ ರೋಡ್ ಶೋ‌ ನಡೆಯಿತು. ಆನಂತರ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಚುನಾವಣಾ ಅಧಿಕಾರಿಗಳಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
    ಶಿಗ್ಗಾಂವಿ:
    ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರು ಪತ್ನಿ ಇಬ್ಬನಿ ಹಾಗೂ ಬಿಜೆಪಿ ಮುಖಂಡರ ಜೊತೆ ಚುನಾವಣಾಧಿಕಾರಿ ಕಚೇರಿಗೆ ಬಂದಿದ್ದ ಭರತ್ ತಮ್ಮ ತಂದೆ ಸಂಸದ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಾಂಕೇತಿಕವಾಗಿ ಮೊದಲನೇ ನಾಮಪತ್ರ ಸಲ್ಲಿಸಿದ್ದಾರೆ.
    ನಾಳೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಸೇರಿಕೊಂಡು ಮೆರವಣಿಗೆ ಮೂಲಕ ಸಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

    Verbattle
    Verbattle
    Verbattle
    by election channapattana Karnataka News Politics sandoor shiggav ಕಾಂಗ್ರೆಸ್ ಚುನಾವಣೆ ಜೆಡಿಎಸ್ ಬಿಜೆಪಿ ಬೆಂಗಳೂರು ಬೊಮ್ಮಾಯಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅಕ್ಟೋಬರ್ 24 – ವಿಶ್ವ ಸಂಸ್ಥೆಯ ದಿನ
    Next Article ಕಣಕ್ಕಿಳಿದ ನಿಖಿಲ್ ಕುಮಾರಸ್ವಾಮಿ.
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    ಫೆಬ್ರವರಿ 20, 2026

    3 ಪ್ರತಿಕ್ರಿಯೆಗಳು

    1. Hlgnsj on ಫೆಬ್ರವರಿ 11, 2026 3:43 ಅಪರಾಹ್ನ

      betmgm NJ online casino betmgm play betmgm Rhode Island

      Reply
    2. Samctr on ಫೆಬ್ರವರಿ 19, 2026 5:39 ಫೂರ್ವಾಹ್ನ

      Ignite sparks of joy with every successful wager. In crowncoinscasino, seasonal promotions keep things fresh. Sign up and let the wins flow!

      Reply
    3. Samctr on ಫೆಬ್ರವರಿ 19, 2026 5:42 ಫೂರ್ವಾಹ್ನ

      Ignite sparks of joy with every successful wager. In crowncoinscasino, seasonal promotions keep things fresh. Sign up and let the wins flow!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • pharmacies online ರಲ್ಲಿ ರಾಜ್ಯಪಾಲರ ಭದ್ರತೆ ಹೇಗಿದೆ ಗೊತ್ತಾ.
    • aviator_xzMl ರಲ್ಲಿ Alcoholಗೆ‌ Full‌ ಡಿಮಾಂಡ್
    • Patrickenams ರಲ್ಲಿ ಅನ್ನ ಹಾಕಿದವರಿಗೇ ದ್ರೋಹ!
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.