Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೇಶ್ವೆಗಳ DNA ವ್ಯಕ್ತಿ CM ಆಗಲು‌ ನನ್ನ ವಿರೋಧ
    ಚುನಾವಣೆ 2024

    ಪೇಶ್ವೆಗಳ DNA ವ್ಯಕ್ತಿ CM ಆಗಲು‌ ನನ್ನ ವಿರೋಧ

    vartha chakraBy vartha chakraಫೆಬ್ರವರಿ 8, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:

    ‘ಮರಾಠಿ ಪೇಶ್ವೆಗಳ ಮೂಲದ ವ್ಯಕ್ತಿಯನ್ನು ರಾಜ್ಯದ ಮೇಲೆ ಹೇರಲು BJP ಹೊರಟಿದೆ’ ಎಂದು ಕಿಡಿಕಾರಿರುವ JDS ನಾಯಕ ಕುಮಾರಸ್ವಾಮಿ ( H.D.Kumaraswamy) ‘ಮರಾಠಿ ಪೇಶ್ವೆಗಳ DNA ವ್ಯಕ್ತಿಯ ಬಗ್ಗೆ ನಾನು ಕೊಟ್ಟ ಹೇಳಿಕೆಯನ್ನು ವಾಪಸ್ ಪಡೆಯುವ ಪ್ರಶ್ನೆ ಇಲ್ಲ, ಕ್ಷಮೆಯನ್ನೂ ಕೇಳುವುದಿಲ್ಲ’ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಯವರಿಗೆ ತಾಕತ್ತಿದ್ದರೆ, ನಾನು ಹೇಳಿದ ವ್ಯಕ್ತಿಯನ್ನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿ ಬಿಜೆಪಿಯವರು ಚುನಾವಣೆಗೆ ಹೋಗಲಿ’ ಎಂದು  ಸವಾಲು ಹಾಕಿದರು.

    ‘ಬ್ರಾಹ್ಮಣ, ದಲಿತ ಯಾವುದೇ ಸಮಾಜಕ್ಕೂ ಅಪಮಾನ ಮಾಡುವ ಕುಟುಂಬದಿಂದ ನಾನು ಬಂದಿಲ್ಲ. ಈ ದೇಶದ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ, ಪ್ರಧಾನಿ ಆಗಬಹುದು. ಆದರೆ, ನಿರ್ದಿಷ್ಟವಾದ ಈ ವ್ಯಕ್ತಿಯನ್ನು ಬಿಜೆಪಿಯವರು ಸಿಎಂ ಮಾಡಲು ಹೊರಟಿದ್ದಾರೆ. ನನಗೆ ಅವರ ಬಗ್ಗೆ ತಕರಾರು ಇಲ್ಲ, ತಕರಾರು ಇರುವುದು ಅವರ ಮೂಲದ ಬಗ್ಗೆ.  ಪೇಶ್ವೆ DNA ವಿಷಯ ಎತ್ತಿರುವುದು ಯಾವುದೇ ದಾಳ ಉರುಳಿಸುವುದಕ್ಕೆ ಅಲ್ಲ. ಮುಂದಿನ ದಿನದ ಪರಿಸ್ಥಿತಿ ಏನಾಗಲಿದೆ ಅಂತ ಹೇಳಿದ್ದು. ಹುಬ್ಬಳ್ಳಿಗೆ ಪ್ರಧಾನಿ ಮೋದಿ ಅವರು ಬಂದಾಗ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಅವರನ್ನು ವೇದಿಕೆಗೇ ಹತ್ತಿಸಲಿಲ್ಲ. ಅಪಮಾನ ಮಾಡಿದರು.  ಯಡಿಯೂರಪ್ಪ (BS Yediyurappa) ಅವರನ್ನು ಸಿಎಂ ಹುದ್ದೆಯಿಂದ ಯಾಕೆ ಇಳಿಸಿದರು? ಬಿಜೆಪಿ ಹೈಕಮಾಂಡ್ ಯಾವ ರೀತಿ ನಡೆದುಕೊಳ್ಳುತ್ತಿದೆ? ಮಾತನಾಡಿದರೆ ED, IT ಎಂದು ಹೆದರಿಸುತ್ತಾರೆ. ಅದರ ಹಿಂದೆ ಇರುವ ಕಾಣದ ಕೈಗಳು ಯಾವುವು ಎನ್ನುವ ಮಾಹಿತಿ ನನಗೂ ಇದೆ. ಕಳೆದ ಮೂರು ವರ್ಷಗಳಿಂದ ನಮ್ಮ ರಾಜ್ಯದಲ್ಲಿ ನಡೆದ ಒಂದೊಂದು ಘಟನೆಯನ್ನೂ ನೋಡಿ. ಕರ್ನಾಟಕಕ್ಕೂ ಸಾವರ್ಕರ್ ಗೂ ಸಂಬಂಧ ಏನು? ಸುವರ್ಣಸೌಧದಲ್ಲೂ ಸಾವರ್ಕರ್ ಫೋಟೊ ಹಾಕಲಾಯಿತು. ಈಗ ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆಸಿದ, ಶೃಂಗೇರಿ ಮಠದ ಮೇಲೆ ದಾಳಿ ನಡೆಸಿದ, ಶಿವಾಜಿ ಮತ್ತು ಗಾಂಧೀಜಿ ಅವರನ್ನು ಹತ್ಯೆ ಮಾಡಿದ ಮರಾಠಿ ಪೇಶ್ವೆಗಳ ಮೂಲದ ವ್ಯಕ್ತಿಯನ್ನು ರಾಜ್ಯದ ಮೇಲೆ ಹೇರಲು ಬಿಜೆಪಿ ಹೊರಟಿದೆ. ಅದಕ್ಕೆ ನನ್ನ ವಿರೋಧವಿದೆ’ ಎಂದು  ಸ್ಪಷ್ಟಪಡಿಸಿದರು.

    ‘ಬಿಜೆಪಿಯಿಂದ ಯಾರು ಮುಖ್ಯಮಂತ್ರಿ ಆಗಬೇಕು ಎಂದು ನಾನು ಹೇಳಿಲ್ಲ. ಅವರು ಯಾರನ್ನು ಬೇಕಾದರೂ ಸಿಎಂ ಮಾಡಿಕೊಳ್ಳಲಿ. ಬೇಕಾದರೆ ಪ್ರಹ್ಲಾದ್ ಜೋಷಿ ಅವರನ್ನೇ ಸಿಎಂ ಮಾಡುತ್ತೇವೆ ಎಂದು ಘೋಷಣೆ ಮಾಡಲಿ. ಬಿಜೆಪಿ ಸಮಾಜ ಒಡೆಯುವ ಕೆಲಸಕ್ಕೆ ಕೈ ಹಾಕಿದೆ. ಮೀಸಲಾತಿ ವಿಚಾರದಲ್ಲೂ ಗೊಂದಲ ಸೃಷ್ಟಿ ಮಾಡಿದ್ದಾರೆ. ಮೂಗಿಗೆ ತುಪ್ಪ ಸವರುವ ಜನರನ್ನು ನಾವು ನೋಡಿದ್ದೇವೆ. ಇವರು ಈಗ ತಲೆಗೆ ತುಪ್ಪ ಸವರಿದ್ದಾರೆ, ಜನರಿಗೆ ವಾಸನೆ ಕೂಡ ಗೊತ್ತಾಗಬಾರದು ಎನ್ನುವ ಉದ್ದೇಶ ಇವರದ್ದು. ಹಿಂಬಾಗಿಲಿನಿಂದ ರಾಜಕೀಯ ಮಾಡ್ತಾ ಇದ್ದಾರೆ’ ಎಂದು  ಟೀಕಾಪ್ರಹಾರ ನಡೆಸಿದರು.

    ಬಿಜೆಪಿ ಮುಖಂಡ ‌ಸಿ.ಟಿ.ರವಿ (C T Ravi) ವಿರುದ್ಧ ವಾಗ್ದಾಳಿ ನಡೆಸಿದ ಅವರು ‘ಅಮಾಯಕ ಕುಟುಂಬದ ಮೇಷ್ಟ್ರು ಒಬ್ಬರು KRS ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡರು. ಅವರು ಯಾಕೆ ಸತ್ತರು? ಅದಕ್ಕೂ, ಸಿಟಿ ರವಿ ಅವರಿಗೆ ಇರುವ ಸಂಬಂಧ ಏನು? ಇದಕ್ಕೆ ಅವರು ಯಾಕೆ ಉತ್ತರ ಕೊಡುತ್ತಿಲ್ಲ?’ ಎಂದು ಪ್ರಶ್ನಿಸಿದರು.

    Verbattle
    Verbattle
    Verbattle
    #BJP #JDS #kumaraswamy #yediyurappa Bangalore BJP Elections 2023 Jagadish Shettar JDS m Politics ಚುನಾವಣೆ ಪೇಶ್ವೆ DNA ರಾಜಕೀಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಮತದಾರರಿಗೆ TV ಹಂಚಿದ ಶಾಸಕ
    Next Article DK Shivakumar ಹಿಂದೆ ಬಿದ್ದ ED ತಂಡ
    vartha chakra
    • Website

    Related Posts

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    2 ಪ್ರತಿಕ್ರಿಯೆಗಳು

    1. StellaHewly on ಫೆಬ್ರವರಿ 12, 2026 8:10 ಅಪರಾಹ್ನ

      betmgm Indiana betmgm Alabama betmgm login

      Reply
    2. Rquqyd on ಫೆಬ್ರವರಿ 13, 2026 1:37 ಅಪರಾಹ್ನ

      betmgm CT betmgm-play mgm bet login

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • abjav.com ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Nvcuhh ರಲ್ಲಿ ಬೆಳಗಾವಿಯಲ್ಲಿ ಒಂದಾದ ಬಿಜೆಪಿ ಮತ್ತು ಎಂಇಎಸ್.?
    • LarryCax ರಲ್ಲಿ ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.