Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಗತಿಯ ಚಿತ್ರಣ ಬದಲಿಸುವ ಇಂಧನ ಇಲಾಖೆ | Dept Of Power
    ರಾಜಕೀಯ

    ಪ್ರಗತಿಯ ಚಿತ್ರಣ ಬದಲಿಸುವ ಇಂಧನ ಇಲಾಖೆ | Dept Of Power

    vartha chakraBy vartha chakraಜೂನ್ 1, 20236 ಪ್ರತಿಕ್ರಿಯೆಗಳು3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಯಾವುದೇ ಪ್ರದೇಶದ ಪ್ರಗತಿಯ ಪ್ರತೀಕ ಈ ಇಲಾಖೆ.ಅದರಲ್ಲೂ ರಾಜ್ಯ ಸರ್ಕಾರಗಳ ವ್ಯಾಪ್ತಿಯಲ್ಲಿ ಬರುವ ಇಂಧನ ಇಲಾಖೆ ಎಂದರೆ ವಿದ್ಯುತ್ ಇಲಾಖೆ ಆ ರಾಜ್ಯದ ಕಣ್ಣು ಎಂದರೆ ತಪ್ಪಾಗಲಾರದು.
    ಜನ ಸಾಮಾನ್ಯರ ಪ್ರತಿನಿತ್ಯದ ಅಗತ್ಯದಿಂದ ಹಿಡಿದು ಸಮಾಜದ ಎಲ್ಲಾ ಹಂತದಲ್ಲೂ ವಿದ್ಯುತ್ ಎನ್ನುವುದು ಅತ್ಯಂತ ಅನಿವಾರ್ಯ ವಾಗಿದೆ.
    ಹೀಗಾಗಿ ರಾಜ್ಯ ಸರ್ಕಾರಗಳಿಗೆ ಈ ಇಲಾಖೆ ಅತ್ಯಂತ ಮಹತ್ವದ ಇಲಾಖೆಯಾಗಿದೆ.ವಿದ್ಯುತ್ ಸ್ವಾವಲಂಬನೆ ಎಲ್ಲಾ ಸರ್ಕಾರಗಳ ಆದ್ಯತೆ ಸೇವಾ ವಲಯದಿಂದ ಹಿಡಿದು ಉತ್ಪಾದನಾವಲಯದವರೆಗೆ ಅತ್ಯಂತ ಅಗತ್ಯವಾದ ಈ ಇಲಾಖೆಯಲ್ಲಿ ಸ್ವಾವಲಂಬನೆ ಸಾಧಿಸಿದರೆ ಆ‌ ರಾಜ್ಯದ ಪ್ರಗತಿ ತನ್ನಿಂತಾನೆ ನಡೆಯಲಿದೆ ಎನ್ನುವುದು ವಾಸ್ತವ ಸಂಗತಿ.
    ಕರ್ನಾಟಕ ವಿದ್ಯುತ್ ವಲಯದಲ್ಲಿ ಸ್ವಾವಲಂಬನೆ ಸಾಧಿಸುವಲ್ಲಿ ಪಟ್ಟ ಶ್ರಮ ಅಷ್ಟಿಷ್ಟಲ್ಲ. ಸಾಂಪ್ರದಾಯಿಕವಲ್ಲದ ಮೂಲಗಳಿಂದ ವಿದ್ಯುತ್ ಉತ್ಪಾದನೆ ಸಾಧ್ಯವಾಗುತ್ತಿದ್ದಂತೆ ಕರ್ನಾಟಕ ವಿದ್ಯುತ್ ಸ್ವಾವಲಂಬಿ ರಾಜ್ಯವಾಯಿತು.
    ಇದೀಗ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ರಾಜ್ಯ ಸರ್ಕಾರ,ರಾಜ್ಯದ ಜನತೆಗೆ ಇನ್ನೂರು ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಿದೆ.

    ಸರ್ಕಾರದ ಈ ಉಚಿತ ಕೊಡುಗೆಯ ಬಗ್ಗೆ ಹಲವಾರು ಅಪಸ್ವರ ಕೇಳಿಬರುತ್ತಿದೆ.ಈ ಯೋಜನೆಯಿಂದ ವಿದ್ಯುತ್ ನಿಗಮ,ವಿದ್ಯುತ್ ವಿತರಣಾ ಸಂಸ್ಥೆಗಳು ದಿವಾಳಿಯಾಗಲಿವೆ,ಇಂಧನ ಇಲಾಖೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಲಿದೆ ಎಂಬೆಲ್ಲಾ ವ್ಯಾಖ್ಯಾನಗಳು ಕೇಳಿ ಬರುತ್ತಿವೆ.
    ಈ ಆರೋಪ,ವ್ಯಾಖ್ಯಾನಗಳು ಮೇಲ್ನೋಟಕ್ಕೆ ಸರಿ ಎಂಬಂತೆ‌ ಕಾಣುತ್ತೇವೆ.ಆದರೆ ವಾಸ್ತವ ಬೇರೇಯೆ ಇದೆ.ಉಚಿತವಾಗಿ ವಿದ್ಯುತ್ ಪಡೆಯುವ ಕುಟುಂಬಗಳು ಆರ್ಥಿಕವಾಗಿ ಒಂದಷ್ಟು ಪ್ರಯೋಜನ ಪಡೆಯಲಿವೆ.ವಿದ್ಯುತ್ ‌ಬಳಕೆಗೆ ಶುಲ್ಕದ ರೀತಿಯಲ್ಲಿ ನೀಡುವ ಹಣವನ್ನು ಅವರು ಬೇರೆ ವಲಯದಲ್ಲಿ ಖರ್ಚು ಮಾಡಬಹುದು ಇಲ್ಲವೇ ಉಳಿತಾಯ ಮಾಡಬಹುದಾಗಿದೆ
    ಪ್ರತಿ ಕುಟುಂಬಕ್ಕೆ ಇನ್ನೂರು‌ ಯೂನಿಟ್ ಅತ್ಯಂತ ದೊಡ್ಡ ಕೊಡುಗೆ. ಇಷ್ಟು ಪ್ರಮಾಣದ ವಿದ್ಯುತ್ ಬಳಸಿ ಅವರು ಅಡುಗೆ ತಯಾರಿ ಸೇರಿದಂತೆ ಕೆಲವು ಅಗತ್ಯಗಳಿಗೆ ಬಳಸುತ್ತಾರೆ.
    ರಾಜ್ಯದಲ್ಲಿ ಈಗಾಗಲೇ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು, ಗಿರಿಜನ ನಿವಾಸಿಗಳು ಸೇರಿದಂತೆ ಹಲವರಿಗೆ ಭಾಗ್ಯ ಜ್ಯೋತಿ, ಕುಟಿರ ಜ್ಯೋತಿ ಹೆಸರಿನಲ್ಲಿ ಉಚಿತವಾಗಿ ವಿದ್ಯುತ್ ಪೂರೈಸಲಾಗುತ್ತದೆ. ಈ ಗ್ರಾಹಕರ ಜೊತೆಗೆ 200 ಯೂನಿಟ್ ಬಳಸುವ ಕೆಲವು ಗ್ರಾಹಕರು ಸೇರ್ಪಡೆಯಾಗಲಿದ್ದಾರೆ ಇದು ರಾಜ್ಯದ ಬೊಕ್ಕಸಕ್ಕೆ ಅಂತಹ ಹೇಳಿಕೊಳ್ಳುವ ಹೊರೆ ಏನೂ ಆಗುವುದಿಲ್ಲ.

    ಇದಕ್ಕಿಂತ ಪ್ರಮುಖವಾದ ಸಂಗತಿ ಎಂದರೆ ಗೃಹ ಬಳಕೆ ವಿದ್ಯುತ್ ಗ್ರಾಹಕರು ತಮ್ಮ ಬಳಕೆಯ ಮೇಲೆ ನಿಯಂತ್ರಣ ವಿಧಿಸಿಕೊಳ್ಳಲಿದ್ದಾರೆ ಈ ಮೂಲಕ ತಮ್ಮ ಬಳಕೆ ಇನ್ನೂರು ಯೂನಿಟ್ ಗಳಿಗಿಂತ ಕಡಿಮೆ ಇರುವಂತೆ ನೋಡಿಕೊಳ್ಳಲಿದ್ದಾರೆ ಹೀಗಾಗಿ ವಿದ್ಯುತ್ ವಿತರಣಾ ಸಂಸ್ಥೆಗಳಿಗೆ ಹೆಚ್ಚಿನ ವಿದ್ಯುತ್ ಉಳಿತಾಯವಾಗಲಿದೆ. ಅದನ್ನು ಕೈಗಾರಿಕೆ ಸೇರಿದಂತೆ ಇತರ ವಲಯಗಳಿಗೆ ನೀಡುವ ಮೂಲಕ ಹೆಚ್ಚಿನ ಲಾಭಗಳಿಸಬಹುದಾಗಿದೆ ಸದ್ಯ ಗೃಹ ಬಳಕೆ ವಿದ್ಯುತ್ ಗೆ ಕಡಿಮೆ ಶುಲ್ಕ ವಿಧಿಸಲಾಗುತ್ತಿದೆ ಹೀಗಾಗಿ ಉಳಿತಾಯವಾಗಲಿ ವಿದ್ಯುತ್ತನ್ನು ವಾಣಿಜ್ಯ ಮತ್ತು ಕೈಗಾರಿಕಾ ಉದ್ದೇಶಗಳಿಗೆ ಹೆಚ್ಚಿನ ಶುಲ್ಕ ವಿವರಿಸಿ ನೀಡಬಹುದು ಜೊತೆಗೆ ಅಗತ್ಯವಿರುವ ರಾಜ್ಯಗಳಿಗೆ ಮಾರಾಟ ಮಾಡಬಹುದಾಗಿದೆ.
    ವಾಣಿಜ್ಯ ಮತ್ತು ಕೈಗಾರಿಕೆ ಬಳಕೆಗೆ ಹೆಚ್ಚಿನ ವಿದ್ಯುತ್ ನೀಡುವುದರಿಂದ ಉತ್ಪಾದನಾ ವಲಯದಲ್ಲಿ ದೊಡ್ಡ ಪ್ರಮಾಣದ ಪ್ರಗತಿ ಸಾಧ್ಯವಾಗಲಿದೆ ಈ ಮೂಲಕ ರಫ್ತು ಆಧಾರಿತ ಚಟುವಟಿಕೆಗಳು ಹೆಚ್ಚಳವಾಗಲಿವೆ ಒಟ್ಟಾರೆಯಾಗಿ ವಾಣಿಜ್ಯ ಚಟುವಟಿಕೆಗಳು ಹೆಚ್ಚಳವಾಗಿ ಅತ್ಯಧಿಕ ಪ್ರಮಾಣದ ತೆರಿಗೆ ಸಂಗ್ರಹವಾಗಲಿದೆ ಇದರಿಂದ ರಾಜ್ಯದ ಖಜಾನೆ ಬಲಗೊಳ್ಳಲಿದೆ
    ಹೇಳಿ-ಕೇಳಿ ವಿದ್ಯುತ್ ಸಂಗ್ರಹಿಸಬಹುದಾದ ಉತ್ಪಾದನೆಯಲ್ಲ ಕರ್ನಾಟಕದಲ್ಲಿ ಇದೀಗ ಸಾಂಪ್ರದಾಯಿಕ ಮೂಲಗಳಿಗಿಂತ ಅಸಂಪ್ರದಾಯಿಕ ಮೂಲಗಳಾದ ಸೋಲಾರ್, ಪವನ ಮತ್ತು ತ್ಯಾಜ್ಯದಿಂದ ಹೆಚ್ಚಿನ ವಿದ್ಯುತ್ ಉತ್ಪಾದಿಸಲಾಗುತ್ತಿದೆ ಇತರ ಬೆಲೆ ಅತ್ಯಂತ ಕಡಿಮೆ ಇದೆ ಇದನ್ನು ಸಂಪೂರ್ಣವಾಗಿ ವಿನಿಯೋಗಿಸಬಹುದಾಗಿದೆ.

    ಸರ್ಕಾರ ನೀಡುವ ಉಚಿತ ವಿದ್ಯುತ್ ನಿಂದಾಗಿ ದೊಡ್ಡ ಪ್ರಮಾಣದಲ್ಲಿ ವಿದ್ಯುತ್ ಕಳ್ಳತನ ತಪ್ಪಲಿದೆ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಗೃಹಬಳಕೆ ಹೆಸರಿನಲ್ಲಿ ವಿದ್ಯುತ್ ಕಳ್ಳತನ ನಡೆಯುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಉಚಿತ ವಿದ್ಯುತ್ ನೀಡುವ ಯೋಜನೆ ಜಾರಿಗೆ ಬಂದಲ್ಲಿ ಈ ಕಳ್ಳತನಕ್ಕೆ ಕಡಿವಾಣ ಬೀಳಲಿದೆ.
    ಅನಿವಾರ್ಯ ಕಾರಣಗಳಿಂದಾಗಿ ಈ ಹಿಂದಿನ ಸರ್ಕಾರಗಳು ಉಷ್ಣ ವಿದ್ಯುತ್ ತಯಾರಿಕಾ ಕಂಪನಿಗಳ ಜೊತೆ ವಿದ್ಯುತ್ ಖರೀದಿ ಒಪ್ಪಂದ ಮಾಡಿಕೊಂಡಿದ್ದು ದುಬಾರಿ ದರ ನೀಡುತ್ತಿವೆ ಈಗ ಜನಸಾಮಾನ್ಯರಿಗೆ ಉಚಿತ ವಿದ್ಯುತ್ ನೀಡುತ್ತಿದ್ದೇವೆ ಎಂದು ಹೇಳಿ ಈ ವಿದ್ಯುತ್ ಖರೀದಿ ಒಪ್ಪಂದಗಳನ್ನು ರದ್ದು ಪಡಿಸಬಹುದಾಗಿದೆ ಈ ರೀತಿ ಮಾಡಿದಲ್ಲಿ ದೊಡ್ಡ ಪ್ರಮಾಣದಲ್ಲಿ ಹಣ ಉಳಿತಾಯ ಮಾಡಬಹುದು.
    ಅ ಸಂಪ್ರದಾಯಿಕ ಮೂಲಗಳಿಂದ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಹೊತ್ತು ನೀಡುವ ಮೂಲಕ ಜಲ ವಿದ್ಯುತ್ ಮತ್ತು ಶಾಖೋತ್ಪನ್ನ ವಿದ್ಯುತ್ ಘಟಕಗಳ ಮೇಲಿನ ಅವಲಂಬನೆ ತಪ್ಪಿಸಬಹುದಾಗಿದೆ. ಸಕ್ಕರೆ ಕಾರ್ಖಾನೆಗಳಲ್ಲಿ ವಿದ್ಯುತ್ ಉತ್ಪಾದನೆ ಮಾಡುವ ಯೋಜನೆ ನೆನೆಗುದಿಗೆ ಬಿದ್ದಿದೆ ಈಗ ಅದಕ್ಕೆ ಮರು ಜೀವ ನೀಡುವ ಮೂಲಕ ಸಕ್ಕರೆ ಕಾರ್ಖಾನೆ ಮತ್ತು ಕಬ್ಬು ಬೆಳೆಗಾರರಿಗೆ ನೆರವು ಕಲ್ಪಿಸಬಹುದಾಗಿದೆ.
    ಈ ಎಲ್ಲಾ ಉಪಕ್ರಮಗಳ ಮೂಲಕ ಇಂಧನ ಇಲಾಖೆ ಮತ್ತಷ್ಟು ಬಲಯುತವಾಗುವಂತೆ ಮಾಡುವುದರಿಂದ ಹೆಚ್ಚಿನ ಪ್ರಯೋಜನ ರಾಜ್ಯದ ಪ್ರಗತಿಯ ಮೇಲಾಗಲಿದೆ.

    Dept Of Power Karnataka power ಕಳ್ಳತನ ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಉನ್ನತ ಶಿಕ್ಷಣದ ಹೆಸರಲ್ಲಿ ಪಂಗನಾಮ | Education News
    Next Article ಜನರ ನಡುವೆ ಕೆಲಸ ಮಾಡಲು ‘ಸಮೂಹಶಕ್ತಿ’ ಸಂಕಲ್ಪ | Samooha Shakti
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    ಬೆಂಗಳೂರಿನ ಪಬ್,ಬಾರ್ ಗಳಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ ?

    ಜೂನ್ 20, 2025

    6 ಪ್ರತಿಕ್ರಿಯೆಗಳು

    1. 4lsuv on ಜೂನ್ 8, 2025 5:48 ಫೂರ್ವಾಹ್ನ

      where to get cheap clomiphene clomid generic cost clomiphene pills clomiphene calculator order clomid pills can i purchase cheap clomiphene without rx where to get cheap clomid price

      Reply
    2. cheap cialis in the uk on ಜೂನ್ 9, 2025 11:51 ಅಪರಾಹ್ನ

      This is a theme which is near to my callousness… Myriad thanks! Unerringly where can I upon the phone details for questions?

      Reply
    3. augmentin and flagyl for diverticulitis on ಜೂನ್ 11, 2025 6:04 ಅಪರಾಹ್ನ

      This is the gentle of criticism I truly appreciate.

      Reply
    4. 5gi49 on ಜೂನ್ 19, 2025 5:15 ಫೂರ್ವಾಹ್ನ

      how to buy propranolol – buy generic inderal for sale buy generic methotrexate

      Reply
    5. jxwg5 on ಜೂನ್ 22, 2025 2:06 ಫೂರ್ವಾಹ್ನ

      amoxil over the counter – purchase combivent sale combivent 100 mcg over the counter

      Reply
    6. zoiag on ಜೂನ್ 24, 2025 5:02 ಫೂರ್ವಾಹ್ನ

      buy zithromax 250mg pills – tinidazole 500mg pills oral bystolic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • +7 (499) 460-69-87 ರಲ್ಲಿ ಅಪರೂಪದ ಅಡ್ಡ ಪರಿಣಾಮಗಳನ್ನು ಉಂಟುಮಾಡುತ್ತದೆ ಎಂದು ಒಪ್ಪಿಕೊಂಡು ಕೋವಿಡ್ 19 ಲಸಿಕೆಯನ್ನು ಹಿಂಪಡೆಯುತ್ತಿರುವ ಆಸ್ಟ್ರಾಜೆನೆಕಾ
    • купить мдма ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • Waltertig ರಲ್ಲಿ ನಕಲಿ Voter ID ಸೃಷ್ಟಿ-ಸಚಿವ ಬೈರತಿ ಸುರೇಶ್ ಆಪ್ತರ ಬಂಧನ
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe