Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಜ್ವಲ್ ರೇವಣ್ಣ ಬಂಧನ ಖಾಯಂ.
    Trending

    ಪ್ರಜ್ವಲ್ ರೇವಣ್ಣ ಬಂಧನ ಖಾಯಂ.

    vartha chakraBy vartha chakraಮೇ 30, 20245 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.30-
    ಹಲವಾರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಸುಳಿಗೆ ಸಿಲುಕಿ ವಿದೇಶಕ್ಕೆ ಪರಾರಿಯಾಗಿದ್ದ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ತಡರಾತ್ರಿ ಬೆಂಗಳೂರಿಗೆ ಆಗಮಿಸುತ್ತಿದ್ದು ಅವರನ್ನು ವರ್ಷಕ್ಕೆ ಪಡೆಯಲು ವಿಶೇಷ ತನಿಖಾ ತಂಡ ಸಜ್ಜುಗೊಂಡಿದೆ
    ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವಿದೇಶಕ್ಕೆ ಹಾರಿದ್ದ ಪ್ರಜ್ವಲ್ ರೇವಣ್ಣ ಪೊಲೀಸರು ನೀಡಿದ ನೋಟಿಸ್ ಮತ್ತು ವಿದೇಶಾಂಗ ಇಲಾಖೆ ಹೊರಡಿಸಿದ ಬ್ಲೂ ಕಾರ್ನರ್ ನೋಟಿಸ್ ಗೂ ಪ್ರತಿಕ್ರಿಯೆ ನೀಡಿರಲಿಲ್ಲ ಇದಾದ ನಂತರ ಮಾಜಿ ಪ್ರಧಾನಿ ದೇವೇಗೌಡ ತಕ್ಷಣವೇ ಸ್ವದೇಶಕ್ಕೆ ಮರಳಬೇಕೆಂದು ನೀಡಿದ ಎಚ್ಚರಿಕೆಗೂ ಸೊಪ್ಪು ಹಾಕಿರಲಿಲ್ಲ.
    ಇದಾದ ಬಳಿಕ ವಿದೇಶಾಂಗ ಇಲಾಖೆ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಗೊಳಿಸುವ ಪ್ರಕ್ರಿಯೆಗೆ ಚಾಲನೆ ನೀಡಿತ್ತು. ಇದರಿಂದ ಸಂಕಷ್ಟಕ್ಕೆ ಸೋಲುಕಿದ ಪ್ರಜ್ವಲ್ ರೇವಣ್ಣ ಕೊನೆಗೆ ವಿದೇಶದಿಂದಲೇ ವಿಡಿಯೋ ಸಂದೇಶವನ್ನು ಬಿಡುಗಡೆ ಮಾಡಿ ಮೇ 31 ರಂದು ಬೆಂಗಳೂರಿಗೆ ಆಗಮಿಸಿ ಎಸ್ ಐ ಟಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದರು.
    ಅದರಂತೆ ಜರ್ಮನಿಯ ಮ್ಯೂನಿಕ್ ಏರ್ ಪೋರ್ಟ್ ನಿಂದ ಭಾರತೀಯ ಕಾಲಮಾನ ಎಂದು ಮಧ್ಯಾಹ್ನ 3 ಗಂಟೆಗೆ ಪ್ರಯಾಣ ಆರಂಭಿಸಿರುವ ಅವರು ತಡರಾತ್ರಿ 12 ಗಂಟೆಯ ನಂತರ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.
    ಪ್ರಜ್ವಲ್ ವಿರುದ್ದ ಈಗಾಗಲೇ ಲುಕ್ ಔಟ್ ನೋಟಿಸ್ ಹೊರಡಿಸಿರುವ ಹಿನ್ನೆಲೆಯಲ್ಲಿ ಅವರನ್ನು ವಿಮಾನ ನಿಲ್ದಾಣದ ಇಮಿಗ್ರೇಶನ್ ಕೇಂದ್ರದಲ್ಲಿಯೇ ವಶಕ್ಕೆ ಪಡೆಯಲಾಗುತ್ತದೆ ಬಳಿಕ ಅವರನ್ನು ಕರ್ನಾಟಕದ ವಿಶೇಷ ತನಿಖಾ ತಂಡಕ್ಕೆ ಹಸ್ತಾಂತರಿಸಲಾಗುತ್ತದೆ.
    ಮತ್ತೊಂದೆಡೆ ಷಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಜ್ವಲ್‌ ಅವರನ್ನು ಕರೆತರುವ ಏರ್‌ಪೋರ್ಟ್‌ ರಸ್ತೆ ಉದ್ದಕ್ಕೂ ಬಿಗಿ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗಿದೆ.
    ಎಸ್‌‍ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್‌ ಅವರು ಇಂದು ಬೆಳಗ್ಗೆ ಬೆಂಗಳೂರು ನಗರ ಪೊಲೀಸ್‌‍ ಆಯುಕ್ತ ದಯಾನಂದ್‌ ಅವರನ್ನು ಭೇಟಿ ಮಾಡಿ
    ಬಂದೋಬಸ್ತ್‌ ಬಗ್ಗೆ ಚರ್ಚೆ ನಡೆಸಿದರು.
    ಜಾಮೀನು ಅರ್ಜಿ:
    ಈ ನಡುವೆ ತಮಾಷೆ ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಾಳೆ ಮಧ್ಯಾಹ್ನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿದೆ.
    ಶಕ್ತಿ ಪ್ರದರ್ಶನ :
    ಇನ್ನು ಮಾಜಿ ಪ್ರಧಾನಿ ದೇವೇಗೌಡ ಅವರ ತವರು ಹಾಸನದಲ್ಲಿ ಹಲವಾರು ಜನಪರ ಸಂಘಟನೆಗಳ ಕಾರ್ಯಕರ್ತರು ಬೃಹತ್ ಶಕ್ತಿ ಪ್ರದರ್ಶನ ನಡೆಸಿ ಕ್ಷಣವೇ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಬೇಕು ಮತ್ತು ಅವರಿಂದ ಕಿರುಕುಳಕ್ಕೆ ಒಳಗಾದ ಮಹಿಳೆಯರಿಗೆ ಸೂಕ್ತ ನ್ಯಾಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.
    ಮಹಾರಾಜಾ ಪಾರ್ಕ್‌ನಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಸದಸ್ಯರು, ಪ್ರಜ್ವಲ್‌ ರೇವಣ್ಣ ಬಂಧಿಸಬೇಕು. ಮಹಿಳೆಯರಿಗೆ ರಕ್ಷಣೆ ನೀಡಬೇಕು. ಅವರ ನೆರವಿಗೆ ಸರ್ಕಾರ ನಿಲ್ಲಬೇಕು ಎಂದು ಆಗ್ರಹಿಸಿದರು. ದಾರಿಯುದ್ದಕ್ಕೂ ಘೋಷಣೆ ಕೂಗಿದ ಸದಸ್ಯರು, ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಬಹಿರಂಗ ಸಭೆ ನಡೆಸಿದರು.
    ಸಭೆಯಲ್ಲಿ ಮಾತನಾಡಿದ ರಾಜ್ಯಸಭೆ ಮಾಜಿ ಸದಸ್ಯೆ ಸುಭಾಷಿಣಿ ಅಲಿ, ಸ್ವಾತಂತ್ರ್ಯ ಬಂದು 75 ವರ್ಷ ಕಳೆದಿದ್ದರೂ ದೇಶದ ಹಲವೆಡೆ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಪುರುಷ ಪ್ರಧಾನ, ಬಂಡವಾಳಶಾಹಿ ವ್ಯವಸ್ಥೆ, ರಾಜಕೀಯ ಪ್ರಭುತ್ವದಂತಹ ಮೈತ್ರಿಕೂಟ ರಚಿಸಿಕೊಂಡಿರುವ ಬಲಾತ್ಕಾರಿ ಬಚಾವೋ ಪಾರ್ಟಿಯನ್ನು ಅಧಿಕಾರದಿಂದ ಕೆಳಗೆ ಇಳಿಸುವ ಸಂಕಲ್ಪ ಮಾಡುತ್ತಿದ್ದೇವೆ ಎಂದು ಹೇಳಿದರು.
    ನಮ್ಮನ್ನು ಆಳುವ ದೊಡ್ಡವರು ಹೇಳುತ್ತಿದ್ದಾರೆ, ಇದುವರೆಗೆ ನಾವು ಟ್ರೇಲರ್‌ ತೋರಿಸಿದ್ದೇವೆ. ಇನ್ನೂ ಸಿನಿಮಾ ಬಾಕಿ ಇದೆ ಎಂದು. ಆದರೆ, ಇವರು ತೋರಿಸಿರುವ ಟ್ರೇಲರ್‌ ಎಂಥದ್ದು. ಬ್ರಿಜ್‌ಭೂಷಣ್‌ ಪರವಾಗಿ ನಿಂತರು. ಬಿಲ್ಕೀಸ್‌ ಬಾನು ಅತ್ಯಾಚಾರಿಗಳಿಗೆ ಜಾಮೀನು ಕೊಡಿಸಿದರು. ರಾಮ್‌ರಹೀಮರಿಗೆ ಪೆರೋಲ್‌ ಕೊಡಿಸಿದರು. ಪ್ರಜ್ವಲ್‌ ರೇವಣ್ಣ ಕೈಎತ್ತಿ ಹಿಡಿದು ಮತ ಕೇಳಿದರು. ಇದೇನಾ ನಿಮ್ಮ ಟ್ರೇಲರ್‌ ಎಂದು ಪ್ರಶ್ನಿಸಿದ ಅವರು, ಇಂತಹ ನಿಮ್ಮ ಸಿನಿಮಾ, ಟ್ರೇಲರ್‌ ನಡೆಯಲ್ಲ. ಜೂನ್‌ 4 ರ ನಂತರ ಟ್ರೇಲರ್‌ ಬಂದ್‌ ಆಗಲಿದೆ. ಯಾವುದೇ ಸರ್ಕಾರವಿರಲಿ, ನ್ಯಾಯಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.
    ಮನೆಯಲ್ಲಿ ಕೆಲಸ ಮಾಡುವವರು, ಅವರ ಪಕ್ಷದ ಕಾರ್ಯಕರ್ತೆಯರು, ಸರ್ಕಾರಿ ಉದ್ಯೋಗಿಗಳು ಸೇರಿದಂತೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ. ಅಲ್ಲದೇ ಅದನ್ನು ವಿಡಿಯೋ ಮಾಡಿಕೊಂಡು, ಜಗತ್ತಿನ ಎದುರು ತೋರಿಸಿದ್ದಾರೆ ಎಂದು ಆರೋಪಿಸಿದರು.

    Bangalore Congress Government Karnataka News Politics ದೇವೇಗೌಡ ನ್ಯಾಯ ಪ್ರಜ್ವಲ್ ಪ್ರಜ್ವಲ್ ರೇವಣ್ಣ ರಾಜಕೀಯ ಲೈಂಗಿಕ ಕಿರುಕುಳ ಸಿನಿಮ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಸಚಿವ ನಾಗೇಂದ್ರ ರಾಜೀನಾಮೆಗೆ ಜೂನ್ 6ರ ಗಡುವು.
    Next Article ವಾಲ್ಮೀಕಿ ನಿಗಮದ ಹಗರಣದಲ್ಲಿ ಪೂರ್ಣ ಸರಕಾರವೇ ಭಾಗಿ: ಆರ್.ಅಶೋಕ್
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    5 ಪ್ರತಿಕ್ರಿಯೆಗಳು

    1. udqiy on ಜೂನ್ 5, 2025 4:25 ಅಪರಾಹ್ನ

      where can i get generic clomid buy cheap clomid pill can you buy generic clomid without rx cost cheap clomid pills order cheap clomid tablets can i order generic clomid pills how to buy cheap clomid tablets

      Reply
    2. order generic cialis in canada on ಜೂನ್ 9, 2025 9:11 ಫೂರ್ವಾಹ್ನ

      This is a theme which is near to my heart… Numberless thanks! Quite where can I upon the acquaintance details for questions?

      Reply
    3. flagyl prescription on ಜೂನ್ 11, 2025 3:26 ಫೂರ್ವಾಹ್ನ

      This is the stripe of serenity I enjoy reading.

      Reply
    4. 26hk1 on ಜೂನ್ 18, 2025 11:29 ಫೂರ್ವಾಹ್ನ

      buy generic propranolol for sale – purchase plavix sale order methotrexate 5mg for sale

      Reply
    5. ae8di on ಜೂನ್ 23, 2025 12:19 ಅಪರಾಹ್ನ

      order zithromax 250mg for sale – buy azithromycin pills buy nebivolol generic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • KennethSOYNC ರಲ್ಲಿ ಪೊಲೀಸರ ಸಮಯಪ್ರಜ್ಞೆಯಿಂದ ದರ್ಶನ್ ಬಂಧನ.
    • Chriswot ರಲ್ಲಿ ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    • KennethSOYNC ರಲ್ಲಿ ಜನವರಿಯಿಂದ ಯುವನಿಧಿ ಆರಂಭ | Yuvanidhi
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe