Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.
    Trending

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    vartha chakraBy vartha chakraಸೆಪ್ಟೆಂಬರ್ 18, 202513 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಂಗಳೂರು,ಸೆ.18-ಧರ್ಮಸ್ಥಳದ ಬಳಿ ಶವಗಳನ್ನು ಹೂತಿರುವ ಪ್ರಕರಣದ ಸಂಬಂಧ ತನಿಖೆಯನ್ನು ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಅಧಿಕಾರಿಗಳು ಬಂಗ್ಲೆಗುಡ್ಡದಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ದೊರೆತ 5 ತಲೆಬುರಡೆ, 113 ಮೂಳೆಗಳನ್ನು
    ವಿಧಿವಿಜ್ಞಾನ ಪ್ರಯೋಗಾಲಯ(ಎಫ್ ಎಸ್ ಎಲ್)ಕಳುಹಿಸಲು ಮುಂದಾಗಿದ್ದಾರೆ.
    ಬಂಗ್ಲೆಗುಡ್ಡದಲ್ಲಿ ಅನೇಕ ಅಸ್ಥಿಪಂಜರಗಳನ್ನು ನೋಡಿದ್ದೇನೆ ಎಂದು ವಿಠಲ್ ಗೌಡ ಮಾಡಿದ್ದ ಆರೋಪ ಸಂಬಂಧ ಎಸ್ಐಟಿ ಶೋಧ ತೀವ್ರಗೊಂಡಿದ್ದು, ಹಲವು ವಸ್ತುಗಳು ಪತ್ತೆಯಾಗಿವೆ. ಶೋಧದ ವೇಳೆ ಒಂದು ಅಸ್ಥಿಪಂಜರದ ಪಕ್ಕದಲ್ಲೇ ಹಿರಿಯ ನಾಗರಿಕರ ಕಾರ್ಡ್ ಪತ್ತೆಯಾಗಿದೆ.
    ಅಲ್ಲದೆ, ಮರದಲ್ಲಿ ಎರಡು ಹಗ್ಗ ಮತ್ತು ಒಂದು ಸೀರೆ ಸಿಕ್ಕಿದ್ದು, ನೇಣುಬಿಗಿದ ಅನುಮಾನ ಮೂಡಿಸಿದೆ. ಮಹಜರು ಸಂದರ್ಭದಲ್ಲಿ ಪತ್ತೆಯಾದ ವಸ್ತುಗಳನ್ನು ಎಸ್ಐಟಿ ಅಧಿಕಾರಿಗಳು ಸೀಲ್ ಮಾಡಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಸೋಕೋ ಮತ್ತು ಎಫ್‌ಎಸ್‌ಎಲ್ ತಂಡಗಳು ಸ್ಥಳಕ್ಕೆ ಭೇಟಿ ನೀಡಿ ಅಸ್ಥಿಪಂಜರ ಹಾಗೂ ಪತ್ತೆಯಾದ ವಸ್ತುಗಳನ್ನು ಸಂಗ್ರಹಿಸಿವೆ.
    ಬಂಗ್ಲೆಗುಡ್ಡದಲ್ಲಿ ನಿನ್ನೆ ಒಟ್ಟು ಐದು ಬುರುಡೆಗಳು ಮತ್ತು ಮೂಳೆಗಳು ಪತ್ತೆಯಾಗಿದ್ದು, ಎಸ್ಐಟಿ ಪಂಚರ ಸಮ್ಮುಖದಲ್ಲಿ ಮಹಜರು ಪೂರ್ಣಗೊಳಿಸಲಾಗಿತ್ತು.
    ತನಿಖಾಧಿಕಾರಿ ಜಿತೇಂದ್ರ ದಯಾಮ ನೇತೃತ್ವದಲ್ಲಿ ಸುಮಾರು 7 ಗಂಟೆಗಳ ಕಾಲ ಮಹಜರು ನಡೆಯಿತು. ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಸೋಕೋ ಟೀಮ್, ಕಂದಾಯ ಇಲಾಖೆ, ಪಂಚಾಯತ್ ಸಿಬ್ಬಂದಿ ಮಹಜರಿನಲ್ಲಿ ಭಾಗಿಯಾಗಿದ್ದರು. 13 ಎಕರೆ ವಿಸ್ತೀರ್ಣದ ಬಂಗ್ಲೆಗುಡ್ಡದಲ್ಲಿ 5 ಕಡೆ ಮಹಜರು ನಡೆದಿದೆ. ಈ ವೇಳೆ 5 ತಲೆಬುರಡೆ, 113 ಮೂಳೆಗಳು ಸಿಕ್ಕಿದ್ದು,ಅವುಗಳನ್ನು ಸಂಗ್ರಹಿಸಲಾಗಿದೆ.
    ಭೂಮಿಯ ಮೇಲ್ಭಾಗದಲ್ಲೇ ಅಸ್ಥಿಪಂಜರ ಪತ್ತೆಯಾದ್ದರಿಂದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸೀಲ್ ಮಾಡಲಾದ ಅಸ್ಥಿಪಂಜರ ಮತ್ತು ವಸ್ತುಗಳನ್ನು ಎಫ್‌ಎಸ್‌ಎಲ್ ಪರೀಕ್ಷೆಗೆ ಕಳುಹಿಸಲು ಎಸ್ಐಟಿ ತಯಾರಿ ನಡೆಸುತ್ತಿದೆ.

    Bangalore crime Government Karnataka News Trending Varthachakra ಕಾನೂನು ಧರ್ಮ
    Share. Facebook Twitter Pinterest LinkedIn Tumblr Email WhatsApp
    Previous Articleಕಾಮುಕ ಯೋಗಗುರು ಅರೆಸ್ಟ್.
    Next Article ಮೂರು ದಿನ 37ದರೋಡೆ ಮಾಡಿದ ಅಪ್ರಾಪ್ತರು.
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwinSig ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • ElliottAlods ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • Lune Finvex Review ರಲ್ಲಿ ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe