Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ನಾಯಕರಿಗೆ ಪ್ರಿಯಾಂಕ ಖರ್ಗೆ ಪ್ರಶ್ನೆ ?
    ರಾಜಕೀಯ

    ಬಿಜೆಪಿ ನಾಯಕರಿಗೆ ಪ್ರಿಯಾಂಕ ಖರ್ಗೆ ಪ್ರಶ್ನೆ ?

    vartha chakraBy vartha chakraಜನವರಿ 29, 2025Updated:ಜನವರಿ 29, 20254 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.29:
    ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿದ ಹೇಳಿಕೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿರುವ ಗ್ರಾಮೀಣಾಭಿವೃದ್ಧಿ ಮಂತ್ರಿ ಪ್ರಿಯಾಂಕ ಖರ್ಗೆ ಪ್ರಶ್ನೆಗಳನ್ನು ಎತ್ತಿದರೆ, ಬಿಜೆಪಿ ನಾಯಕರು ಸಹಿಸುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
    ಈ ಕುರಿತಂತೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಅವರು,ಪ್ರಶ್ನೆಗಳನ್ನು ಎತ್ತಿದರೆ, ವಸ್ತು ಸ್ಥಿತಿಯನ್ನು ಹೇಳಿದರೆ ಹಿಂದೂ ವಿರೋಧಿ ಎಂದು ಹೇಳಿ ಉತ್ತರದಾಯಿತ್ವದಿಂದ ಜಾರಿಕೊಳ್ಳುವುದು ಬಿಜೆಪಿಯ ಹಳೆ ಚಾಳಿ ಎಂದು ವಾಗ್ದಾಳಿ ನಡೆಸಿದ್ದಾರೆ ಬಿಜೆಪಿ ಏನಾದರೂ 12ನೇ ಶತಮಾನದಲ್ಲಿ ಇದ್ದಿದ್ದರೆ ಮೌಢ್ಯದ ವಿರುದ್ಧ ವಚನ ಚಳವಳಿ ಕಟ್ಟಿದ್ದ ಶರಣರಿಗೂ ಹಿಂದೂ ವಿರೋಧಿ ಪಟ್ಟ ಕಟ್ಟಿಬಿಡುತ್ತಿದ್ದರೋ ಏನೋ! ಆದರೆ ಆಗಿನ ಮನುವಾದಿಗಳು ಶರಣರಿಗೆ ಪೀಡಿಸಿದ್ದರು ಎನ್ನುವುದು ಇತಿಹಾಸ’ ಎಂದು ಹೇಳಿದ್ದಾರೆ. ಉತ್ತರದ ಕಾಶಿಯಲಿ ಕತ್ತೆ ಮಿಂದೈ ತರಲು ದಕ್ಷಿಣದ ದೇಶಕದು ಕುದುರೆಯಹುದೆ?’ ಎಂದು ಹೇಳಿದ ಕುವೆಂಪುರನ್ನು ಹಿಂದೂ ವಿರೋಧಿ ಎನ್ನುವ ದಮ್ಮು ತಾಕತ್ತು ಇದೆಯೇ? ಎಂದು ಪ್ರಶ್ನಿಸಿರುವ ಅವರು
    ನೀರ ಕಂಡಲ್ಲಿ ಮುಳುಗುವರಯ್ಯ / ಮರ ಕಂಡಲ್ಲಿ ಸುತ್ತುವರಯ್ಯ / ಬತ್ತುವ ಜಲವ ಒಣಗುವ ಮರವ ಮೆಚ್ಚಿದವರು / ನಿನ್ನನೆತ್ತಬಲ್ಲರು ಕೂಡಲ ಸಂಗಮದೇವ.-ವೇದಕ್ಕೆ ಬರೆಯ ಕಟ್ಟುವೆ, ಶಾಸ್ತ್ರಕ್ಕೆ ನಿಗಳವನಿಕ್ಕುವೆ, ತರ್ಕದ ಬೆನ್ನ ಬಾರನೆತ್ತುವ ಆಗಮದ ಮೂಗ ಕೊಯ್ಯುವೆ ನೋಡಯ್ಯ ಎಂದ ಬಸವಣ್ಣರನ್ನು ಹಿಂದೂ ವಿರೋಧಿ ಎನ್ನುವಿರಾ? ಎಂದು ಕೇಳಿದ್ದಾರೆ
    -ವೇದ ಶಾಸ್ತ್ರ ಪುರಾಣಗಳೆಂಬ ಕೊಟ್ಟಣ ಕುಟ್ಟುತ್ತಾ ನುಚ್ಚು ತೌಡು ಕಾಣಿರೋ ಎಂದ ಅಕ್ಕಮಹಾದೇವಿಯನ್ನು ಹಿಂದೂ ವಿರೋಧಿ ಎನ್ನುವಿರಾ?-ಕಟ್ಟಿದ ಲಿಂಗವ ಬಿಟ್ಟು ಬೆಟ್ಟದ ಲಿಂಗಕ್ಕೆ ಹೋಗಿ ಹೊಟ್ಟೆಯಡಿಯಾಗಿ ಬೀಳುವ ಲೊಟ್ಟೆ ಮೂಗನ ಕಂಡರೆ ಮೆಟ್ಟಿದ ಎಡಪಾದರಕ್ಷೆಯ ತಕ್ಕೊಂಡು ಲಟಲಟನೆ ಹೊಡೆ’ ಎಂದ ಅಂಬಿಗರ ಚೌಡಯ್ಯರನ್ನು ಹಿಂದೂ ವಿರೋಧಿ ಎನ್ನುವಿರಾ?-ಕಲ್ಲಮನೆಯಡಿ ಕಲ್ಲದೇವರ ಮಾಡಿ, ಆ ಕಲ್ಲು ಕಲ್ಲ ಮೇಲೆ ಕೆಡೆದರೆ ದೇವರೆತ್ತ ಹೋದರೋ? ಎಂದಿದ್ದ ಅಲ್ಲಮರನ್ನು ಹಿಂದೂ ವಿರೋಧಿ ಎನ್ನುವಿರಾ?’ಸೌ ಚುಹೇ ಖಾಕೆ ಬಿಲ್ಲಿ ಹಜ್ ಕೊ ಚಲೀ’ ಎಂಬ ನುಡಿಗಟ್ಟು ಉರ್ದುವಿನಲ್ಲೂ ಇದೆ, ಯಾವ ಧರ್ಮವೂ ಕೂಡ ಕೆಟ್ಟ ಕೆಲಸ ಮಾಡಿ ಪುಣ್ಯ ಕ್ಷೇತ್ರಕ್ಕೆ ಬಂದರೆ ಪಾಪ ಪರಿಹಾರವಾಗುತ್ತದೆ ಎಂದಿಲ್ಲ, ನಿಮ್ಮ ಒಳ್ಳೆಯ ಕೆಲಸಗಳೇ ನಿಮ್ಮ ಪುಣ್ಯಕ್ಕೆ ದಾರಿ ಎನ್ನುತ್ತವೆ.ಬಿಜೆಪಿಯವರು ಮೊದಲು ಹಿಂದೂ ಧರ್ಮದ ಅಧ್ಯಯನ ಮಾಡಲಿ, ಪಾಪ, ಪುಣ್ಯಗಳು ನದಿಗಳಲ್ಲಿ ಮುಳುಗೇಳುವುದರಿಂದ ನಿರ್ಧಾರವಾಗುವುದಿಲ್ಲ, ನಾವು ಮಾಡಿದ ಕೆಟ್ಟ ಕೆಲಸಗಳಿಗೆ ಕುಂಭ ಸ್ನಾನದಿಂದ ಮಾಫಿಯೂ ದೊರಕುವುದಿಲ್ಲ. ಗಂಗಾ ಸ್ನಾನ ಮಾಡಿದರೆ ಕೆಟ್ಟವನು ಒಳ್ಳೆಯವನಾಗುವುದಿಲ್ಲ, ಕರ್ಮ, ಕಾಯಕಗಳು ಮಾತ್ರ ನಮ್ಮನ್ನು ಉದ್ದರಿಸಬಲ್ಲವು ಎನ್ನುವುದನ್ನು ಹಲವು ಮಹನೀಯರು ಹೇಳಿದ್ದಾರೆ. ಬಿಜೆಪಿಯವರು ಧರ್ಮದ ಹೆಸರು ಹೇಳಿಕೊಂಡು ರಾಜಕಾರಣ ಮಾಡುವುದನ್ನು ಬಿಟ್ಟು, ಸಾಧನೆ ಹೇಳಿಕೊಂಡು ರಾಜಕಾರಣ ಮಾಡಿ ತೋರಿಸಲಿ ಎಂದು ಹೇಳಿದ್ದಾರೆ.

    ಧರ್ಮ ಬಿಜೆಪಿ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleವಿಜಯೇಂದ್ರ ವಿರುದ್ಧ ಸಮರ ಘೋಷಣೆ
    Next Article ಊಟ ಮಾಡುವಾಗ ಈ ವಿಷಯಗಳನ್ನು ಗಮನದಲ್ಲಿಡಿ
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    4 ಪ್ರತಿಕ್ರಿಯೆಗಳು

    1. y8ppq on ಜೂನ್ 7, 2025 10:33 ಅಪರಾಹ್ನ

      how to get clomiphene without dr prescription buying cheap clomiphene pill cost cheap clomiphene pills can you buy clomiphene without rx where can i get clomid tablets clomiphene medication uk how can i get clomid

      Reply
    2. buy cialis euro on ಜೂನ್ 9, 2025 7:26 ಅಪರಾಹ್ನ

      I am actually delighted to glance at this blog posts which consists of tons of worthwhile facts, thanks representing providing such data.

      Reply
    3. flagyl for diarrhea dose on ಜೂನ್ 11, 2025 1:40 ಅಪರಾಹ್ನ

      This website absolutely has all of the information and facts I needed about this thesis and didn’t positive who to ask.

      Reply
    4. g4ixo on ಜೂನ್ 18, 2025 11:52 ಅಪರಾಹ್ನ

      buy propranolol for sale – methotrexate us methotrexate 10mg cost

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 00tb4 ರಲ್ಲಿ ಹಿಂದುಳಿದ ವರ್ಗಗಳಿಗೆ ಒಳ ಮೀಸಲಾತಿಯ ಶಿಫಾರಸು ಮಾಡಿದ ಆಯೋಗ
    • 9yz1k ರಲ್ಲಿ ದಾರಿ ಕಾಣದಾದ ಸಿ.ಎಂ. ಇಬ್ರಾಹಿಂ | CM Ibrahim
    • Melvinboory ರಲ್ಲಿ ಬಾಟಲಿ ನೀರು ಸುರಕ್ಷಿತವಲ್ಲ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe