Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿ.ಶ್ರೀರಾಮುಲು ಕಾಂಗ್ರೆಸ್ ಸೇರೋದು ಗ್ಯಾರಂಟಿ
    ರಾಜಕೀಯ

    ಬಿ.ಶ್ರೀರಾಮುಲು ಕಾಂಗ್ರೆಸ್ ಸೇರೋದು ಗ್ಯಾರಂಟಿ

    vartha chakraBy vartha chakraಜನವರಿ 30, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜಿ.30:
    ಬಿಜೆಪಿಯ ಪ್ರಭಾವಿ ನಾಯಕರಾದ ಮಾಜಿ ಮಂತ್ರಿ ಬಿ ಶ್ರೀರಾಮುಲು ಇದೀಗ ತಮ್ಮ ಒಂದು ಕಾಲದ ಆತ್ಮೀಯ ಗೆಳೆಯ ಮಾಜಿ ಮಂತ್ರಿ ಜನಾರ್ಧನ ರೆಡ್ಡಿ ಅವರೊಂದಿಗಿನ ತೀವ್ರ ಸ್ವರೂಪದ ಭಿನ್ನಮತದ ಪರಿಣಾಮವಾಗಿ ಬಿಜೆಪಿಗೆ ಗುಡ್ ಬೈ ಹೇಳಲು ಮುಂದಾಗಿದ್ದಾರೆ.
    ಪಕ್ಷದ ಜಿಲ್ಲಾಧ್ಯಕ್ಷರ ನೇಮಕದ ನಂತರ ಈ ಇಬ್ಬರ ನಡುವಿನ ಬಿಕ್ಕಟ್ಟು ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದ್ದು, ವರಿಷ್ಠರ ಸಂಧಾನಕ್ಕೂ ಸೊಪ್ಪು ಹಾಕದ ಶ್ರೀರಾಮುಲು ಪಕ್ಷಾಂತರಕ್ಕೆ ಸಜ್ಜುಗೊಂಡಿದ್ದು, ತಮ್ಮ ಬೆಂಬಲಿಗರ ಜೊತೆಯಲ್ಲಿ ಸಮಾಲೋಚನೆ ಆರಂಭಿಸಿದ್ದಾರೆ.
    ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕೂಡ್ಲಿಗಿ ಕ್ಷೇತ್ರದಿಂದ ಕಣಕ್ಕಿಳಿಯಲು ಚಿಂತನೆ ನಡೆಸಿರುವ ಅವರು ಇದಕ್ಕಾಗಿ ಅವರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ಸದ್ಯ ಕೂಡ್ಲಗಿ ವಿಧಾನಸಭಾ ಕ್ಷೇತ್ರವನ್ನು ಕಾಂಗ್ರೆಸ್ಸಿನ ಎನ್ ವೈ ಗೋಪಾಲಕೃಷ್ಣ ಅವರು ಪ್ರತಿನಿಧಿಸುತ್ತಿದ್ದಾರೆ ಇವರು ಶ್ರೀರಾಮುಲು ಅವರಿಗೆ ದೂರದ ಸಂಬಂಧಿ ಆಗಿದ್ದಾರೆ ಅಲ್ಲದೆ 80ರ ಆಸುಪಾಸಿನಲ್ಲಿರುವ ಅವರು ಮುಂಬರುವ ಚುನಾವಣೆಯಲ್ಲಿ ಸ್ಪರ್ಧೆಗಿಳಿಯುವುದು ಅನುಮಾನವಾಗಿದೆ. ಈ ಹಿನ್ನೆಲೆಯಲ್ಲಿ ಶ್ರೀರಾಮುಲು ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
    ಒಂದು ಕಾಲಕ್ಕೆ ಕಾಂಗ್ರೆಸ್ಸಿನ ಭದ್ರಕೋಟೆಯಾಗಿದ್ದ ಬಳ್ಳಾರಿಯನ್ನು ಬಿಜೆಪಿಯ ಭದ್ರಕೋಟೆಯಾಗಿಸಿದ ಕೀರ್ತಿ ಶ್ರೀರಾಮುಲು ಅವರಿಗೆ ಸಲ್ಲುತ್ತದೆ ಆದರೆ ಪಕ್ಷದಲ್ಲಿ ಅವರಿಗೆ ಸೂಕ್ತ ಮಾನ್ಯತೆ ಸಿಗದ ಪರಿಣಾಮ ಇದೀಗ ಮತ್ತೆ ಬಳ್ಳಾರಿ ಕಾಂಗ್ರೆಸ್ಸಿನ ಭದ್ರಕೋಟೆಯಾಗುವತ್ತ ದಾಪುಗಾಲಿಟ್ಟಿದೆ. ಜಿಲ್ಲೆಯಲ್ಲಿ ಹಾಗೂ ಸಮುದಾಯದಲ್ಲಿ ಸಾಕಷ್ಟು ಪ್ರಭಾವ ಹೊಂದಿರುವ ಶ್ರೀರಾಮುಲು ಅವರನ್ನು ಈ ಸಮಯದಲ್ಲಿ ಕಾಂಗ್ರೆಸ್ಸಿಗೆ ಕರೆ ತಂದರೆ ಆ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತಷ್ಟು ಬಲಶಾಲಿಯಾಗುತ್ತದೆ ಎಂದು ಬಳ್ಳಾರಿಯ ಬಹುತೇಕ ಎಲ್ಲಾ ಕಾಂಗ್ರೆಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.
    ಸಚಿವ ಸಂತೋಷ್ ಲಾಡ್ ಮಾಜಿ ಮಂತ್ರಿ ಬಿ ನಾಗೇಂದ್ರ ಸೇರಿದಂತೆ ಹಲವರು ಶ್ರೀರಾಮುಲು ಅವರನ್ನು ಕಾಂಗ್ರೆಸ್ ಸೇರ್ಪಡೆ ಮಾಡಲು ಹೆಚ್ಚು ಆಸಕ್ತಿ ವಹಿಸಿದ್ದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಅನೌಪಚಾರಿಕವಾಗಿ ಚರ್ಚೆ ನಡೆಸಿದ್ದಾರೆ ಎಂದು ಗೊತ್ತಾಗಿದೆ.
    ಶ್ರೀರಾಮುಲು ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಹೆಚ್ಚು ಆಸಕ್ತಿ ವಹಿಸಿರುವ ಹಿನ್ನೆಲೆಯಲ್ಲಿ ಶ್ರೀರಾಮುಲು ಅವರು ಬಿಕ್ಕಟ್ಟು ಶಮನ ಕುರಿತಂತೆ, ಬಿಜೆಪಿ ಹೈಕಮಾಂಡ್ ನಡೆಸಲು ಉದ್ದೇಶಿಸಿರುವ ಸಂಧಾನ ಮಾತುಕತೆಯಿಂದ ದೂರ ಉಳಿದಿದ್ದಾರೆ.
    ತಮ್ಮ ಮುಂದಿನ ರಾಜಕೀಯ ಭವಿಷ್ಯದ ಕುರಿತಂತೆ ಬೆಂಬಲಿಗರ ಜೊತೆ ಸತತ ಸಮಾಲೋಚನೆಯಲ್ಲಿ ತೊಡಗಿರುವ ಅವರು ಸದ್ಯದಲ್ಲೇ ಬಳ್ಳಾರಿಯಲ್ಲಿ ವಾಲ್ಮೀಕಿ ಸಮುದಾಯದ ಸ್ವಾಭಿಮಾನಿ ಸಮಾವೇಶ ಆಯೋಜಿಸಲು ಚಿಂತನೆ ನಡೆಸಿದ್ದಾರೆ ಈ ಸಮಾವೇಶದ ಮೂಲಕ ಬಿಜೆಪಿ ವಾಲ್ಮೀಕಿ ಸಮುದಾಯದ ವಿರೋಧಿಯಾಗಿದೆ ಎಂದು ಬಿಂಬಿಸಿ ಕಾಂಗ್ರೆಸ್ ಸೇರ್ಪಡೆಯ ನಿರ್ಧಾರ ಘೋಷಿಸಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    ಕಾಂಗ್ರೆಸ್ ಚುನಾವಣೆ ಬಿಜೆಪಿ ಬೆಂಗಳೂರು ರಾಜಕೀಯ ವಾಲ್ಮೀಕಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಇವನೆಂಥಾ ಡಾಕ್ಟರ್ ನೋಡಿ…!
    Next Article ಮರಿ ರೌಡಿಯ ಅಟ್ಟಹಾಸಕ್ಕೆ ಬೆಚ್ಚಿದ ಜನ
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • vyezdnoj-shinomontazh-77sal ರಲ್ಲಿ Matrimonial ವೆಬ್ ಸೈಟ್ ನಲ್ಲೂ ವಂಚನೆ
    • Wljwdf ರಲ್ಲಿ ಯಾರಾಗಲಿದ್ದಾರೆ ಪ್ರತಿಪಕ್ಷ ನಾಯಕ? | Leader Of Opposition
    • Tracymix ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.