Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನಲ್ಲಿ ಇದು ಮಾತ್ರ ನಿಲ್ಲುತ್ತಿಲ್ಲ.
    ಸುದ್ದಿ

    ಬೆಂಗಳೂರಿನಲ್ಲಿ ಇದು ಮಾತ್ರ ನಿಲ್ಲುತ್ತಿಲ್ಲ.

    vartha chakraBy vartha chakraಜನವರಿ 21, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.21-
    ವ್ಹೀಲಿಂಗ್ ಮಾಡುವುದು ಜೀವಕ್ಕೆ ಅಪಾಯಕಾರಿ ಎಂದು ನಿರಂತರವಾಗಿ ಜಾಗೃತಿ ಮೂಡಿಸುತ್ತಿದ್ದರೂ, ನಿರೀಕ್ಷಿತ ಫಲಿತಾಂಶ ಸಿಗುತ್ತಿಲ್ಲ.
    ಇದರಿಂದ ಎಚ್ಚೆತ್ತುಕೊಳ್ಳದ ವಾಹನ ಸವಾರರ ಮೇಲೆ ಸಮರ ಸಾರಿರುವ ಸಂಚಾರ ಪೊಲೀಸರು ಕಳೆದ ವರ್ಷ 532 ಪ್ರಕರಣ ದಾಖಲಿಸಿಕೊಂಡಿದ್ದಾರೆ.
    ಅಲ್ಲದೆ, ಹಿಂದಿನ ಎರಡು ವರ್ಷಗಳಿಗೆ ಹೋಲಿಸಿದರೆ ಅಪ್ರಾಪ್ತ ದ್ವಿಚಕ್ರ ವಾಹನ ಸವಾರರ ಮೇಲೆ ದಾಖಲಾಗಿರುವ ಪ್ರಕರಣ ಐದು ಪಟ್ಟು ಹೆಚ್ಚಾಗಿದೆ.
    ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದರೂ ದಿನೇ ದಿನೇ ನಗರದಲ್ಲಿ ವ್ಹೀಲಿಂಗ್ ಪ್ರಕರಣಗಳು ಅಧಿಕಗೊಂಡಿವೆ.
    ಕಳೆದ 2024ರಲ್ಲಿ 532, 2023ರಲ್ಲಿ 219 ಹಾಗೂ 2022ರಲ್ಲಿ 283 ಕೇಸ್ ದಾಖಲಾಗಿವೆ. ಕಳೆದ ವರ್ಷ ದಾಖಲಾಗಿದ್ದ 532 ಪ್ರಕರಣಗಳಲ್ಲಿ 530 ದ್ವಿಚಕ್ರವಾಹನಗಳನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
    ಅಪ್ರಾಪ್ತ ಸವಾರರ ವಿರುದ್ಧ 2022ರಲ್ಲಿ 23 ಹಾಗೂ 2023ರಲ್ಲಿ 74 ಪ್ರಕರಣಗಳು ದಾಖಲಾಗಿವೆ. 2024ರಲ್ಲಿ ಈ ಸಂಖ್ಯೆಯಲ್ಲಿ 121 ಪ್ರಕರಣಗಳು ದಾಖಲಾಗಿದ್ದು, ಎರಡು ವರ್ಷಗಳಿಗೆ ಹೋಲಿಸಿದರೆ ಪ್ರಕರಣ ಸಂಖ್ಯೆಯಲ್ಲಿ ಐದು ಪಟ್ಟು ಏರಿಕೆಯಾಗಿದೆ. ಅಪಾಯಕಾರಿ ವ್ಹೀಲಿಂಗ್ ಕಾರ್ಯಾಚರಣೆ ವಿಶೇಷ ಕಾರ್ಯಾಚರಣೆ ನಡೆಸುವ ಪೊಲೀಸರು ಸಾಮಾಜಿಕ ಜಾಲತಾಣಗಳಾದ ಎಕ್ಸ್, ಫೇಸ್ ಬುಕ್ ಹಾಗೂ ಇನ್ಸ್ಟಾಗ್ರಾಮ್ಗಳ ಮೂಲಕ ಸಾರ್ವಜನಿಕರು ಕಳುಹಿಸುವ ಸವಾರರ ವ್ಹೀಲಿಂಗ್ ವಿಡಿಯೋಗಳನ್ನ ಗಂಭೀರವಾಗಿ ಪರಿಗಣಿಸಿ ಸಂಚಾರ ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುತ್ತಿದ್ದಾರೆ.
    ಇತ್ತೀಚಿನ ವರ್ಷಗಳಲ್ಲಿ ಬಹುತೇಕ 14 ರಿಂದ 30 ವರ್ಷದೊಳಗಿನ ಸವಾರರೇ ವ್ಹೀಲಿಂಗ್ ಮಾಡಿ ಸಿಕ್ಕಿಬಿದ್ದಿದ್ದಾರೆ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್ ತಿಳಿಸಿದರು.
    18 ವರ್ಷದೊಳಗಿನ ಅಪ್ರಾಪ್ತರಿಗೆ ದ್ವಿಚಕ್ರ ವಾಹನ ನೀಡಿದ ಪರಿಣಾಮ ಪೋಷಕರು ಅಥವಾ ಮಾಲೀಕರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ 172 ಕೇಸ್ಗಳು ದಾಖಲಾಗಿವೆ. 2021ರಲ್ಲಿ 22 ಹಾಗೂ 2024ರಲ್ಲಿ 79 ಪ್ರಕರಣ ದಾಖಲಾಗಿದ್ದು, ಈ ಹಿಂದಿನ ಎರಡು ವರ್ಷಗಳಿಗೆ ಹೋಲಿಸಿದರೆ ದಾಖಲಾದ ಪ್ರಕರಣಗಳು ನಾಲ್ಕು ಪಟ್ಟು ಹೆಚ್ಚಳವಾಗಿವೆ. ಅಪ್ರಾಪ್ತರಿಗೆ ದ್ವಿಚಕ್ರ ವಾಹನ ಕೊಟ್ಟು ಸಂಚಾರ ನಿಯಮ ಉಲ್ಲಂಘಿಸಿದವರ ವಿರುದ್ಧ ಭಾರತೀಯ ಮೋಟಾರ್ ಕಾಯ್ದೆಯಡಿ (ಐಎಂವಿ) ಪ್ರಕರಣ ದಾಖಲಿಸಿಕೊಂಡು, ತಲಾ 25 ಸಾವಿರ ದಂಡ ವಿಧಿಸಲಾಗಿದೆ. ಅಲ್ಲದೆ, ಬಾಲಾಪರಾಧ ನ್ಯಾಯ (ಮಕ್ಕಳ ಆರೈಕೆ ಹಾಗೂ ರಕ್ಷಣೆ) ತಿದ್ದುಪಡಿ ಕಾಯ್ದೆಯಡಿ ಸಂಬಂಧಿಸಿದ ಪೊಲೀಸ್ ಠಾಣೆಗಳಲ್ಲಿ ಪೋಷಕ ಹಾಗೂ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ಬಾಲ ನ್ಯಾಯಮಂಡಳಿಗೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
    ವಿಚಾರಣೆಯಲ್ಲಿ ತಪ್ಪು ಎಸಗಿರುವುದು ಸಾಬೀತಾದರೆ ಗರಿಷ್ಠ 3 ವರ್ಷ ಜೈಲುಶಿಕ್ಷೆ ಹಾಗೂ ದಂಡ ಕಟ್ಟಬೇಕಿದೆ ಎಂದು ತಿಳಿಸಿದ್ದಾರೆ.
    ಅಪಾಯಕಾರಿ ವ್ಹೀಲಿಂಗ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಜಾಗೃತಿ ಮೂಡಿಸಲಾಗುತ್ತಿದೆ. ಅಲ್ಲದೆ, ಶೈಕ್ಷಣಿಕ ಸಂಸ್ಥೆಗಳಿಗೂ ತೆರಳಿ ತಿಳುವಳಿಕೆ ನೀಡಲಾಗುತ್ತಿದೆ. ವ್ಹೀಲಿಂಗ್ ಮಾಡಿ ಸಿಕ್ಕಿಬಿದ್ದ ಅಪ್ರಾಪ್ತ ಸವಾರರ ಸಂಖ್ಯೆ ಅಧಿಕಗೊಂಡಿದ್ದು, ಈ ಸಂಬಂಧ ಪೋಷಕರ ವಿರುದ್ಧ ನಿರ್ಲಕ್ಷ್ಯ ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿದೆ” ಎಂದು ತಿಳಿಸಿದ್ದಾರೆ

    Verbattle
    Verbattle
    Verbattle
    ನ್ಯಾಯ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಕಾಂತಾರ ಸಿನಿಮಾಗೆ‌ ಸಂಕಷ್ಟ
    Next Article ಜೆಡಿಎಸ್ ನ ಶರವಣ ಅವರಿಗೆ ಪಂಗನಾಮ..
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Cctyiy ರಲ್ಲಿ ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?
    • Gpvood ರಲ್ಲಿ ಜನರ ನಡುವೆ ಕೆಲಸ ಮಾಡಲು ‘ಸಮೂಹಶಕ್ತಿ’ ಸಂಕಲ್ಪ | Samooha Shakti
    • Zcbojg ರಲ್ಲಿ ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.