Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನ ಆಸ್ತಿ ಮಾಲೀಕರೇ ಎಚ್ಚರ.
    ಬೆಂಗಳೂರು

    ಬೆಂಗಳೂರಿನ ಆಸ್ತಿ ಮಾಲೀಕರೇ ಎಚ್ಚರ.

    vartha chakraBy vartha chakraಡಿಸೆಂಬರ್ 3, 202423 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು:
    ಒಂದು ಬಾರಿ ಪರಿಹಾರ ಎಂಬ ವಿನೂತನ ಕ್ರಮಗಳ ಮೂಲಕ ಬಾಕಿ ಉಳಿದಿರುವ ಆಸ್ತಿ ತೆರಿಗೆ ಸಂಗ್ರಹಣೆಯಲ್ಲಿ ಹೊಸ ದಾಖಲೆ ಸೃಷ್ಟಿಸಿದ
    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇದೀಗ ಆಸ್ತಿ ತೆರಿಗೆ ಪಾವತಿಸದ ಮಾಲೀಕರಿಗೆ ಬಿಸಿ ಮುಟ್ಟಿಸಲು ಸಜ್ಜುಗೊಂಡಿದೆ.
    ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಪಾವತಿಗೆ ನೀಡಿದ್ದ ಒನ್ ಟೈಮ್ ಸೆಟಲ್​ಮೆಂಟ್ ಗಡುವು ಮುಗಿದಿರುವ ಬೆನ್ನಲ್ಲೇ ತೆರಿಗೆ ಪಾವತಿಸದವರ ಆಸ್ತಿಗಳನ್ನು ಹರಾಜು ಹಾಕಲು ಪಾಲಿಕೆ ಮುಂದಾಗಿದೆ.
    ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆ ಪಾವತಿಸುವಂತೆ ಪಾಲಿಕೆ ಆಸ್ತಿಗಳ ಮಾಲೀಕರಿಗೆ
    ಮೂರು ಹಂತದ ನೋಟಿಸ್ ನೀಡಿದರೂ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿದ್ದರೆ ಆಸ್ತಿ ಜಪ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಮೂಲಕ ಬಾಕಿ ತೆರಿಗೆ ವಸೂಲಿಗೆ ಪಾಲಿಕೆಯು ತೀವ್ರ ಕ್ರಮ ಕೈಗೊಳ್ಳುತ್ತಿದೆ. ಈಗಾಗಲೇ ಸಾಕಷ್ಟು ಅವಕಾಶ ಕೊಟ್ಟರೂ ಬಾಕಿ ತೆರಿಗೆ ಕಟ್ಟಿಲ್ಲ. ಜೊತೆಗೆ ಒನ್ ಟೈಮ್ ಸೆಟಲ್‌ಮೆಂಟ್ ಯೋಜನೆಯ ಗಡುವು ಸಹ ಮುಕ್ತಾಯಗೊಂಡಿದೆ. ಆದರೂ ತೆರಿಗೆ ಕಟ್ಟದವರಿಗೆ ಡಿಸೆಂಬರ್ 1ರಿಂದ ಬಡ್ಡಿ ಮತ್ತು ಆಸ್ತಿ ಹರಾಜು ಅಸ್ತ್ರ ಪ್ರಯೋಗಿಸಲಾಗುತ್ತದೆ ಎಂದು ಬಿಬಿಎಂಪಿ ಆಡಳಿತ ಮಂಡಳಿ ತಿಳಿಸಿದೆ.
    ಈವರೆಗೆ ನಗರದಲ್ಲಿ ನಗರದಲ್ಲಿ ಓಟಿಎಸ್ ಮೂಲಕ ಶೇ.60 ರಷ್ಟು ಜನರು ಮಾತ್ರ ತೆರಿಗೆ ಪಾವತಿಸಿದ್ದಾರೆ. ಅವಕಾಶ ನೀಡಿದರೂ ಕೂಡಾ ಶೇ.40 ರಷ್ಟು ಜನರು ತೆರಿಗೆ ಪಾವತಿಸಿಲ್ಲ. ಅಂತಹವರಿಗೆ ದುಪ್ಪಟ್ಟು ದಂಡದ ಜತೆಗೆ ತೆರಿಗೆ ವಸೂಲಿ ಮಾಡಲು ಪಾಲಿಕೆ ಮುಂದಾಗಿದೆ.
    ಬಾಕಿ ತೆರಿಗೆಗೆ ಬಾಕಿ ಉಳಿಸಿಕೊಂಡಷ್ಟೇ ದಂಡವನ್ನು ಪಾಲಿಕೆ ವಿಧಿಸಲಿದೆ. ತೆರಿಗೆ ಪಾವತಿ ಸಂಬಂಧ ಡಿಸೆಂಬರ್ ತಿಂಗಳಲ್ಲಿ ಮೂರು ಹಂತದಲ್ಲಿ ನೋಟಿಸ್ ನೀಡಲಾಗುತ್ತಿದೆ. ಮೊದಲ ನೋಟಿಸ್‌ಗೆ ಬಾಕಿ ಪಾವತಿಸಿದರೆ ದಂಡ ಮಾತ್ರ ವಸೂಲಿ ಆಗಲಿದೆ. ಎರಡನೇ ನೋಟಿಸ್‌ಗೆ ಪಾವತಿಸಿದರೆ ದಂಡದ ಜತೆಗೆ ಮೂಲ ಬಾಕಿ ತೆರಿಗೆಗೆ ಶೇ.15 ರಷ್ಟು ಬಡ್ಡಿ ಬೀಳಲಿದೆ. ಮೂರನೇ ನೋಟಿಸ್‌ಗೆ ಪಾವತಿಸಿದರೆ ದಂಡದ ಜತೆಗೆ ಮೂಲ ಬಾಕಿಗೆ ಶೇ.25 ರಷ್ಟು ಬಡ್ಡಿ ವಸೂಲಿ ಆಗಲಿದೆ. ಅಲ್ಲದೇ ಮೂರು ನೋಟಿಸ್‌ಗೂ ತೆರಿಗೆ ಪಾವತಿಸದಿದ್ದರೆ ಆಸ್ತಿ ಮುಟ್ಟುಗೋಲಿಗೆ ಕೋರ್ಟ್ ಮೊರೆಗೆ ಪಾಲಿಕೆ ಹೋಗಲಿದೆ.
    ಈವರೆಗೆ 3,751ಕೋಟಿ ರೂಪಾಯಿ ಆಸ್ತಿ ತೆರಿಗೆ ಬಾಕಿ ವಸೂಲಿ ಮಾಡಲಾಗಿದ್ದು, 4 ಸಾವಿರ ಕೋಟಿ ರೂಪಾಯಿ ಗುರಿ ಮುಟ್ಟಲು ಇಲ್ಲಿಯವರೆಗೂ ಪಾಲಿಕೆಗೆ ಸಾಧ್ಯವಾಗಿಲ್ಲ. ಆಸ್ತಿ ತೆರಿಗೆ ಪಾವತಿ ಮಾಡದ ಕಾರಣಕ್ಕಾಗಿ ಈವರೆಗೆ 6,381 ವಾಣಿಜ್ಯ ಮಳಿಗೆಗಳಿಗೆ ಬೀಗ ಹಾಕಿ ಸೀಜ್ ಮಾಡಲಾಗಿದೆ.
    ಬಾಕಿ ತೆರಿಗೆ ಪಾವತಿಗೆ ಬಿಬಿಎಂಪಿ ಹಲವು ಅವಕಾಶ ನೀಡಿದರೂ ಕೂಡ ತೆರಿಗೆ ಪಾವತಿದಾರರು ನಿರ್ಲಕ್ಷ್ಯ ವಹಿಸುತ್ತಿದ್ದು, ಸದ್ಯ ಕಠಿಣ ಕ್ರಮಕ್ಕೆ ಪಾಲಿಕೆ ಮುಂದಾಗಿದೆ.

    ಬೆಂಗಳೂರು ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಲೈಂಗಿಕ ಕೆಲಸ ಇಲ್ಲಿ ಸುರಕ್ಷಿತ!
    Next Article ಇದಕ್ಕಾಗಿ ಪೊಲೀಸ್ ಪೇದೆ ಅಮಾನತು.
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DichaelFew ರಲ್ಲಿ ಅಗಲಿದ “ಕಲಾ ತಪಸ್ವಿ”
    • thepokies.net online ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • best mexican online pharmacies ರಲ್ಲಿ ಗಾಯಾಳು ಡಿಸಿಪಿ ಸೈದುಲ್ ಮಾಡಿದ ಕೆಲಸ ಗೊತ್ತಾ ?
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe