Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಸ್ಕಾಂ ಅಧಿಕಾರಿಗಳ ಮೈಚಳಿ ಬಿಡಿಸಿದ ಕೆ.ಜೆ. ಜಾರ್ಜ್ | KJ George
    ರಾಜಕೀಯ

    ಬೆಸ್ಕಾಂ ಅಧಿಕಾರಿಗಳ ಮೈಚಳಿ ಬಿಡಿಸಿದ ಕೆ.ಜೆ. ಜಾರ್ಜ್ | KJ George

    vartha chakraBy vartha chakraಜೂನ್ 1, 2023Updated:ಜೂನ್ 2, 202324 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ. 1-
    ಇಂಧನ ಇಲಾಖೆಯ ನೂತನ ಸಚಿವರಾಗಿ ಕಾರ್ಯಾರಂಭ ಮಾಡಿರುವ ಕೆಜೆ ಜಾರ್ಜ್ ಇಲಾಖೆಗೆ ಹೊಸ ರೂಪ ನೀಡಲು ಮುಂದಾಗಿದ್ದಾರೆ ಈ ನಿಟ್ಟಿನಲ್ಲಿ ಅತಿ ಹೆಚ್ಚು ಗ್ರಾಹಕರನ್ನು ಹೊಂದಿರುವ ಬೆಸ್ಕಾಂನ ಜಡ್ಡುಗಟ್ಟಿದ ಆಡಳಿತ ವ್ಯವಸ್ಥೆಗೆ ಸಾಣೆ ಹಿಡಿಯಲು ತೀರ್ಮಾನಿಸಿದ್ದಾರೆ.
    ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಕೆಜೆ ಜಾರ್ಜ್ ಅವರು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಗ್ರ ಮಾಹಿತಿ ಪಡೆದುಕೊಂಡರು ಆನಂತರ ನಿವೃತ್ತ ಅಧಿಕಾರಿಗಳು ಇಂಧನ ದಕ್ಷತೆಯುಳ್ಳ ವ್ಯಕ್ತಿಗಳ ಜೊತೆ ಮಾತುಕತೆ ನಡೆಸಿ ಇಲಾಖೆಗೆ ಹೊಸ ರೂಪ ನೀಡುವ ಕುರಿತಂತೆ ಮಾಹಿತಿ ಪಡೆದುಕೊಂಡರು.
    ಈ ಎಲ್ಲಾ ಮಾಹಿತಿಗಳ ಆಧಾರದಲ್ಲಿ ಇಂದು ದಿಡೀರ್ ಬೆಸ್ಕಾಂ ಕೇಂದ್ರ ಕಚೇರಿಗೆ ಭೇಟಿ ನೀಡಿದರು. ಕಚೇರಿಯ ಎಲ್ಲಾ ವಿಭಾಗಗಳಿಗೆ ತೆರಳಿ ಸಿಬ್ಬಂದಿಯ ಹಾಜರಾತಿ ಕಾರ್ಯಕ್ಷಮತೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾಹಿತಿ ಪಡೆದುಕೊಂಡು ಅನಧಿಕೃತ ಗೈರು ಹಾಜರಾದವರಿಗೆ ಎಚ್ಚರಿಕೆ ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದರು.
    ಮಂತ್ರಿಯಾದ ನಂತರ ಕಚೇರಿಗೆ ಇದು ತಮ್ಮ ಮೊದಲ ಭೇಟಿಯಾಗಿದೆ ಹೀಗಾಗಿ ಯಾರ ಬಗ್ಗೆಯೂ ಕಠೋರವಾಗಿ ಮಾತನಾಡುವುದಿಲ್ಲ ಇನ್ನು ಮುಂದೆ ಇಂತಹ ದಿಡೀರ್ ಭೇಟಿ ಹೆಚ್ಚಳವಾಗಲಿದೆ ಕಚೇರಿಯ ಸಿಬ್ಬಂದಿ ತಮ್ಮ ಕಾರ್ಯವೈಖರಿಯನ್ನು ಸುಧಾರಿಸಿಕೊಳ್ಳಬೇಕು. ಕೆಲಸದ ಅವಧಿಯಲ್ಲಿ ತಮ್ಮ ಸ್ಥಳ ಬಿಟ್ಟು ಬೇರೆ ಕಡೆ ಹೋಗಬಾರದು ಅನಧಿಕೃತ ಗೈರು ಹಾಜರಿಯನ್ನು ಆಶಿಸ್ತು ಎಂದು ಪರಿಗಣಿಸಿ ಶಿಸ್ತು ಕ್ರಮ ಜರುಗಿಸಲಾಗುವುದು ಇದಕ್ಕೆ ಅವಕಾಶ ನೀಡಬಾರದು ಎಂದು ಹೇಳಿದರು.

    ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ತಾಂತ್ರಿಕ ವಿಭಾಗದ ನಿರ್ದೇಶಕ ಆಡಳಿತ ವಿಭಾಗದ ನಿರ್ದೇಶಕ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
    ಈ ವೇಳೆ ಬೆಸ್ಕಾಂ ವ್ಯಾಪ್ತಿಯಲ್ಲಿನ ವಿದ್ಯುತ್ ಗ್ರಾಹಕರ ಸಂಖ್ಯೆ ವಿದ್ಯುತ್ ಬಳಕೆಯ ಪ್ರಮಾಣ ಬಿಲ್ ಪಾವತಿಯ ವೈಖರಿ ಸೇರಿದಂತೆ ಹಲವು ಮಾಹಿತಿಗಳನ್ನು ಕೇಳಿದರು ಈ ಪ್ರಶ್ನೆಗಳಿಗೆ ಉತ್ತರ ಹೇಳಲು ಉನ್ನತ ಅಧಿಕಾರಿಗಳು ತಡಬಡಾಯಿಸಿದಾಗ ಅವರನ್ನು ಲಘುವಾಗಿ ತರಾಟೆಗೆ ತೆಗೆದುಕೊಂಡ ಸಚಿವ ಜಾರ್ಜ್ ತಾವು ಉನ್ನತ ಅಧಿಕಾರಿ ತಮ್ಮ ಬಳಿ ಎಲ್ಲ ಮಾಹಿತಿ ಇರಬೇಕು ಇದು ನನ್ನ ಮೊದಲ ಭೇಟಿ ಇನ್ನು ಮುಂದೆ ಇಂತಹ ಆಲಕ್ಷ್ಯ ಧೋರಣೆಯನ್ನು ಸಹಿಸುವುದಿಲ್ಲ ನಾನು ಕೇಳಿದಾಗ ನೀವು ಎಲ್ಲ ಮಾಹಿತಿಯನ್ನು ನೀಡಬೇಕು ಎಂದು ತಾಕೀತು ಮಾಡಿದರು.
    ಇದಾದ ಬಳಿಕ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆ ನಡೆಸಿ ಗೃಹ ಜ್ಯೋತಿ ಯೋಜನೆಯ ಅನುಷ್ಠಾನದ ಬಗ್ಗೆ ವಿವರವಾದ ಮಾಹಿತಿ ಪಡೆದುಕೊಂಡರು.

    ರಾಜ್ಯದಲ್ಲಿ ಗೃಹ ಬಳಕೆ ವಿದ್ಯುತ್ ಬಳಕೆದಾರರು ಪ್ರತಿ ತಿಂಗಳು ಸರಾಸರಿ 53 ಯೂನಿಟ್ ಮಾತ್ರ ಉಪಯೋಗಿಸುತ್ತಿದ್ದಾರೆ. ಹೆಚ್ಚುವರಿ 147 ಯುನಿಟ್ ಅನ್ನ ಘೋಷಣೆ ಮಾಡಿದರೆ ಅದರ ಬಳಕೆ ಸ್ವರೂಪದ ಬಗ್ಗೆಯೂ ಚರ್ಚಿಸಬೇಕಿದೆ. ಮನೆ ಮಾಲೀಕರು ಹೆಚ್ಚವರಿ ಎಲೆಕ್ಟ್ರಾನಿಕ್ ಉಪಕರಣ ಬಳಸಿದರೇ ಶೇಕಡ 15 ರಿಂದ 20ರಷ್ಟು ಹೆಚ್ಚು ಬಳಕೆ ಮಾಡಬಹುದು. ಹೀಗಾಗಿ 200 ಯೂನಿಟ್ ಬಳಕೆ ವಿಚಾರಕ್ಕೆ ಅರ್ಜಿ ಆಹ್ವಾನ ಹಾಗೂ ಬಿಲ್ ಕಟ್ಟುವ ಮಾದರಿ ಜಾರಿಗೆ ತರಬಹುದು. ಈಗಾಗಲೇ ಇರುವ ದೆಹಲಿ ಮಾಡಲ್ ನಂತೆ ಕಾರ್ಯನಿರ್ವಹಿಸುವುದು ಸಹ ಒಂದು ಆಯ್ಕೆಯಾಗಿ ಪರಿಗಣಿಸಬಹುದು. ವಿದ್ಯುತ್ ಸಬ್ಸಿಡಿ ಬೇಡ ಎಂದು ಸ್ವಯಂ ಪ್ರೇರಿತವಾಗಿ ಕೈ ಬಿಡುವವರನ್ನ ಸಹ ಗುರುತಿಸಬಹುದು. ಈ ರೀತಿ ಸಬ್ಸಿಡಿ ನಿರಾಕರಿಸುವವರು ರಾಜ್ಯದಲ್ಲಿ ಅಂದಾಜು 5 ಲಕ್ಷ ಮಂದಿ ಎಂದು ಗುರುತಿಸಬಹುದಾಗಿದೆ ಎಂದು ಅಧಿಕಾರಿಗಳು ಸುದೀರ್ಘ ವಿವರಣೆ ನೀಡಿದರು

    Verbattle
    Verbattle
    Verbattle
    bescom keb kj george
    Share. Facebook Twitter Pinterest LinkedIn Tumblr Email WhatsApp
    Previous Articleಜನರ ನಡುವೆ ಕೆಲಸ ಮಾಡಲು ‘ಸಮೂಹಶಕ್ತಿ’ ಸಂಕಲ್ಪ | Samooha Shakti
    Next Article ವೇದಿಕೆಯ ಮೇಲೆ ಮುಗ್ಗರಿಸಿ ಬಿದ್ದ ಅಮೇರಿಕಾ ಅಧ್ಯಕ್ಷ
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಮೈಸೂರು ಜೆಡಿಎಸ್ ನಲ್ಲಿ ತಲ್ಲಣ

    ಜನವರಿ 19, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek ರಲ್ಲಿ ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    • RicardoCor ರಲ್ಲಿ ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    • mine_pdSa ರಲ್ಲಿ Crypto ವಂಚಕ Arrest.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.