Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬ್ಯಾಂಕ್ ದರೋಡೆ ಮಾಡಿದ ಮೇಲೇನಾಯ್ತು ಗೊತ್ತಾ
    ಸುದ್ದಿ

    ಬ್ಯಾಂಕ್ ದರೋಡೆ ಮಾಡಿದ ಮೇಲೇನಾಯ್ತು ಗೊತ್ತಾ

    vartha chakraBy vartha chakraಜನವರಿ 21, 20251 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು,ಜ. 21-
    ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಮಂಗಳೂರಿನ
    ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣವನ್ನು ಬೇಧಿಸಿರುವ ಪೊಲೀಸರು ತಮಿಳುನಾಡು ಮೂಲದ ಮೂವರು ಕಳ್ಳರನ್ನು ಬಂಧಿಸಿದ್ದಾರೆ.
    ವಿಶೇಷವೆಂದರೆ ಬ್ಯಾಂಕ್ ನಲ್ಲಿ ಕದ್ದ  ನಗದು ಮತ್ತು ಚಿನ್ನವನ್ನು ಕದ್ದ ಈ ಕಳ್ಳರು ಅದನ್ನು ಗೋಣಿ ಚೀಲದಲ್ಲಿಟ್ಟುಕೊಂಡು 700 ಕಿ.ಮೀ ಕಾರಿನಲ್ಲೇ ಪ್ರಯಾಣಿಸಿರುವುದು ಪೊಲೀಸರ  ತನಿಖೆಯಲ್ಲಿ ಪತ್ತೆಯಾಗಿದೆ.
    ಕಳ್ಳತನದ ನಂತರ ಮಂಗಳೂರಿನಿಂದ ಫಿಯೇಟ್ ಕಾರಿನಲ್ಲಿ ಪರಾರಿಯಾಗಿದ್ದ ದರೋಡೆಕೋರರು ತಮಿಳುನಾಡಿನ ತಿರುನಲ್ವೇಲಿಗೆ ಪ್ರಯಾಣಿಸಿದ್ದರು. ತಮಿಳುನಾಡು ತಲುಪಿದ ಬಳಿಕ ಅಜ್ಞಾತ ಸ್ಥಳದಲ್ಲಿ ಕಾರು ಬಿಟ್ಟು ಚಿನ್ನದ ಜೊತೆ ಪರಾರಿಯಾಗಿದ್ದರು.
    ದರೋಡೆಕೋರರ ಜಾಡು ಹಿಡಿದು ಹೊರಟಿದ್ದ ನಗರ ಪೊಲೀಸರಿಗೆ ತಮಿಳುನಾಡಿನಲ್ಲಿ ಕಾರು ಪತ್ತೆಯಾಗಿದೆ. ನಂತರ ಕಾರಿನ ಚಾಸಿ ನಂಬರ್ ಆಧಾರದಲ್ಲಿ ಕಾರಿನ ನೈಜ ಮಾಲೀಕನ ಮಾಹಿತಿ ಸಂಗ್ರಹಿಸಿದ್ದಾರೆ. ಆ ಬಳಿಕ ತಮಿಳುನಾಡಿನಲ್ಲಿ ಜಾಲಾಡಿದ ಮಂಗಳೂರು ಪೊಲೀಸರಿಗೆ ಮೂವರು ಆಗಂತುಕರ ಜಾಡು ಪತ್ತೆಯಾಗಿದೆ. ಇದರ ಆಧಾರದಲ್ಲಿ ತಮಿಳುನಾಡಿನ ತಿರುನಲ್ವೇಲಿ ಬಳಿ ಮೂವರು ದರೋಡೆಕೋರರನ್ನು ಬಂಧಿಸಲಾಗಿದೆ.
    ಪ್ರಮುಖ ಅರೋಪಿ ಮುರುಗಂಡಿ ದೇವರ್ ತಿರುನಲ್ವೇಲಿ ತನಕ ಕಾರು ಚಲಾಯಿಸಿದ್ದ. ದರೋಡೆಕೋರರು ಪರಾರಿಯಾಗಲು ಬಳಸಿದ್ದು ಮಹಾರಾಷ್ಟ್ರ ಮೂಲದ ಫಿಯೇಟ್ ಕಾರು ಎಂಬ ಮಾಹಿತಿ ಕೂಡ ಲಭ್ಯವಾಗಿದೆ. ಮುಂಬೈ ಹಾಗೂ ತಮಿಳುನಾಡು ಮೂಲದ ನಟೋರಿಯಸ್ ಗ್ಯಾಂಗ್ ದರೋಡೆ ಮಾಡಿದೆ.
    ಎರಡು ತಿಂಗಳಿಂದ ಸಂಚು:
    ಕೋಟೆಕಾರು ಬ್ಯಾಂಕ್ ದರೋಡೆಯ ಕಿಂಗ್ಪಿನ್ ಮುರುಗಂಡಿ ದೇವರ್ ಎರಡು ತಿಂಗಳ ಹಿಂದೆಯೇ ಮಂಗಳೂರಿಗೆ ಬಂದಿದ್ದ. ಕೋಟೆಕಾರು ಬ್ಯಾಂಕ್ ಪರಿಸರದಲ್ಲಿ ಸುತ್ತಾಡಿ ಮಾಹಿತಿ ಕಲೆ ಹಾಕಿದ್ದ. ಆ ಬಳಿಕ ನಿಖರವಾದ ಸ್ಕೆಚ್ ತಯಾರಿಸಿ ಮತ್ತೆ ತಮಿಳುನಾಡಿಗೆ ತೆರಳಿದ್ದ. ಆ ಬಳಿಕ ದರೋಡೆಗೆ ಪಕ್ಕಾ ಪ್ಲಾನ್ ಮಾಡಿಕೊಂಡು ತಂಡದ ಜೊತೆ ಬಂದಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
    ದರೋಡೆ ಮಾಡುವುದಕ್ಕೆಂದು ರಾಜೇಂದ್ರನ್, ಕಣ್ಣನ್ ಮಣಿ ಹಾಗೂ ಇತರೆ ಅರು ಜನರ ಜೊತೆ ಮುರುಗಂಡಿ ದೇವರ್ ಬಂದಿದ್ದ. ಆದರೆ, ಐದು ಜನರಷ್ಟೇ ಫಿಯೇಟ್ ಕಾರಿನಲ್ಲಿ ಬಂದು ದರೋಡೆ ಮಾಡಿದ್ದರು. ಓರ್ವ ಬೇರೆ ಜಾಗದಲ್ಲಿ ನಿಂತು ದರೋಡೆಗೆ ನೆರವು ನೀಡಿರುವುದು ಪತ್ತೆಯಾಗಿದೆ.
    ದರೋಡೆಕೋರರ ಬಂಧನದ ಬಗ್ಗೆ ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ನಿನ್ನೆ ಮಾಹಿತಿ ನೀಡಿ ದರೋಡೆಕೋರರನ್ನು ಹೇಗೆ ಟ್ರ್ಯಾಕ್ ಮಾಡಿ ಬಂಧಿಸಲಾಗಿದೆ ಎಂಬುದನ್ನು ವಿವರಿಸಿದ್ದಾರೆ.
    ಕರ್ನಾಟಕ ಗುಪ್ತಚರ ಇಲಾಖೆ ಕೂಡ ಬ್ಯಾಂಕ್ ದರೋಡೆ ಪ್ರಕರಣ ಭೇದಿಸಲು ಸಹಾಯ ಮಾಡಿತ್ತು. ಬಂಧಿತರಿಂದ ಚಿನ್ನದ ಜತೆಗೆ ತಲ್ವಾರ್ ಮತ್ತು ಪಿಸ್ತೂಲ್ ವಶಪಡಿಸಿಕೊಳ್ಳಲಾಗಿತ್ತು.

    Verbattle
    Verbattle
    Verbattle
    ಕರ್ನಾಟಕ ಕಲೆ ಕಳ್ಳತನ ಕಾರು ಚಿನ್ನ ತಮಿಳುನಾಡು
    Share. Facebook Twitter Pinterest LinkedIn Tumblr Email WhatsApp
    Previous Articleಜೆಡಿಎಸ್ ನ ಶರವಣ ಅವರಿಗೆ ಪಂಗನಾಮ..
    Next Article ನಟ ದರ್ಶನ್ ಗನ್ ಲೈಸೆನ್ಸ್ ರದ್ದು
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    1 ಟಿಪ್ಪಣಿ

    1. Quqnmb on ಫೆಬ್ರವರಿ 11, 2026 8:33 ಅಪರಾಹ್ನ

      betmgm free bet betmgm-play betmgm KY

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwardKar ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Tracymix ರಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    • LinwoodGah ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.