ಸಾಮಾಜಿಕ ಸಂತ ಬದಲಾವಣೆಯ ಹರಿಕಾರ ಕಾಯಕಯೋಗಿ ಬಸವಣ್ಣ ಅವರ ತತ್ವ ನಿಷ್ಠೆ ಗಳ ಪ್ರಬಲ ಆರಾಧಕರಂತೆ ಗೋಚರಿಸುವ ಬ್ರಹ್ಮಶ್ರೀ ನಾರಾಯಣ ಗುರುಗಳು ದಕ್ಷಿಣ ಭಾರತದಲ್ಲಿ ದೇವರು ಧರ್ಮದ ಬೆಳಕಿನಿಂದ ವಂಚಿತರಾದ ಜನಕ್ಕೆ ದೇವರನ್ನು ಕೊಟ್ಟ ಮಹಾನ್ ಸಂತ.
1854ರಲ್ಲಿ ಕೇರಳದ ತಿರುವನಂತಪುರ ಸಮೀಪದ ದ ಚೆಂಬಿಳಂತಿ ಎಂಬ ಗ್ರಾಮದಲ್ಲಿನ ತೀರಾ ಹಿಂದುಳಿದ ಈಳವ ಸಮುದಾಯದ ಮಾದನ್ ಆಶಾನ್ ಮತ್ತು ಕುಟ್ಟಿ ಅಮ್ಮಾಳ್ ದಂಪತಿಗೆ ಜನಿಸಿದ ಈ ಮಹಾನ್ ಸಾಧಕನ ಹೆಸರು ನಾರಾಯಣ. ತಂದೆ ತಾಯಿಯರ ಪಾಲಿಗೆ ಪ್ರೀತಿಯ ನಾಣು.
ಬಾಲ್ಯದಲ್ಲಿ ಎಲ್ಲ ಮಕ್ಕಳಂತೆ ಸಹಜ ರೀತಿಯ ಚಟುವಟಿಕೆಯಿಂದ ಇರುತ್ತಿದ್ದ ನಾಣು ಕೆಲವೊಂದು ವಿಷಯಗಳ ಕುರಿತು ತತ್ವಜ್ಞಾನಿಯಂತೆ ಮಾತನಾಡುತ್ತಿದ್ದರು ಬಾಲ್ಯದಲ್ಲೇ ಕಂಡ ಈತನ ಗುಣವನ್ನು ಇತರರೊಂದಿಗೆ ಹೇಳಿಕೊಂಡ ತಂದೆ ತಾಯಿ ನಾರಾಯಣನಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂಬ ಸಂಕಲ್ಪ ಮಾಡಿದರು.
ನಾರಾಯಣ ವಿದ್ಯಾವಂತನಾದರೆ ಏನೋ ಮಹತ್ತರವಾದದ್ದನ್ನು ಸಾಧಿಸಲಿದ್ದಾನೆ ಎಂದು ನಂಬಿದ ತಂದೆ ತಾಯಿ ಆತನನ್ನು ಬಾಲ್ಯದಲ್ಲಿ ಶಾಲೆಗೆ ಸೇರಿಸಿದರು
ಬಾಲಕ ನಾರಾಯಣ ಅಂದಿನ ಕಾಲಕ್ಕೆ ತಿರುವನಂತಪುರಂ ಪ್ರಾಂತ್ಯದಲ್ಲಿ ಪ್ರಖ್ಯಾತರಾಗಿದ್ದ ಮೂತ್ತ ಪಿಳ್ಳೆ ಆಶಾನ್, ಸುಂದರ ಪಿಳ್ಳೆ ಆಶಾನ್, ಇವರಿಂದ ಮಳೆಯಾಳ ಸಂಸ್ಕೃತ ಅಭ್ಯಾಸ ಮಾಡಿದರು.
ಇಲ್ಲಿಯೇ ಅವರಿಗೆ ಪುರಾಣ ಜ್ಞಾನ, ರಾಮಾಯಣ, ಭಾರತ, ಭಾಗವತವೇ ಮೊದಲಾದ ಧರ್ಮಗ್ರಂಥಗಳ ಜ್ಞಾನ ದೊರೆಯಿತು. ಇದಾದ ಬಳಿಕ ಉನ್ನತವಾದ ಹಿಂಗ ಮಾಡುವ ಆಕಾಂಕ್ಷೆ ಹೊಂದಿದ್ದ ನಾಣುವಿಗೆ ದೂರದ ಕರುನಾಗಪಳ್ಳಿಯ ಚೆರುವನ್ನಾರ್ ಮನೆತನದ ಶ್ರೀರಾಮನ್ ಆಶಾನ್ ಎಂಬ ಗುರುಗಳಲ್ಲಿ ಶಿಕ್ಷ ಣ ದೊರೆಯಿತು. ಇಲ್ಲಿ ಊಟ ನಿದ್ರೆಗಳ ಪರಿವೆಯಿಲ್ಲದೆ ಕಲಿತ ನಾಣು ಅಧ್ಯಾತ್ಮ, ಆಯುರ್ವೇದ ಜ್ಯೋತಿಷ್ಯ ಶಾಸ್ತ್ರ, ವೇದ ಉಪನಿಷತ್ತು, 18 ಪುರಾಣಗಳನ್ನು ಕಲಿತರು .
ಕಾವ್ಯ, ಮೀಮಾಂಸೆ, ನಾಟಕ, ವ್ಯಾಕರಣ, ಅಲಂಕಾರ, ತರ್ಕಶಾಸ್ತ್ರ, ವಿದ್ಯೆಗಳನ್ನು ಸಿದ್ಧಿಸಿಕೊಳ್ಳುವ ಮೂಲಕ ‘ನಾಣು ಚಟ್ಟಾಂಬಿ’ ಆಗಿ ಆಧ್ಯಾತ್ಮ ಗುರುವಾದರು. ಸಮಾಜದೊಂದಿಗೆ ಬದುಕಿನ ಪಾಠ ಕಲಿತು ಬ್ರಹ್ಮಜ್ಞಾನವನ್ನು ಪಡೆದು, ನಾರಾಯಣ ಗುರುವಾದರು.
ನಾರಾಯಣ ಗುರುಗಳು ಯಾವುದೋ ಒಂದು ಧರ್ಮದ, ಒಂದು ಜಾತಿಯ ಗುರುವಾಗದೆ ಅಂದಿನ
ಬ್ರಿಟೀಷ್ ಅರಸೊತ್ತಿಗೆಯ ಆಡಂಬರದ ಕಾಲದಲ್ಲಿ. ಮೂಢನಂಬಿಕೆ, ಜಾತೀಯತೆ, ಅಸ್ಪೃಶ್ಯತೆ, ದೇವದಾಸಿ ಪದ್ಧತಿ, ಬೆತ್ತಲೆಸೇವೆ, ಬಾಲ್ಯವಿವಾಹ, ಗುಲಾಮಗಿರಿ, ಜೀತ ಪದ್ಧತಿ, ಜಮೀನ್ದಾರಿ ಪದ್ಧತಿ ಮೊದಲಾದ ಅನಿಷ್ಟ ಅಮಾನುಷ ಆಚರಣೆಗಳ ವಿರುದ್ಧ ಸಿಡಿದೆದ್ದರು.
ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಸಾರಿ ಹೇಳುವ ಮೂಲಕ ಚಾತುರ್ವರ್ಣ ವ್ಯವಸ್ಥೆಯನ್ನು ಧಿಕ್ಕರಿಸಿದರು.ಬ್ರಾಹ್ಮಣರಿಗೆ ಮಾತ್ರ ದೇವಾಲಯ ವಿಗ್ರಹಗಳನ್ನು ಸ್ಥಾಪಿಸಲು ಅವಕಾಶ ಎಂದು ಬಲವಾಗಿ ನಂಬಿದ್ದ ಕಾಲದಲ್ಲಿ ದೀನ ದಲಿತರೂ ದೇವರನ್ನು ಮುಟ್ಟಿ ಪೂಜಿಸುವ ಅವಕಾಶ ಕಲ್ಪಿಸಿದ ಕ್ರಾಂತಿಕಾರಿ.
ಮಂಗಳೂರಿನ ಕುಧ್ರೋಳಿ ಗೋಕರ್ಣನಾತೇಶ್ವರ ದೇವಾಲಯ ಸೇರಿದಂತೆ ದಕ್ಷಿಣ ಭಾರತದಲ್ಲಿ ನೂರಾರು ದೇವಾಲಯಗಳನ್ನು ಸ್ಥಾಪಿಸಿ ಅಸ್ಪೃಶ್ಯರು ಹಿಂದುಳಿದವರು ಮುಕ್ತವಾಗಿ ದೇವರನ್ನು ಪೂಜಿಸುವ ವ್ಯವಸ್ಥೆ ಕಲ್ಪಿಸಿದರು ಎಲ್ಲರಿಗೂ ಸಂಸ್ಕೃತ ಮತ್ತು ವೇದ ಅಧ್ಯಯನ ಮಾಡುವ ಅವಕಾಶವಿದೆ ಎಂದು ಪ್ರತಿಪಾದಿಸಿ ಅದನ್ನು ಬೋಧಿಸಿದ ನಾರಾಯಣ ಗುರುಗಳು ಆಧುನಿಕ ಶಿಕ್ಷಣಕ್ಕೂ ಒತ್ತು ನೀಡಿದರು.
ಶಿಕ್ಷಣದಿಂದ ಮಾತ್ರ ಮನುಕುಲದ ಉದ್ಧಾರ ಮೂಢನಂಬಿಕೆಗಳ ನಿವಾರಣೆ ಎಂದು ಬಲವಾಗಿ ನಂಬಿದ್ದ ಅವರು ಎಲ್ಲರನ್ನು ಇಂಗ್ಲಿಷ್ ಕಲಿಯುವಂತೆ ಪ್ರೇರೇಪಿಸಿದರು.
ಸಮಾನತೆ ಆಧ್ಯಾತ್ಮಿಕ ಚಿಂತನೆಗಳ ನೂರಾರು ಕೃತಿಗಳನ್ನು ಬರೆದಿರುವ ನಾರಾಯಣ ಗುರುಗಳು ಎಂದಿಗೂ ಎಲ್ಲರಿಗೂ ಆದರ್ಶಪ್ರಾಯರು.
Previous Articleನವರಂಗಿ ಸ್ವಾಮಿ ವಿರುದ್ಧ ಕ್ರಮ ಯಾಕಿಲ್ಲ..?
Next Article ದಲಿತ ವಿರೋಧಿ ಕಾಂಗ್ರೆಸ್.


2 ಪ್ರತಿಕ್ರಿಯೆಗಳು
mgm betting app promo betmgm-play betmgm IN
Для обеспечения максимальной безопасности на дороге рекомендуем приобрести купить камеру заднего вида для грузового автомобиля.
Для правильной работы камеры важно правильно установить устройство на грузовик.