ಮಂಜಿನ ನಗರಿ ಮಡಿಕೇರಿ ಜನರ ಬಹುದಿನದ ಕನಸು ಸಾಕಾರಗೊಂಡಿದೆ. ಉದ್ಯೋಗ, ಆಸ್ಪತ್ರೆ ಮೊದಲಾದ ಕೆಲಸಗಳಿಗಾಗಿ ಮಡಿಕೇರಿಗೆ ಆಗಮಿಸುವ ಜನರ ಹಸಿವೆಯನ್ನು ನೀಗಿಸುವ ದೃಷ್ಟಿಯಿಂದ ಆರಂಭಿಸಲಾಗಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಇಂದಿರಾ ಕ್ಯಾಂಟೀನ್ ಯೋಜನೆ ಅಡಿಯಲ್ಲಿ ಸುಸಜ್ಜಿತ ಇಂದಿರಾ ಕ್ಯಾಂಟೀನ್ ತಲೆಯೆತ್ತಿ ನಿಂತಿದೆ.
ಮಡಿಕೇರಿ ಕ್ಷೇತ್ರದ ಯುವ ಹಾಗೂ ಉತ್ಸಾಹಿ ಶಾಸಕ ಡಾ. ಮಂತರ್ ಗೌಡ ಅವರ ವಿಶೇಷ ಕಾಳಜಿ ಮತ್ತು ಪ್ರಯತ್ನದ ಪರಿಣಾಮವಾಗಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಗೊಂಡಿದೆ.
ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆ ನೂತನವಾಗಿ ನಿರ್ಮಿಸಿರುವ ‘ಇಂದಿರಾ ಕ್ಯಾಂಟೀನ್’ ಅನ್ನು ಶಾಸಕ ಡಾ.ಮಂತರ್ಗೌಡ ಉದ್ಘಾಟಿಸುವ ಮೂಲಕ ಸೇವೆಗೆ ಸಮರ್ಪಿಸಿದರು. ಈ ಮೂಲಕ ಮಡಿಕೇರಿ ನಗರಕ್ಕೆ ಮತ್ತೊಂದು ಇಂದಿರಾ ಕ್ಯಾಂಟೀನ್ ಸೇರ್ಪಡೆಯಾಯಿತು.
ಇಂದಿರಾ ಕ್ಯಾಂಟೀನ್ ಅನ್ನು ಸಾರ್ವಜನಿಕರ ಸೇವೆಗೆ ಸಮರ್ಪಿಸಿ ಮಾತನಾಡಿದ ಅವರು ‘ಸಾರ್ವಜನಿಕರಿಗೆ ಒಳಿತಾಗುವ ನಿಟ್ಟಿನಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟಿನ್ ಆರಂಭಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಹೇಳಿದರು.
ಹಲವು ವರ್ಷಗಳಿಂದ ಆಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಬೇಕಿತ್ತು. ಆದರೆ ಈಗ ಚಾಲನೆ ನೀಡಲಾಗಿದೆ ಎಂದರು.
ನಗರಾಭಿವೃದ್ಧಿ ಮತ್ತು ಪೌರಾಡಳಿತ ಸಚಿವರು ಇಂದಿರಾ ಕ್ಯಾಂಟೀನ್ ಆರಂಭಕ್ಕೆ ಅವಕಾಶ ಮಾಡಿದ್ದಾರೆ. ಆ ನಿಟ್ಟಿನಲ್ಲಿ ಬೇಡಿಕೆಗೆ ತಕ್ಕಂತೆ ಆಸ್ಪತ್ರೆ ಆವರಣದಲ್ಲಿ ಆರಂಭಿಸಲಾಗಿದೆ ಎಂದು ತಿಳಿಸಿದರು
ಕೃಷಿ ಕೂಲಿ ಕಾರ್ಮಿಕರು, ಆಸ್ಪತ್ರೆ ಸೇರಿದಂತೆ ನಾನಾ ಕಾರಣಗಳಿಂದ ಜಿಲ್ಲಾ ಕೇಂದ್ರಗಳಿಗೆ ಬರಲಿರುವ ಬಡವರು, ಕಳ ಮಾಧ್ಯಮ ವರ್ಗದ ಜನರಿಗೆ ಅತ್ಯಂತ ಕಡಿಮೆ ದರದಲ್ಲಿ ಉಪಹಾರ ಮತ್ತು ಊಟ ಸಿಗುವ ವ್ಯವಸ್ಥೆ ಮಾಡಲಾಗಿದೆ.
ಇದನ್ನು ನಿರ್ವಹಿಸುವವರು ರುಚಿ ಮತ್ತು ಗುಣಮಟ್ಟಕ್ಕೆ ಆದ್ಯತೆ ನೀಡಬೇಕು ಗ್ರಾಹಕರು
ಇಂದಿರಾ ಕ್ಯಾಂಟೀನ್ನಲ್ಲಿ ಸ್ವಚ್ಛತೆ ಹಾಗೂ ಪರಿಸರ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಬೇಕು. ಸರ್ಕಾರವು ಸಹ ಉಪಾಹಾರ, ಮಧ್ಯಾಹ್ನದ ಊಟ ಹಾಗೂ ರಾತ್ರಿ ಊಟಕ್ಕೆ ಹಣವನ್ನು ಭರಿಸಲಿದ್ದು, ಸಾರ್ವಜನಿಕರಿಗೆ ಒಳಿತಾಗುವ ನಿಟ್ಟಿನಲ್ಲಿ ಕ್ರಮವಹಿಸುವಂತೆ ಅವರು ಹೇಳಿದರು.
ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವುದರಿಂದ ಬೇಡಿಕೆಗೆ ತಕ್ಕಂತೆ ಆಹಾರ ಪೂರೈಸಬೇಕು ಎಂದು ಸೂಚಿಸಿದರು.
ನಗರಸಭೆ ಅಧ್ಯಕ್ಷೆ ಪಿ.ಕಲಾವತಿ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ನಗರಸಭೆ ಉಪಾಧ್ಯಕ್ಷ ಮಹೇಶ್ ಜೈನಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷರಾದ ಮಂದ್ರೀರ ಮೋಹನ್ ದಾಸ್, ನಗರಸಭೆ ಸದಸ್ಯರಾದ ಎಂ.ಎ.ಮುಸ್ತಪಾ, ಅರುಣ್ ಶೆಟ್ಟಿ, ಮನ್ಸೂರ್ ಅಲಿ, ಬಿ.ಸಿ.ಜಗದೀಶ್, ಜುಲೈಕಾಬಿ, ಬಿ.ಎನ್.ಮುದ್ದುರಾಜು, ಪೌರಾಯುಕ್ತ ಎಚ್.ಆರ್.ರಮೇಶ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಿ.ಸತೀಶ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಲೋಕೇಶ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಸ್ಥಾನಿಕ ವೈದ್ಯಾಧಿಕಾರಿ ಡಾ.ಸತೀಶ್, ವೈದ್ಯಾಧಿಕಾರಿಗಳಾದ ಡಾ.ಪುರುಷೋತ್ತಮ, ಡಾ.ಶ್ವೇತಾ ಭಾಗವಹಿಸಿದ್ದರು
Previous Articleಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !
Next Article ಸೋಮವಾರಪೇಟೆ ಜನರ ಕನಸು ಈಡೇರಿತು.

10 ಪ್ರತಿಕ್ರಿಯೆಗಳು
betmgm Indiana https://betmgm-play.com/ mgm sports
Explore a universe of themed slots and progressive jackpots. In casino coins, tournaments add competitive edge to your play. Register and boost your bankroll!
Explore a universe of themed slots and progressive jackpots. In casino coins, tournaments add competitive edge to your play. Register and boost your bankroll!
Explore a universe of themed slots and progressive jackpots. In casino coins, tournaments add competitive edge to your play. Register and boost your bankroll!
Explore a universe of themed slots and progressive jackpots. In casino coins, tournaments add competitive edge to your play. Register and boost your bankroll!
Explore a universe of themed slots and progressive jackpots. In casino coins, tournaments add competitive edge to your play. Register and boost your bankroll!
Ignite the plains with fiery spins and fortune. best buffalo slot machine delivers stacked symbols, retrigger heaven, and life-changing jackpots. Your big moment is now!
gates of olympus stake isn’t just another site. It’s the crypto casino blueprint.
gates of olympus stake isn’t just another site. It’s the crypto casino blueprint.
gates of olympus stake isn’t just another site. It’s the crypto casino blueprint.