ಬೆಂಗಳೂರು,ಅ.3:
ನಮ್ಮ ಸಂವಿಧಾನದಲ್ಲಿ ಒಬ್ಬ ವ್ಯಕ್ತಿ ಒಂದು ಮತ ಎಂದು ಹೇಳಲಾಗಿದೆ ಈ ತತ್ವಕ್ಕೆ ಅಪಚಾರವೆಸಗುತ್ತಿರುವ ಬಿಜೆಪಿ ಚುನಾವಣಾ ಆಯೋಗವನ್ನು ದುರುಪಯೋಗ ಮಾಡಿಕೊಂಡು ನಡೆಸುತ್ತಿರುವ ಮತಗಳ್ಳತನ ವಿರುದ್ಧ ಸಂಘಟಿತ
ಹೋರಾಟ ನಡೆಸಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಕರೆ ನೀಡಿದ್ದಾರೆ
ಮತಗಳ್ಳತನ ವಿರುದ್ದ ಬೆಂಗಳೂರಿನ ಪುಲಕೇಶಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಸಹಿಸಂಗ್ರಹ ಅಭಿಯಾನಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು.
“ನಮ್ಮ ಸಂವಿಧಾನದಲ್ಲಿ ಒಬ್ಬ ವ್ಯಕ್ತಿ ಒಂದು ಮತ ಎಂದು ಹೇಳಲಾಗಿದೆ. ಇಂದು ಸಂವಿಧಾನ ಹೇಳಿದ್ದನ್ನು ಮೀರಿ ಮತಕಳ್ಳತನ ಮಾಡಲಾಗುತ್ತಿದೆ. ನಮ್ಮ ಪವಿತ್ರ ಸಂವಿದಾನವನ್ನು ಎಲ್ಲರೂ ಒಟ್ಟಿಗೆ ಸೇರಿ ರಕ್ಷಿಸಿಕೊಳ್ಳಬೇಕಿದೆ ಎಂದು ಹೇಳಿದರು
ಈ ದೇಶದಲ್ಲಿ ಹೊಸಕ್ರಾಂತಿಯ ಅಲೆಯನ್ನು, ಬದಲಾವಣೆಯನ್ನು ನಾವು ನೀವೆಲ್ಲರೂ ಸೇರಿ ಮಾಡಬೇಕಿದೆ. ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರತಿ ಗಲ್ಲಿ, ಗಲ್ಲಿಯಲ್ಲಿ ಎಷ್ಟು ಜನ ಸಾಧ್ಯವೋ ಅಷ್ಟು ಜನರನ್ನು ಒಗ್ಗೂಡಿಸಿ ಮತಕಳ್ಳತನದ ವಿರುದ್ಧ ಜನಾಭಿಪ್ರಾಯ ರೂಪಿಸಬೇಕು. ಜನರ ಹಕ್ಕನ್ನು ಕಾಪಾಡುವಂತೆ ಪ್ರೇರೆಪಿಸಬೇಕು. ಬೆಂಗಳೂರಿನ ಪುಲಕೇಶಿ ನಗರದಲ್ಲಿ ಎದ್ದಿರುವ ದನಿ ಇಡೀ ದೇಶಕ್ಕೆ ಕೇಳಿಸಬೇಕು ಎಂದರು.
ಅಶ್ಪಾಕ್ ಉಲ್ಲಾ ಖಾನ್, ಭಗತ್ ಸಿಂಗ್, ಸುಖದೇವ, ರಾಜಗುರು, ಸುಭಾಷ್ ಚಂದ್ರ ಬೋಸ್, ಬಾಲ ಗಂಗಾಧರ ತಿಲಕರು ಹೀಗೆ ನೂರಾರು ಮಂದಿ ಈ ದೇಶದಲ್ಲಿ ಕ್ರಾಂತಿಯ ಕಿಡಿ ಹೊತ್ತಿಸಿದ್ದಾರೆ. ಆದ ಕಾರಣಕ್ಕೆ ನಾವು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಇದನ್ನ ಮತಕಳ್ಳತನದ ಮೂಲಕ ವ್ಯವಸ್ಥಿತವಾಗಿ ಕದಿಯಲಾಗುತ್ತಿದೆ ಎಂದು ದೂರಿದರು
ನಾವೆಲ್ಲರೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊಡುಗೆಯಾದ ಸಂವಿಧಾನವನ್ನ ರಕ್ಷಣೆ ಮಾಡಲು ಸೇರಿದ್ದೇವೆ. ಇಂದು ಸಂವಿಧಾನದ ಜೊತೆ ಜೊತೆಗೆ ಪ್ರಜಾಪ್ರಭುತ್ವವನ್ನು ನಾಶ ಮಾಡಲಾಗುತ್ತಿದೆ. ಇದು ಕೇವಲ ಕಾಂಗ್ರೆಸ್ ಮತ್ತು ಬಿಜಪಿ ನಡುವಿನ ಸಂಘರ್ಷವಲ್ಲ. ಈ ದೇಶದ ಜನ ಸಾಮಾನ್ಯರ ಸಂಘರ್ಷ ಎಂದು ಹೇಳಿದರು
ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಮತ ಕಳ್ಳತನ ವಿರೋಧಿ ಹೋರಾಟ ಕೇವಲ ರಾಜಕೀಯ ಉದ್ದೇಶದ ಹೋರಾಟವಲ್ಲ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಯ ಹೋರಾಟ. ಜನರ ಮತಾಧಿಕಾರದ ರಕ್ಷಣೆಯ ಹೋರಾಟ ಎಂದು ತಿಳಿಸಿದರು
ಈ ದೇಶದ ಜನರು ತಮ್ಮ ಆಯ್ಕೆಯ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವನ್ನೇ ಕಳೆದುಕೊಂಡಿದ್ದಾರೆ. ಪ್ರತಿಯೊಬ್ಬರ ಮತಗಳನ್ನೂ ವ್ಯವಸ್ಥಿತವಾಗಿ ಕದಿಯಲಾಗುತ್ತಿದೆ. ಒಬ್ಬ ವ್ಯಕ್ತಿಯ ಮತ ಎರಡಾಗಿ ಬದಲಾಗುತ್ತಿದೆ. ಒಂದೊಂದು ಮನೆಯಲ್ಲಿ ಐವತ್ತಕ್ಕೂ ಹೆಚ್ಚು ಜನ ಮತದಾರರು ವಾಸವಿದ್ದಾರೆ. ಇಷ್ಟೊಂದು ಅಕ್ರಮದ ಹಿಂದೆ ಇರುವವರು ಬಿಜೆಪಿ ಪಕ್ಷದ ಜೊತೆ ನಿಂತಿದ್ದಾರೆ. ಈ ಅಕ್ರಮವನ್ನು ನಾವು ಪ್ರಶ್ನೆ ಮಾಡಬೇಕು. ಬಯಲಿಗೆ ಎಳೆಯಬೇಕು. ಅದಕ್ಕಾಗಿ ಬೃಹತ್ ಹೋರಾಟದ ಜೊತೆ ಜೊತೆಯಲ್ಲಿ ಸಣ್ಣ ಸಣ್ಣ ಪ್ರಮಾಣದ ಜನಜಾಗೃತಿ ಹೋರಾಟಕ್ಕೆ ಕಾಂಗ್ರೆಸ್ ಸಜ್ಜಾಗಿದೆ ಎಂದು ವಿವರಿಸಿದರು
ಮತ ಕಳ್ಳತನದಿಂದ ಈ ದೇಶದ ಮಹಿಳೆಯರು, ಕೂಲಿ ಕಾರ್ಮಿಕರು, ಬಡವರು, ಹಿಂದುಳಿದವರು, ಅಲ್ಪ ಸಂಖ್ಯಾತರಿಗೆ, ಪರಿಶಿಷ್ಟ ಜಾತಿ, ಪಂಗಡದವರಿಗೆ, ಸಣ್ಣ ಉದ್ದಿಮೆದಾರರು, ದಿನಸಿ ಅಂಗಡಿ ಮಾಲೀಕರು, ಸಣ್ಣಪುಟ್ಟ ಬೀದಿಬದಿ ವ್ಯಾಪಾರಿಗಳು ಹೀಗೆ ಸಮಾಜದ ಸೂಕ್ಷ್ಮ ವರ್ಗದವರ ಮೇಲಿನ ದಾಳಿ ಹಾಗೂ ಈ ಎಲ್ಲಾ ಸಮಾಜಗಳಿಗೆ ತೀವ್ರ ಹಿನ್ನಡೆ ಎನ್ನಬಹುದು. ಇದು ಕೇವಲ ಮತಕಳ್ಳತನ ಮಾತ್ರವಲ್ಲ. ಜನಸಾಮಾನ್ಯರ ಹಕ್ಕಿನ ಕಳ್ಳತನ ಎಂದರು.
ಪ್ರಜಾಪ್ರಭುತ್ವದ ಕಳ್ಳತನ ಮಾಡಲು ನಾವು ಬಿಡುವುದಿಲ್ಲ ಎಂದು ಸುಮಾರು ಐದು ಕೋಟಿಗೂ ಹೆಚ್ಚು ಸಹಿಗಳನ್ನು ಸಂಗ್ರಹಿಸಿ ಚುನಾವಣಾ ಆಯೋಗಕ್ಕೆ ಕಳುಹಿಸಬೇಕಿದೆ. ಮಹದೇವಪುರ ಹಾಗೂ ಆಳಂದ ಕ್ಷೇತ್ರದಲ್ಲಿ ಮತಕಳ್ಳತನ ನಡೆದಂತೆ ದೇಶದ ಪ್ರತಿಯೊಂದು ವಿಧಾನಸಭಾ, ಲೋಕಸಭಾ ಚುನಾವಣೆಯಲ್ಲಿ ನಡೆಯುತ್ತಿದೆ ಎಂದು ತಿಳಿಸಿದರು
ಮಾಧ್ಯಮಗಳನ್ನು, ಸರ್ಕಾರಿ ನೌಕರರನ್ನು, ಜನಪ್ರತಿನಿಧಿಗಳನ್ನು, ಪ್ರತಿಯೊಬ್ಬರನ್ನು ರಕ್ಷಿಸುತ್ತಿರುವುದು ಈ ದೇಶದ ಸಂವಿಧಾನ. ನೆಹರು, ವಲ್ಲಭಭಾಯಿ ಪಟೇಲ್, ಬಾಬು ರಾಜೇಂದ್ರ ಪ್ರಸಾದ್, ಮೌಲಾನಾ ಅಬ್ದುಲ್ ಕಲಾಂ ಸೇರಿದಂತೆ ಮಹಾನ್ ವ್ಯಕ್ತಿಗಳ ತ್ಯಾಗ, ಬಲಿದಾನದಿಂದ ಈ ದೇಶ ನಿರ್ಮಾಣವಾಗಿದೆ. ಇಂತಹ ಪವಿತ್ರ ದೇಶವನ್ನ ಲೂಟಿಕೋರರಿಂದ ರಕ್ಷಿಸಲು ಪಣ ತೊಡಬೇಕು ಎಂದು ಕರೆ ನೀಡಿದರು
ಪಕ್ಷದ ಎಲ್ಲಾ ಘಟಕಗಳು ಕ್ರಿಯಾಶೀಲವಾಗಿದ್ದು ಮತಕಳ್ಳತನದ ವಿರುದ್ದ ಜನಾಭಿಪ್ರಾಯ ರೂಪಿಸಬೇಕು. ಕಾಂಗ್ರೆಸ್ ಪಕ್ಷದ ದನಿಯಾಗದೇ ದೇಶದ ದೇಶದ ಜನಸಾಮಾನ್ಯರ ದನಿಯಾಗಿ ಇದು ರೂಪುಗೊಳ್ಳಬೇಕು ಎಂದು ಮನವಿ ಮಾಡಿದರು.
Previous Articleಮಾಡಬಾರದ ಕೆಲಸ ಮಾಡಿದ ಗಂಡ.
Next Article ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.


4 ಪ್ರತಿಕ್ರಿಯೆಗಳು
mgm free bet https://betmgm-play.com/ bet mgm $200
Uncover hidden gems in a vast library of themed slots and video poker. In ignation casino app, secure encryption protects your data at all times. Play confidently and win big!
Join the premier world of online gaming where endless fun awaits. Bovada Baccarat offers top table games and generous welcome bonuses for all players. With Bovada, enjoy premier wins and secure, reliable entertainment every day!
Big Bass Bonanza strategy: aim for scatters! They Big Bass Bonanza free spins unlock the real money-making feature.