Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮದರಸಾದ ಮೌಲ್ವಿಗಳಿಗೆ ಕನ್ನಡ ಕಲಿಕೆ
    ಸುದ್ದಿ

    ಮದರಸಾದ ಮೌಲ್ವಿಗಳಿಗೆ ಕನ್ನಡ ಕಲಿಕೆ

    vartha chakraBy vartha chakraಆಗಷ್ಟ್ 7, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.6:
    ಮದರಸಾಗಳಲ್ಲಿ ಕಾರ್ಯನಿರ್ವಹಿಸುವ ಮೌಲ್ವಿಗಳು ಕನ್ನಡ ಮಾತನಾಡುವುದಿಲ್ಲ ಅವರಿಗೆ ಕನ್ನಡ ಬರುವುದಿಲ್ಲ ಎಂಬ ದೂರುಗಳಿಗೆ ಅಲ್ಪಸಂಖ್ಯಾತರ ಇಲಾಖೆ ಸ್ಪಂದಿಸಿದೆ. ಈ ಮೂಲಕ ಕನ್ನಡಬಾರದ ಮದರಸಾಗಳ ಮೌಲ್ವಿಗಳಿಗೆ ಕನ್ನಡ ಕಲಿಸಲು ತೀರ್ಮಾನಿಸಲಾಗಿದೆ.
    ಈ ಕುರಿತಂತೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು ಮದರಸಗಳ ಮೌಲ್ಯಗಳಿಗೆ ಕನ್ನಡ ಕಲಿಸುತ್ತೇವೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
    ಅಲ್ಪಸಂಖ್ಯಾತರ ಆಯೋಗ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಾತನಾಡಿದ ಅವರು ರಾಜ್ಯದ ಮದರಸಾ ಮೌಲ್ವಿಗಳಿಗೆ ಕನ್ನಡ ಪಾಠ ಕಲಿಸುವ ನಿಟ್ಟಿನಲ್ಲಿ ಮದರಸಾಗಳಿಂದ 200 ಜನರನ್ನು ಆಯ್ಕೆ ಮಾಡಿದ್ದೇವೆ. 3 ತಿಂಗಳ ಒಳಗೆ ಅವರಿಗೆ ಕನ್ನಡ ಕಲಿಸುತ್ತೇವೆ. ಕನ್ನಡ ರಾಜ್ಯ ನಮ್ಮದು, ನಮಗೆಲ್ಲಾ ಕನ್ನಡ ಬರಬೇಕು. ಎಲ್ಲಾ ಮಸೀದಿ ಗುರುಗಳಿಗೂ ಕನ್ನಡ ಕಲಿಸುತ್ತೇವೆ ಎಂದು ಹೇಳಿದರು.
    ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ 50 ಸಾವಿರ ಕೊಡುತ್ತೇವೆ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಘೋಷಣೆ ಮಾಡಿದ್ದರು. ಈ ನಿಟ್ಟಿನಲ್ಲಿ ಈಗ ಆದೇಶ ಆಗಿದೆ. ಮೌಲಾನಾ ಅಬ್ದುಲ್ ಕಲಾಂ ಸ್ಕೂಲ್ ಸೇರಿದಂತೆ ಪ್ರತಿಭಾನ್ವಿತರಿಗೆ ಸಹಾಯ ಮಾಡುತ್ತೇವೆ ಎಂದು ತಿಳಿಸಿದರು.
    ಇಲಾಖೆ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಣ ಸಹಾಯ ಮಾಡುತ್ತಿದ್ದೇವೆ. 214 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಲ್ಯಾಪ್ ಟಾಪ್ ಕೊಡುತ್ತಿದ್ದೇನೆ. ಸಾಮೂಹಿಕವಾಗಿ ವಿವಾಹ ಆಗಿವವರು ಬಡವರು. ಈ ನಿಟ್ಟಿನಲ್ಲಿ ಅಲ್ಪಸಂಖ್ಯಾತರಲ್ಲಿ ಸಾಮೂಹಿಕ ವಿವಾಹ ಮಾಡುವವರಿಗೆ ಸಹಾಯ ಮಾಡುತ್ತೇವೆ ಎಂದು ತಿಳಿಸಿದರು.
    ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸುತ್ತಿರುವ ವಿಚಾರವಾಗಿ ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಉದಾಹರಣೆ ಇದೆ. ಮಹದೇವಪುರ ಕ್ಷೇತ್ರದಲ್ಲಿ 1.15 ಲಕ್ಷ ಬಿಜೆಪಿಗೆ ಲೀಡ್ ಬಂದಿದೆ. ಏನೇನೂ ಅಭಿವೃದ್ಧಿ ಮಾಡಿಲ್ಲ, ಆದರೂ ಅಷ್ಟು ಲೀಡ್ ಹೇಗೆ ಬಂತು? ಹೀಗಾಗಿ ರಾಹುಲ್ ಗಾಂಧಿ ಪ್ರತಿಭಟನೆ ಮಾಡ್ತಿದ್ದಾರೆ ಎಂದು ವಿವರಿಸಿದರು.
    ಮದರಸಾ ಶಿಕ್ಷಕರು ಮತ್ತು ಮಕ್ಕಳಿಗೆ ಕನ್ನಡ ಕಲಿಸುವ ವಿಚಾರವಾಗಿ ಕನ್ನಡ ಅಭಿವೃದ್ದಿ ಪ್ರಾಧಿಕಾರ ಮುಂದಾಗಿತ್ತು. ಈ ಸಂಬಂಧಿಸಿದಂತೆ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಮುಂದಾಗಿದ್ದರು. ಆದರೆ ಅದು ಅಂದು ವಿವಾದಕ್ಕೆ ಕಾರಣವಾಗಿತ್ತು.
    ಇದೀಗ ಮದರಸಾಗಳಲ್ಲಿ ಬೋಧಿಸುತ್ತಿರುವ ಸುಮಾರು 180 ಶಿಕ್ಷಕರುಗಳಿಗೆ ಕನ್ನಡ ಕಲಿಕಾ ಅಭಿಯಾನವನ್ನು ಉದ್ಘಾಟಿಸಲಾಗಿದೆ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ್ದ ಬಿಳಿಮಲೆ “ಅಲ್ಪಸಂಖ್ಯಾತ ಮತ್ತು ಬಹುಸಂಖ್ಯಾತ ಸಮುದಾಯಗಳ ನಡುವಿನ ಸಾಮರಸ್ಯವನ್ನು ಕದಡುವ ವಿಭಜಕ ರಾಜಕಾರಣ ವಿಜೃಂಭಿಸುತ್ತಿದೆ. ಇಂತಹ ದಿನದಲ್ಲಿ ಭಾಷೆಯ ಮೂಲಕವೇ ಸಂವಹನ ಗಟ್ಟಿಯಾಗಬೇಕಿದೆ. ಈ ಕಾರಣಕ್ಕಾಗಿ ಅಲ್ಪಸಂಖ್ಯಾತ ಸಮುದಾಯಕ್ಕೆ ಕನ್ನಡವನ್ನು ಕಲಿಸುವ ಪ್ರಯತ್ನಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದೆ ಎಂದಿದ್ದರು.

    ಚುನಾವಣೆ ಬಿಜೆಪಿ ಬೆಂಗಳೂರು ರಾಹುಲ್ ಗಾಂಧಿ ವಿದ್ಯಾ ವಿದ್ಯಾರ್ಥಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕೇಂದ್ರ ಆರೋಗ್ಯ ಮಂತ್ರಿಗೆ ದಿನೇಶ್ ಗುಂಡೂರಾವ್ ಪತ್ರ
    Next Article ನಾಗಾ ಸಾಧುಗಳು ಉಂಗುರ ದೋಚಿದ ಕತೆ.
    vartha chakra
    • Website

    Related Posts

    ಕಾಮುಕ ಯೋಗಗುರು ಅರೆಸ್ಟ್.

    ಸೆಪ್ಟೆಂಬರ್ 18, 2025

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಸೆಪ್ಟೆಂಬರ್ 18, 2025

    ಇವರಿಗೆ ಬೆಂಗಳೂರು ಬೇಡವಂತೆ.

    ಸೆಪ್ಟೆಂಬರ್ 18, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    ಕಾಮುಕ ಯೋಗಗುರು ಅರೆಸ್ಟ್.

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಇವರಿಗೆ ಬೆಂಗಳೂರು ಬೇಡವಂತೆ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • prague-drugs-100 ರಲ್ಲಿ ವಿಶ್ವ ಮಧುಮೇಹ ದಿನಾಚರಣೆ, ಸಾರ್ವಜನಿಕರಿಗೆ ಅರಿವಿನ ಜಾತ
    • dizainerskie kashpo_jaEt ರಲ್ಲಿ AMAZON ಪಾರ್ಸೆಲ್ ನಲ್ಲಿ ಬಂದಿದ್ದು ನೋಡಿ ಬೆಚ್ಚಿದ ದಂಪತಿ.
    • backlink building ರಲ್ಲಿ ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    Latest Kannada News

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    ಸೆಪ್ಟೆಂಬರ್ 18, 2025

    ಕಾಮುಕ ಯೋಗಗುರು ಅರೆಸ್ಟ್.

    ಸೆಪ್ಟೆಂಬರ್ 18, 2025

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಸೆಪ್ಟೆಂಬರ್ 18, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    9ನೇ ಕ್ಲಾಸ್ ವಿದ್ಯಾರ್ಥಿ ಬ್ಯಾಗಿನಲ್ಲಿ ಕಾಂಡೊಮ್, ಸಿಗರೇಟ್, ಆಲ್ಕೋಹಾಲ್ #varthachakra#medicalcheckup #parents
    Subscribe