Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುರುಘಾ ಮಠದಲ್ಲಿ ಡ್ರಗ್ಸ್ ವ್ಯವಹಾರ!
    ಅಪರಾಧ

    ಮುರುಘಾ ಮಠದಲ್ಲಿ ಡ್ರಗ್ಸ್ ವ್ಯವಹಾರ!

    vartha chakraBy vartha chakraನವೆಂಬರ್ 7, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು,ನ.7-ಚಿತ್ರದುರ್ಗದ ಮುರುಘಾ ಮಠದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಮಾತ್ರವಲ್ಲ‌ ಮಾನವ ಸಾಗಣೆ, ಅತ್ಯಾಚಾರ, ಕೊಲೆಯಂತಹ
    ಗಂಭೀರ ಅಪರಾಧ ಕೃತ್ಯಗಳು ನಡೆದಿವೆ. ವಿಸ್ತೃತ ತನಿಖೆ ನಡೆದರೆ ನಿಜ ಸಂಗತಿ ಬಹಿರಂಗವಾಗಲಿದೆ ಎಂದು ಎಂದು ಒಡನಾಡಿ ಸಂಸ್ಥೆಯ ಸಂಸ್ಥಾಪಕ ಸ್ಟ್ಯಾನ್ಲಿ ತಿಳಿಸಿದರು.
    ಮಕ್ಕಳನ್ನು ಅಕ್ರಮವಾಗಿ ದತ್ತು ನೀಡುವುದು, ಮಾನವ ಸಾಗಣೆ, ಅತ್ಯಾಚಾರ, ಕೊಲೆಯಂತಹ ಆರೋಪಗಳು ಕೇಳಿಬಂದಿವೆ. ಶಿವಮೂರ್ತಿ ಮುರುಘಾ ಶರಣ ಸಹ ಡ್ರಗ್ಸ್ ತೆಗೆದುಕೊಂಡಿರುವ ಅನುಮಾನ ಇದೆ ಎಂದು ಅವರು ಆರೋಪಿಸಿದ್ದಾರೆ.
    ಮಠದಲ್ಲಿದ್ದ ಮಗುವಿನ ಮೇಲೆ ಅತ್ಯಾಚಾರ ನಡೆದು ನಂತರ ಕೊಲೆಯಾಗಿದೆ. ಆ ಮಗುವಿನ ಶವ ರೈಲ್ವೆ ಹಳಿಗಳ ಮೇಲೆ ಸಿಕ್ಕಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸರು ಏನು ಕ್ರಮ ತೆಗೆದುಕೊಂಡಿದ್ದಾರೆ ಎಂದು ಪ್ರಶ್ನಿಸಿದರು.
    ಮಠದ ಆವರಣದಲ್ಲಿ ಕಾಂಡೋಮ್ ಮತ್ತು ಸಿರಂಜ್​ಗಳು ಸಿಕ್ಕಿವೆ. ಈ ಬಗ್ಗೆಯೂ ತನಿಖೆ ನಡೆಯಬೇಕಿದೆ. ಮಾನವ ಸಾಗಣೆ, ಮಾದಕ ದ್ರವ್ಯ ಬಳಕೆಯ ಕಲಂಗಳನ್ನೂ ಲಗತ್ತಿಸಿ ಪ್ರಕರಣ ಮುನ್ನಡೆಸಬೇಕು ಎಂದು ಅವರು ಆಗ್ರಹಿಸಿದರು.
    ಸಾಮಾನ್ಯ ಪುರುಷನೊಬ್ಬ ಇಷ್ಟು ಕ್ರೂರವಾಗಿ, ಕೆಟ್ಟದಾಗಿ ವರ್ತಿಸಲು ಸಾಧ್ಯವಿಲ್ಲ. ವಿಕೃತಕಾಮಿಗಳನ್ನೂ ಮೀರಿಸುವ ರೀತಿಯಲ್ಲಿ ಶಿವಮೂರ್ತಿ ಮುರುಘಾ ವರ್ತನೆ ಇದೆ. ಆತ ಶಕ್ತಿವರ್ಧಕ ಅಥವಾ ಬೇರೆ ಯಾವುದಾದರೂ ಡ್ರಗ್ಸ್ ತೆಗೆದುಕೊಂಡಿರುವ ಬಗ್ಗೆಯೂ ನಮಗೆ ಅನುಮಾನಗಳಿವೆ ಎಂದರು.
    ಮಠದಲ್ಲಿರುವ ಪಿಟ್ ಬಗ್ಗೆಯೂ ಪರಿಶೀಲನೆ ಆಗಬೇಕಿದೆ. 15 ವರ್ಷಗಳ ಹಿಂದೆ ಪಿಟ್ ಅನ್ನು ಸ್ವಾಮೀಜಿ ಸ್ವತಃ ಸ್ವಚ್ಛಗೊಳಿಸಿದ್ದರು. ಈ ಸಂದರ್ಭದಲ್ಲಿ ಕಾಂಡೋಮ್, ಸಿರಿಂಜ್ ಸೇರಿ ಹಲವು ವಸ್ತುಗಳು ಸಿಕ್ಕಿದ್ದವು. ಇವು ಮಠದ ಅತಿಥಿಗಳ ಕೃತ್ಯ ಎಂದು ಆ ಸಂದರ್ಭದಲ್ಲಿ ಸ್ವಾಮೀಜಿ ಹೇಳಿದ್ದರಂತೆ. ಈಗಲೂ ಆ ಪಿಟ್ ಮಠದಲ್ಲಿಯೇ ಇದೆ. ಅದನ್ನು ಮತ್ತೊಮ್ಮೆ ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.
    ಇದು ಕೇವಲ ದೂರು ನೀಡಿದ ಬಾಲಕಿಯರಿಗೆ ಮಾತ್ರ ಸೀಮಿತವಾದ ಪ್ರಕರಣವಲ್ಲ. ದೂರು ನೀಡದ ಹಲವು ಬಾಲಕಿಯರು ಮಹಿಳೆಯರಿಗೂ ಸಂಬಂಧಪಟ್ಟಿದೆ. ಈ ನಿಟ್ಟಿನಲ್ಲಿ ಮಠದಲ್ಲಿರುವ ಹಾಗೂ ಮಠದಿಂದ ಹೋಗಿರವವರಿಂದಲೂ ಮಾಹಿತಿ ಪಡೆಯಬೇಕು. ಇದು ಕೇವಲ ಆರಂಭ ಮಾತ್ರ. ಆದರೆ ಪೊಲೀಸರು ಪರಿಪೂರ್ಣವಾಗಿ ಸರಿಯಾದ ಹಾದಿಯಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಲು ಆಗುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.
    ಐತಿಹಾಸಿಕ ಪ್ರಕರಣ:
    ಈ ಪ್ರಕರಣದಲ್ಲಿ ಬರುವ ತೀರ್ಪು ಎಲ್ಲರಿಗೂ ಪಾಠವಾಗುತ್ತದೆ. ಸದ್ಯದ ಬೆಳವಣಿಗೆಯಿಂದ ಮತ್ತಷ್ಟು ಸಂತ್ರಸ್ತರು ದೂರು ನೀಡಲು ಮುಂದೆ ಬರುತ್ತಾರೆ. ಇಂಥವರ ಬೆಂಬಲಕ್ಕೆ ಮತ್ತಷ್ಟು ಜನರು ನಿಲ್ಲಬೇಕಾದ ಅಗತ್ಯವಿದೆ. ಅಕ್ರಮ ಎಸಗಿದವರಿಗೆ ಹಾರ ಹಾಕುವವರ ಸಂಖ್ಯೆ ಹೆಚ್ಚಾಗಿದೆ. ಇನ್ನಾದರೂ ಇದು ನಿಲ್ಲಬೇಕು ಎಂದು ಅವರು ವಿನಂತಿಸಿದರು.
    ಕಾನೂನು ಕ್ರಮ:
    ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಕಾನೂನು ತನ್ನ ಕ್ರಮ ಜರುಗಿಸುತ್ತದೆ. ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಉಡುಪಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

    Verbattle
    Verbattle
    Verbattle
    ಉಡುಪಿ ಕಾನೂನು ಕೊಲೆ ಡ್ರಗ್ಸ್ ನ್ಯಾಯ ಬೊಮ್ಮಾಯಿ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleತಿರುಪತಿ ತಿಮ್ಮಪ್ಪನ ಆದಾಯ ಎಷ್ಟು ಗೊತ್ತಾ?
    Next Article ಹಿಂದೂ ಎಂದರೆ ಅಶ್ಲೀಲ, ಕೇಸರಿ ಎಂದರೆ ಅಲರ್ಜಿ?
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • LinwoodGah ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • Qpocke ರಲ್ಲಿ ರಶ್ಮಿಕ ಮಂದಣ್ಣ ಅಭಿಮಾನಿಗಳಿಗೆ ಪಾಠ
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.