ಶುಕ್ರವಾರ ಮೈಸೂರಿನಿಂದ ಹೊರಟಿದ್ದ ಮೈಸೂರು – ದಾರ್ಬಂಗ ಎಕ್ಸಪ್ರೆಸ್ ರೈಲು ಪೆರಂಬೂರು ಬಳಿ ಕಾವರಪೇಟ್ಟೆೈ ಬಳಿ ಗೋಡ್ಸ್ ರೈಲಿಗೆ ಡಿಕ್ಕಿ ಹೊಡೆದ ಕಾರಣ ಬೆಂಕಿ ಹತ್ತಿ ಅಪಘಾತಕ್ಕೀಡಾಗಿದೆ.
ಈ ರೈಲು ಬೆಂಗಳೂರಿನ ಕೆಎಸ್ಆರ್ ರೈಲು ನಿಲ್ದಾಣ ದಾಟಿ ಹೋಗ್ತಿತ್ತು. ರಾತ್ರಿ 8 ಗಂಟೆ ಸುಮಾರಿಗೆ ಪೆರಂಬೂರು ದಾಟಿದ್ದ ರೈಲು, ದರ್ಬಾಂಗದತ್ತ ಪ್ರಯಾಣ ಬೆಳೆಸಿತ್ತು. ಆದ್ರೆ, 75 ಕಿಲೋಮೀಟರ್ ವೇಗದಲ್ಲಿ ಸಂಚರಿಸುತ್ತಿದ್ದ ಎಕ್ಸ್ಪ್ರೆಸ್ ರೈಲು, ಕಾವರಪೇಟ್ಟೈ ತಲುಪುತ್ತಿದ್ದಂತೆ ಲೂಪ್ ಲೇನ್ನಲ್ಲಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ.
ಪೆರಂಬೂರು ದಾಟಿ ಕಾವರಪೇಟ್ಟೈಗೆ ಎಕ್ಸ್ಪ್ರೆಸ್ ರೈಲು ತೆರಳುತ್ತಿತ್ತು. ಕಾವರ ಪೇಟ್ಟೈ ರೈಲು ನಿಲ್ದಾಣದಲ್ಲಿ ಮುಖ್ಯ ಲೇನ್ಗೆ ಹೋಗುವಂತೆ ಸೂಚನೆ ಸಿಗ್ನಲ್ ನೀಡಿದ್ದರು. ಆದರೆ, ಮೇನ್ ಲೇನ್ಗೆ ಸಿಗ್ನಲ್ ಇದ್ದರೂ ಗೂಡ್ಸ್ ರೈಲು ನಿಂತಿದ್ದ ಲೂಪ್ ಲೇನ್ ಟ್ರ್ಯಾಕ್ಗೆ ರೈಲು ನುಗ್ಗಿತ್ತು. 75 ಕಿಮೀ ವೇಗದಲ್ಲಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಕಾರಣ ರೈಲಿನ ರಭಸಕ್ಕೆ ಬೋಗಿಯಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಎಕ್ಸ್ಪ್ರೆಸ್ ರೈಲಿನಲ್ಲಿದ್ದ ಎಲ್ಲರಿಗೂ ಭೂಕಂಪನದ ಅನುಭವವಾಗಿತ್ತು. 12ರಿಂದ 13 ಬೋಗಿಗಳು ಹಳಿ ತಪ್ಪಿ ಅಕ್ಕಪಕ್ಕಕ್ಕೆ ಬಂದು ಬಿದ್ದಿದ್ದವು.
ತಮಿಳುನಾಡು ರೈಲು ಅಪಘಾತ: ಬೆಂಗಳೂರಿನಿಂದ ಹೊರಡುವ 2 ರೈಲುಗಳ ಮಾರ್ಗ ಬದಲಾವಣೆ.
ತಮಿಳುನಾಡಿನ ಕವರಪೆಟ್ಟೈ ರೈಲು ನಿಲ್ದಾಣಗಳಲ್ಲಿ ಶುಕ್ರವಾರ ರಾತ್ರಿ ಮೈಸೂರು-ದರ್ಭಾಂಗ ಬಾಗ್ಮತಿ ಎಕ್ಸಪ್ರೆಸ್ ರೈಲು ಅಪಘಾತಕ್ಕೀಡಾಗಿತ್ತು. ಹೀಗಾಗಿ ಬೆಂಗಳೂರಿನಿಂದ ಹೊರಡುವ ರೈಲಿನ ಮಾರ್ಗ ಬದಲಾಯಿಸಲಾಗಿದ್ದು ಶನಿವಾರ ಬೆಳಗ್ಗೆ 8.50ಕ್ಕೆ ಹೊರಡುವ ಎಸ್ಎಂವಿಟಿ ಬೆಂಗಳೂರು-ಕಾಮಾಕ್ಯ (ರೈಲು ಸಂಖ್ಯೆ: 12551) ಎಸಿ ಎಕ್ಸಪ್ರೆಸ್ ರೈಲು ಧರ್ಮಾವರಂ, ವಿಜಯವಾಡ ಮಾರ್ಗವಾಗಿ ಸಂಚರಿಸಲಿದೆ. ಇದರಿಂದಾಗಿ ಜೋಳರಪೆಟ್ಟೈ, ಕಟ್ಟಾಡಿ, ಪೆರಂಬೂರು ಹಾಗೂ ಗೂಡೂರು ನಿಲ್ದಾಣಗಳು ಬಿಟ್ಟು ಹೋಗಲಿವೆ.
ಬೆಳಗ್ಗೆ 9.15ಕ್ಕೆ ಹೊರಡುವ ಎಸ್ಎಂವಿಟಿ ಬೆಂಗಳೂರು-ದಾನಪುರ ಸಂಗಮಿತ್ರ ಎಕ್ಸ್ಪ್ರೆಸ್ (ರೈಲು ಸಂಖ್ಯೆ: 12295) ರೈಲು, ಧರ್ಮಾವರಂ, ಕಾಜೀಪೇಟ್ ಮಾರ್ಗವಾಗಿ ಹೋಗಲಿದೆ. ಕೆಆರ್ಪುರ, ಬಂಗಾರಪೇಟೆ, ಕುಪ್ಪಂ, ಜೋಳರವಟ್ಟೈ, ಕಟ್ಟಾಡಿ, ಆರಕೋಣಂ, ಪೆರಂಬೂರ್, ಗೂಡೂರ್, ನೆಲ್ಲೂರು, ಒಂಗೋಲ್, ವಿಜಯವಾಡ ಹಾಗೂ ವಾರಂಗಲ್ ನಿಲ್ದಾಣವನ್ನು ತಲುಪಲಿವೆ.
3 ಪ್ರತಿಕ್ರಿಯೆಗಳು
buying cheap clomiphene pill clomiphene generic cost generic clomiphene walmart clomiphene challenge test protocol can you buy generic clomiphene online get generic clomiphene prices how much is clomiphene without insurance
More delight pieces like this would create the интернет better.
The vividness in this ruined is exceptional.