Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ದೇಶದ ಜನರ ತೀರ್ಮಾನ – ಬಿ.ವೈ.ವಿಜಯೇಂದ್ರ
    ಸುದ್ದಿ

    ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ದೇಶದ ಜನರ ತೀರ್ಮಾನ – ಬಿ.ವೈ.ವಿಜಯೇಂದ್ರ

    vartha chakraBy vartha chakraಮೇ 2, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    1-5-2024, ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ದೇಶದ ಜನರು ತೀರ್ಮಾನ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸದಿಂದ ನುಡಿದರು.
    ಕಲಬುರಗಿ ಲೋಕಸಭಾ ಕ್ಷೇತ್ರದ ಚಿತ್ತಾಪುರದಲ್ಲಿ ಇಂದು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಡಾ. ಉಮೇಶ್ ಜಾಧವ್ ಅವರ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ. ರಾಜ್ಯ ಮಾತ್ರವಲ್ಲದೆ, ರಾಷ್ಟ್ರದಾದ್ಯಂತ ಜನರು ದೇಶದ ಸುರಕ್ಷತೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಬಯಸುತ್ತಿದ್ದಾರೆ ಎಂದು ವಿಶ್ಲೇಷಿಸಿದರು.
    ಸಾಮಾನ್ಯ ಜನರಲ್ಲೂ ಮೋದಿಯವರ ನಾಯಕತ್ವದ ಕುರಿತು ವಿಶ್ವಾಸ ಹೆಚ್ಚಾಗಿದೆ. ಕಳೆದ 10 ವರ್ಷಗಳಲ್ಲಿ ಮೋದಿಯವರು ದೇಶದ ಪ್ರಧಾನಿಯಾದ ಬಳಿಕ ರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗೆ ಅವರು ಕೆಲಸ ಮಾಡುತ್ತಿದ್ದಾರೆ. ಹಿಂದೆ ರಾಜೀವ್ ಗಾಂಧಿಯವರು ಪ್ರಧಾನಿಯಾಗಿದ್ದಾಗ ‘ನಾನು ಪ್ರಧಾನಿಯಾಗಿ 100 ರೂ. ಕಳಿಸಿದರೆ ಅದು ಚಿತ್ತಾಪುರಕ್ಕೆ ಹೋಗಿ ತಲುಪಿದಾಗ ಬರೀ 15-20 ರೂ. ಆಗುತ್ತದೆ’ ಎಂದಿದ್ದರು. ಇನ್ನುಳಿದ 80-85 ರೂಪಾಯಿ ಮಧ್ಯಸ್ಥಿಕೆದಾರರ ಪಾಲಾಗುತ್ತದೆ ಎಂದು ತಿಳಿಸಿದ್ದರು ಎಂದು ನೆನಪಿಸಿದರು.
    ಮೋದಿಜೀ ಅವರು ಪ್ರಧಾನಿಯಾದ ಬಳಿಕ ಪ್ರತಿಯೊಬ್ಬ ಬಡವರಿಗೆ ಬ್ಯಾಂಕ್ ಖಾತೆ ತೆಗೆಸಿ ಮೋದಿಯವರು ಕೊಡುವ ಸೌಲಭ್ಯಗಳು ಮಧ್ಯಸ್ಥಿಕೆಯ ಹಾವಳಿ ಇಲ್ಲದೆ 100 ರೂ. ಅನುದಾನದಲ್ಲಿ 100 ರೂ. ತಲುಪುವ ಕೆಲಸ ಆಗಿದ್ದರೆ ಅದು ಬಿಜೆಪಿ ನೇತೃತ್ವದ ಮೋದಿಜೀ ಅವರ ಕಾರ್ಯ ಎಂದು ವಿಶ್ಲೇಷಿಸಿದರು. ಕಿಸಾನ್ ಸಮ್ಮಾನ್ ಯೋಜನೆಯ ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ 6 ಸಾವಿರವನ್ನು ನೇರವಾಗಿ ಖಾತೆಗೆ ಹಾಕಲಾಗುತ್ತಿತ್ತು. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಇದ್ದಾಗ ರೈತರಿಗೆ ಅನುಕೂಲ ಆಗಲು ಹೆಚ್ಚುವರಿ 4 ಸಾವಿರ ಕೊಟ್ಟರು. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ತಕ್ಷಣ ಆ 4 ಸಾವಿರ ರೂ. ನಿಲ್ಲಿಸಿದರು ಎಂದು ಟೀಕಿಸಿದರು.
    ಯೂರಿಯ ಮತ್ತಿತರ ರಸಗೊಬ್ಬರಕ್ಕೆ ಗರಿಷ್ಠ ಸಹಾಯಧನವನ್ನು ನೀಡುವ ಸರಕಾರ ಬಿಜೆಪಿಯದು ಎಂದು ವಿವರಿಸಿದರು. ಮೋದಿಯವರು ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ಕಾಂಗ್ರೆಸ್ ಸರಕಾರವು ರೈತರ ಸಂಕಷ್ಟಕ್ಕೆ ಸ್ಪಂದಿಸಿಲ್ಲ. 800-900 ರೈತರು ಆತ್ಮಹತ್ಯೆ ಮಾಡಿಕೊಂಡರೂ ಪರಿಹಾರ ನೀಡಿಲ್ಲ ಎಂದು ಆಕ್ಷೇಪಿಸಿದರು.
    ನಿಮ್ಮ ಯಡಿಯೂರಪ್ಪ ಅವರು ರೈತರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ರೈತರಿಗಾಗಿ ಸದಾ ಸ್ಪಂದಿಸಿದರು. ನೆರೆ ಬಂದಾಗ ಗರಿಷ್ಠ ಪರಿಹಾರ ಕೊಟ್ಟಿದ್ದಾರೆ ಎಂದು ವಿವರಿಸಿದರು. ಜನಪರ ಯೋಜನೆಗಳನ್ನು ಗಮನಿಸಿ ಬಿಜೆಪಿಯನ್ನು ಬೆಂಬಲಿಸಲು ಮನವಿ ಮಾಡಿದರು. ಉಚಿತ ವಿದ್ಯುತ್ ಎನ್ನುತ್ತಾರೆ. ಆದರೆ, ವಿದ್ಯುತ್ ದರ ದ್ವಿಗುಣಗೊಂಡಿದೆ. ಉಚಿತ ಬಸ್ ಪ್ರಯಾಣವೆನ್ನುತ್ತಾರೆ. ಬಸ್ ಟಿಕೆಟ್ ದರ ಶೇ 30-40ರಷ್ಟು ಜಾಸ್ತಿಯಾಗಿದೆ. ರೈತರು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲೂ ದರ ಏರಿಕೆ ಮಾಡಿದ್ದಾರೆ ಎಂದು ಟೀಕಿಸಿದರು.
    ಜಿಲ್ಲಾಧ್ಯಕ್ಷ ಶಿವರಾಜ್ ಪಾಟೀಲ, ತಾಲ್ಲೂಕು ಅಧ್ಯಕ್ಷ ರವೀಂದ್ರ, ವಿಧಾನಪರಿಷತ್ ಸದಸ್ಯ ಬಿ.ಜಿ.ಪಾಟೀಲ, ಮಾಜಿ ಸಚಿವ ಬಾಬುರಾವ ಚವ್ಹಾಣ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೆರೆ ಮೊದಲಾದ ಪ್ರಮುಖರು ಇದ್ದರು.

    Verbattle
    Verbattle
    Verbattle
    ಕಾಂಗ್ರೆಸ್ ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಜ್ವಲ್ ರೇವಣ್ಣನಿಗೆ ಮತ್ತೊಂದು ಗಂಡಾಂತರ.
    Next Article ಬುಡಕಟ್ಟು ಜನರಿಂದ ಮತದಾನ: ಚುನಾವಣಾ ಆಯೋಗದ ಜಾಗೃತಿಯ ಫಲ
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    1 ಟಿಪ್ಪಣಿ

    1. Azmefd on ಫೆಬ್ರವರಿ 13, 2026 8:43 ಫೂರ್ವಾಹ್ನ

      betmgm РўРҐ betmgm-play betmgm TN

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rknyyk ರಲ್ಲಿ ಸಾಲು ಮರದ ತಿಮ್ಮಕ್ಕನನ್ನು ಬಿಡಲಿಲ್ಲ ಚೈತ್ರಾ ಕುಂದಾಪುರ | Saalumarada Thimmakka
    • LinwoodGah ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • Ajdjaa ರಲ್ಲಿ ರಾಜ್ಯಪಾಲರು ಯಾಕೆ ಹೀಗೆ ?
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.