Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೋದಿ ಭಕ್ತ ಚಿರಂಜೀವಿ?
    ಸಿನೆಮ

    ಮೋದಿ ಭಕ್ತ ಚಿರಂಜೀವಿ?

    vartha chakraBy vartha chakraಫೆಬ್ರವರಿ 5, 202527 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬಿಜೆಪಿಗೂ ಸಿನಿ ತಾರೆಯರಿಗೂ ಬಿಟ್ಟಿರಲಾರದ ನಂಟಿದೆ. ಹೇಮಾಮಾಲಿನಿ, ಸುರೇಶ್ ಗೋಪಿ, ಕಂಗನಾ ರಣಾವತ್​ ಈಗಾಗಲೇ ಬಿಜೆಪಿ ಸಂಸದರಾಗಿದ್ದಾರೆ. ತೆಲುಗಿನ ಪವರ್ ಸ್ಟಾರ್​ ಪವನ್ ಕಲ್ಯಾಣ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ಕರ್ನಾಟಕದಲ್ಲಿ ಕಿಚ್ಚ ಸುದೀಪ್​ ಇನ್ನೇನು ಬಿಜೆಪಿ ಸೇರೇಬಿಟ್ರು ಅನ್ನೋ ಸುದ್ದಿ ಬಂದಿತ್ತು. ಇದೀಗ ಆಂಧ್ರದಲ್ಲಿ ದೊಡ್ಡ ಸಂಚಲನ ಸೃಷ್ಟಿಸೋಕೆ ಬಿಜೆಪಿ ತಯಾರಾಗಿದೆ.
    ಚಿರಂಜೀವಿ.. ಈ ಹೆಸರು ಕೇಳದವ್ರೇ ಇಲ್ಲ.. ಸಾಲು ಸಾಲು ಹಿಟ್ ಕೊಟ್ಟು ದಕ್ಷಿಣ ಭಾರತ ಮಾತ್ರವಲ್ಲ ಇಡೀ ಭಾರತದಲ್ಲಿ ಚಿರು ಚಿರಪರಿಚಿತರಾಗಿದ್ದಾರೆ.. ಇದೀಗ ಅದೇ ಚಿರಂಜೀವಿ ಮೇಲೆ ಬಿಜೆಪಿ ಬಿದ್ದಿದೆ.
    ರಾಜಕೀಯದಲ್ಲಿ ಯಾವಾಗ ಏನಾಗುತ್ತದೆ ಎಂದು ಯಾರಿಗೂ ಊಹಿಸಲು ಸಾಧ್ಯವಿಲ್ಲ. ರಾತ್ರಿ ಕಳೆದು ಬೆಳಗಾಗುವುದರಲ್ಲಿ ಸರ್ಕಾರಗಳೇ ಬದಲಾಗುತ್ತವೆ. ಆಂತಹ ಸಂದರ್ಭದಲ್ಲಿ ರಾಜಕೀಯ ನಾಯಕರು ಪಕ್ಷ ಬದಲಾಯಿಸುವುದರಲ್ಲಿ ನಿಸ್ಸಿಮರು. ಈ ಪಟ್ಟಿಗೆ ತೆಲಗು ಚಿತ್ರರಂಗದ ಮೆಗಾ ಸ್ಟಾರ್​ ಚಿರಂಜೀವಿ ಹೊಸ ಎಂಟ್ರಿಯಾಗುವ ಸಾಧ್ಯತೆ ಇದೆ. ಕೆಲ ದಿನಗಳ ಹಿಂದೆ ಚಿರಂಜೀವಿ, ಕೇಂದ್ರ ಸಚಿವ, ಕಿಶನ್ ರೆಡ್ಡಿ ನಿವಾಸದಲ್ಲಿ ನಡೆದ ಸಂಕ್ರಾಂತಿ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಜತೆ ಭಾಗವಹಿಸಿದ್ದರು. ಇದಾದ ನಂತರ ಚಿರಂಜೀವಿ ಬಿಜೆಪಿ ಸರ್ಪಡೆಯಾಗುತ್ತಾರೆ ಎಂಬ ಗುಸುಗುಸು ಜೋರಾಗಿ ಕೇಳಿ ಬರುತ್ತಿದೆ.
    ಇದೇ ಮೆಗಾ ಸ್ಟಾರ್​ ಕೆಲ ವರ್ಷಗಳ ಹಿಂದೆ ಪ್ರಜಾರಾಜ್ಯಂ ಎಂಬ ಪ್ರಾದೇಶಿಕ ಪಕ್ಷ ಪ್ರಾರಂಭಿಸಿದ್ದರು. ಆದರೆ, ಹೇಳಿಕೊಳ್ಳುವಂತಹ ಯಶಸ್ಸು ಸಿಗಲಿಲ್ಲ. ನಂತರ ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸೇರ್ಪಡೆಯಾಗಿ ಕೇಂದ್ರದಲ್ಲಿ ಮಂತ್ರಿಯೂ ಆಗಿದ್ದರು. ಆದರೆ ಸದ್ಯ ಚಿರಂಜೀವಿ ಸಕ್ರಿಯ ರಾಜಕೀಯದಿಂದ ದೂರ ಸರಿದ್ದಾರೆ.
    ಮೆಗಾ ಸ್ಟಾರ್​ ಚಿರಂಜೀವಿ, ಸಹೋದರ ಪವರ್​ ಸ್ಟಾರ್​ ಪವನ್​ ಕಲ್ಯಾಣ್​ ಜನಸೇನಾ ಪಕ್ಷದ ನಾಯಕರಾಗಿ, ಬಿಜೆಪಿಯ ಎನ್​ಡಿಎಯ ಅಂಗ ಪಕ್ಷವಾದ ಟಿಡಿಪಿ ನೇತೃತ್ವದ ಆಂಧ್ರ ಪ್ರದೇಶದ ಸರ್ಕಾರದಲ್ಲಿ ಡಿಸಿಎಂ ಆಗಿಸೇವೆ ಸಲ್ಲಿಸುತ್ತಿದ್ದಾರೆ. ಆದರೂ ಬಿಜೆಪಿಗೆ ಆಂಧ್ರದ ಪಕ್ಕದಲ್ಲಿನ, ಮತ್ತೊಂದು ತೆಲುಗು ರಾಜ್ಯ ತೆಲಂಗಾಣದಲ್ಲಿ ಪಕ್ಷ ಮುನ್ನಡೆಸಲು ಸೂಕ್ತ ನಾಯಕರ ಕೊರತೆ ಇದೆ. ಇದೇ ಕಾರಣಕ್ಕೆ ಪ್ರಧಾನಿ ಮೋದಿ ಜತೆ ಉತ್ತಮ ಒಡನಾಟ ಹೊಂದಿರುವ ಮೆಗಾ ಸ್ಟಾರ್​ ಚಿರಂಜೀವಿಯನ್ನು ಬಿಜೆಪಿಗೆ ಕರೆತಂದು ತೆಲಂಗಾಣದಲ್ಲಿಯೂ ಸರ್ಕಾರ ರಚನೆ ಮಾಡಲು ಮೋದಿ ಪ್ಲಾನ್ ಮಾಡಿದ್ದಾರೆ.
    ಎಲ್ಲಾ ಊಹಾಪೊಹಗಳ ನಡುವೆ ಕೇಂದ್ರ ಸಚಿವ ಕಿಶನ್ ರೆಡ್ಡಿ ಒಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಸದ್ಯಕ್ಕಂತೂ ಚಿರಂಜೀವಿ ಬಿಜೆಪಿ ಸೇರಲ್ಲ ಎಂದಿದ್ದಾರೆ. ಆದರೆ ಬಿಜೆಪಿ ಮೆಗಾಸ್ಟಾರ್ ಚಿರಂಜೀವಿಗೆ ಗಾಳ ಹಾಕಿರೋದು ಸುಳ್ಳಲ್ಲ.
    ನಿಮ್ಗೆ ಏನ್ ಅನ್ಸುತ್ತೆ.. ಚಿರಂಜೀವಿ ಬಿಜೆಪಿ ಸೇರಬಹುದಾ? ಸೇರಿದ್ರೆ ಬಿಜೆಪಿಗೆ ಲಾಭ ಆಗುತ್ತಾ? ಕಮೆಂಟ್ ಮಾಡಿ, ನಮ್ಮ ಚಾನೆಲ್ ಸಬ್​ಸ್ರೈಬ್ ಮಾಡೋದನ್ನ ಮರೆಯಬೇಡಿ.

    Verbattle
    Verbattle
    Verbattle
    ಕರ್ನಾಟಕ ಕಾಂಗ್ರೆಸ್ ಕಿಚ್ಚ ಸುದೀಪ್ ತೆಲಂಗಾಣ ನರೇಂದ್ರ ಮೋದಿ ಬಿಜೆಪಿ ಮೈ ರಾಜಕೀಯ ಸರ್ಕಾರ ಸುದೀಪ್ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಕಾಲ್ ಸೆಂಟರ್ ಹೆಸರಲ್ಲಿ ದೋಖಾ
    Next Article ರೂಪಾಯಿ ಕುಸಿತದಿಂದ ಯಾರಿಗೆ ನಷ್ಟ?
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • Glennhof ರಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    • Dtucvi ರಲ್ಲಿ ಗನ್ ಹಿಡಿದು ರೀಲ್ಸ್ ಮಾಡಿದ
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.