Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯಾರಾಗುತ್ತಾರೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ?
    ಸುದ್ದಿ

    ಯಾರಾಗುತ್ತಾರೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ?

    vartha chakraBy vartha chakraಏಪ್ರಿಲ್ 28, 20251 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.28:
    ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಅಲೋಕ್ ಮೋಹನ್ ಅವರು ಸೇವಾ ನಿವೃತ್ತಿ ಹೊಂದುತ್ತಿದ್ದು, ಅವರ ಸ್ಥಾನಕ್ಕೆ ಸರ್ಕಾರ ಯಾರನ್ನು ನೇಮಕ ಮಾಡಲಿದೆ ಎಂಬ ವಿಚಾರ ಇದೀಗ ಕುತೂಹಲ ಮೂಡಿಸಿದೆ.
    ಸುಪ್ರೀಂ ಕೋರ್ಟ್ ಆದೇಶದ ಅನ್ವಯ ರಾಜ್ಯದ ಪೊಲೀಸ್ ಮಹಾನಿರ್ದೇಶಕ ಹುದ್ದೆಗೆ ನೇಮಕವಾಗುವ ವ್ಯಕ್ತಿ ಎರಡು ವರ್ಷಗಳ ಕಾಲ ಈ ಹುದ್ದೆಯಲ್ಲಿ ಇರಬೇಕು. ಆದರೆ ಅಲೋಕ್ ಮೋಹನ್ ಅವರು 21 ತಿಂಗಳು ಈ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ ಹೀಗಾಗಿ ತಮ್ಮ ಸೇವಾ ಅವಧಿಯನ್ನು ಮತ್ತೆ ಮೂರು ತಿಂಗಳ ಅವಧಿಯವರೆಗೆ ವಿಸ್ತರಿಸಬೇಕು ಎಂದು ಮನವಿ ಮಾಡಿದ್ದಾರೆ.
    ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ರಾಜ್ಯ ಸರ್ಕಾರ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಮತ್ತು ಯುಪಿಎಸ್‌ಸಿಗೆ ರವಾನಿಸಿದೆ. ಆದರೆ ಇಲ್ಲಿಯವರೆಗೆ ಈ ಪ್ರಸ್ತಾವನೆಯ ಬಗ್ಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಹೀಗಾಗಿ ಹೊಸವರನ್ನು ನೇಮಕ ಮಾಡುವ ಅನಿವಾರ್ಯತೆ‌ ಉಂಟಾಗಿದೆ.
    ಸರಕಾರ ಹೊಸ ಡಿಜಿಪಿ ನೇಮಕ ಪ್ರಕ್ರಿಯೆಯನ್ನೂ ಆರಂಭಿಸಿದ್ದು, ನಿಯಮದಂತೆ ನಾಲ್ಕು ಹಿರಿಯ ಐಪಿಎಸ್ ಅಧಿಕಾರಿಗಳ ಹೆಸರುಗಳನ್ನು ಕೇಂದ್ರಕ್ಕೆ ಸಲ್ಲಿಸಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಡಿಜಿಯಾಗಿರುವ ಪ್ರಶಾಂತ್ ಕುಮಾರ್ ಠಾಕೂರ್, ಸಿಐಡಿ ಡಿಜಿಯಾಗಿರುವ ಡಾ.ಎಂ.ಎ.ಸಲೀಂ, ಪೊಲೀಸ್ ಗೃಹ ನಿರ್ಮಾಣ ವಿಭಾಗದ ಡಿಜಿಯಾಗಿರುವ ರಾಮಚಂದ್ರ ರಾವ್, ಸಿಐಡಿ ಸೈಬರ್ ವಿಭಾಗದ ಡಿಜಿಪಿ ಪ್ರಣಬ್ ಮೊಹಂತಿ ಅವರ ಹೆಸರುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಆಯ್ಕೆ ಸಮಿತಿ ಕೇಂದ್ರಕ್ಕೆ ಶಿಫಾರಸು ಮಾಡಿದೆ.
    ಇದಕ್ಕೆ ಇನ್ನೆರಡು ದಿನಗಳಲ್ಲಿ ಕೇಂದ್ರ ದಿಂದ ಪ್ರತಿಕ್ರಿಯೆ ಬರಲಿದ್ದು, ಆನಂತರ ಸರಕಾರ ತನ್ನ ವಿವೇಚನಾಧಿಕಾರ ಬಳಸಿ ಮುಂದಿನ ಆಡಳಿತಕ್ಕೆ ಪೂರಕವಾದ ಹಿರಿಯ ಅಧಿಕಾರಿಯನ್ನು ಡಿಜಿಪಿಯಾಗಿ ನೇಮಕ ಮಾಡಲಿದೆ. ಹೀಗಾಗಿ ಇನ್ನೆರಡು ದಿನಗಳಲ್ಲಿ ಸರಕಾರದ ಆಯ್ಕೆ ಅಧಿಕೃತವಾಗಿ ಪ್ರಕಟವಾಗಲಿದೆ.
    ಈ ನಡುವೆ ರಾಜ್ಯ ಸರ್ಕಾರ ಸಿಐಡಿ ಮುಖ್ಯಸ್ಥರಾಗಿರುವ ಸಲೀಂ ಅವರನ್ನು ಈ ಹುದ್ದೆಗೆ ನೇಮಕ ಮಾಡಲು ವಿಶೇಷ ಆಸಕ್ತಿ ಹೊಂದಿದೆ ಆದರೆ ಸೇವಾ ಹಿರಿತನವನ್ನು ಪಾಲಿಸಲೇಬೇಕು ಎಂಬ ನಿಯಮವನ್ನು ಕಟ್ಟು ನಿಟ್ಟಾಗಿ ಅನುಸರಿಸಿದರೇ ಸಲೀಂ ಅವರು ಈ ಹುದ್ದೆಗೆ ನೇಮಕವಾಗುವುದು ಅನುಮಾನ.
    ಸದ್ಯ ಸೇವಾ ಹಿರಿತನದಲ್ಲಿ ಮೊದಲ ಸ್ಥಾನದಲ್ಲಿರುವ ಪ್ರಶಾಂತ ಠಾಕೂರ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಹುದ್ದೆಗೆ ಸರಿ ಸಮಾನದ ಇನ್ನೊಂದು ಹುದ್ದೆಗೆ ನೇಮಕಗೊಳ್ಳಲು ಒಪ್ಪಿಗೆ ಸೂಚಿಸಿದರೆ ಮಾತ್ರ ಸಲೀಂ ಅವರಿಗೆ ಈ ಹುದ್ದೆ ಸಿಗಲಿದೆ ಇಲ್ಲವಾದರೆ ಹೀಗಿರುವ ಹುದ್ದೆಯಲ್ಲಿ ಸಲೀಂ ಅವರು ಮುಂದುವರಿಯಬೇಕಾಗುತ್ತದೆ.

    Verbattle
    Verbattle
    Verbattle
    ಬೆಂಗಳೂರು ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಜನಿವಾರ ಹಾಕಿ ಬರಬಹುದಂತೆ
    Next Article ಮರ್ಯಾದೆ ಗೇಡು ಹತ್ಯೆ ಪತ್ತೆ
    vartha chakra
    • Website

    Related Posts

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    1 ಟಿಪ್ಪಣಿ

    1. Xhwadl on ಫೆಬ್ರವರಿ 11, 2026 1:31 ಅಪರಾಹ್ನ

      betmgm llc https://betmgm-play.com/ mgm online sports betting

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • LinwoodGah ರಲ್ಲಿ ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    • Vmuugs ರಲ್ಲಿ ಯಾವ ಖಾತೆ ಯಾರಿಗೆ ಬೇಕಂತೆ ಗೊತ್ತಾ?
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.