ಬೆಳಗಾವಿ: ಪ್ರತಿ ತಿಂಗಳು ಎಷ್ಟು ಮಂದಿ ಪದವೀಧರರ ಕೈಗೆ ಯುವನಿಧಿ ಹಣ ಸೇರುತ್ತಿದೆ ಎಂಬ ಮಾಹಿತಿಯನ್ನು ಸಚಿವ ಶರಣ ಪ್ರಕಾಶ್ ಪಾಟೀಲ್ ಪರಿಷತ್ನಲ್ಲಿ ತಿಳಿಸಿದ್ದಾರೆ.
ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ನವೀನ್ ಅವರು ರಾಜ್ಯದಲ್ಲಿ ಕಳೆದ 2 ವರ್ಷಗಳಲ್ಲಿ 8 ಲಕ್ಷ ವಿದ್ಯಾರ್ಥಿಗಳು ಪದವಿ ಮುಗಿಸಿದ್ದಾರೆ. ಆದರೆ ಯುವನಿಧಿಗೆ ನೋಂದಣಿ ಆಗಿರೋದು ಕಡಿಮೆ ಆಗಿದೆ ಯಾಕೆ? ಯುವನಿಧಿಗೆ ಪ್ರತಿ ತಿಂಗಳು ಹಣ ಕೊಡ್ತಿದ್ದೀರಾ? ಎಷ್ಟು ಹಣ ಕೊಡ್ತಿದ್ದೀರಾ ಎಂದು ಪ್ರಶ್ನೆ ಮಾಡಿದರು.
ಇದಕ್ಕೆ ಸಚಿವ ಶರಣ ಪ್ರಕಾಶ್ ಪಾಟೀಲ್, ಈವರೆಗೆ 1,81,699 ಪದವೀಧರು ಯುವನಿಧಿಗೆ ನೋಂದಣಿ ಮಾಡಿಕೊಂಡಿದ್ದಾರೆ. ಇವರ ಪೈಕಿ 1,45,978 ಪದವೀಧರಿಗೆ ಹಣ ಕೊಡಲಾಗಿದೆ ಎಂದು ಉತ್ತರಿಸಿದರು.
ನಮ್ಮ ಗ್ಯಾರಂಟಿಯಲ್ಲಿ 2023-24 ರ ಅವಧಿಯಲ್ಲಿ ವಿದ್ಯಾರ್ಥಿಗಳು ಪದವಿ ಮುಗಿಸಿರಬೇಕು. ಉದ್ಯೋಗ ಸಿಗದೇ 6 ತಿಂಗಳು ಆಗಿದ್ದವರಿಗೆ ಮಾತ್ರ ಈ ಯೋಜನೆ ಅನ್ವಯ ಅಗುತ್ತದೆ. ಯುವನಿಧಿಗೆ ಅವರೇ ಅರ್ಜಿ ಹಾಕಬೇಕು. ಅರ್ಜಿ ಹಾಕಿದವರಿಗೆ ಯುವನಿಧಿ ಕೊಡುತ್ತಿದ್ದೇವೆ ಎಂದರು.
1,81,669 ಪದವೀಧರ ಪೈಕಿ 1,45,978 ಪದವೀಧರಿಗೆ ಹಣ ಪಾವತಿ ಮಾಡಲಾಗಿದೆ. ಉಳಿದವರ ದಾಖಲೆ ಪರಿಶೀಲನೆ ಆಗಿಲ್ಲ. ಉಳಿದವರು ಉನ್ನತ ಶಿಕ್ಷಣಕ್ಕೆ ಹೋಗಿದ್ದಾರೆ. ಹೀಗಾಗಿ ಉಳಿದವರಿಗೆ ಹಣ ಹಾಕಿಲ್ಲ. ಪ್ರತಿ ತಿಂಗಳು ಯುವನಿಧಿ ಹಣ ಹೋಗುತ್ತಿದೆ ಎಂದು ತಿಳಿಸಿದರು.
ಕರ್ನಾಟಕ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಯವನಿಧಿಯನ್ನು ಪ್ರಕಟಿಸಲಾಗಿತ್ತು. ಪದವೀಧರರಿಗೆ ಪ್ರತಿತಿಂಗಳು 3,000 ರೂ. ಡಿಪ್ಲೋಮಾ ಪದವೀಧರರಿಗೆ 1,500 ರೂ. ನೀಡಲಾಗುವುದು ಎಂದು ಕಾಂಗ್ರೆಸ್ ಘೋಷಿಸಿತ್ತು.
Previous Articleಸರ್ಕಾರದ ವಿರುದ್ಧವೇ ಮಂತ್ರಿ ಅಸಮಾಧಾನ.
Next Article ರಾಜ್ಯದಲ್ಲಿ 3,364ಮಂದಿ ಬಾಣಂತಿಯರು ಸಾವು
4 ಪ್ರತಿಕ್ರಿಯೆಗಳು
cost clomiphene without insurance where to get cheap clomid price get generic clomid pills order cheap clomid price clomid pill where can i buy cheap clomiphene pill where can i buy clomiphene without prescription
More posts like this would make the blogosphere more useful.
More posts like this would make the online elbow-room more useful.
buy cheap inderal – generic plavix order generic methotrexate 2.5mg