Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯು.ಟಿ.ಖಾದರ್- ಹೊರಟ್ಟಿ ಜಟಾಪಟಿ.
    Trending

    ಯು.ಟಿ.ಖಾದರ್- ಹೊರಟ್ಟಿ ಜಟಾಪಟಿ.

    vartha chakraBy vartha chakraಸೆಪ್ಟೆಂಬರ್ 9, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ.9-
    ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಜಟಾಪಟಿ ಸರ್ವೇಸಾಮಾನ್ಯ ಆದರೆ ಇದೀಗ ಈ ಸಾಲಿಗೆ ವಿಧಾನಸಭೆಯ ಅಧ್ಯಕ್ಷರು ಮತ್ತು ವಿಧಾನ ಪರಿಷತ್ ಸಭಾಪತಿ ಸೇರ್ಪಡೆಯಾಗಿದ್ದಾರೆ.
    ವಿಧಾನಸಭಾಧ್ಯಕ್ಷ ಯುಟಿ ಖಾದರ್ ಅವರ ಕಾರ್ಯವೈಖರಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆಕ್ರೋಶ ಹೊರಹಾಕಿದ್ದಾರೆ.
    ವಿಧಾನಸಭೆಯ ಅಧ್ಯಕ್ಷರಾಗಿ ಯುಟಿ ಖಾದರ್ ತಾವು ಅತ್ಯಂತ ಉನ್ನತ ಸ್ಥಾನದಲ್ಲಿದ್ದೇನೆ ಎಂದುಕೊಂಡಿದ್ದಾರೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ತಿಗೆ ಸಮಾನ ಅಧಿಕಾರ ಮತ್ತು ಗೌರವಗಳಿವೆ ಅದನ್ನು ಮರೆತವರಂತೆ ಇವರು ವರ್ತಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕರ್ನಾಟಕ ವಿಧಾನ ಮಂಡಲದಲ್ಲಿ ಕರ್ನಾಟಕ ವಿಧಾನ ಪರಿಷತ್ತು ಮತ್ತು ಕರ್ನಾಟಕ ವಿಧಾನ ಸಭೆ ಒಂದೇ ನಾಣ್ಯದ ಎರಡು ಮುಖಗಳು ಇದ್ದಂತೆ ಎಂದು ನನ್ನ ಅಭಿಪ್ರಾಯ ಹಾಗೂ ತಮ್ಮ ಅಭಿಪ್ರಾಯವು ಆಗಿದೆ ಎಂದು ಭಾವಿಸಿರುತ್ತೇನೆ.
    ದ್ವಿಸದನ ಇರುವ ರಾಜ್ಯದಲ್ಲಿ ವಿಧಾನ ಮಂಡಲದಿಂದ ನಡೆಯುವ ಸಚಿವಾಲಯದ ಕಛೇರಿ ಕಾರ್ಯಕ್ರಮಗಳು ಸಹ ಇದೇ ದೃಷ್ಟಿಯಲ್ಲಿ ಹಾಗೂ ದಿಕ್ಕಿನಲ್ಲಿ ಸಾಗಬೇಕು ಆದರೆ ಇತ್ತೀಚಿನ ದಿನಗಳಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಯಾದ ನನ್ನನ್ನು ಸೌಜನ್ಯಕ್ಕಾದರು ಅಧಿಕೃತ ಕಾರ್ಯಕ್ರಮದ ಬಗ್ಗೆ ರೂಪರೇಷಗಳನ್ನು ಸಿದ್ಧಪಡಿಸಲು ಸಂಪರ್ಕಿಸದೆ ಏಕಪಕ್ಷಿಯವಾಗಿ ನಿರ್ಧಾರ ತೆಗೆದುಕೊಳ್ಳುವುದು ಅತ್ಯಂತ ಬೇಸರದ ಸಂಗತಿಯಾಗಿದೆ.
    ಉದಾಹರಣೆಗೆ ಇತ್ತೀಚೆಗೆ ವಿಧಾನಸೌಧದ ಆವರಣದಲ್ಲಿ ತಾವು ಪುಸ್ತಕ ಮೇಳವನ್ನು ಆಯೋಜಿಸಿದ್ದು, ವಿಧಾನಸೌಧ ಕಟ್ಟಡಕ್ಕೆ ಲೇಸರ್ ದೀಪ ಅಳವಡಿಸುವ ಯೋಜನೆ, 11 ನೇ ಸಿಪಿಎ ಕಾಮನ್‌ವೆಲ್ತ್ ಪಾರ್ಲಿಮೆಂಟರಿ ಅಸೋಷಿಯೇಷನ್, ಭಾರತ ವಲಯದ ಸಮ್ಮೇಳನ ಆಯೋಜನೆ ಬಗ್ಗೆ ಮೇಲಿನ ಕಾರ್ಯಕ್ರಮಗಳ ರೂಪರೇಷೆಗಳನ್ನು ಮಾಡುವಲ್ಲಿ ನನ್ನನ್ನು ಸೌಜನ್ಯಕ್ಕಾದರು ಸಂಪರ್ಕಿಸಿ ಸಲಹೆ ಸೂಚನೆ ಕೇಳದೆ ಮುಂದುವರೆದು ಸದರಿ ಕಾರ್ಯಕ್ರಮದ ಬಗ್ಗೆ ಪತ್ರಿಕಾ ಗೋಷ್ಠಿಯನ್ನು ಏಕಪಕ್ಷಿಯವಾಗಿ ನಡೆಸುತ್ತಿರುವುದು ನಾನು ಮಾಧ್ಯಮಗಳ ಮೂಲಕ ಗಮನಿಸಿರುವೆ.
    ಇದರ ಪರಿಣಾಮವಾಗಿ ನನ್ನ ಸುದೀರ್ಘ ರಾಜಕೀಯ ಹಿನ್ನಲೆ ಹಾಗೂ ಅನ್ಯ ರಾಜ್ಯಗಳ ಪೀಠಾಸೀನಾಧಿಕಾರಿಗಳ ನಿಕಟ ಸಂಪರ್ಕದಿಂದ ಹೊರ ರಾಜ್ಯದ ವಿಧಾನ ಪರಿಷತ್ ಹಾಗೂ ವಿಧಾನಸಭೆಯ ಪೀಠಾಸೀನಾಧಿಕಾರಿಗಳು, ಶಾಸಕರು ಹಾಗೂ ಗಣ್ಯರುಗಳೊಂದಿಗೆ 11 ನೇ ಸಿಪಿಎ ಕಾಮನ್‌ವೆಲ್ತ್ ಪಾರ್ಲಿಮೆಂಟರಿ ಅಸೋಷಿಯೇಷನ್‌ಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಹಾಗೂ ಆತ್ಮೀಯ ಮಾಹಿತಿ ವಿನಿಮಯ ಮಾಡುವಲ್ಲಿ ಮುಜುಗರ ಉಂಟಾಗುತ್ತಿದೆ.
    ಇತ್ತೀಚೆಗೆ ತಾವು ಬಾರ್ಬಡೊಸ್ ನಲ್ಲಿ ನಡೆಯುವ ಕಾಮನ್‌ವೆಲ್ತ್ ಕಾನ್ಸರೆನ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಸುಮಾರು 21 ದಿನಗಳ ಅಧಿಕೃತ ಪ್ರವಾಸ ಪಟ್ಟಿಯನ್ನು ನನ್ನ ಸಲಹೆಯನ್ನು ಪಡೆಯದೆ ತಾವು ತಯಾರಿಸಿದ್ದು ಅನ್ಯ ಮೂಲಗಳಿಂದ ತಿಳಿದಿರುವುದು ಅತ್ಯಂತ ಖೇಧಕರ ಸಂಗತಿಯಾಗಿದೆ.
    ನಾನು ಅಧಿಕೃತ ಕಾರ್ಯಕ್ರಮದಲ್ಲಿ ಅಧ್ಯಯನ ಪ್ರವಾಸ ಯಾವ ದೇಶಕ್ಕೆ ಹೋಗಬೇಕು ಎಂದು ನಿರ್ಧರಿಸುವ ಹಕ್ಕು ಇಲ್ಲವೆಂದು ಭಾಸವಾಗುತ್ತಿದೆ. ನಿಮಗೆ ಅನುಕೂಲವಾಗುವ ರೀತಿ ಕಾರ್ಯಕ್ರಮವನ್ನು ನಿರೂಪಿಸಿ ಒತ್ತಾಯ ಪೂರ್ವಕವಾಗಿ ನಾನು ಅದರಲ್ಲಿ ಭಾಗವಹಿಸುವಂತೆ ಮಾಡುವ ಸಂದಿಗ್ಧತೆಯ ಅವಶ್ಯಕತೆ ಏನು ಎನ್ನುವುದು ನನಗೆ ಒಗಟಾಗಿದೆ ಎಂದು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ 3116

    Bangalore Congress Government Karnataka News Politics Trending Varthachakra ಕರ್ನಾಟಕ ಕಾಂಗ್ರೆಸ್ ಕಾನೂನು ಚುನಾವಣೆ ಬಸವರಾಜ ಹೊರಟ್ಟಿ ಬೆಂಗಳೂರು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಭದ್ರಾವತಿಯಲ್ಲಿ ಕಿಡಿಗೇಡಿಗಳ ಕಿತಾಪತಿ.
    Next Article CCB ಹೆಸರಲ್ಲಿ ಪೊಲೀಸ್ ಪೇದೆ ಸುಲಿಗೆ.
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • dragon money casino играть ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • pansionatmskvucky ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • citymebell.ru ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ‘ಕಾಂತಾರ 1’ ಚಿತ್ರದಲ್ಲಿ ಪ್ಲಾಸ್ಟಿಕ್ ಕ್ಯಾನ್!#kantarachapter1 #watercan #mistakes #viralvideo #latestnews
    Subscribe