Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯಪಾಲರಿಗೆ ವಕೀಲರು ಕೊಟ್ಟ ಸಲಹೆ ಗೊತ್ತಾ
    Trending

    ರಾಜ್ಯಪಾಲರಿಗೆ ವಕೀಲರು ಕೊಟ್ಟ ಸಲಹೆ ಗೊತ್ತಾ

    vartha chakraBy vartha chakraಆಗಷ್ಟ್ 6, 20246 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

     

    ರಾಜ್ಯಪಾಲರಿಗೆ ವಕೀಲರು ಕೊಟ್ಟ ಸಲಹೆ ಗೊತ್ತಾ.

    ಬೆಂಗಳೂಮುಖ್ಯಮಂತ್ರಿಗಳ ವಿರುದ್ಧ ಖಾಸಗಿ ದೂರು ಸಲ್ಲಿಸಲು ಅನುಮತಿ ನೀಡುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಾಹಂ ಸಲ್ಲಿಸಿರುವ ಮನವಿಯ ಬಗ್ಗೆ ರಾಜ್ಯಪಾಲರು ಮುಖ್ಯಮಂತ್ರಿಗಳಿಗೆ ಶೋಕಾಸ್ ಜಾರಿಗೊಳಿಸಿದ್ದಾರೆ.
    ಈ ಕುರಿತಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ರಾಜ್ಯಪಾಲರು ಮುಖ್ಯಮಂತ್ರಿಗಳಿಗೆ ನೀಡಿರುವ ಶೋಕಾಸ್ ವಾಪಸ್ ಪಡೆಯಲು ಸಲಹೆ ಮಾಡಿದೆ.
    ಈ ಹಿನ್ನೆಲೆಯಲ್ಲಿ ರಾಜ್ಯಪಾಲ ತಾವರ ಚೆಂದ್ ಗೆಹ್ಲೋಟ್ ಅವರು ಕೇಂದ್ರ ಗೃಹ ಇಲಾಖೆ ಗೆ ವರದಿ ಸಲ್ಲಿಸಿದ್ದಾರೆ ಇದರ ಬೆನ್ನಲ್ಲೇ ನಾಲ್ವರು ಹಿರಿಯ ವಕೀಲರ ಅಭಿಪ್ರಾಯ ಕೇಳಿದ್ದಾರೆ.
    ರಾಜ್ಯಪಾಲರೊಂದಿಗೆ ಸಮಾಲೋಚನೆ ನಡೆಸಿದ ವಕೀಲರು ಈ ಕುರಿತಂತೆ ಇರುವ ಸುಪ್ರೀಂ ಕೋರ್ಟ್ ನ ತೀರ್ಪುಗಳು ಮತ್ತು ವಿವಿಧ ರಾಜ್ಯಗಳಲ್ಲಿನ ನಿರ್ಧಾರಗಳನ್ನು ಅವಲೋಕಸಿ ಪ್ರತ್ಯೇಕ ವರದಿಯೊಂದನ್ನು ನೀಡಿದ್ದಾರೆ ಎಂದು ಗೊತ್ತಾಗಿದೆ.
    ಮಧ್ಯಪ್ರದೇಶ, ಮಹಾರಾಷ್ಟ್ರ, ಕರ್ನಾಟಕದ ಪ್ರಮುಖ ಪ್ರಕರಣಗಳು ಮತ್ತು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ನೀಡಿದ್ದ ತೀರ್ಪಿನ ಉಲ್ಲೇಖಿಸಿ ತಜ್ಞರು ವರದಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
    2004ರಲ್ಲಿ ಮಧ್ಯಪ್ರದೇಶದ ಇಬ್ಬರು ಸಚಿವರು ಮೇಲೆ ಭೂಕಬಳಿಕೆ ಸಂಬಂದ ದೂರು ದಾಖಲಾಗಿತ್ತು. ಇವರ ವಿರುದ್ಧ ದೂರು ದಾಖಲಿಸದಂತೆ ಸಚಿವ ಸಂಪುಟದಲ್ಲಿ ಒಂದು ಸಾಲಿನ ನಿರ್ಣಯವನ್ನೂ ಸಹ ಮಾಡಲಾಗಿತ್ತು. ಆದರೆ ಅಂದಿನ ರಾಜ್ಯಪಾಲರು ಸಂಪುಟದ ತೀರ್ಮಾನವನ್ನು ಒಪ್ಪದೆ ತಾವಾಗಿಯೇ ಅನುಮತಿ ನೀಡಿದ್ದನ್ನು ಸುಪ್ರೀಂ ಕೋರ್ಟ್‌ ಕೂಡಾ ಒಪ್ಪಿತ್ತು. ಆದರೆ ಈ ವೇಳೆ ಸುಪ್ರೀಂ ಕೋರ್ಟ್ ಯಾವುದೇ ಪ್ರಕರಣಗಳ ಬಗ್ಗೆ ಕೇಂದ್ರದ ತನಿಖಾ ಸಂಸ್ಥೆಯ ತನಿಖೆಗೆ ಆದೇಶಿಸಲು ರಾಜ್ಯಪಾಲರಿಗೆ ಅಧಿಕಾರವಿಲ್ಲ ಎಂಬುದನ್ನು ಸಹ ಉಲ್ಲೇಖ ಮಾಡಿತ್ತು.ಇದನ್ನು ವಕೀಲರ ತಂಡ ವಿವರಿಸಿದೆ.
    ಸಂಪುಟದಲ್ಲಿ ನಿರ್ಣಯ ಅಂಗೀಕಾರವಾದರೂ ಸಹ ಆರ್ಟಿಕಲ್‌ 163ರಲ್ಲಿ ಉಲ್ಲೇಖವಾಗಿರುವಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಅಧಿಕಾರಿ ಹೊಂದಿದ್ದಾರೆ ಎಂದು ಕಾನೂನು ತಜ್ಷರು ಅಭಿಪ್ರಾಯಪಟ್ಟಿದ್ದಾರೆ.
    ಸಿಎಂ ವಿರುದ್ಧ ವಿಚಾರಣೆಗೆ ಅನುಮತಿ ನೀಡುವ ಗ್ಗೆ ರಾಜ್ಯಪಾಲರು ನೇರವಾಗಿ ತೀರ್ಮಾನ ತೆಗೆದುಕೊಳ್ಳಬಹುದು. ಆರ್ಟಿಕಲ್‌ 163ರಲ್ಲಿ ಈ ಬಗ್ಗೆ ಉಲ್ಲೇಖ ಆಗಿದೆ. ಸಂಪುಟದ ಅಭಿಪ್ರಾಯ ಕೊಟ್ಟರೆ ಅನುಮೋದನೆ ಮಾಡಲೇಬೇಕು ಎಂಬ ನಿಯಮವಿಲ್ಲ. ಅವರು ಕೌನ್ಸಿಲ್‌ ಮಿನಿಸ್ಟರ್‌ ತೀರ್ಮಾನದ ವಿರುದ್ಧವಾಗಿ ಅನುಮತಿ ನೀಡಬಹುದು ಎಂಬುದು ಕಾನೂನು ತಜ್ಞರ ವಾದವಾಗಿದೆ.
    ಸಚಿವ ಸಂಪುಟ ತೀರ್ಮಾನವನ್ನು ಲೆಕ್ಕಿಸದೆ, ಪ್ರಾಸಿಕ್ಯೂಷನ್‌ ಗೆ ಕೊಡುವ ಅಧಿಕಾರ ರಾಜ್ಯಪಾಲರಿಗೆ ಇದೆ. ಅಕ್ರಮ ನಡೆದಿದೆ ಎಂಬುದು ಮನವರಿಕೆ ಆಗಿದ್ದರೆ ಕಾನೂನಿನ ಪ್ರಕಾರ ಸಂಪುಟದ ಅಭಿಪ್ರಾಯ ತೆಗೆದುಕೊಳ್ಳಬಹುದು. ಇಲ್ಲ ಸ್ವತಂತ್ರವಾಗಿ ಕೂಡ ತೀರ್ಮಾನ ಮಾಡಬಹುದು ಎಂದು ಕಾನೂನು ಹೇಳುತ್ತದೆ ಎಂದು ತಿಳಿಸಿರುವುದಾಗಿ ಗೊತ್ತಾಗಿದೆ.

    Verbattle
    Verbattle
    Verbattle
    #election karnataka high court Thawar Chand Gehlot ಕಾನೂನು ನ್ಯಾಯ ರಾಜ್ಯಪಾಲ
    Share. Facebook Twitter Pinterest LinkedIn Tumblr Email WhatsApp
    Previous Articleಕುಮಾರಸ್ವಾಮಿ ಗೆ ಶಿವಕುಮಾರ್ ಸವಾಲ್.
    Next Article ಎರಡನೇ ವಿಮಾನ ನಿಲ್ದಾಣದ ಜಾಗ ಪೈನಲ್.
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • LinwoodGah ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • Fjdswn ರಲ್ಲಿ ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.