Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿಯಲ್ಲಿ ಇವರೇ ಪವರ್ ಫುಲ್
    ರಾಜಕೀಯ

    ಬಿಜೆಪಿಯಲ್ಲಿ ಇವರೇ ಪವರ್ ಫುಲ್

    vartha chakraBy vartha chakraಜನವರಿ 10, 2025Updated:ಜನವರಿ 10, 20254 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.10:
    ನಾಯಕತ್ವ ಬದಲಾವಣೆ ಸೇರಿದಂತೆ ಹಲವಾರು ವಿಷಯಗಳ ಕುರಿತಂತೆ ಬಿಜೆಪಿಯಲ್ಲಿ ಭಿನ್ನಮತ ತೀವ್ರ ಸ್ವರೂಪ ಪಡೆದುಕೊಂಡಿದೆ.
    ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಸಮರ ಸಾರಿರುವ ಹಿರಿಯ ನಾಯಕ ಬಸನಗೌಡ ಪಾಟೀಲ ಯತ್ನಾಳ ಮತ್ತು ರಮೇಶ್ ಜಾರಕಿಹೊಳಿ ಬಣ ವಿಜಯೇಂದ್ರ ಪದಚ್ಯುತಿಗೆ ಪಟ್ಟು ಹಿಡಿದಿದೆ. ಮತ್ತೊಂದೆಡೆ ಈ ಭಿನ್ನರ ವಿರುದ್ಧ ಕ್ರಮಕ್ಕೆ ವಿಜಯೇಂದ್ರ ಆಪ್ತರು ಲಾಭಿ ನಡೆಸುತ್ತಿದ್ದಾರೆ. ಇದೆಲ್ಲದರ ನಡುವೆ ತಟಸ್ಥರ ಬಣ ಕೂಡ ಅಸ್ತಿತ್ವಕ್ಕೆ ಬಂದಿದ್ದು ರಾಜ್ಯ ಬಿಜೆಪಿ ವಿದ್ಯಮಾನಗಳು ಗೊಂದಲ ಗೋಜಲಾಗಿ ಪರಿಣಮಿಸಿದೆ.
    ಈ ವಿದ್ಯಮಾನಗಳ ನಡೆದ ಹೈಕಮಾಂಡ್ ಮುಂದೆ ಯಾರು ಪ್ರಬಲರು ಎಂಬ ವಿಷಯ ಚರ್ಚೆಗೆ ಬಂದಿದ್ದು ರಾಜ್ಯ ಬಿಜೆಪಿಯ ಯಾವುದೇ ನಾಯಕರು ಹೈಕಮಾಂಡ್ ಮುಂದೆ ತಮ್ಮ ಪ್ರಭಾವ ಬಳಸಲು ಸಾಧ್ಯವಾಗುತ್ತಿಲ್ಲ ಎಂಬ ಸತ್ಯ ಬೆಳಕಿಗೆ ಬಂದಿದೆ.
    ಬಿಜೆಪಿಯ ರಾಜ್ಯ ನಾಯಕರ ಬದಲಾಗಿ ಹೈಕಮಾಂಡ್ ನಾಯಕರು ಜೆಡಿಎಸ್ ನಾಯಕ ಹಾಗೂ ಕೇಂದ್ರ ಮಂತ್ರಿ ಕುಮಾರಸ್ವಾಮಿ ಅವರ ಅಭಿಪ್ರಾಯ ಮತ್ತು ಮಾತಿಗೆ ಹೆಚ್ಚಿನ ಮನ್ನಣೆ ನೀಡುತ್ತಿದ್ದಾರೆ ಎಂಬ ವಿಷಯ ಬೆಳಕಿಗೆ ಬಂದಿದೆ.
    ಈ ಹಿನ್ನೆಲೆಯಲ್ಲಿ ವಿಜಯೇಂದ್ರ ವಿರುದ್ಧ ಸಮರ ಕಾರಿರುವ ಭಿನ್ನರ ಗುಂಪು ಇದೀಗ ತಮ್ಮ ಬೇಡಿಕೆ ಈಡೇರಿಸಿಕೊಳ್ಳಲು ಕುಮಾರಸ್ವಾಮಿಯವರ ಮೊರೆ ಹೋಗಿದ್ದಾರೆ.
    ವಕ್ಫ್ ಕುರಿತುಂತೆ ವರದಿ ನೀಡಲು ದೆಹಲಿಗೆ ತೆರಳಿದ್ದ ಮಾಜಿ ಸಚಿವ ರಮೇಶ ಜಾರಕಿಹೊಳಿ, ಅರವಿಂದ ಲಿಂಬಾವಳಿ ನೇತೃತ್ವ ತಂಡ ಕೇಂದ್ರ ಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಸುಧೀರ್ಘ ಅವಧಿವರೆಗೆ ಚರ್ಚೆ ನಡೆಸಿದೆ
    ಪ್ರಸಕ್ತ ಬಿಜೆಪಿಯಲ್ಲಿನ ಭಿನ್ನಮತ, ವಿಜಯೇಂದ್ರ ಅವರ ಕಾರ್ಯವೈಖರಿ ಬಗ್ಗೆ ರಮೇಶ್ ಜಾರಕಿಹೊಳಿ ಅವರು ಪ್ರಸ್ತಾಪಿಸಿ ಮಧ್ಯಸ್ಥಿಕೆ ವಹಿಸುವಂತೆ ಕುಮಾರಸ್ವಾಮಿ ಅವರಲ್ಲೂ ಮನವಿ ಮಾಡಿದ್ದಾರೆ. ಇದಕ್ಕೆ ತಾತ್ವಿಕವಾಗಿ ಒಪ್ಪಿ ಕೊಂಡಿರುವ ಕುಮಾರಸ್ವಾಮಿ ಅವರು ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವರೂ ಆಗಿರುವ ಬಿಜೆಪಿ ರಾಷ್ಟ್ರೀಯ ಘಟಕದ ಪ್ರಭಾವಿ ನಾಯಕ ಅಮಿತ್ ಶಾರೊಂದಿಗೆ ಮಾತುಕತೆ ನಡೆಸಲು ಪ್ರಯತ್ನಿಸುವುದಾಗಿ ಆಶ್ವಾಸನೆ ನೀಡಿದ್ದಾರೆ ಎನ್ನಲಾಗಿದೆ.
    ಈ ಮಾತುಕತೆಯ ವೇಳೆ ಬಿಜೆಪಿ ಭಿನ್ನಮತಿಯ ನಾಯಕರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಮಗೆ 100 ಕ್ಷೇತ್ರಗಳ ಜವಾಬ್ದಾರಿ ನೀಡಲಿ ಅಲ್ಲಿ ಅಭ್ಯರ್ಥಿಗಳ ಆಯ್ಕೆ ಚುನಾವಣೆಯ ಪ್ರಚಾರ ತಂತ್ರ ಖರ್ಚು ವೆಚ್ಚ ಎಲ್ಲವನ್ನು ನಾವೇ ನೋಡಿಕೊಳ್ಳುತ್ತೇವೆ ಈ ಕಾರಣಕ್ಕಾಗಿ ವಿಜಯೇಂದ್ರ ಮತ್ತು ಯಡಿಯೂರಪ್ಪ ಮೇಲೆ ಹೆಚ್ಚಿನ ಅವಲಂಬನೆ ಬೇಡ ಎಂಬ ಅಂಶವನ್ನು ಹೈಕಮಾಂಡ್ ಹೀಗೆ ಮನದಟ್ಟು ಮಾಡಿ ಎಂದು ಕುಮಾರಸ್ವಾಮಿ ಅವರಲ್ಲಿ ಕೋರಿದರು ಎನ್ನಲಾಗಿದೆ.
    ವಿಜಯೇಂದ್ರ ಅವರ ಮೇಲೆ ಚುನಾವಣೆಯ ಜವಾಬ್ದಾರಿ ಹೋರಿಸಿದರೆ ಆನಂತರದಲ್ಲಿ ಅವರು ಹೈಕಮಾಂಡ್ ಮೇಲೆ ಒತ್ತಡ ಏರುತ್ತಾರೆ ಇದರಿಂದ ಅನಗತ್ಯ ಗೊಂದಲಗಳು ಸೃಷ್ಟಿಯಾಗುತ್ತವೆ ಇದಕ್ಕೆ ಅವಕಾಶ ನೀಡಿದಂತೆ ಸಾಮೂಹಿಕ ನಾಯಕತ್ವದಲ್ಲಿ ಪಕ್ಷ ಸಂಘಟನೆ ಮತ್ತು ಚುನಾವಣೆ ಎದುರಿಸಲು ನಾವು ಸಿದ್ಧ ಅದಕ್ಕೆ ಅನುಕೂಲಕರವಾಗುವಂತೆ ತೀರ್ಮಾನ ತೆಗೆದುಕೊಳ್ಳಲು ಹೈಕಮಾಂಡ್ ಗೆ ಸಲಹೆ ಮಾಡಲು ಮಾನವಿ ಮಾಡಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.
    ಈ ಎಲ್ಲಾ ಅಂಶಗಳ ಬಗ್ಗೆ ಕೂಲಂಕುಶ ಚರ್ಚೆ ನಡೆಸಿದ ಕುಮಾರಸ್ವಾಮಿ ನೀವು ಹೇಳಿರುವ ಎಲ್ಲ ವಿಷಯಗಳನ್ನು ಹೈಕಮಾಂಡ್ ಗಮನಕ್ಕೆ ತರುತ್ತೇನೆ ಈ ವಿಚಾರವಾಗಿ ಯಾವುದೇ ಗೊಂದಲ ಮತ್ತು ಅಪನಂಬಿಕೆ ಬೇಡ ಒಟ್ಟಾಗಿ ಹೋರಾಟ ನಡೆಸಿ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸೋಣ ಈ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಜನಾಂದೋಲನ ಮೂಡಿಸಲು ಸಜ್ಜಾಗಿ ಸಂಕ್ರಾಂತಿ ಮುಗಿದ ನಂತರ ತಾವು ಕೂಡ ಈ ವಿಷಯದಲ್ಲಿ ಹೆಚ್ಚು ಗಮನ ಹರಿಸುತ್ತೇನೆ ಎಂದು ಭರವಸೆ ನೀಡಿರುವುದಾಗಿ ತಿಳಿದು ಬಂದಿದೆ.

    ಕಾಂಗ್ರೆಸ್ ಚುನಾವಣೆ ಜೆಡಿಎಸ್ ಬಿಜೆಪಿ ಬೆಂಗಳೂರು ಯಡಿಯೂರಪ್ಪ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleವಿಶೇಷ ಪೂಜೆ ಕಾರಣ ಬಹಿರಂಗ ಪಡಿಸಿದ ಶಿವಕುಮಾರ್
    Next Article ಸಿದ್ದರಾಮಯ್ಯ ನಂತರ ಸಿಎಂ ಯಾರು ಗೊತ್ತಾ
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    4 ಪ್ರತಿಕ್ರಿಯೆಗಳು

    1. b8z1k on ಜೂನ್ 7, 2025 1:27 ಅಪರಾಹ್ನ

      where can i buy generic clomid no prescription can i buy generic clomid without prescription cost of generic clomid online can i buy clomid no prescription can i get generic clomiphene without rx where buy generic clomid buy clomiphene price

      Reply
    2. buy cialis soft tabs online on ಜೂನ್ 9, 2025 6:35 ಫೂರ್ವಾಹ್ನ

      I’ll certainly bring to review more.

      Reply
    3. tu80k on ಜೂನ್ 18, 2025 8:24 ಫೂರ್ವಾಹ್ನ

      where to buy inderal without a prescription – clopidogrel cost oral methotrexate 5mg

      Reply
    4. n1vlv on ಜೂನ್ 21, 2025 6:01 ಫೂರ್ವಾಹ್ನ

      order amoxicillin generic – how to buy amoxicillin order generic combivent

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 5oaxe ರಲ್ಲಿ ಬೆಂಗಳೂರಲ್ಲಿ ಬೀದಿ ನಾಯಿಗಳು ಎಷ್ಟಿವೆ ಗೊತ್ತಾ | Stray Dogs
    • AlbertDuabe ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • 0pfy2 ರಲ್ಲಿ ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe