ಬೆಂಗಳೂರು,ಜ.20:
ಗಾಂಧಿ ಭಾರತ ಕಾರ್ಯಕ್ರಮ ಆಯೋಜಿಸಿರುವ ರಾಜ್ಯ ಸರ್ಕಾರಕ್ಕೆ ಪ್ರತಿ ಪಕ್ಷ ನಾಯಕ ಆರ್ ಅಶೋಕ್ ಕೆಲವು ಗಂಭೀರ ಪ್ರಶ್ನೆ ಕೇಳುವ ಮೂಲಕ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಗಾಂಧಿ ಆದರ್ಶಗಳನ್ನು ಅನುಸರಿಸುವುದು ಎಂದರೆ ಪರಿಶಿಷ್ಟರ ಕಲ್ಯಾಣಕ್ಕೆ ವಿನಿಯೋಗವಾಗಬೇಕಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನ ಲೂಟಿ ಮಾಡುವುದಾ? ಅಥವಾ ಸೂರಿಲ್ಲದ ಜನಸಾಮಾನ್ಯರು ಸೂರು ಕಟ್ಟಿಕೊಳ್ಳಲು ಸಿಗಬೇಕಾಗಿದ್ದ ಮೂಡಾ ಸೈಟುಗಳನ್ನು ಲಪಟಾಯಿಸುವುದಾ? ಎಂದು ಪ್ರಶ್ನಿಸಿದ್ದಾರೆ.
ಗಾಂಧಿ ತತ್ವಗಳನ್ನು ಅಳವಡಿಸಿಕೊಳ್ಳುವುದು ಎಂದರೆ ಗಾಂಧೀಜಿ ಅವರು ತಂದುಕೊಟ್ಟ ಸ್ವಾತಂತ್ರ್ಯ ಬಳಸಿಕೊಂಡು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗುವ ದೇಶದ್ರೋಹಿಗಳನ್ನ ಸಮರ್ಥನೆ ಮಾಡಿಕೊಳ್ಳುವುದಾ? ಅಥವಾ ಗೋಮಾತೆಯ ಕೆಚ್ಚಲು ಕತ್ತರಿಸಿದರೂ ಮೌನ ವಹಿಸುವುದಾ? ಎಂದು ಕೇಳಿದ್ದಾರೆ.
ಗಾಂಧಿ ಕನಸನ್ನು ನನಸಾಗಿಸುವುದು ಎಂದರೆ ನಕಲಿ ಗಾಂಧಿಗಳ ಕೈಗೆ ಕಾಂಗ್ರೆಸ್ ಪಕ್ಷವನ್ನು ಕೊಟ್ಟು ಗುಮಲಾಗಿರಿ ಮಾಡುವುದಾ? ಅಥವಾ ಸ್ವತಂತ್ರ ಭಾರತದಲ್ಲಿ ತುರ್ತು ಪರಿಸ್ಥಿತಿ ಹೇರಿ ಇಡೀ ದೇಶವನ್ನೇ ಜೈಲು ಮಾಡುವುದಾ? ಎಂದು ವ್ಯಂಗ್ಯವಾಡಿದ್ದಾರೆ
ಬಹುಶಃ ಇದನ್ನೆಲ್ಲಾ ಮುಂದಾಲೋಚನೆ ಮಾಡಿಯೇ ಗಾಂಧೀಜಿ ಅವರು ಸ್ವಾತಂತ್ರ್ಯ ಬಂದ ನಂತರ ಕಾಂಗ್ರೆಸ್ ಪಕ್ಷವನ್ನ ವಿಸರ್ಜನೆ ಮಾಡಬೇಕು ಎಂದು ಹೇಳಿದ್ದರು ಅನ್ನಿಸುತ್ತೆ.ಈಗಿರುವ ನಕಲಿ ಗಾಂಧಿಗಳು ಎಷ್ಟು ಡೋಂಗಿ ಗಾಂಧಿವಾಗಿದಳೋ ಅಧಿಕಾರಕ್ಕಾಗಿ ಅವರ ಗುಲಾಮಗಿರಿ ಮಾಡುತ್ತಿರುವ ಕಾಂಗ್ರೆಸ್ ನಾಯಕರು ಅವರಿಗಿಂತ ಹೆಚ್ಚು ಡೋಂಗಿಗಳು ಎಂದು ಟೀಕಿಸಿದ್ದಾರೆ.