Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೌಡಿಗಳ ಪೋಟೋ ತೋರಿಸಿ 63 ಲಕ್ಷ ವಸೂಲಿ
    ಬಂಧನ

    ರೌಡಿಗಳ ಪೋಟೋ ತೋರಿಸಿ 63 ಲಕ್ಷ ವಸೂಲಿ

    vartha chakraBy vartha chakraಏಪ್ರಿಲ್ 8, 2025Updated:ಏಪ್ರಿಲ್ 8, 20251 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.8-ರೌಡಿ ಸೈಲೆಂಟ್‌ ಸುನಿಲ್‌ ಪೋಟೋ ತೋರಿಸಿ ಉದ್ಯಮಿ ಬಳಿ 13 ಲಕ್ಷ ರೂ.ಗಳಿಗೆ 63 ಲಕ್ಷ ಬಡ್ಡಿ ಪಡೆದು ಜೀವ ಬೆದರಿಕೆ ಹಾಕಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
    ಪ್ರಕಾಶ್‌ ನಗರದ ದೀಪಕ್‌ (33), ಜಯಕುಮಾರ್‌ (39) ಹಾಗೂ ಬಾಲು (33) ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ರೌಡಿಗಳಾದ ಸುನಿಲ್‌ ಹಾಗೂ ಆಯಿಲ್‌ ಪುರುಷೋತ್ತಮ್‌ ಜತೆಗಿನ ಪೋಟೋಗಳನ್ನು ಬಳಸಿ ದೂರುದಾರರಿಗೆ ಹೆದರಿಸಿದ್ದಾರೆ. ಈ ಕೃತ್ಯದಲ್ಲಿ ಇಬ್ಬರು ರೌಡಿಗಳ ಪಾತ್ರವಿದೆಯೇ ಎಂಬುದರ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ.
    ಲಕ್ಕಸಂದ್ರ ನಿವಾಸಿ ಉದ್ಯಮಿ ಎಂ. ರವಿ ಎಂಬುವವರಿಗೆ ಕಳೆದ 15 ವರ್ಷಗಳಿಂದ ಆರೋಪಿ ದೀಪಕ್‌ ಪರಿಚಯವಿತ್ತು. ಹೀಗಾಗಿ, 2020ರಲ್ಲಿ ದೀಪಕ್‌ ಬಳಿ 13 ಲಕ್ಷ ರೂ.ಸಾಲ ಪಡೆದಿದ್ದರು. ಸಾಲ ನೀಡುವಾಗ ಒಂದು ತಿಂಗಳ ಅವಧಿಗೆ 13 ಲಕ್ಷಕ್ಕೆ 13 ಲಕ್ಷ ರೂ. ಸೇರಿ ಒಟ್ಟು 26 ಲಕ್ಷ ರೂ. ಕೊಡುವ ಒಪ್ಪಂದ ಪತ್ರಕ್ಕೆ ಸಹಿ ಮಾಡಿದ್ದರು. ಈ ನಡುವೆ, ರವಿ ಅವರ ಕಂಪನಿ ನಷ್ಟ ಅನುಭವಿಸಿದ ಹಿನ್ನೆಲೆಯಲ್ಲಿ ಸಕಾಲಕ್ಕೆ ಹಣ ಹಿಂದಿರುಗಿಸಲು ಸಾಧ್ಯವಾಗಿಲ್ಲ. ಈ ವೇಳೆ ದೀಪಕ್‌, 26 ಲಕ್ಷ ರೂ.ಗೆ 10 ಲಕ್ಷ ರೂ. ಸೇರಿಸಿ ಒಟ್ಟು 36 ಲಕ್ಷ ರೂ. ಕೊಡುವಂತೆ ಬೆದರಿಕೆ ಹಾಕಿದ್ದ.ಅದರಂತೆ, ರವಿ ಅವರು ಪ್ರತಿ ತಿಂಗಳು 3.60 ಲಕ್ಷ ರೂ. ಬಡ್ಡಿಯಂತೆ ಒಂದು ವರ್ಷ ದೀಪಕ್‌ಗೆ ಹಣ ನೀಡಿದ್ದಾರೆ. ಬಡ್ಡಿ ಕಟ್ಟಲಾಗದೆ ರವಿ ಅವರು ಕುರುಬರಹಳ್ಳಿಯ ಮನೆಯನ್ನು 53 ಲಕ್ಷ ರೂ.ಗೆ ಮಾರಾಟ ಮಾಡಿದ್ದರು. ಈ ಹಣದಲ್ಲಿ 10 ಲಕ್ಷ ರೂ. ಪಡೆದಿದ್ದ ದೀಪಕ್‌, ಪುನಃ ರವಿ ಅವರ ಖಾತೆಯಿಂದ ಬಲವಂತವಾಗಿ 8.50 ಲಕ್ಷ ರೂ. ವರ್ಗಾಯಿಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
    ರೌಡಿಗಳ ಹೆಸರು ಬಳಕೆಈ ನಡುವೆ, ಜಯಕುಮಾರ್‌ ಬಳಿಯೂ 8 ಲಕ್ಷ ರೂ. ಸಾಲ ಪಡೆದಿದ್ದ ರವಿ, ಬಡ್ಡಿ 6.40 ಲಕ್ಷ ರೂ. ಪಾವತಿಸಿದ್ದರು. ಕೆಲ ತಿಂಗಳಿಂದ ಬಡ್ಡಿ ಕಟ್ಟಲಾಗದೆ ಅಸಹಾಯಕತೆಗೆ ಸಿಲುಕಿದ ರವಿ ಅವರನ್ನು ಕೊಠಡಿಯೊಂದಲ್ಲಿ ಕೂಡಿಹಾಕಿ ಕಿರುಕುಳ ನೀಡಿದ್ದರು.
    ಅಷ್ಟೇ ಅಲ್ಲದೆ, ರೌಡಿ ಸೈಲೆಂಟ್‌ ಸುನಿಲ್ ನಮಗೆ ಪರಿಚಯವಿದ್ದು, ನಿನ್ನನ್ನು ಕೊಲೆ ಮಾಡಿಸುತ್ತೇವೆ’ ಎಂದು ಆರೋಪಿಗಳು ಆತನ ಜತೆ ತೆಗೆಸಿರುವ ಪೋಟೋಗಳನ್ನು ರವಿಗೆ ವಾಟ್ಸಾಪ್‌ ಮೂಲಕ ಕಳುಹಿಸಿದ್ದರು. ಅಲ್ಲದೆ, ರೌಡಿಗಳಾದ ಪ್ರಕಾಶನಗರದ ರೌಡಿ ಆಯಿಲ್‌ ಪರುಷೋತ್ತಮ್‌ ಜತೆಗಿರುವ ಪೋಟೋಗಳನ್ನು ಕಳುಹಿಸಿ ಬೆದರಿಸುತ್ತಿದ್ದರು. ಈ ಕೃತ್ಯಕ್ಕೆ ಬಾಲು ಸಹಕಾರ ನೀಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ

    Verbattle
    Verbattle
    Verbattle
    ಕೊಲೆ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous ArticleReels Star ಗಳಿಗೆ ಬಿಸಿ ಮುಟ್ಟಿಸಿದ ಪೊಲೀಸ್.
    Next Article ಕಾಂಗ್ರೆಸ್ ನಾಯಕ ಮಂಜುನಾಥ್ ಗೌಡ ಇಡಿ ವಶಕ್ಕೆ
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    1 ಟಿಪ್ಪಣಿ

    1. Ffdnty on ಫೆಬ್ರವರಿ 13, 2026 2:31 ಅಪರಾಹ್ನ

      betmgm Oregon https://betmgm-play.com/ mgm sportsbook login

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ulfvqw ರಲ್ಲಿ ಅಪ್ಪಚ್ಚು ರಂಜನ್- ಕೆ.ಜಿ.ಬೋಪಯ್ಯ ಪೈಪೋಟಿ | Appachu Ranjan
    • LinwoodGah ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • Atyjfy ರಲ್ಲಿ ನಕಲಿ ಅಂಕಪಟ್ಟಿಗಳ ಕಿಂಗ್ ಪಿನ್
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.