Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲಂಚ ಆರೋಪದ ಸುಳಿಯಲ್ಲಿ Pralhad Joshi
    ರಾಜ್ಯ

    ಲಂಚ ಆರೋಪದ ಸುಳಿಯಲ್ಲಿ Pralhad Joshi

    vartha chakraBy vartha chakraಫೆಬ್ರವರಿ 7, 2023Updated:ಮಾರ್ಚ್ 20, 20233 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು:

    ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಅಖಿಲ ಭಾರತ ವೈದ್ಯಕೀಯ ಸಂಸ್ಥೆ (AIMS) ಯಲ್ಲಿ ಹುದ್ದೆ ಕೊಡಿಸಲು ಹಾಗೂ ರಾಷ್ಟ್ರೀಯ ವೈದ್ಯಕೀಯ ಮಂಡಳಿ (NMC)ಯ ಸದಸ್ಯತ್ವ ಕೊಡಿಸಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕಚೇರಿ ಲಂಚದ ಹಣ ಪಡೆದಿದೆ ಎಂದು JDS ಆರೋಪಿಸಿದೆ. ಈ ಕುರಿತಾದ ದಾಖಲೆ ಬಿಡುಗಡೆ ಮಾಡಿದ ವಿಧಾನ ಪರಿಷತ್ ನ ಜೆಡಿಎಸ್ ನಾಯಕ ಭೋಜೇಗೌಡ (Bhoje Gowda) ‘ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕಚೇರಿಯಲ್ಲಿ ಏನು ನಡೆಯುತ್ತಿದೆ ಎನ್ನುವುದು ರಾಜ್ಯಕ್ಕೆ ಗೊತ್ತಾಗಬೇಕಿದೆ. ತಾವು ಶುದ್ಧರು, ಪರಿಶುದ್ಧರು ಎಂದು ಬೊಬ್ಬಿರಿದು ಹೇಳುವ ಅವರ ಕರ್ಮಕಾಂಡ ಇಲ್ಲಿದೆ ನೋಡಿ’ ಎಂದು ಹೇಳಿದರು.

    ‘ಪ್ರಹ್ಲಾದ್ ಜೋಶಿಯವರು ನಮ್ಮ ಪಕ್ಷದ ಬಗ್ಗೆ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (H.D. Deve Gowda) ರ  ಕುಟುಂಬದ ಕುರಿತು ಲಘುವಾಗಿ ಮಾತಾಡಿದ್ದಾರೆ. ಆದರೆ, ತಮ್ಮ ಕಚೇರಿಯಲ್ಲಿ ನಡೆದಿರುವ ಈ ಕಳ್ಳ ವ್ಯವಹಾರದ ಬಗ್ಗೆ ಕೇಂದ್ರ ಸಚಿವರು ಏನು ಹೇಳುತ್ತಾರೆ’ ಎಂದು ಅವರು ಪ್ರಶ್ನಿಸಿದರು. ‘ಪ್ರಹ್ಲಾದ್ ಜೋಶಿ ಅವರ ಕಚೇರಿಯಲ್ಲಿ ಕೇಂದ್ರದ ಸರಕಾರದ ಹುದ್ದೆಗಳನ್ನು ಕಾಸಿಗಾಗಿ ಬಿಕರಿಗಿಡಲಾಗಿದೆ. ಹಣವನ್ನು ಎರಡು ಬಾರಿ ಬ್ಯಾಂಕ್ ಖಾತೆಗೆ ಹಾಕಿಸಿಕೊಳ್ಳಲಾಗಿದೆ’ ಎಂದು ಆರೋಪಿಸಿದರು.

    ಬ್ಯಾಂಕ್ ಖಾತೆಯ ವಿವರಗಳನ್ನು ಹಾಗೂ ಅಂದಿನ ಕೇಂದ್ರದ ಆರೋಗ್ಯ ಸಚಿವ ಡಾ.ಹರ್ಷವರ್ಧನ್ (Dr. Harsh Vardhan) ಅವರು ಪ್ರಹ್ಲಾದ್ ಜೋಶಿ ಅವರಿಗೆ ಬರೆದಿದ್ದ ಪತ್ರವೊಂದನ್ನು ಕೂಡ ಬಿಡುಗಡೆ ಮಾಡಿದರು. ‘ಕೇಂದ್ರದ ಆರೋಗ್ಯ ಸಚಿವರು ಮಾಡಿಕೊಟ್ಟ ಕೆಲಸಕ್ಕೆ ಪ್ರತಿಯಾಗಿ ಅವರ ಸಂಪುಟ ಸಹೋದ್ಯೋಗಿ ಆಗಿದ್ದ  ಪ್ರಹ್ಲಾದ್ ಜೋಶಿ ಅವರ ಕಚೇರಿಗೆ ಹಣ ತಲುಪಿಸಲಾಗಿದೆ’ ಎಂದು ದೂರಿದರು.

    ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕು ಎಂದು ಒತ್ತಾಯ ಮಾಡಿದ ಅವರು, ‘ಈ ಹಣವನ್ನು ಯಾರು ಯಾರಿಗೆ ಕೊಟ್ಟಿದ್ದಾರೆ, ಕಾಸಿಗಾಗಿ ಹುದ್ದೆ ಮಾರಾಟ ಮಾಡಿಕೊಂಡ ಈ ಬಹುಕೋಟಿ ಹಗರಣದ ನಿಜವಾದ ಕಿಂಗ್ ಪಿನ್ ಯಾರು? ಇದರಲ್ಲಿ ಪ್ರಹ್ಲಾದ್ ಜೋಶಿ ಅವರ ಪಾತ್ರ ಏನು ಎಂಬುದು ತನಿಖೆಯಿಂದ ಹೊರಬರಬೇಕಿದೆ’ ಎಂದು ಆಗ್ರಹಿಸಿದರು.

    ‘ಈ ವ್ಯವಹಾರದಲ್ಲಿ ಒಟ್ಟು ಎರಡೂವರೆ ಕೋಟಿ ರೂಪಾಯಿ ಹಣ ಸಂದಾಯ ಆಗಿದೆ. ಈ ಹಣವನ್ನು ಯಾರಿಗೋಸ್ಕರ, ಯಾರು, ಯಾರಿಂದ ಹಣ ತೆಗೆದುಕೊಳ್ಳಲಾಗಿದೆ ಎಂಬುದರ ಬಗ್ಗೆ ಪ್ರಹ್ಲಾದ್ ಜೋಶಿ ಉತ್ತರ ಕೊಡಬೇಕಿದೆ’ ಎಂದರು. ‘ನ್ಯಾಷನಲ್ ಮೆಡಿಕಲ್ ಕೌನ್ಸಿಲ್ (NMC) ನಲ್ಲಿ ಮೆಂಬರ್ ಮಾಡ್ತೀವಿ ಅಂತ ಹಣ ಪಡೆದಿದ್ದಾರೆ. ಹಾಗೆಯೇ, ಏಮ್ಸ್ ಡೈರಕ್ಟರ್ ಮಾಡ್ತೀನಿ ಅಂತ ಹಣ ಪಡೆಯಲಾಗಿದೆ. ಅಂದಿನ ಕೇಂದ್ರದ ಆರೋಗ್ಯ ಸಚಿವರು ಪ್ರಹ್ಲಾದ್ ಜೋಶಿ ಅವರಿಗೆ ಬರೆದಿರುವ ಪತ್ರಕ್ಕೂ ಹಾಗೂ ಈ ಹಣ ಸಂದಾಯಕ್ಕೂ ಇರುವ ಲಿಂಕ್ ಬಗ್ಗೆ ತನಿಖೆ ನಡೆಯಬೇಕು ಎಂದು ಅವರು ಆಗ್ರಹಪಡಿಸಿದರು.

    ‘ಇದೇ ಪ್ರಕರಣದ ಬಗ್ಗೆ ಇನ್ನೂ ಹಲವಾರು ದಾಖಲೆಗಳು ಇವೆ. ಈ ದಾಖಲೆಗಳು ಕೇವಲ ಸ್ಯಾಂಪಲ್ ಮಾತ್ರ. ಇನ್ನೂ ಸ್ವಲ್ಪ ದಿನದಲ್ಲೇ ಮತ್ತಷ್ಟು ದಾಖಲೆಗಳನ್ನು ಬಿಡುಗಡೆ ಮಾಡ್ತೀವಿ’ ಎಂದು ಅವರು ತಿಳಿಸಿದರು. ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (C M Ibrahim), ವಿಧಾನ ಪರಿಷತ್ ಸದಸ್ಯ ಹೆಚ್.ಎಂ.ರಮೇಶ್ ಗೌಡ (H. M. Ramesh Gowda) ಈ ಸಂದರ್ಭದಲ್ಲಿ ಇದ್ದರು.

    #JDS BJP C M Ibrahim crime Dr. Harsh Vardhan Government H. M. Ramesh Gowda H.D. Deve Gowda JDS m News NMC Politics Pralhad joshi ಅಪರಾಧ ಸುದ್ದಿ ಆರೋಗ್ಯ ಲಂಚ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous ArticleATM ಗೆ ಹಾಕುವ‌ ಹಣದೊಂದಿಗೆ ಪರಾರಿ
    Next Article ಮತದಾರರಿಗೆ TV ಹಂಚಿದ ಶಾಸಕ
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    ಡಿಸೆಂಬರ್ 9, 2025

    ಮರಣದ ಕಾರಣ ಹೇಳುವುದು ಕಡ್ಡಾಯ

    ಡಿಸೆಂಬರ್ 9, 2025

    3 ಪ್ರತಿಕ್ರಿಯೆಗಳು

    1. fen daison_pmOt on ಡಿಸೆಂಬರ್ 12, 2025 5:37 ಅಪರಾಹ್ನ

      официальный сайт дайсон стайлер для волос купить цена с насадками http://www.fen-d-3.ru .

      Reply
    2. kypit kyrsovyu_poOn on ಡಿಸೆಂಬರ್ 12, 2025 5:49 ಅಪರಾಹ್ನ

      выполнение курсовых https://kupit-kursovuyu-21.ru .

      Reply
    3. kypit kyrsovyu_qjOl on ಡಿಸೆಂಬರ್ 12, 2025 5:57 ಅಪರಾಹ್ನ

      решение курсовых работ на заказ kupit-kursovuyu-23.ru .

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • go88 ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • fen daison_glOt ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • kypit kyrsovyu_wyPi ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಡಿಸೆಂಬರ್ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe