ಬೆಂಗಳೂರು,ಮೇ.6-ಕೆಂಪೇಗೌಡನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಆರೋಪಿಗಳ ಪರವಾಗಿ ವರದಿ ಸಲ್ಲಿಸಲು 1 ಲಕ್ಷ ಲಂಚ ಪಡೆಯುತ್ತಿದ್ದ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಬ್ ಇನ್ಸ್ಪೆಕ್ಟರ್ ರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಆವಲಹಳ್ಳಿಯ ಕೇಶವಮೂರ್ತಿ ವಿರುದ್ಧ ದಾಖಲಾಗಿದ್ದ ಪ್ರಕರಣವೊಂದರಲ್ಲಿ, ಅವರ ಹೆಸರನ್ನು ಕೈಬಿಡಲು ಇನ್ಸ್ಪೆಕ್ಟರ್ ಶಿವಾಜಿ ರಾವ್ ಮತ್ತು ಸಬ್ ಇನ್ಸ್ಪೆಕ್ಟರ್ ಶಿವಾನಂದ ಜಿ. ಅವರು 6 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಕೇಶವಮೂರ್ತಿ ಅವರು ಲೋಕಾಯಕ್ತ ಪೊಲೀಸರಿಗೆ ದೂರು ನೀಡಿದ್ದರು.
ಲೋಕಾಯುಕ್ತ ಡಿವೈಎಸ್ಪಿ ಗಿರೀಶ್ ಅವರ ಮಾರ್ಗದರ್ಶನದಂತೆ ಕಾರ್ಯಾಚರಣೆ ರೂಪಿಸಲಾಗಿತ್ತು. ಲೋಕಾಯುಕ್ತ ಪೊಲೀಸರ ಸೂಚನೆಯಂತೆ ಕೇಶವಮೂರ್ತಿ ಅವರು ಕೆಂಪೇಗೌಡ ನಗರ ಪೊಲೀಸ್ ಠಾಣೆಯ ಬಳಿಯಲ್ಲೇ ಪಿಐ ಮತ್ತು ಪಿಎಸ್ಐಗೆ 1 ಲಕ್ಷ ನೀಡಿದ್ದರು.
ಈ ವೇಳೆಯೇ ದಾಳಿ ನಡೆಸಿ, ಇಬ್ಬರನ್ನೂ ಬಂಧಿಸಿದರು.1 ಲಕ್ಷ ವಶಕ್ಕೆ ಪಡೆದುಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ.
Previous Articleಸುಹಾಸ್ ಶೆಟ್ಟಿ ಹತ್ಯೆಗೆ ಪೊಲೀಸ್ ನಂಟಿದೆಯಾ.?
Next Article ಜನಾರ್ದನ ರೆಡ್ಡಿ ಮತ್ತೆ ಜೈಲು ಪಾಲು

2 ಪ್ರತಿಕ್ರಿಯೆಗಳು
mgm grand online betting online casino betmgm play betmgm login
Unlock doors to premium content and exclusive clubs. crowns coins provides tiered VIP levels for escalating perks. Climb the ranks and enjoy luxury!