Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲಿಂಗಾಯತರ ಶಕ್ತಿ ಪ್ರದರ್ಶನ
    ಸುದ್ದಿ

    ಲಿಂಗಾಯತರ ಶಕ್ತಿ ಪ್ರದರ್ಶನ

    vartha chakraBy vartha chakraಆಗಷ್ಟ್ 22, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಆ.22:
    ಸೆಪ್ಟೆಂಬರ್ 20ರಿಂದ ಆರಂಭವಾಗಲಿರುವ‌ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ವೀರಶೈವ- ಲಿಂಗಾಯತ ಸಮಾಜದ ಹಿತದೃಷ್ಟಿಯಿಂದ ಒಗ್ಗಟ್ಟು ಕಾಪಾಡಲು ಸಮುದಾಯದ ಮುಖಂಡರು ನಿರ್ಧರಿಸಿದ್ದಾರೆ
    ಗಣತಿ ವೇಳೆ ಸಮುದಾಯದ ನೈಜ ಸಂಖ್ಯೆ ತಿಳಿಯುವ ನಿಟ್ಟಿನಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧವಾಗಿರಲು ತೀರ್ಮಾನಿಸಲಾಗಿದೆ.
    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ವಯೋಸಹಜ ಅನಾರೋಗ್ಯದ ಕಾರಣ ಶಾಮನೂರು ಶಿವಶಂಕರಪ್ಪ ಅವರ ಅನುಪಸ್ಥಿತಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು ಎಂದು ಹೇಳಿದರು
    ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುವ ಸಮೀಕ್ಷೆಯಲ್ಲಿ ಸಮಾಜದ ಬಾಂಧವರು ಧರ್ಮ, ಜಾತಿಯ ಕಾಲಂನಲ್ಲಿ ಏನೆಂದು ಬರಸಬೇಕು ಎನ್ನುವ ಬಗ್ಗೆ ಚರ್ಚಿಸಲಾಯಿತು ಎಂದರು.
    ಸಮಾಜದ ಎಲ್ಲರೂ ವೀರಶೈವ ಅಥವಾ ಲಿಂಗಾಯತ ಎಂದು ನಮೂದಿಸಲು ಮನವಿ ಮಾಡುವ ನಿಟ್ಟಿನಲ್ಲಿ ಜನಾಭಿಪ್ರಾಯ ಮೂಡಿಸಲು ಉನ್ನತಮಟ್ಟದ ಸಮಿತಿ ರಚಿಸಿ, ಮಠಾಧಿಪತಿಗಳೊಂದಿಗೆ ಚರ್ಚಿಸಿ ಕಾರ್ಯರೂಪಕ್ಕೆ ತರಲು ಸಭೆ ತೀರ್ಮಾನಿಸಿದೆ ಎಂದು ತಿಳಿಸಿದರು.
    ಇದು ರಾಜಕೀಯ ಸಭೆಯಲ್ಲ, ಸಮಾಜದ ಜನರ ಹಿತ ಕಾಯುವ ಸಂಕಲ್ಪದೊಂದಿಗೆ ಎಲ್ಲ ಪಕ್ಷಗಳ ಲಿಂಗಾಯತ, ವೀರಶೈವ ಶಾಸಕರು ಸೇರಿ ನಡೆಸಿದ ಸಭೆಯಾಗಿದ್ದು, ಇಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲಾಯಿತು ಎಂದು ಸ್ಪಷ್ಟಪಡಿಸಿದರು.
    ಮುಂಬರುವ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆಯಲ್ಲಿ ವೀರಶೈವ ಲಿಂಗಾಯತರ ನೈಜ ಸಂಖ್ಯೆ ಹೊರಹೊಮ್ಮುವಂತೆ ಮಾಡುವುದೇ ಸಭೆಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಜನಪ್ರತಿನಿಧಿಗಳು, ಸಮಾಜದ ಮಠಾಧಿಪತಿಗಳು, ಹರ, ಚರ ಗುರು ಮೂರ್ತಿಗಳ ಸಹಯೋಗದೊಂದಿಗೆ ಸಮಾಜದ ಜನರಲ್ಲಿ ಜಾಗೃತಿ ಮೂಡಿಸುವ ಬಗ್ಗೆ ಪಕ್ಷಾತೀತವಾಗಿ ಚರ್ಚಿಸಲಾಯಿತು ಎಂದರು.
    ವೀರಶೈವ ಲಿಂಗಾಯತ ಸಮುದಾಯ ಮೊದಲಿನಿಂದಲೂ ಸರ್ವರಿಗೂ ಲೇಸು ಬಯಸುವ ಸಮುದಾಯವಾಗಿದೆ. ಸಮ ಸಮಾಜದ ಕಲ್ಪನೆ ಕೊಟ್ಟಿದ್ದೇ ನಮ್ಮ ಸಮುದಾಯ. ಯಾವುದೇ ಜಾತಿಯ ಜನರ ಅರ್ಹ ಹಕ್ಕನ್ನು ಕಸಿದುಕೊಳ್ಳುವ ಉದ್ದೇಶ ನಮಿಗಿಲ್ಲ. ಆದರೆ ನಮ್ಮ ಸಮಾಜಕ್ಕೂ ಅನ್ಯಾಯವಾಗದಂತೆ ಸಮಾಜದ ಇಂದಿನ ಸ್ಥಿತಿ-ಗತಿ ಮತ್ತು ಸಂಖ್ಯೆಯನ್ನು ನಿಖರವಾಗಿ ಪಡೆಯುವುದಾಗಿದೆ ಎಂದರು.
    ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯಾಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಸಭೆಯಲ್ಲಿ ಸಲಹೆ ನೀಡಿ, ಒಳ ಪಂಗಡಗಳ ಹೆಸರನ್ನಷ್ಟೇ ಬರಸದೆ ಎಲ್ಲರೂ ಧರ್ಮದ ಕಾಲಂನಲ್ಲಿ ಲಿಂಗಾಯತ ಅಥವಾ ವೀರಶೈವ ಎಂದು, ಉಪ ಜಾತಿಯ ಕಾಲಂನಲ್ಲಿ ಒಳ ಪಂಗಡದ ಹೆಸರು ಬರೆಸುವಂತೆ ಅರಿವು ಮೂಡಿಸಬೇಕೆಂದರು.
    ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಜಾತಿಯ ಹೆಸರು ಬರೆಸುವ ವಿಚಾರದಲ್ಲಿ ಗೊಂದಲ ಉಂಟಾಗಿದ್ದು, ಇದರ ನಿವಾರಣೆಗೆ ಸಮಾಜದ ಎಲ್ಲ ಬಾಂಧವರಿಗೆ ಸರಿಯಾದ ಮಾಹಿತಿ ರವಾನಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಮಹಾಸಭಾದ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ಪ್ರತಿಪಾದಿಸಿದರು.
    ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮುಂದಿನ ತಿಂಗಳಿನಿಂದಲೇ ಸಮೀಕ್ಷೆ ಆರಂಭವಾಗಲಿದ್ದು, ಸಮಯಾವಕಾಶ ಕಡಿಮೆ ಇರುವ ಹಿನ್ನೆಲೆಯಲ್ಲಿ ತತ್ ಕ್ಷಣವೇ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.
    ಸಂಸತ್ ಸದಸ್ಯ ಪ್ರಭಾಕರ ಕೋರೆ ನಮ್ಮ ಸಮಾಜದ ವಿವಿಧ ಸಂಘಟನೆಗಳಿದ್ದು, ಅದರ ಪದಾಧಿಕಾರಿಗಳು ಮತ್ತು ಸದಸ್ಯರಿಗೆ ಮೊದಲಿಗೆ ಈ ಬಗ್ಗೆ ಮಾಹಿತಿ ನೀಡಿ ಇದನ್ನು ಸಮಾಜದ ಎಲ್ಲರಿಗೂ ತಲುಪಿಸುವ ಮೂಲಕ ಸಮೀಕ್ಷೆಯಲ್ಲಿ ಲಿಂಗಾಯತ ಅಥವಾ ವೀರಶೈವ ಎಂದು ಬರೆಸಲು ಮನವಿ ಮಾಡಬೇಕೆಂದರು.
    ಸಚಿವರುಗಳಾದ ದರ್ಶನಾಪೂರ, ಶರಣಪ್ರಕಾಶ್ ಪಾಟೀಲ್, ಎಸ್.ಎಸ್. ಮಲ್ಲಿಕಾರ್ಜುನ್, ಶಿವಾನಂದ ಪಾಟೀಲ್, ಶಾಸಕರುಗಳಾದ ಬಿ.ಆರ್. ಪಾಟೀಲ್, ಬಸವರಾಜ ರಾಯರೆಡ್ಡಿ, ಎಂ.ವೈ ಪಾಟೀಲ್, , ಶರಣು ಸಲಗಾರ್ ಸೇರಿದಂತೆ 50ಕ್ಕೂ ಹೆಚ್ಚು ಶಾಸಕರು ಹಾಗೂ ಸಭಾದ ಶಂಕರ್ ಬಿದರಿ ಮತ್ತು ನಿವೃತ್ತ ನ್ಯಾಯಮೂರ್ತಿ ಸುಭಾಷ್ ಆಡಿ ಮತ್ತಿತರರು ಪಾಲ್ಗೊಂಡಿದ್ದರು

    Verbattle
    Verbattle
    Verbattle
    ಧರ್ಮ ನ್ಯಾಯ ಬಿಜೆಪಿ ಬೆಂಗಳೂರು ರಾಜಕೀಯ ಸಂಸತ್ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleನಾನ್ ಅವನಲ್ಲ.. ನಾನ್ ಅವನಲ್ಲ.
    Next Article ಧರ್ಮಸ್ಥಳಕ್ಕೆ ಬುರುಡೆ ಬಂದಿದ್ದು ಎಲ್ಲಿಂದ ಗೊತ್ತಾ ?
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 77_judi_pmmn ರಲ್ಲಿ ಗಂಗೆಯಲ್ಲಿ ಮೆಡಲ್ ವಿಸರ್ಜನೆ
    • Williamlop ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Georgemen ರಲ್ಲಿ ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.