Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಾಲ್ಮೀಕಿ ನಿಗಮದ ಹಗರಣದಲ್ಲಿ ಪೂರ್ಣ ಸರಕಾರವೇ ಭಾಗಿ: ಆರ್.ಅಶೋಕ್
    Trending

    ವಾಲ್ಮೀಕಿ ನಿಗಮದ ಹಗರಣದಲ್ಲಿ ಪೂರ್ಣ ಸರಕಾರವೇ ಭಾಗಿ: ಆರ್.ಅಶೋಕ್

    vartha chakraBy vartha chakraಮೇ 31, 202426 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    30-5-2024, ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಇಡೀ ಸಚಿವಸಂಪುಟದವರೇ ಭಾಗಿಯಾಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆರೋಪಿಸಿದರು.

    ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊನ್ನೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಚುನಾವಣಾ ಭಾಷಣದಲ್ಲಿ ಮಾತನಾಡಿ, ತಮ್ಮ ಸರಕಾರ ಬಂದ ಬಳಿಕ ಮಹಿಳೆಯರ ಬ್ಯಾಂಕ್ ಖಾತೆಗೆ ಟಕಾ ಟಕ್ ಟಕಾ ಟಕ್ ಹಣ ಹಾಕುವುದಾಗಿ ಹೇಳಿದ್ದಾರೆ. ಅದನ್ನು ಅನುಸರಿಸಿದ ಕಾಂಗ್ರೆಸ್ ಪಕ್ಷದ ಎಲ್ಲ ಸಚಿವರು, ಟಕ್ ಟಕಾ ಟಕ್ ಎಂಬಂತೆ ಹಣ ವರ್ಗಾವಣೆ ಮಾಡಿದ್ದಾರೆ ಎಂದು ತಿಳಿಸಿದರು.

    4ರಂದು 25 ಕೋಟಿ ಟಕಾ ಟಕ್ ವರ್ಗಾವಣೆ, 6ರಂದು 25 ಕೋಟಿ ಟಕಾ ಟಕ್ ವರ್ಗಾವಣೆ, 21ರಂದು 44 ಕೋಟಿ ಟಕಾ ಟಕ್ ವರ್ಗಾವಣೆ, ರಾಜ್ಯ ಖಜಾನೆಯಿಂದ 43 ಕೋಟಿ ವರ್ಗಾವಣೆ ಟಕಾ ಟಕ್ ಎಂಬಂತೆ ನಡೆದಿದೆ. ಮತ್ತೆ 21ರಂದು 50 ಕೋಟಿ ರೂ. ಟಕಾ ಟಕ್ ಟ್ರಾನ್ಸ್‍ಫರ್ ಆಗಿದೆ. ಕಾಂಗ್ರೆಸ್ಸಿನವರು ಇಷ್ಟು ಮೊತ್ತವನ್ನು ಅವರ ಲೂಟಿ ಖಾತೆಗೆ ಹಾಕಿದ್ದಾರೆ ಎಂದು ಆಕ್ಷೇಪಿಸಿದರು. ಇದೊಂದು ಬ್ರಹ್ಮಾಂಡ ಭ್ರಷ್ಟಾಚಾರ ಎಂದು ಟೀಕಿಸಿದರು.

    187 ಕೋಟಿ ನುಂಗಲು ಒಬ್ಬ ಮಂತ್ರಿಯಿಂದ ಸಾಧ್ಯವಿಲ್ಲ. ಇದು ಸಣ್ಣ ಮೊತ್ತವೇನಲ್ಲ. ಅವರ ಜೀವನ, ಅವರು, ಮಕ್ಕಳು, ಮೊಮ್ಮಕ್ಕಳು, ಮರಿ ಮಕ್ಕಳು ಸಂತೃಪ್ತಿಯಿಂದ ಬದುಕುವಷ್ಟು ದುಡ್ಡು ಇದು ಎಂದು ನುಡಿದರು.

    25 ಸಾವಿರ ಕೋಟಿ ದಲಿತರ ಹಣ ಮಾಯ..

    ರಾಹುಲ್ ಗಾಂಧಿಯವರು ಹೇಳಿದಂತೆ 25 ಸಾವಿರ ಕೋಟಿ ದಲಿತರ ಹಣ ಮಾಯವಾಗಿದೆ. ಎಲ್ಲಿಗೆ ಹೋಯಿತು? ಯಾರಿಗೆ ಹೋಯಿತೆಂದು ಗೊತ್ತಿಲ್ಲ. ಯಾವುದಕ್ಕೆ ಬಳಸಿದರೆಂದೂ ಗೊತ್ತಿಲ್ಲ. ಇವತ್ತು ಅಧಿಕಾರಿಗಳು ಟಕಾ ಟಕ್ ಎಂದು ಸತ್ತು ಹೋಗುತ್ತಿದ್ದಾರೆ. ಬಿತ್ತನೆ ಬೀಜದ ಬೆಲೆ ಇವತ್ತು ಟಕಾ ಟಕ್ ಎಂದು ಶೇ 70 ರಷ್ಟು ಏರಿಕೆ ಕಂಡಿದೆ ಎಂದು ಆರ್. ಅಶೋಕ್ ಅವರು ದೂರಿದರು.

    ಕಾಂಗ್ರೆಸ್ಸಿನವರಿಗೆ ರಾಮ ಕಂಡರೆ ಆಗುವುದಿಲ್ಲ. ವಾಲ್ಮೀಕಿ ಮಹರ್ಷಿಯನ್ನು ಕಂಡರೆ ಆಗೋಲ್ಲ ಎಂದು ಈಗ ಗೊತ್ತಾಗಿದೆ. ಆ ನಿಗಮದ ಹೆಸರಿನಲ್ಲಿ ಇದ್ದ 187 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಕಾಂಗ್ರೆಸ್ಸಿನ ಒಂದು ವರ್ಷದ ಸಾಧನೆ ಎಂದು ಟೀಕಿಸಿದರು.

    ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ಸಿರೋಯಾ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ. ರಾಮಮೂರ್ತಿ, ಮಾಜಿ ಮೇಯರ್ ಪದ್ಮನಾಭ ರೆಡ್ಡಿ ಅವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

    Bangalore Government Karnataka News Politics ಕಾಂಗ್ರೆಸ್ ಕಾನೂನು ರಾಹುಲ್ ಗಾಂಧಿ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಜ್ವಲ್ ರೇವಣ್ಣ ಬಂಧನ ಖಾಯಂ.
    Next Article ಬಿಜೆಪಿ ಎಸ್.ಟಿ. ಮೋರ್ಚಾದಿಂದ ಸಿಎಂ ಮನೆಗೆ ಮುತ್ತಿಗೆ
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JosephNoume ರಲ್ಲಿ ವಿಶ್ವ ಮಧುಮೇಹ ದಿನಾಚರಣೆ, ಸಾರ್ವಜನಿಕರಿಗೆ ಅರಿವಿನ ಜಾತ
    • video sex việt nam không che ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • overseas pharmacies ರಲ್ಲಿ ಗಾಯಾಳು ಡಿಸಿಪಿ ಸೈದುಲ್ ಮಾಡಿದ ಕೆಲಸ ಗೊತ್ತಾ ?
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe