Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿದೇಶ ವ್ಯಾಸಂಗಕ್ಕೆ ಸರ್ಕಾರದ ಹಸ್ತ
    ಸುದ್ದಿ

    ವಿದೇಶ ವ್ಯಾಸಂಗಕ್ಕೆ ಸರ್ಕಾರದ ಹಸ್ತ

    vartha chakraBy vartha chakraಆಗಷ್ಟ್ 13, 2025Updated:ಆಗಷ್ಟ್ 13, 2025117 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.13:
    ವಿದೇಶ ವ್ಯಾಸಂಗ ಕೇವಲ ಶ್ರೀಮಂತರಿಗೆ ಮಾತ್ರವಲ್ಲ ಈಗ ಎಲ್ಲರಿಗೂ ಕೈಗೆಟುಕಲಿದೆ. ವಿದೇಶದಲ್ಲಿ ಅಧ್ಯಯನ ಮಾಡಬೇಕೆಂಬ ಕನಸು ಕಂಡಿರುವವರಿಗೆ ಅದು ನನಸಾಗುವ ಕಾಲ ಬಂದಿದೆ.
    ಇದೆಲ್ಲಾ ಸಾಧ್ಯವಾಗುತ್ತಿರುವುದು ಕರ್ನಾಟಕ‌ ಸರ್ಕಾರದ ಹೊಸ ಯೋಜನೆಯಿಂದ. ಆರ್ಥಿಕವಾಗಿ ದುರ್ಬಲವಾಗಿರುವ, ಮಧ್ಯಮವರ್ಗದ ಹಿನ್ನೆಲೆಯ ವಿದ್ಯಾರ್ಥಿಗಳು ಸಹ ಈಗ ವಿದೇಶದಲ್ಲಿ ಉನ್ನತ ಶಿಕ್ಷಣವನ್ನು ಯಾವುದೇ ತೊಂದರೆಯಿಲ್ಲದೇ ಪಡೆಯಬಹುದಾಗಿದೆ.
    ಕೌಶಲ್ಯ ಅಭಿವೃದ್ಧಿ ಇಲಾಖೆ ಅಡಿಯ ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ಆಗಸ್ಟ್ 17 ರ ಭಾನುವಾರ ಹೋಟೆಲ್ ಲಲಿತ್ ಅಶೋಕ್‌ನಲ್ಲಿ ಅಂತಾರಾಷ್ಟ್ರೀಯ ವಿದೇಶದಲ್ಲಿ ಅಧ್ಯಯನ ಮೇಳ – 2025 ಅನ್ನು ಆಯೋಜಿಸಿದೆ.
    ಈ ವಿಶೇಷ ಕಾರ್ಯಕ್ರಮದಲ್ಲಿ 50 ಕ್ಕೂ ಹೆಚ್ಚು ಪ್ರಮುಖ ಜಾಗತಿಕ ವಿಶ್ವವಿದ್ಯಾಲಯಗಳು ಭಾಗವಹಿಸುವ ನಿರೀಕ್ಷೆ ಇದೆ. ಈ ಸಂಸ್ಥೆಗಳು ವಿಶ್ವದ ಟಾಪ್ 500 ರಲ್ಲಿ ಸ್ಥಾನ ಪಡೆದಿವೆ.
    ಈ ಕುರಿತು ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್‌. ಪಾಟೀಲ್ ಹೆಚ್ಚಿನ ಮಾಹಿತಿ ನೀಡಿದರು.
    ಸಮಾಜದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಅಧ್ಯಯನ ಮಾಡುವ ಅವಕಾಶವನ್ನು ಒದಗಿಸಲಾಗುವುದು. ಇದೇ ಮೊದಲ ಬಾರಿಗೆ ಈ ರೀತಿಯ ಯೋಜನೆಯನ್ನು ದೇಶದಲ್ಲಿ ಜಾರಿಗೆ ತರಲಾಗುತ್ತಿದೆ” ಎಂದು ತಿಳಿಸಿದರು.
    ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಇದು “ಜಾಗತಿಕ ಶಿಕ್ಷಣದ ಹೆಬ್ಬಾಗಿಲು” ಎಂದು ಸಚಿವರು ತಿಳಿಸಿದರು.
    ವಿದ್ಯಾರ್ಥಿಗಳು ವಿದೇಶದಲ್ಲಿ ವ್ಯಾಸಂಗ ಮಾಡಲು ಭಾರತದಿಂದ ತೆರಳಿದ ನಂತರ ಅವರಿಗೆ ಎಲ್ಲ ರೀತಿಯ ಬೆಂಬಲ ಒದಗಿಸುವುದು ನಮ್ಮ ಗುರಿಯಾಗಿದೆ. ಈ ಸರ್ಕಾರಿ ಬೆಂಬಲಿತ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಹೆಚ್ಚು ಆಪ್ತವಾಗಿರಲಿದೆ. ಶೈಕ್ಷಣಿಕ ಪ್ರಗತಿ ಮತ್ತು ಕಾನೂನು ನೆರವು ಎಲ್ಲವೂ ದೊರೆಯಲಿದೆ ಎಂದು ಸಚಿವರು ವಿವರಿಸಿದರು.
    ಈ ಎಕ್ಸ್‌ಪೋದಲ್ಲಿ ಹೆಚ್ಚು ವಿಶ್ವಾಸಾರ್ಹತೆ ಮತ್ತು ಪಾರದರ್ಶಕತೆ ನೀಡುತ್ತದೆ. ವಿಶ್ವವಿದ್ಯಾಲಯದ ಆಯ್ಕೆ, ಏಜೆನ್ಸಿ ಶುಲ್ಕವಿಲ್ಲದೆ ಉಚಿತ ಮಾರ್ಗದರ್ಶನವನ್ನು ನಾವು ನೀಡುತ್ತೇವೆ ಎಂದು ಡಾ. ಶರಣಪ್ರಕಾಶ್‌ ಪಾಟೀಲ್‌ ಸ್ಪಷ್ಟಪಡಿಸಿದರು.
    ಎಕ್ಸ್‌ಪೋದ ಪ್ರಮುಖ ಅಂಶಗಳು:
    ವಿಶ್ವವಿದ್ಯಾಲಯದ ಪ್ರತಿನಿಧಿಗಳೊಂದಿಗೆ ಒನ್-ಆನ್-ಒನ್ ಸೆಷನ್‌; ಸ್ಪಾಟ್ ವಿದ್ಯಾರ್ಥಿವೇತನಗಳು ಮತ್ತು ಅರ್ಹತಾ ಮೌಲ್ಯಮಾಪನಗಳು; ವೀಸಾ ಪ್ರಕ್ರಿಯೆ, ಹಣಕಾಸು ಯೋಜನೆ, ಆರೋಗ್ಯ ವಿಮೆ, ಭಾಷಾ ಪ್ರಾವೀಣ್ಯತೆ ಮತ್ತು ಇತರೆ ಮಾರ್ಗದರ್ಶನ.
    ಆಸ್ಟ್ರೇಲಿಯಾ, ಯುನೈಟೆಡ್‌ ಕಿಂಗ್‌ಡಮ್‌, ಅಮೆರಿಕ, ಐರ್ಲೆಂಡ್, ನ್ಯೂಜಿಲೆಂಡ್ ಮತ್ತು ಮಧ್ಯಪ್ರಾಚ್ಯ ಸೇರಿದಂತೆ ವಿವಿಧ ವಿಶ್ವವಿದ್ಯಾಲಯಗಳ ಪ್ರತಿನಿಧಿಗಳು ಇರಲಿದ್ದಾರೆ.
    ಎಕ್ಸ್‌ಪೋದಲ್ಲಿ ಭಾಗವಹಿಸಲು http://studyabroad.ksdckarnataka.com ನಲ್ಲಿ ನೋಂದಾಯಿಸಿಕೊಳ್ಳಬಹುದು

    Karnataka m road ಆರೋಗ್ಯ ಕರ್ನಾಟಕ ಕಾನೂನು ಬೆಂಗಳೂರು ವಿದ್ಯಾ ವಿದ್ಯಾರ್ಥಿ ಶಿಕ್ಷಣ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleರಾಜಣ್ಣ ಬೆಂಬಲಕ್ಕೆ ನಿಂತ ಶಾಸಕ
    Next Article ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಮತ್ತೇ ಜೈಲು !
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • online drugstore ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • DanielCix ರಲ್ಲಿ ಕಾಫಿ ಡೇ ಸಿದ್ದಾರ್ಥ ಸಾವಿನ ರಹಸ್ಯ ಬಯಲು.?
    • https://mellstroy-casino.io ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe