Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಾಂತಿ ಪೂಜೆಗೆ ಬಂದು ಕೋಟಿ ಲಪಟಾಯಿಸಿದ
    ಸುದ್ದಿ

    ಶಾಂತಿ ಪೂಜೆಗೆ ಬಂದು ಕೋಟಿ ಲಪಟಾಯಿಸಿದ

    vartha chakraBy vartha chakraಮಾರ್ಚ್ 17, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.17-ಮನೆಗೆ ಶಾಂತಿ ಪೂಜೆಗೆ ಬಂದ ವ್ಯಕ್ತಿಯೊಬ್ಬ ತಾನು ಚಿನ್ನದ ವ್ಯವಹಾರ ಮಾಡುವುದಾಗಿ ನಂಬಿಸಿ ಮನೆಯ ಯಜಮಾನಿಯಿಂದ 1 ಕೋಟಿ ರೂಗೂ ಅಧಿಕ ಹಣ ಪಡೆದು ವಂಚಿಸಿರುವ ಘಟನೆ ಕೆಆರ್ ಪುರಂನಲ್ಲಿ ನಡೆದಿದೆ.
    ಅಮರಾವತಿ ಎಂಬ ಗೃಹಿಣಿಗೆ ಚಿನ್ನದ ಬಿಸ್ಕೆಟ್‌ಗಳನ್ನು ತೋರಿಸಿ 1 ಕೋಟಿ ರೂಗೂ ಅಧಿಕ ಹಣ ಪಡೆದು ವಂಚಿಸಿದ ಆರೋಪದಡಿ ಗೋಪಾಲಕೃಷ್ಣ, ರಾಕೇಶ್ ರೆಡ್ಡಿ, ರೂಪಾ ಹಾಗೂ ಯಶವಂತ್ ಕುಮಾರ್ ಎಂಬವರ ವಿರುದ್ಧ ಸಿಸಿಬಿಯಲ್ಲಿ ಎಫ್ಐಆರ್ ದಾಖಲಾಗಿದೆ.
    ಕೆ.ಆರ್.ಪುರಂನ ಕಿತ್ತಗನೂರು ಮುಖ್ಯರಸ್ತೆಯ ಸಾಯಿ ಲೇಔಟ್‌ನ ನಿವಾಸಿ ಅಮರಾವತಿ ಹಣ ಕಳೆದುಕೊಂಡಿದ್ದಾರೆ.
    ಕಳೆದ ವರ್ಷ ಅಮರಾವತಿ ತಮ್ಮ ಮನೆಯಲ್ಲಿ ಶಾಂತಿ ಪೂಜೆಗಾಗಿ ಗೋಪಾಲಕೃಷ್ಣನನ್ನು ಕರೆಸಿದ್ದರು. ಪೂಜೆ ಮುಗಿದ ಎರಡು ದಿನಗಳ ಬಳಿಕ ರಾಕೇಶ್ ರೆಡ್ಡಿಯೊಂದಿಗೆ ಅಮರಾವತಿಯವರ ಮನೆಗೆ ಬಂದಿದ್ದ ಗೋಪಾಲಕೃಷ್ಣ, ”ನಮ್ಮ ಬಳಿ 300 ಕೋಟಿ ಅಮೆರಿಕನ್ ಡಾಲರ್ ಇದೆ. ಅದರಿಂದ ನಮಗೆ ಕೆ.ಜಿ ತೂಕದಲ್ಲಿ ಚಿನ್ನ ದೊರೆಯುತ್ತದೆ. ಪ್ರತಿ ಗ್ರಾಂ ಚಿನ್ನವನ್ನು 4 ಸಾವಿರ ರೂಪಾಯಿಗೆ ಮಾರಾಟ ಮಾಡುತ್ತೇವೆ” ಎಂದು ನಂಬಿಸಿದ್ದರು.
    ಅಮರಾವತಿ ಮತ್ತವರ ಮಗನ ಸಮ್ಮುಖದಲ್ಲಿಯೇ ಗೋಲ್ಡ್ ಬಿಸ್ಕೆಟ್‌ ಅನ್ನು ಜ್ಯುವೆಲರಿ ಅಂಗಡಿಗೆ ಮಾರಾಟ ಮಾಡಿ ಹಣ ಪಡೆಯುವ ಮೂಲಕ ನಂಬಿಕೆ ಗಳಿಸಿದ್ದರು. ಬಳಿಕ ಚಿನ್ನ ನೀಡುವುದಾಗಿ ಅಮರಾವತಿ ಮತ್ತು ಅವರ ಪರಿಚಿತರ ಕಡೆಯಿಂದ 1 ಕೋಟಿ ರೂಪಾಯಿಗೂ ಅಧಿಕ ಹಣ ಪಡೆದುಕೊಂಡಿದ್ದರು. ಹಣ ಪಡೆದ ಬಳಿಕವೂ ಚಿನ್ನ ನೀಡದಿದ್ದಾಗ ಪ್ರಶ್ನಿಸಿದ್ದು, ”ನಮ್ಮ ಚಿನ್ನ ಕಸ್ಟಮ್ಸ್ ಅಧಿಕಾರಿಗಳ ಬಳಿ ಸಿಲುಕಿ ಹಾಕಿಕೊಂಡಿದೆ” ಎಂದು ಸಬೂಬು ಹೇಳಿದ್ದರು.
    ಸಾಕಷ್ಟು ದಿನ ಕಳೆದರೂ ಚಿನ್ನವನ್ನೂ ನೀಡದೆ, ಹಣವನ್ನೂ ಕೊಡದೆ ವಂಚಿಸಿರುವ ಆರೋಪಿಗಳ ವಿರುದ್ಧ ಸದ್ಯ ಅಮರಾವತಿಯವರು ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ.

    ಚಿನ್ನ ಬೆಂಗಳೂರು ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನಲ್ಲಿ ಕಾವೇರಿ ಆರತಿ
    Next Article ದರೋಡೆ ಗ್ಯಾಂಗ್ ದಾವಣಗೆರೆಯಲ್ಲಿ
    vartha chakra
    • Website

    Related Posts

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    ಮೇ 29, 2025

    ವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    ಮೇ 29, 2025

    ಬಿಕೆ ಹರಿಪ್ರಸಾದ್ ಗೆ ಸಿಎಂ ಕೊಟ್ಟ ಜವಾಬ್ದಾರಿ ಏನು ಗೊತ್ತಾ ?

    ಮೇ 29, 2025

    1 ಟಿಪ್ಪಣಿ

    1. GAJAH77 on ಮೇ 13, 2025 11:16 ಅಪರಾಹ್ನ

      Nice post. I discover some thing tougher on different blogs everyday. Most commonly it is stimulating to see content from other writers and exercise a specific thing from their site. I’d prefer to use some while using content in my small blog whether you don’t mind. Natually I’ll offer you a link with your web weblog. Appreciate your sharing. Try to Visit My Web Site :GAJAH77

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    ವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    ಬಿಕೆ ಹರಿಪ್ರಸಾದ್ ಗೆ ಸಿಎಂ ಕೊಟ್ಟ ಜವಾಬ್ದಾರಿ ಏನು ಗೊತ್ತಾ ?

    ಕೋಮು ಸಂಘರ್ಷ ತಡೆ ಕಾರ್ಯಪಡೆ ರಚನೆ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • qdfqjrpcs ರಲ್ಲಿ ಗೋಡ್ಸೆ ಭಾವಚಿತ್ರ ಹಿಡಿದು ಕುಣಿದವರಿಗೆ ಸಂಕಷ್ಟ | Godse
    • TerrellBig ರಲ್ಲಿ ಸೌತೆ ಕಾಯಿ ತಿನ್ನಿಸಿದ್ದಕ್ಕೆ ಹೀಗಾ ಮಾಡೋದು
    • Williamovard ರಲ್ಲಿ ಸೌತೆ ಕಾಯಿ ತಿನ್ನಿಸಿದ್ದಕ್ಕೆ ಹೀಗಾ ಮಾಡೋದು
    Latest Kannada News

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    ಮೇ 29, 2025

    ವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    ಮೇ 29, 2025

    ಬಿಕೆ ಹರಿಪ್ರಸಾದ್ ಗೆ ಸಿಎಂ ಕೊಟ್ಟ ಜವಾಬ್ದಾರಿ ಏನು ಗೊತ್ತಾ ?

    ಮೇ 29, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಎಂಎಲ್ ಸಿಗಳಿಗೆ ಮಂತ್ರಿಗಿರಿ ಸಿಗುತ್ತಾ ! #siddramaiah #cm #karnataka #mlc #viralvideo #latestnews #reel
    Subscribe