Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು..
    ಸುದ್ದಿ

    ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು..

    vartha chakraBy vartha chakraಮೇ 25, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ25- ಕಲ್ಯಾಣ ಕರ್ನಾಟಕದ 8 ಜಿಲ್ಲೆಗಳ ಶಾಲೆಗಳ ಹಾಜರಾತಿ ಹೆಚ್ಚಳ ಮತ್ತು ಮಕ್ಕಳಲ್ಲಿ ಕಾಣಿಸಿಕೊಂಡ ಅಪೌಷ್ಟಿಕತೆಯನ್ನು ನಿವಾರಿಸಲು ಜಾರಿಗೊಳಿಸಿದ್ದ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೇಯಿಸಿದ ಮೊಟ್ಟೆ ಮತ್ತು ಬಾಳೆಹಣ್ಣು ವಿತರಣೆ ಮತ್ತೆ ಆರಂಭವಾಗಲಿದೆ.
    ಕೋವಿಡ್ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ಸ್ಥಗಿತಗೊಂಡ ಈ ಯೋಜನೆ ಇದೀಗ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರುತ್ತಿದೆ.
    ಜೂನ್ 1ರಿಂದ ಸರ್ಕಾರಿ ಹಾಗು ಅನುದಾನಿತ ಶಾಲೆಗಳಲ್ಲಿ ಈ ಯೋಜನೆಯನ್ನು ಆರಂಭಿಸಬೇಕು. ಇದಕ್ಕಾಗಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ
    ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಯಾದಗಿರಿ, ಕಲಬುರಗಿ, ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಬೀದರ್ ಮತ್ತು ವಿಜಯಪುರ ಜಿಲ್ಲೆಗಳ 1ರಿಂದ 8ನೇ ತರಗತಿಯ ಶಾಲಾ ಮಕ್ಕಳಿಗೆ ಮೊಟ್ಟೆ ಮತ್ತು ಬಾಳೆಹಣ್ಣು ನೀಡುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ( ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ಇಲ್ಲವೇ ಶೇಂಗಾ ಚಿಕ್ಕಿ) ವಿತರಣೆ ಮಾಡಬೇಕು.
    ಮೊಟ್ಟೆ ಅಥವ ಬಾಳೆಹಣ್ಣನ್ನು ಸಂರಕ್ಷಿಸಿಡಲು ಪ್ಲಾಸ್ಟಿಕ್ ಎಗ್ ಟ್ರೀ, ಫ್ರೂಟ್ ಟ್ರೀ, ಪ್ಲಾಸ್ಟಿಕ್ ಬಾಕ್ಸ್, ಡಬ್ಬಿಗಳನ್ನು ಖರೀದಿಸಬೇಕು. ಇಲ್ಲವೇ ದಾನಿಗಳಿಂದ ನೆರವು ಪಡೆದು ಹಾಳಾಗದಂತೆ ಸಂರಕ್ಷಿಸಬೇಕು ಎಂದು ಸೂಚಿಸಲಾಗಿದೆ.
    ಯಾವುದೇ ಕಾರಣಕ್ಕೂ ಕ್ಲಸ್ಟರ್/ಬ್ಲಾಕ್/ ಜಿಲ್ಲಾ ಹಂತದಲ್ಲಿ ಕೇಂದ್ರೀಕೃತ ವ್ಯವಸ್ಥೆಯಲ್ಲಿ ಖರೀದಿ ಪ್ರಕ್ರಿಯೆ ಮಾಡಬಾರದು. ಪ್ರತಿಯೊಂದು ಶಾಲೆಗಳು ಪ್ರತ್ಯೇಕವಾಗಿ ಆಯಾ ಶಾಲೆಯ ಖರೀದಿ ಸಮಿತಿಯ ಮಾರ್ಗದರ್ಶನದಲ್ಲಿ ನಿಯಮಗಳನ್ನು ಪಾಲಿಸಿ ಪಾರದರ್ಶಕವಾಗಿ ಖರೀದಿ ಮಾಡಬೇಕೆಂದು ಹೇಳಲಾಗಿದೆ. ತರಗತಿವಾರು ಮಕ್ಕಳ ಹಾಜರಾತಿ ಸಂಖ್ಯೆಗೆ ಅನುಗುಣವಾಗಿ ಮೊಟ್ಟೆ ಮತ್ತು ಬಾಳೆಹಣ್ಣುಗಳನ್ನು ಖರೀದಿ ಮಾಡಬೇಕು. ವಾರದಲ್ಲಿ ಸರಾಸರಿ ಹಾಜರಾತಿ ಸಂಖ್ಯೆಗೆ ಅನುಗುಣವಾಗಿ ಲೆಕ್ಕ ಮಾಡಿ ಖರೀದಿಸಬೇಕೆ ಹೊರತು, ದಾಖಲಾತಿಗೆ ಅನುಗುಣವಾಗಿ ದಾಖಲಿಸಬಾರದೆಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ.
    ಒಟ್ಟು 8 ಜಿಲ್ಲೆಗಳಲ್ಲಿರುವ 15,29,713 ವಿದ್ಯಾರ್ಥಿಗಳಿಗೆ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ ವಾರದಲ್ಲಿ ಎರಡು ಮೊಟ್ಟೆ ಇಲ್ಲವೇ ಬಾಳೆಹಣ್ಣು ಅಥವ ಶೇಂಗಾಚಿಕ್ಕಿಯನ್ನು ನೀಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸೂಚಿಸಿದ್ದಾರೆ.ಈ ಯೋಜನೆಗೆ ಕೇಂದ್ರ ಸರ್ಕಾರ ಶೇ.60 ಹಾಗೂ ರಾಜ್ಯ ಸರ್ಕಾರ 40ರ ಅನುಪಾತದಲ್ಲಿ ಅನುದಾನವನ್ನು ನೀಡಲಿದೆ.

    Verbattle
    Verbattle
    Verbattle
    Government school kids will get the banana and eggs
    Share. Facebook Twitter Pinterest LinkedIn Tumblr Email WhatsApp
    Previous Articleಬಾರಾಮುಲ್ಲಾದಲ್ಲಿ ಮೂವರು ಪಾಕ್‌ ಉಗ್ರರ ಹತ್ಯೆ
    Next Article ಸ್ಪೈಸ್‌ಜೆಟ್ ವಿಮಾನ ಸೇವೆಯಲ್ಲಿ ವ್ಯತ್ಯಯ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax ರಲ್ಲಿ Crypto ವಂಚಕ Arrest.
    • LinwoodGah ರಲ್ಲಿ ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    • Tracymix ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.