Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಾಲೆಗಳಿಗೆ ಕಿಡಿಗೇಡಿಗಳ ಸಂದೇಶ
    ಸುದ್ದಿ

    ಶಾಲೆಗಳಿಗೆ ಕಿಡಿಗೇಡಿಗಳ ಸಂದೇಶ

    vartha chakraBy vartha chakraಜುಲೈ 18, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.18-ಕೆಂಗೇರಿ,ರಾಜರಾಜೇಶ್ವರಿ ನಗರ ಸೇರಿದಂತೆ ನಗರದ 40 ಕ್ಕೂ ಖಾಸಗಿ ಶಾಲೆಗಳಿಗೆ ಕಿಡಿಗೇಡಿಗಳಿಂದ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಆತಂಕಕ್ಕೆ ಎಡೆಮಾಡಿಕೊಟ್ಟಿದೆ.
    roadkill333@atomicmail.io ಎಂಬ ಇ-ಮೇಲ್​ನಿಂದ ಸಂದೇಶ ಬಂದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯದಳ ಸಿಬ್ಬಂದಿ ಮಕ್ಕಳನ್ನು ಹೊರಗೆ ಕಳುಹಿಸಿ ತಪಾಸಣೆ ಮಾಡಿದ್ದಾರೆ.
    ತಪಾಸಣೆ ವೇಳೆ ಹುಸಿ ಬೆದರಿಕೆ ಎನ್ನುವುದು ಪತ್ತೆಯಾಗಿದ್ದು, ಬೆದರಿಕೆ ಇಮೇಲ್ ಸಂದೇಶ ಕಳುಹಿಸಿರುವ ದುಷ್ಕರ್ಮಿಗಳ ಪತ್ತೆಗೆ ನಗರ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.
    ಇಮೇಲ್ ಬೆದರಿಕೆಯಲ್ಲಿ ನಮಸ್ಕಾರ, ಶಾಲಾ ತರಗತಿಗಳಲ್ಲಿ ನಾನು ಹಲವು ಸ್ಫೋಟಕ ವಸ್ತುಗಳು ಇರಿಸಿದ್ದೇನೆ. ಸ್ಫೋಟಕಗಳನ್ನು ಕಪ್ಪು ಪ್ಲಾಸ್ಟಿಕ್ ಚೀಲಗಳಿಂದ ಮುಚ್ಚಿಡಲಾಗಿದೆ. ನಿಮ್ಮೆಲ್ಲರನ್ನೂ ಈ ಲೋಕದಿಂದ ಅಳಿಸಿಹಾಕುತ್ತೇನೆ. ಯಾರೋಬ್ಬರು ಬದುಕುಳಿಯುವುದಿಲ್ಲ. ಈ ಸುದ್ದಿಯನ್ನು ನಾನು ನೋಡುವಾಗ ಸಂತೋಷದಿಂದ ನಗುತ್ತೇನೆ ಎಂದು ಕಿಡಿಗೇಡಿ ಇ-ಮೇಲ್​ನಲ್ಲಿ ಉಲ್ಲೇಖಿಸಿದ್ದಾನೆ.
    ನೀವೆಲ್ಲರೂ ಕಷ್ಟ ಅನುಭವಿಸಲೇಬೇಕು. ಈ ಸುದ್ದಿ ಹೊರ ಬಂದ ನಂತರ ನಾನು ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ನನಗೆ ಯಾರೊಬ್ಬರು ನಿಜವಾಗಿಯೂ ಸಹಾಯ ಮಾಡಿಲ್ಲ. ಮನೋವೈದ್ಯರು, ಮನೋವಿಜ್ಞಾನಿಗಳು, ಯಾರೂ ಕಾಳಜಿ ವಹಿಸಿಲ್ಲ ಮತ್ತು ಯಾರೂ ಎಂದಿಗೂ ಕಾಳಜಿ ವಹಿಸುವುದಿಲ್ಲ ಎಂದಿದ್ದಾನೆ.
    ನೀವು ಅಸಹಾಯಕ ಮತ್ತು ಅಜ್ಞಾನಿ ಮನುಷ್ಯರಿಗೆ ಔಷಧ ನೀಡುವುದರ ಬಗ್ಗೆ ಮಾತ್ರ ಕಾಳಜಿ ವಹಿಸುತ್ತೀರಿ, ಆ ಔಷಧಿಗಳು ನಿಮ್ಮ ಅಂಗಗಳನ್ನು ಹಾಳುಮಾಡುತ್ತವೆ ಅಥವಾ ಅದು ತೂಕ ಹೆಚ್ಚಿಸಲು ಕಾರಣವಾಗುತ್ತವೆ ಎಂದು ಮನೋವೈದ್ಯರು ಎಂದಿಗೂ ನಿಮಗೆ ಹೇಳುವುದಿಲ್ಲ.
    ಮನೋವೈದ್ಯಕೀಯ ಔಷಧಗಳು ಜನರಿಗೆ ಸಹಾಯ ಮಾಡುತ್ತವೆ ಎಂದು ಯೋಚಿಸುವಂತೆ ಜನರ ಬ್ರೈನ್ ವಾಶ್​​ ಮಾಡುತ್ತಾರೆ. ಆದರೆ ಅದು ಹಾಗೆ ಆಗುವುದಿಲ್ಲ ಎಂಬುದಕ್ಕೆ ನಾನು ಜೀವಂತ ಸಾಕ್ಷಿ ನೀಡುತ್ತೇನೆ. ನೀವೆಲ್ಲರೂ ಇದಕ್ಕೆ ಅರ್ಹರು. ನನ್ನಂತೆಯೇ ನೀವು ಸಹ ಕಷ್ಟ ಅನುಭವಿಸಲು ಅರ್ಹರು ಎಂದು ಇ-ಮೇಲ್​ನಲ್ಲಿ ಉಲ್ಲೇಖಿಸಲಾಗಿದೆ.
    ದೆಹಲಿಯ10 ಶಾಲೆಗಳಿಗೆ ಬೆದರಿಕೆ:
    ಇನ್ನು ದೆಹಲಿಯ 10ಕ್ಕೂ ಹೆಚ್ಚು ಶಾಲೆಗಳಿಗೂ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಕೂಡಲೇ ಎಚ್ಚೆತ್ತ ಪೊಲೀಸ್​ ಮತ್ತು ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಶಾಲೆಗಳಲ್ಲಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ಹೀಗಾಗಿ ಹುಸಿ ಬಾಂಬ್ ಸಂದೇಶ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.
    ಬಾಂಬ್ ಬೆದರಿಕೆ ಹೆಚ್ಚಳ:
    ಇತ್ತೀಚೆಗೆ ರಾಜ್ಯದಲ್ಲಿ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚಾಗಿವೆ. ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಇತ್ತೀಚೆಗೆ ಬಾಂಬ್ ಬೆದರಿಕೆ ಹಾಕಲಾಗಿತ್ತು. ಕೆಲ ಕಾಲ ಆತಂಕದ ಸನ್ನಿವೇಶ ನಿರ್ಮಾಣವಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರವನ್ನು ಸ್ಪೋಟಿಸುವುದಾಗಿ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಖಾಲಿದ್ ಅಲಿಯಾಸ್ (23)ನನ್ನು ಉತ್ತರ ಕನ್ನಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    AI m mi road ಬೆಂಗಳೂರು ಶಾಲೆ ಸುದ್ದಿ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous ArticleKSRTC ನೌಕರರ ವಿರುದ್ಧ ಬ್ರಹ್ಮಾಸ್ತ್ರ !
    Next Article ವಂಚಕನ ವೈಭವ ಕಂಡು ಬೆಚ್ಚಿ ಬಿದ್ದ ಪೊಲೀಸ್ !
    vartha chakra
    • Website

    Related Posts

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    ಜುಲೈ 22, 2025

    ಸಿದ್ದರಾಮಯ್ಯ ಕ್ಷಮೆ ಕೋರಿದ META.

    ಜುಲೈ 18, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    ಸಿದ್ದರಾಮಯ್ಯ ಕ್ಷಮೆ ಕೋರಿದ META.

    ವಂಚಕನ ವೈಭವ ಕಂಡು ಬೆಚ್ಚಿ ಬಿದ್ದ ಪೊಲೀಸ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kelvinoxith ರಲ್ಲಿ Crypto ವಂಚಕ Arrest.
    • TommyKit ರಲ್ಲಿ ಬೆಂಗಳೂರಲ್ಲಿ ಬಾಡಿಗೆ ಮನೆ ಬೇಕಾದ್ರೆ ಏನೇನು ಮಾಡಬೇಕು ಗೊತ್ತಾ? Bengaluru
    • TommyKit ರಲ್ಲಿ ಗಾಂಜಾ ಬೆನ್ನು ಹತ್ತಿದ ಪೊಲೀಸ್.
    Latest Kannada News

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    ಜುಲೈ 22, 2025

    ಸಿದ್ದರಾಮಯ್ಯ ಕ್ಷಮೆ ಕೋರಿದ META.

    ಜುಲೈ 18, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe