ಬೆಂಗಳೂರು,ಆ.14:
ವಿಧಾನಸಭೆ ಚುನಾವಣೆ ಸಮಯದಲ್ಲಿ ರಾಜ್ಯದ ಜನತೆಗೆ ನೀಡಿದ ಭರವಸೆಯಂತೆ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಕೆಲವರಿಗೆ ಈ ಯೋಜನೆಗಳು ಅಗತ್ಯವಿಲ್ಲ ಹೀಗಾಗಿ ಅಂತವರನ್ನು ಯೋಜನೆಯಿಂದ ಮುಕ್ತಗೊಳಿಸಬೇಕು ಎಂಬ ವಾದ ಮಂಡನೆಯಾಗುತ್ತಿದೆ.
ಚುನಾವಣೆಗೆ ಮುನ್ನ ಹೈಕಮಾಂಡ್ ರಾಜ್ಯದ ಎಲ್ಲಾ ನಾಗರಿಕರಿಗೂ ಯೋಜನೆ ಜಾರಿಗೊಳಿಸುತ್ತೇವೆ ಎಂದು ಘೋಷಿಸಿತ್ತು ಈ ಹಿನ್ನೆಲೆಯಲ್ಲಿ ಇದೀಗ ಇವುಗಳನ್ನು ಪರಿಷ್ಕರಿಸುವ ನಿರ್ಧಾರ ಕೂಡ ಹೈಕಮಾಂಡ್ ಮಾಡಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ದೆಹಲಿಗೆ ತೆರಳಿ ಹೈಕಮಾಂಡ್ ಜೊತೆ ಇವುಗಳ ಕುರಿತು ಮಾತನಾಡಿರುವ ಅವರು ಗ್ಯಾರಂಟಿ ಯೋಜನೆಗಳು ಅನೇಕರಿಗೆ ಅಗತ್ಯವಿಲ್ಲ ಅಂತಹವರನ್ನು ಯೋಜನೆಯಿಂದ ಹೊರಗಿಡಬೇಕಾಗಿದೆ ಹೀಗಾಗಿ ಯೋಜನೆ ಪರಿಷ್ಕರಿಸಲು ಅನುಮತಿ ನೀಡುವಂತೆ ಮಾನವಿ ಮಾಡಿರುವುದಾಗಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವೈಜ್ಞಾನಿಕವಾಗಿ ಈ ಯೋಜನೆಯನ್ನು ಮರು ಪರಿಷ್ಕರಣೆ ಮಾಡಬೇಕು ಎಂಬ ಅಭಿಪ್ರಾಯ ಹೈಕಮಾಂಡ್ ಜೊತೆ ಹಂಚಿಕೊಂಡಿದ್ದೇನೆ ಇದರ ಅರ್ಥ ನಾನು ಗ್ಯಾರಂಟಿ ಯೋಜನೆಗಳ ವಿರೋಧಿ ಅಲ್ಲ ಯಾರಿಗೆ ಅಗತ್ಯ ಇದೆಯೋ ಅವರಿಗೆ ಈ ಯೋಜನೆಯ ಸೌಲಭ್ಯ ಸಿಗಬೇಕು ಎನ್ನುವುದು ನನ್ನ ನಿಲುವಾಗಿದೆ ಎಂದು ಸ್ಪಷ್ಟಪಡಿಸಿದರು .
ಗ್ಯಾರಂಟಿ ಯೋಜನೆಗಳಿಗೆ ಸಂಪನ್ಮೂಲದ ಕೊರತೆ ಇಲ್ಲ ಬಜೆಟ್ ನಲ್ಲಿ ಈ ಯೋಜನೆಗಳಿಗಾಗಿ 56 ಸಾವಿರ ಕೋಟಿ ನಿಗದಿಪಡಿಸಲಾಗಿದೆ. ಆದರೆ, ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಮಾತ್ರ ಯೋಜನೆ ನೀಡಿ. ಶ್ರೀಮಂತರನ್ನು ಯೋಜನೆಯಿಂದ ಹೊರಗಿಡಬೇಕು.ಇದರಿಂದಾಗಿ ವಾರ್ಷಿಕವಾಗಿ ರೂ. 10,000 ಕೋಟಿ ಉಳಿತಾಯವಾಗಲಿದೆ ಎಂದು ವಿವರಿಸಿದರು.
5 ಪ್ರತಿಕ್ರಿಯೆಗಳು
can i order clomiphene online where to get clomid tablets where to buy cheap clomid without dr prescription can i buy generic clomid no prescription can you buy clomiphene pills how to get clomid pill where to get generic clomiphene without dr prescription
More peace pieces like this would urge the web better.
propranolol us – plavix 150mg tablet buy methotrexate 10mg pills
buy cheap generic amoxil – buy cheap amoxicillin brand ipratropium 100mcg
brand zithromax 500mg – tindamax 300mg pills buy bystolic 5mg online