Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಲೀಗಲ್ ನೋಟಿಸ್.
    ಸುದ್ದಿ

    ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಲೀಗಲ್ ನೋಟಿಸ್.

    vartha chakraBy vartha chakraಮೇ 24, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ24:
    ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಅಲೋಕ್ ಮೋಹನ್ ಅವರ ಸೇವಾ ನಿವೃತ್ತಿಯ ನಂತರ ರಾಜ್ಯ ಪೊಲೀಸ್ ಹಿರಿಯ ಅಧಿಕಾರಿಗಳ ಬಡ್ತಿ ವಿಚಾರ ಇದೀಗ ವಿವಾದವಾಗಿ ಪರಿಣಮಿಸಿದೆ.
    ಆರೋಪ ಪ್ರಕರಣವೊಂದರ ಇಲಾಖಾ ವಿಚಾರಣೆ ನೆಪದಲ್ಲಿ ತರಬೇತಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ಅಲೋಕ್‌ ಕುಮಾರ್‌ ಅವರಿಗೆ ಬಡ್ತಿ ನಿರಾಕರಿಸಲಾಗಿದೆ.
    ಆದರೆ ಅವರ ವಿರುದ್ಧದ ಇಲಾಖಾ ತನಿಖೆಯು ಈಗಾಗಲೇ ತನಿಖೆ ಪೂರ್ಣಗೊಂಡಿರುವುದು ಬೆಳಕಿಗೆ ಬಂದಿದೆ.
    ಎಡಿಜಿಪಿ ಅಲೋಕ್‌ ಕುಮಾರ್‌ ಅವರಿಗೆ ಮುಂಬಡ್ತಿ ನೀಡದ ಸರ್ಕಾರ 6 ವರ್ಷದ ಹಿಂದಿನ ಪ್ರಕರಣವನ್ನು ಕೆದಕಿ ಇಲಾಖಾ ತನಿಖೆಗೆ ಆದೇಶಿಸಿದೆ.
    ಸರ್ಕಾರ ಇಲಾಖಾ ತನಿಖೆಗೆ ಆದೇಶಿಸಿದ್ದರೂ ಈ ತನಿಖೆ ಈಗಾಗಲೇ ಪೂರ್ಣಗೊಂಡಿರುವ ಬಗ್ಗೆ ಅಲೋಕ್‌ ಕುಮಾರ್‌ ಅವರು ಆರ್‌ಟಿಐ  ಅಡಿ ಪ್ರಶ್ನಿಸಿ ಉತ್ತರ ಪಡೆದಿದ್ದಾರೆ.
    ವಿಧಾನಸೌಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ ಸರ್ಕಾರದ ಅಧೀನ ಕಾರ್ಯದರ್ಶಿ ಇಲಾಖಾ ತನಿಖೆ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.
    ಈ ಎಲ್ಲಾ ಮಾಹಿತಿಗಳು ಲಭ್ಯವಿದ್ದರೂ ಮುಂಬಡ್ತಿ ನೀಡದ ಸರ್ಕಾರದ ನಡೆಯಿಂದ ಬೇಸತ್ತಿರುವ ಅಲೋಕ್ ಕುಮಾರ್ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಲೀಗಲ್ ನೋಟಿಸ್ ನೀಡಿದ್ದಾರೆ.
    ಹಲೋ ಕುಮಾರ್ ಅವರ ವಿರುದ್ಧದ ಆರೋಪ
    ಪ್ರಕರಣದ ತನಿಖೆ ನಡೆಸಿದ ಸಿಬಿಐ ಬಿ ರಿಪೋರ್ಟ್‌ ಸಲ್ಲಿಕೆ ಮಾಡಿತ್ತು. ಈ ವೇಳೆ ಭಾಸ್ಕರ್‌ ರಾವ್‌ (ನಿವೃತ್ತ) ಮತ್ತು ಅಲೋಕ್‌ ಕುಮಾರ್‌ ವಿರುದ್ಧ ಇಲಾಖಾ ವಿಚಾರಣೆಗೆ ಸಿಬಿಐ ಶಿಫಾರಸು ಮಾಡಿತ್ತು. ಆದರೆ ಅಂದು ಈ ಇಬ್ಬರು ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆ ಪ್ರಾರಂಭಿಸದೇ ಪ್ರಾಥಮಿಕ ಹಂತದಲ್ಲಿಯೇ ಮುಖ್ಯಮಂತ್ರಿಗಳ ಅನುಮೋದನೆಯೊಂದಿಗೆ ಮುಕ್ತಾಯಗೊಳಿಸಲಾಗಿದೆ.
    ಪ್ರಸ್ತುತ ಇಬ್ಬರು ಅಧಿಕಾರಿಗಳ ಇಲಾಖಾ ವಿಚಾರಣೆಗೆ ಸಂಬಂಧಿಸಿದ ಕಡತಗಳು ಮುಖ್ಯಮಂತ್ರಿಯವರ ಕಚೇರಿಯಲ್ಲಿರುತ್ತದೆ.
    ಇಲಾಖಾ ವಿಚಾರಣೆ ಪ್ರಾಥಮಿಕ ಹಂತದಲ್ಲಿಯೇ ಮುಕ್ತಾಯವಾಗಿದ್ದರೂ ಈಗ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇಲಾಖಾ ತನಿಖೆಯ ಕಾರಣ ನೀಡಿ ಮುಂಬಡ್ತಿ ನೀಡಲು ನಿರಾಕರಿಸಿದೆ.
    ಈ ಹಿಂದೆ ಕೇಳಿ ಬಂದಿದ್ದ ಫೋನ್‌ ಟ್ಯಾಪಿಂಗ್‌ (ದೂರವಾಣಿ ಕದ್ದಾಲಿಕೆ) ಹಾಗೂ ಅಕ್ರಮವಾಗಿ ಮೊಬೈಲ್‌ ಕರೆ ವಿವರ(ಸಿಡಿಆರ್‌) ಪಡೆದ ಪ್ರಕರಣದಲ್ಲಿ ಅಲೋಕ್‌ ಕುಮಾರ್‌ ವಿರುದ್ಧ ಸರ್ಕಾರ ಇಲಾಖಾ ವಿಚಾರಣೆಗೆ ಆದೇಶ ನೀಡಿದೆ.
    ಒಂದು ಡಿಜಿಪಿ ಸ್ಥಾನ ತೆರವಾದ ಹಿನ್ನೆಲೆ 1994ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿರುವ ಅಲೋಕ್‌ ಕುಮಾರ್‌ ಅವರಿಗೆ ಈ ತಿಂಗಳಲ್ಲಿ ಡಿಜಿಪಿ ಆಗಿ ಮುಂಬಡ್ತಿ ಸಿಗಬೇಕಿತ್ತು. ಆದರೆ ಈಗ ಇಲಾಖಾ ವಿಚಾರಣೆಗೆ ಆದೇಶ ನೀಡಿರುವುದರಿಂದ ಮುಂಬಡ್ತಿ ನೀಡಲು ಸಾಧ್ಯವಿಲ್ಲ. ಇದರಿಂದಾಗಿ ಅದೇ ಬ್ಯಾಚ್‌ನ ಹಿರಿಯ ಅಧಿಕಾರಿಯಾದ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಅವರಿಗೆ ಡಿಜಿಪಿಯಾಗಿ ಮುಂಬಡ್ತಿ ಸಿಗುವ ಸಾಧ್ಯತೆಯಿದೆ.

    ಬೆಂಗಳೂರು ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅವಧಿಗೆ ಮೊದಲೇ ಬಂತು ಮುಂಗಾರು.
    Next Article ಕುಡಿದು ಮಾಡಿದ ರಂಪಾಟ.
    vartha chakra
    • Website

    Related Posts

    ಯೋಧರಿಗೆ DCM ಬಂಪರ್ ಕೊಡುಗೆ .

    ಮೇ 28, 2025

    ಇಂಧನ ಮಂತ್ರಿ ಕೆ.ಜೆ.ಜಾರ್ಜ್ ವಿರುದ್ಧ ಬಿಜೆಪಿ ವ್ಯರ್ಥಾಲಾಪ.

    ಮೇ 28, 2025

    ಬಿಜೆಪಿಗೆ ಗುಡ್ ಬೈ ಹೇಳಲು 12 ಶಾಸಕರು ರೆಡಿ.

    ಮೇ 28, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಯೋಧರಿಗೆ DCM ಬಂಪರ್ ಕೊಡುಗೆ .

    ಇಂಧನ ಮಂತ್ರಿ ಕೆ.ಜೆ.ಜಾರ್ಜ್ ವಿರುದ್ಧ ಬಿಜೆಪಿ ವ್ಯರ್ಥಾಲಾಪ.

    ಬಿಜೆಪಿಗೆ ಗುಡ್ ಬೈ ಹೇಳಲು 12 ಶಾಸಕರು ರೆಡಿ.

    ರಾಜ್ಯಪಾಲರಿಗೆ ಸರ್ಕಾರದ ಮೊರೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Curtisdeace ರಲ್ಲಿ ಹೊಸ ವರ್ಷವನ್ನು ಹೀಗೆ ಆಚರಿಸಬೇಕು.
    • Curtisdeace ರಲ್ಲಿ ಮತದಾನಕ್ಕೆ ಹೇಗೆಲ್ಲಾ ವ್ಯವಸ್ಥೆ ಮಾಡಲಾಗಿದೆ ಗೊತ್ತಾ | Lok Sabha Elections 2024
    • Curtisdeace ರಲ್ಲಿ ವಿವಾದದ ಸುಳಿಯಲ್ಲಿ ಸಚಿವ ಡಿ.ಸುಧಾಕರ್ | D Sudhakar
    Latest Kannada News

    ಯೋಧರಿಗೆ DCM ಬಂಪರ್ ಕೊಡುಗೆ .

    ಮೇ 28, 2025

    ಇಂಧನ ಮಂತ್ರಿ ಕೆ.ಜೆ.ಜಾರ್ಜ್ ವಿರುದ್ಧ ಬಿಜೆಪಿ ವ್ಯರ್ಥಾಲಾಪ.

    ಮೇ 28, 2025

    ಬಿಜೆಪಿಗೆ ಗುಡ್ ಬೈ ಹೇಳಲು 12 ಶಾಸಕರು ರೆಡಿ.

    ಮೇ 28, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಶಿವಣ್ಣನ ಮುಂದೆಯೇ ಕನ್ನಡಿಗರನ್ನು ಕೆಣಕಿದ ಕಮಲ್ ಹಾಸನ್. #kannada #kamalhassan #audiolaunch #shivurajkumar
    Subscribe