Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರಿ ನೌಕರರ ಬ್ರಹ್ಮಾಂಡ ಭ್ರಷ್ಟಾಚಾರ ಪತ್ತೆ.
    Trending

    ಸರ್ಕಾರಿ ನೌಕರರ ಬ್ರಹ್ಮಾಂಡ ಭ್ರಷ್ಟಾಚಾರ ಪತ್ತೆ.

    vartha chakraBy vartha chakraಜುಲೈ 11, 202410 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.11-
    ನಿಗಧಿತ ಆದಾಯ ಮೂಲ ಮೀರಿ ನೂರಾರು ಪಟ್ಟು ಅಕ್ರಮ ಆಸ್ತಿ ಗಳಿಸಿರುವ ಆರೋಪದಲ್ಲಿ ಸರ್ಕಾರಿ ಅಧಿಕಾರಿಗಳು,ನಿವೃತ್ತ ಅಧಿಕಾರಿಗಳ ಕಚೇರಿ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಕೋಟ್ಯಾಂತರ ಮೌಲ್ಯದ ಅಕ್ರಮ ಆಸ್ತಿ ಪಾಸ್ತಿಯನ್ನು ಪತ್ತೆಹಚ್ಚಿದ್ದಾರೆ.
    ಕಲಬುರಗಿ, ಮೈಸೂರು, ದಾವಣಗೆರೆ, ಚಿತ್ರದುರ್ಗ, ಧಾರವಾಡ, ಬೆಳಗಾವಿ ಸೇರಿ 9 ಜಿಲ್ಲೆಗಳ 56 ಕಡೆಗಳಲ್ಲಿ ದಾಳಿ ನಡೆಸಿದ ಲೋಕಾಯುಕ್ತ  ಅಧಿಕಾರಿಗಳು ಸೇವೆಯಲ್ಲಿರುವ ಹಾಗೂ ನಿವೃತ್ತ ಅಧಿಕಾರಿಗಳ ಅಕ್ರಮ ಆಸ್ತಿಪಾಸ್ತಿಯ ದಾಖಲೆಗಳ ಪತ್ರಗಳ ಪರಿಶೀಲನೆ ಕೈಗೊಂಡಿದ್ದಾರೆ.
    ಕೋಲಾರದ ತಹಶೀಲ್ದಾರ್ ವಿಜಯಣ್ಣ, ಸಣ್ಣ ನೀರಾವರಿ ಇಲಾಖೆಯ ನಿವೃತ್ತ ಮುಖ್ಯ ಎಂಜಿನಿಯರ್ ಎಂ.ರವೀಂದ್ರ, ಜಲ ಸಂಪನ್ಮೂಲ ಇಲಾಖೆಯ ಮೈಸೂರು ಸೂಪರಿಂಟೆಂಡಿಂಗ್ ಎಂಜಿನಿಯರ್ ಮಹೇಶ್ ಕೆ., ಲೋಕೋಪಯೋಗಿ ಇಲಾಖೆಯ ಸೂಪರಿಂಟೆಂಡಿಂಗ್ ಎಂಜಿನಿಯ‌ರ್ ಕೆ.ಜಿ. ಜಗದೀಶ್, ಧಾರವಾಡ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶೇಖ‌ರ್ ಗೌಡ, ಗ್ರಾಮೀಣ ಕುಡಿಯುವ ನೀರು ಪೂರೈಕೆ ಇಲಾಖೆಯ ನಿವೃತ್ತ ಕಾರ್ಯನಿರ್ವಾಹಕ ಎಂಜಿನಿಯರ್ ಶಿವರಾಜು ಎಸ್‌., ಬಿಬಿಎಂಪಿ ಕೆಂಗೇರಿ ವಲಯದ ಕಂದಾಯ ಅಧಿಕಾರಿ ಬಸವರಾಜ ಮಾಗಿ, ದಾವಣಗೆರೆಯ ಕಾರ್ಯನಿರ್ವಾಹಕ ಎಂಜಿನಿಯರ್ ಡಿ.ಎಚ್. ಉಮೇಶ್, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ಎಸ್, ಪ್ರಭಾಕರ, ಬೆಳಗಾವಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಹದೇವ್ ಬೆನ್ನೂರು, ಹಾಸನದ ಗ್ರಾಮ ಪಂಚಾಯಿತಿಯೊಂದರ ಗ್ರೇಡ್-1 ಕಾರ್ಯದರ್ಶಿ ಎನ್.ಎಂ. ಜಗದೀಶ್ ಅವರನ್ನು ಬಲೆಗೆ ಕೆಡವಿ ಅವರುಗಳ‌ ಕಚೇರಿ, ಮನೆ, ಸಂಬಂಧಿಸಿದವರ ಮನೆಗಳು, ಇತರ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ.
    ಧಾರವಾಡದಲ್ಲಿ ಎರಡು ಕಡೆ ಪಿಜಿಗಳನ್ನು ಹೊಂದಿರುವ ಬೆಳಗಾವಿ ನಿರ್ಮಿತಿ ಕೇಂದ್ರದ ಯೋಜನಾಧಿಕಾರಿ ಶೇಖರಗೌಡ ಮನೆ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.
    ಧಾರವಾಡದಕೆಸಿಡಿ ರಸ್ತೆಯ ಸಪ್ತಾಪುರ ಹಾಗೂ ರಾಧಾಕೃಷ್ಣ ನಗರದಲ್ಲಿ ಶೇಖರಗೌಡರ ಪಿಜಿಗಳಿದ್ದು, ಎರಡೂ ಸ್ಥಳಗಳಲ್ಲೂ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.
    ರಾಮನಗರದಲ್ಲಿ ದಾಳಿ:
    ಜಿಲ್ಲೆಯ ಆರೋಹಳ್ಳಿ ತಹಶೀಲ್ದಾರ್ ವಿಜಿಯಣ್ಣ ಅವರಿಗೆ ಸಂಬಂಧಿಸಿದ ಆರು ಸ್ಥಳಗಳಲ್ಲಿ ದಾಳಿ ನಡೆದಿದೆ. ಚಿಕ್ಕಬಳ್ಳಾಪುರ, ಚಿಂತಾಮಣಿ ಹಾಗು ತುಮಕೂರಿನ ತಲಾ ಎರಡು ಸ್ಥಳಗಳು, ‌ರಾಮನಗರದ ಆರೋಹಳ್ಳಿ ಹಾಗೂ ಮಂಡ್ಯದ ಒಂದೆಡೆ ದಾಳಿ ನಡೆಸಲಾಗಿದೆ. ವಿಜಿಯಣ್ಣ ಈ ಮೊದಲು ಕೋಲಾರ ತಹಶೀಲ್ದಾರ್ ಆಗಿದ್ದರು. ಕೋಲಾರ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ದಾಖಲೆಗಳ‌ ಪರಿಶೀಲನೆ ನಡೆಯುತ್ತಿದೆ.
    ಕಲಬುರಗಿಯಲ್ಲಿ ದಾಳಿ:
    ಬಿಬಿಎಂಪಿ ಕೆಂಗೇರಿ ವಿಭಾಗದ ಕಂದಾಯ ಅಧಿಕಾರಿ ಬಸವರಾಜ್ ಮಾಗಿ ಅವರ ಬೆಂಗಳೂರು ಹಾಗು ಕಲಬುರಗಿಯ ಎಂ.ಬಿ.ನಗರದಲ್ಲಿರುವ ನಿವಾಸದ ಮೇಲೂ ದಾಳಿ ನಡೆದಿದೆ.
    ಬೆಳಗಾವಿಯ ಜಿಲ್ಲಾ ಪಂಚಾಯತಿ ಎಇಇ ದುರದುಂಡೇಶ್ವರ ಬನ್ನೂರ ಅವರಿಗೆ ಸೇರಿದ ಸೇರಿದ ನಾಲ್ಕು ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಗೋಕಾಕ, ಹೊನಗಾ, ಹಿಂಡಲಗಾ ಹಾಗೂ ಯಳ್ಳೂರ ಸೇರಿ 4 ಕಡೆ ದಾಳಿ ನಡೆದಿದೆ. ಗೋಕಾಕದ‌ ನಿವಾಸ, ಹೊನಗಾ ಫಾರ್ಮ್ ಹೌಸ್, ಯಳ್ಳೂರು ಮನೆ ಹಿಂಡಲಗಾ ಅಪಾರ್ಟ್ ಮೆಂಟ್ಗಳಲ್ಲಿ ದಾಖಲೆ ಪರಿಶೀಲನೆ ನಡೆಯುತ್ತಿದೆ. ನಾಲ್ಕು ತಿಂಗಳ ಹಿಂದಷ್ಟೇ ಲೋಕಾಯುಕ್ತ ಅಧಿಕಾರಿಗಳು ಮಹಾದೇವ ಬನ್ನೂರ ಮೇಲೆ ದಾಳಿ ಮಾಡಿದ್ದರು. ಗುತ್ತಿಗೆದಾರರಿಂದ ಹಣಕ್ಕೆ ಬೇಡಿಕೆ ಇಟ್ಟು ಸಿಕ್ಕಿಬಿದ್ದಿದ್ದರು.
    ಸಿಕ್ಕಿಬಿದ್ದಿದ್ದರು.
    ಮಂಡ್ಯದಲ್ಲಿ ಪರಿಶೀಲನೆ:
    ನಗರದ ನಿವೃತ್ತ ಎಕ್ಸಿಕ್ಯೂಟಿವ್ ಇಂಜಿನಿಯರ್ ಶಿವರಾಜು ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ‌. ಎಸ್‌ಪಿ ಸುರೇಶ್ ಬಾಬು ನೇತೃತ್ವದ ತಂಡ ನಗರ ಸೇರಿದಂತೆ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಇಜ್ಜಲಘಟ್ಟ ಗ್ರಾಮದ ಮನೆ, ಫಾರ್ಮ್‌ಹೌಸ್, ಕ್ರಷರ್ ಹಾಗೂ ಮೈಸೂರಿನ ಶಿವರಾಜು ಅಳಿಯನ ಮನೆ ಸೇರಿದಂತೆ ವಿವಿಧೆಡೆ ಪರಿಶೀಲನೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    Verbattle
    Verbattle
    Verbattle
    Bangalore bbmp crime Government Karnataka News Politics Trending Varthachakra ಅಪಘಾತ ಅಪರಾಧ ಸುದ್ದಿ ಚಿತ್ರದುರ್ಗ ಧಾರವಾಡ ನ್ಯಾಯ ಮೈಸೂರು ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಮಗನನ್ನು ಕಂಡು ಕಣ್ಣೀರು ಹಾಕಿದ ಡಿ ಬಾಸ್.
    Next Article ED ವಿಚಾರಣೆಗೆ ಬೆಚ್ಚಿದ ನಾಗೇಂದ್ರ, ದದ್ದಲ್.
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • top rated canadian mail order pharmacies ರಲ್ಲಿ ಮುಡಾ ಅಕ್ರಮಕ್ಕೆ ಬಲಿಯಾದ ವಿಧಾನ ಮಂಡಲ ಕಲಾಪ.
    • Tracymix ರಲ್ಲಿ ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    • alpha66_nkKr ರಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ಸಮರ.
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.