Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾಲ ವಾಪಸ್ ಕೇಳಿದರೆ ಮೂರು ವರ್ಷ ಜೈಲು
    Viral

    ಸಾಲ ವಾಪಸ್ ಕೇಳಿದರೆ ಮೂರು ವರ್ಷ ಜೈಲು

    vartha chakraBy vartha chakraಜನವರಿ 28, 20251 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ಸಾಲ ಪಡೆದು ಮರು ಪಾವತಿ ಮಾಡದವರ ಕುರಿತು
    ಒಂದು ಗಾದೆ ಮಾತಿದೆ ಅದೇನೆಂದರೆ ಕೊಟ್ಟವನು ಕೋಡಂಗಿ,ತಗೊಂಡವನು ವೀರಭದ್ರ ಅಂತಾ.. ಆದರೆ ರಾಜ್ಯದ ಮೈಕ್ರೋ ಫೈನಾನ್ಸ್ ಗಳ ವಿಷಯದಲ್ಲಿ ಇದು ಉಲ್ಟಾ ಆಗಿದೆ. ಇಲ್ಲಿ ಸಾಲ ಪಡೆದವರು ಕೋಡಂಗಿಗಳಾಗಿದ್ದಾರೆ.ಈ ಸಂಸ್ಥೆಗಳಿಂದ ಸಾಲ ಪಡೆದು ಸಕಾಲಕ್ಕೆ ಬಡ್ಡಿ ಸಮೇತ ಮರುಪಾವತಿ ಮಾಡಲೇಬೇಕು ತಪ್ಪಿದರೆ ಅವರು ನೀಡುವ ಕಿರುಕುಳ ಹೇಳಲಾಗದು.
    ಇದನ್ನು ಅನುಭವಿಸಲಾಗದೆ ಗ್ರಾಮೀಣ ಪ್ರದೇಶದ ಅನೇಕ ಮಂದಿ ಊರು ತೊರೆದರೆ, ಆತ್ಮಹತ್ಯೆಗೆ ಶರಣಾದವರ ಸಂಖ್ಯೆಯೂ ಕಡಿಮೆ ಇಲ್ಲ.‌
    ಇದೀಗ ಇಂತಹ ಹಾವಳಿಗೆ ಕಡಿವಾಣ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರ ಸಾಲ ಕೊಟ್ಟು ಮರುಪಾವತಿಗೆ ಹಿಂಸೆ ಕೊಟ್ಟರೆ ಅಂತಹವರಿಗೆ ಮೂರು ವರ್ಷ ಜೈಲು ಮತ್ತು ಒಂದು ಲಕ್ಷ ದಂಡ ವಿಧಿಸಲು ಮುಂದಾಗಿದೆ.
    ಈ ಉದ್ದೇಶದಿಂದ ‘ಕರ್ನಾಟಕ ಮೈಕ್ರೊ ಫೈನಾನ್ಸ್‌ ಕಂಪ‍ನಿಗಳು ಹಣ ಲೇವಾದೇವಿ ನಿಯಂತ್ರಣ ಮಸೂದೆ- 2025’ ಅನ್ನು ಸಿದ್ಧಪಡಿಸಿದೆ.
    ರಾಜ್ಯದೊಳಗೆ ಸಾಲದ ವಹಿವಾಟು ನಡೆಸುವ ಎಲ್ಲ ಕಂಪನಿಗಳೂ ರಾಜ್ಯ ಸರ್ಕಾರದ ‘ನೋಂದಣಿ ಪ್ರಾಧಿಕಾರ’ದಲ್ಲಿ ನೋಂದಣಿ ಮಾಡುವುದನ್ನು ಕಡ್ಡಾಯಗೊಳಿಸುವ ಪ್ರಸ್ತಾವವೂ ಮಸೂದೆಯಲ್ಲಿದೆ. ನೋಂದಣಿ ಮಾಡದೇ ವಹಿವಾಟು ನಡೆಸುವ ಸಾಲದಾತರಿಗೆ ಮೂರು ವರ್ಷದವರೆಗೆ ವಿಸ್ತರಿ ಸಬಹುದಾದ ಜೈಲು ಮತ್ತು ಒಂದು ಲಕ್ಷದವರೆಗೆ ವಿಸ್ತರಿಸಬಹುದಾದ ದಂಡ ವಿಧಿಸುವುದಕ್ಕೂ ಮಸೂದೆ ಅವಕಾಶ ಕಲ್ಪಿಸಿದೆ.
    ಮಸೂದೆಯಲ್ಲಿ ಪ್ರಸ್ತಾಪಿಸಿರುವ ಅಂಶಗಳನ್ನು ತಕ್ಷಣದಿಂದಲೇ ಜಾರಿಗೆ ತರಲು ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ಮುಂದಾಗಿದೆ.
    ದಿನ, ವಾರ, ತಿಂಗಳು ಮತ್ತು ವರ್ಷದ ಆಧಾರದಲ್ಲಿ ಬಡ್ಡಿಗೆ ಸಾಲ ಕೊಡುವವರು
    ಕರ್ನಾಟಕದಲ್ಲಿ ಕಾರ್ಯನಿರ್ವಹಿಸುವ ಎಲ್ಲ ಮೈಕ್ರೊ ಫೈನಾನ್ಸ್‌ ಕಂಪನಿಗಳು, ಲೇವಾದೇವಿದಾರ ಏಜೆನ್ಸಿಗಳು, ಸಂಸ್ಥೆಗಳು, ವ್ಯಕ್ತಿಗಳುಭಾರತೀಯ ರಿಸರ್ವ್‌ ಬ್ಯಾಂಕ್‌ನಲ್ಲಿ ನೋಂದಾಯಿತವಾದ ಮತ್ತು ನೋಂದಣಿ ಆಗದಿರುವ ಹಣಕಾಸು ಸಂಸ್ಥೆಗಳು ಇದರ ವ್ಯಾಪ್ತಿಗೆ ಒಳಪಡಲಿವೆ.
    ಕಾಫಿ ಎಸ್ಟೇಟ್‌, ಎಣ್ಣೆ ಗಿರಣಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸಾಲ ಪಡೆಯುವ ಮಿತಿ ನಿಗದಿಪ‍ಡಿಸಲಾಗಿದ್ದು, ಅವರ ಆದಾಯದ ಮೂಲ ಒಂದೇ ಇದ್ದರೆ ಒಟ್ಟು ₹30 ಸಾವಿರ, ಒಂದಕ್ಕಿಂತ ಹೆಚ್ಚು ಆದಾಯದ ಮೂಲ ಇದ್ದರೆ ಅಂಥವರಿಗೆ ₹50 ಸಾವಿರ ಸಾಲ ಪಡೆಯುವ ಮಿತಿ ನಿಗದಿಪಡಿಸಲಾಗಿದೆ.
    ವಿಳಂಬ ಪಾವತಿಗೆ ದಂಡ ವಿಧಿಸುವಂತಿಲ್ಲ. ಸಾಲ ಒಪ್ಪಂದ ಮಾಡಿಕೊಂಡಿರಬೇಕು, ವಿಧಿಸುವ ಬಡ್ಡಿ ದರದ ಮಾಹಿತಿಯನ್ನು ಒಳಗೊಂಡ ಸಾಲ ಮಂಜೂರಾತಿ ಕಾರ್ಡ್‌ ಅನ್ನು ನೀಡಬೇಕು. ಮೈಕ್ರೊ ಫೈನಾನ್ಸ್‌ ಕಂಪನಿಗಳು, ಲೇವಾದೇವಿಗಾರರು ಸಾಲ ವಸೂಲಿಗೆ ಏಜೆಂಟರನ್ನು ನಿಯೋಜಿಸುವಂತಿಲ್ಲ. ವಸೂಲಿಗೆ ಮನೆಗೆ ಹೋಗಬಾರದು, ಅಲ್ಲದೆ, ಯಾವುದೇ ಬಲವಂತದ ಕ್ರಮ ಅನುಸರಿಸಬಾರದು. ಸಾಲಗಾರರನ್ನು ಅಥವಾ ಅವರ ಕುಟುಂಬದ ಸದಸ್ಯರನ್ನು ಅವಮಾನ ಮಾಡಬಾರದು. ಈ ರೀತಿಯ ವರ್ತನೆ ತೋರಿಸಿದ ಸಾಲದಾತರ ನೋಂದಣಿಯನ್ನು ರದ್ದುಪಡಿಸಲಾಗುವುದು ಎಂದೂ ಈ ಮಸೂದೆಯಲ್ಲಿದೆ.

    Verbattle
    Verbattle
    Verbattle
    ಕರ್ನಾಟಕ ಬೆಂಗಳೂರು ಮೈ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಹೀಗೂ ಒಂದು ಕ್ಯಾಲೆಂಡರ್
    Next Article ಫ್ಲೆಕ್ಸ್ ಹಾಕ್ತೀರಾ.. ಎಚ್ಚರ
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    1 ಟಿಪ್ಪಣಿ

    1. Eqcosi on ಫೆಬ್ರವರಿ 13, 2026 3:40 ಫೂರ್ವಾಹ್ನ

      betmgm offers betmgm-play betmgm Alaska

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Zvqcuw ರಲ್ಲಿ ಇನ್ನು ಮುಂದೆ ಹೇಗಂದರೆ ಹಾಗೆ ಮರ ಕಡಿಯುವಂತಿಲ್ಲ.
    • aviator_spEa ರಲ್ಲಿ ಗಂಗೆಯಲ್ಲಿ ಮೆಡಲ್ ವಿಸರ್ಜನೆ
    • Магазины для интимного здоровья ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.