Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾಲ ವಾಪಸ್ ಕೇಳಿದರೆ ಮೂರು ವರ್ಷ ಜೈಲು
    Viral

    ಸಾಲ ವಾಪಸ್ ಕೇಳಿದರೆ ಮೂರು ವರ್ಷ ಜೈಲು

    vartha chakraBy vartha chakraಜನವರಿ 28, 20254 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.
    ಸಾಲ ಪಡೆದು ಮರು ಪಾವತಿ ಮಾಡದವರ ಕುರಿತು
    ಒಂದು ಗಾದೆ ಮಾತಿದೆ ಅದೇನೆಂದರೆ ಕೊಟ್ಟವನು ಕೋಡಂಗಿ,ತಗೊಂಡವನು ವೀರಭದ್ರ ಅಂತಾ.. ಆದರೆ ರಾಜ್ಯದ ಮೈಕ್ರೋ ಫೈನಾನ್ಸ್ ಗಳ ವಿಷಯದಲ್ಲಿ ಇದು ಉಲ್ಟಾ ಆಗಿದೆ. ಇಲ್ಲಿ ಸಾಲ ಪಡೆದವರು ಕೋಡಂಗಿಗಳಾಗಿದ್ದಾರೆ.ಈ ಸಂಸ್ಥೆಗಳಿಂದ ಸಾಲ ಪಡೆದು ಸಕಾಲಕ್ಕೆ ಬಡ್ಡಿ ಸಮೇತ ಮರುಪಾವತಿ ಮಾಡಲೇಬೇಕು ತಪ್ಪಿದರೆ ಅವರು ನೀಡುವ ಕಿರುಕುಳ ಹೇಳಲಾಗದು.
    ಇದನ್ನು ಅನುಭವಿಸಲಾಗದೆ ಗ್ರಾಮೀಣ ಪ್ರದೇಶದ ಅನೇಕ ಮಂದಿ ಊರು ತೊರೆದರೆ, ಆತ್ಮಹತ್ಯೆಗೆ ಶರಣಾದವರ ಸಂಖ್ಯೆಯೂ ಕಡಿಮೆ ಇಲ್ಲ.‌
    ಇದೀಗ ಇಂತಹ ಹಾವಳಿಗೆ ಕಡಿವಾಣ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರ ಸಾಲ ಕೊಟ್ಟು ಮರುಪಾವತಿಗೆ ಹಿಂಸೆ ಕೊಟ್ಟರೆ ಅಂತಹವರಿಗೆ ಮೂರು ವರ್ಷ ಜೈಲು ಮತ್ತು ಒಂದು ಲಕ್ಷ ದಂಡ ವಿಧಿಸಲು ಮುಂದಾಗಿದೆ.
    ಈ ಉದ್ದೇಶದಿಂದ ‘ಕರ್ನಾಟಕ ಮೈಕ್ರೊ ಫೈನಾನ್ಸ್‌ ಕಂಪ‍ನಿಗಳು ಹಣ ಲೇವಾದೇವಿ ನಿಯಂತ್ರಣ ಮಸೂದೆ- 2025′ ಅನ್ನು ಸಿದ್ಧಪಡಿಸಿದೆ.
    ರಾಜ್ಯದೊಳಗೆ ಸಾಲದ ವಹಿವಾಟು ನಡೆಸುವ ಎಲ್ಲ ಕಂಪನಿಗಳೂ ರಾಜ್ಯ ಸರ್ಕಾರದ ‘ನೋಂದಣಿ ಪ್ರಾಧಿಕಾರ’ದಲ್ಲಿ ನೋಂದಣಿ ಮಾಡುವುದನ್ನು ಕಡ್ಡಾಯಗೊಳಿಸುವ ಪ್ರಸ್ತಾವವೂ ಮಸೂದೆಯಲ್ಲಿದೆ. ನೋಂದಣಿ ಮಾಡದೇ ವಹಿವಾಟು ನಡೆಸುವ ಸಾಲದಾತರಿಗೆ ಮೂರು ವರ್ಷದವರೆಗೆ ವಿಸ್ತರಿ ಸಬಹುದಾದ ಜೈಲು ಮತ್ತು ಒಂದು ಲಕ್ಷದವರೆಗೆ ವಿಸ್ತರಿಸಬಹುದಾದ ದಂಡ ವಿಧಿಸುವುದಕ್ಕೂ ಮಸೂದೆ ಅವಕಾಶ ಕಲ್ಪಿಸಿದೆ.
    ಮಸೂದೆಯಲ್ಲಿ ಪ್ರಸ್ತಾಪಿಸಿರುವ ಅಂಶಗಳನ್ನು ತಕ್ಷಣದಿಂದಲೇ ಜಾರಿಗೆ ತರಲು ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ಮುಂದಾಗಿದೆ.
    ದಿನ, ವಾರ, ತಿಂಗಳು ಮತ್ತು ವರ್ಷದ ಆಧಾರದಲ್ಲಿ ಬಡ್ಡಿಗೆ ಸಾಲ ಕೊಡುವವರು
    ಕರ್ನಾಟಕದಲ್ಲಿ ಕಾರ್ಯನಿರ್ವಹಿಸುವ ಎಲ್ಲ ಮೈಕ್ರೊ ಫೈನಾನ್ಸ್‌ ಕಂಪನಿಗಳು, ಲೇವಾದೇವಿದಾರ ಏಜೆನ್ಸಿಗಳು, ಸಂಸ್ಥೆಗಳು, ವ್ಯಕ್ತಿಗಳುಭಾರತೀಯ ರಿಸರ್ವ್‌ ಬ್ಯಾಂಕ್‌ನಲ್ಲಿ ನೋಂದಾಯಿತವಾದ ಮತ್ತು ನೋಂದಣಿ ಆಗದಿರುವ ಹಣಕಾಸು ಸಂಸ್ಥೆಗಳು ಇದರ ವ್ಯಾಪ್ತಿಗೆ ಒಳಪಡಲಿವೆ.
    ಕಾಫಿ ಎಸ್ಟೇಟ್‌, ಎಣ್ಣೆ ಗಿರಣಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸಾಲ ಪಡೆಯುವ ಮಿತಿ ನಿಗದಿಪ‍ಡಿಸಲಾಗಿದ್ದು, ಅವರ ಆದಾಯದ ಮೂಲ ಒಂದೇ ಇದ್ದರೆ ಒಟ್ಟು ₹30 ಸಾವಿರ, ಒಂದಕ್ಕಿಂತ ಹೆಚ್ಚು ಆದಾಯದ ಮೂಲ ಇದ್ದರೆ ಅಂಥವರಿಗೆ ₹50 ಸಾವಿರ ಸಾಲ ಪಡೆಯುವ ಮಿತಿ ನಿಗದಿಪಡಿಸಲಾಗಿದೆ.
    ವಿಳಂಬ ಪಾವತಿಗೆ ದಂಡ ವಿಧಿಸುವಂತಿಲ್ಲ. ಸಾಲ ಒಪ್ಪಂದ ಮಾಡಿಕೊಂಡಿರಬೇಕು, ವಿಧಿಸುವ ಬಡ್ಡಿ ದರದ ಮಾಹಿತಿಯನ್ನು ಒಳಗೊಂಡ ಸಾಲ ಮಂಜೂರಾತಿ ಕಾರ್ಡ್‌ ಅನ್ನು ನೀಡಬೇಕು. ಮೈಕ್ರೊ ಫೈನಾನ್ಸ್‌ ಕಂಪನಿಗಳು, ಲೇವಾದೇವಿಗಾರರು ಸಾಲ ವಸೂಲಿಗೆ ಏಜೆಂಟರನ್ನು ನಿಯೋಜಿಸುವಂತಿಲ್ಲ. ವಸೂಲಿಗೆ ಮನೆಗೆ ಹೋಗಬಾರದು, ಅಲ್ಲದೆ, ಯಾವುದೇ ಬಲವಂತದ ಕ್ರಮ ಅನುಸರಿಸಬಾರದು. ಸಾಲಗಾರರನ್ನು ಅಥವಾ ಅವರ ಕುಟುಂಬದ ಸದಸ್ಯರನ್ನು ಅವಮಾನ ಮಾಡಬಾರದು. ಈ ರೀತಿಯ ವರ್ತನೆ ತೋರಿಸಿದ ಸಾಲದಾತರ ನೋಂದಣಿಯನ್ನು ರದ್ದುಪಡಿಸಲಾಗುವುದು ಎಂದೂ ಈ ಮಸೂದೆಯಲ್ಲಿದೆ.

    ಕರ್ನಾಟಕ ಬೆಂಗಳೂರು ಮೈ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಹೀಗೂ ಒಂದು ಕ್ಯಾಲೆಂಡರ್
    Next Article ಫ್ಲೆಕ್ಸ್ ಹಾಕ್ತೀರಾ.. ಎಚ್ಚರ
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    4 ಪ್ರತಿಕ್ರಿಯೆಗಳು

    1. er97c on ಜೂನ್ 8, 2025 8:03 ಫೂರ್ವಾಹ್ನ

      where can i buy clomiphene tablets where can i buy generic clomiphene without prescription how to get cheap clomiphene without dr prescription where to get generic clomid pill where to buy clomiphene tablets where to buy generic clomid pill where to buy generic clomid without dr prescription

      Reply
    2. buy cialis generic on ಜೂನ್ 9, 2025 7:29 ಫೂರ್ವಾಹ್ನ

      This is the amicable of topic I take advantage of reading.

      Reply
    3. buy flagyl without a prescription on ಜೂನ್ 11, 2025 1:39 ಫೂರ್ವಾಹ್ನ

      I am in truth enchant‚e ‘ to gleam at this blog posts which consists of tons of profitable facts, thanks object of providing such data.

      Reply
    4. l5z2s on ಜೂನ್ 18, 2025 9:27 ಫೂರ್ವಾಹ್ನ

      inderal 20mg ca – methotrexate over the counter buy methotrexate cheap

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • j6gii ರಲ್ಲಿ DCM ಹುದ್ದೆ ಬೇಡಿಕೆಗೆ ಸದ್ಯಕ್ಕೆ ಪುಲ್ ಸ್ಟಾಪ್
    • Stephenanync ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • v6896 ರಲ್ಲಿ ಪುನೀತ್ ಕೆರೆಹಳ್ಳಿ Arrested | Puneeth Kerehalli
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe