ಮಾನ್ಯ ಮುಖ್ಯಮಂತ್ರಿಗಳೇ–
ನಾನು ಗೊಂದಲ, ಆತಂಕಗಳ ನಡುವೆ ತಮಗೆ ಈ ಪತ್ರ ಬರೆಯುತ್ತಿರುವೆ. ಒಳಮೀಸಲಾತಿ ವರದಿ ವಿವಾದಕ್ಕೊಳಗಾಗಿ, ಎಲ್ಲಿ ಮುಂದೂಡಲ್ಪಡುತ್ತದೊ ಎಂಬುದು ನನ್ನನ್ನು ತುಂಬಾ ಕಾಡುತ್ತಿದೆ. ಜೊತೆಗೆ, ಖಾಲಿ ಇರುವ ಉದ್ಯೋಗಗಳಿಗೂ ನೇಮಕಾತಿ ಇಲ್ಲದೆ ಏಗುತ್ತಿರುವ ತರುಣರು, ತಮ್ಮ ತಾರುಣ್ಯ ಕಳೆದುಕೊಂಡು ಮಧ್ಯ ವಯಸ್ಕರಾಗುತ್ತಿದ್ದಾರೆ. ಇದು ತುಂಬಾನೆ ದಯನೀಯ ಪರಿಸ್ಥಿತಿ.
ಇಂತಹ ಪರಿಸ್ಥಿತಿಯಲ್ಲಿ ನನಗೆ ತೋರುತ್ತಿರುವ ಪರಿಹಾರ ಇದು. ಒಂದು, ಜಸ್ಟೀಸ್ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಯಥಾವತ್ತಾಗಿ ಅನುಷ್ಠಾನ ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಳ್ಳಬೇಕು. ಇದರ ಜೊತೆಗೇನೆ, ಇಂದು ದಲಿತ ಸಮುದಾಯವೂ ದಿನದಿನಕ್ಕೂ ಚಲನಶೀಲತೆ ಪಡೆದುಕೊಂಡು ಬದಲಾವಣೆಯಾಗುತ್ತಿರುವುದರಿಂದ ಅದಕ್ಕೆ ತಕ್ಕಂತೆ ಮೀಸಲಾತಿ ಪ್ರಾತಿನಿಧ್ಯವನ್ನು ಸಮತೋಲನ ಮಾಡುವುದಕ್ಕಾಗಿ ಹಾಗೂ ಕಾಲಕಾಲಕ್ಕೆ ಹೊಸ ದತ್ತಾಂಶಗಳಿಂದ ಒಳ ಮೀಸಲಾತಿಯ ಪ್ರಮಾಣವನ್ನು ಪರಿಷ್ಕರಿಸಲು, ಹಿಂದುಳಿದ ವರ್ಗಗಳಿಗೆ ಇರುವಂತೆಯೇ, ಪರಿಶಿಷ್ಟ ಜಾತಿಗಳ ಆಯೋಗಕ್ಕೂ ಅಧಿಕಾರ ಮತ್ತು ಕಾರ್ಯವ್ಯಾಪ್ತಿಯನ್ನು ಒದಗಿಸಬೇಕು ಎಂಬುದು ನನ್ನ ಭಾವನೆ. ಈ ರೀತಿಯಾದರೆ ಆ ಆಯೋಗದ ಮುಂದೆ, ಜಸ್ಟೀಸ್ ನಾಗಮೋಹನ್ ದಾಸ್ ಅವರ ವರದಿಯ ಬಗ್ಗೆ ಇರಬಹುದಾದ ಯಾವುದೇ ಆಕ್ಷೇಪಣೆಗಳನ್ನು ಸಲ್ಲಿಸಲು ಹಾಗೂ ಪರಿಹಾರ ಕಂಡುಕೊಳ್ಳಲು ಸಾಧ್ಯತೆ ಹೆಚ್ಚುತ್ತದೆ.
ಈ ಹಿಂದೆ, ಮೀಸಲಾತಿ ಹೆಚ್ಚಳ ಆಯೋಗದ ಅಧ್ಯಕ್ಷರಾಗಿ ಜಸ್ಟೀಸ್ ನಾಗಮೋಹನ್ ದಾಸ್ ಅವರು ಸಲ್ಲಿಸಿದ ವರದಿಯಲ್ಲಿ ‘ಪರಿಶಿಷ್ಟ ಜಾತಿ ಸಮುದಾಯವು 17.98%, ಪರಿಶಿಷ್ಟ ಪಂಗಡವು 7.41% ಜನಸಂಖ್ಯೆ ಇರುವುದರಿಂದ ಎಸ್ಸಿಗೆ 18% ಹಾಗೂ ಎಸ್ಟಿಗೆ 7.50% ನೀಡುವುದು ಸೂಕ್ತ’ ಎಂದಿದ್ದರು. (ಆದರೆ, ಅಂದು ಆ ಆಯೋಗದ ಮುಂದೆ 17%ಗೆ ಏರಿಸುವ ವಿಚಾರವಷ್ಟೇ ಇದ್ದುದರಿಂದ, ಶಿಫಾರಸ್ಸು ಅಷ್ಟಕ್ಕೆ ಸೀಮಿತವಾಗಿತ್ತು). ತಾವು 1% ಹೆಚ್ಚಳದ ನಿರ್ಧಾರ ಕೈಗೊಂಡರೆ ಹೆಚ್ಚುವರಿಯಾಗಿ ಸಿಗುವ 1% ನಿಂದ ಇಂದಿನ ಗೊಂದಲಗಳನ್ನು ಪರಿಹರಿಸಿಕೊಳ್ಳಬಹುದಾದ ಸಾಧ್ಯತೆ ಇದೆ. ಇದು ಸರ್ಕಾರದ ಕೈಯಲ್ಲೇ ಇದೆ ಎಂದುಕೊಂಡಿದ್ದೇನೆ. ನೀವು ಈ ಕುರಿತು ಆಶ್ವಾಸನೆ ನೀಡಿದರೂ ದಲಿತ ಸಮುದಾಯ ನಂಬುತ್ತದೆ.
ಜಸ್ಟಿಸ್ ದಾಸ್ ಆಯೋಗವು ಒಳಮೀಸಲಾತಿ ಕುರಿತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಆ ವರದಿ ಆಧರಿಸಿ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ದಲಿತ ಸಮುದಾಯ ಹೋರಾಟ ನಡೆಸುತ್ತಿದೆ. ವರದಿಯಲ್ಲಿ ಕೆಲವು ಲೋಪಗಳಿವೆ ಎಂದು ಆಕ್ಷೇಪಣೆಗಳೂ ವ್ಯಕ್ತವಾಗುತ್ತಿವೆ. ಇದು, ಚರ್ಚೆಗೂ ಕಾರಣವಾಗಿದೆ. ಆಕ್ಷೇಪಗಳ ಕಾರಣಕ್ಕೆ ಒಳಮೀಸಲಾತಿ ಜಾರಿಯನ್ನು ಸರ್ಕಾರ ಮುಂದೂಡುವ ಆತಂಕವೂ ಇದೆ. ಈ ಆತಂಕ, ಚರ್ಚೆಗಳಿಗೆ ಪರಿಹಾರ ಸೂಚಿಸಿ ಮತ್ತು
ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಹಿರಿಯ ಸಾಹಿತಿ ದೇವನೂರ ಮಹಾದೇವ ಬಹಿರಂಗ ಪತ್ರ ಬರೆದಿದ್ದಾರೆ…
ಮಾನ್ಯ ಮುಖ್ಯಮಂತ್ರಿಗಳೇ– ನಾನು ಗೊಂದಲ, ಆತಂಕಗಳ ನಡುವೆ ತಮಗೆ ಈ ಪತ್ರ ಬರೆಯುತ್ತಿರುವೆ. ಒಳಮೀಸಲಾತಿ ವರದಿ ವಿವಾದಕ್ಕೊಳಗಾಗಿ, ಎಲ್ಲಿ ಮುಂದೂಡಲ್ಪಡುತ್ತದೊ ಎಂಬುದು ನನ್ನನ್ನು ತುಂಬಾ ಕಾಡುತ್ತಿದೆ. ಜೊತೆಗೆ, ಖಾಲಿ ಇರುವ ಉದ್ಯೋಗಗಳಿಗೂ ನೇಮಕಾತಿ ಇಲ್ಲದೆ ಏಗುತ್ತಿರುವ ತರುಣರು, ತಮ್ಮ ತಾರುಣ್ಯ ಕಳೆದುಕೊಂಡು ಮಧ್ಯ ವಯಸ್ಕರಾಗುತ್ತಿದ್ದಾರೆ. ಇದು ತುಂಬಾನೆ ದಯನೀಯ ಪರಿಸ್ಥಿತಿ.
ಇಂತಹ ಪರಿಸ್ಥಿತಿಯಲ್ಲಿ ನನಗೆ ತೋರುತ್ತಿರುವ ಪರಿಹಾರ ಇದು. ಒಂದು, ಜಸ್ಟೀಸ್ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಯಥಾವತ್ತಾಗಿ ಅನುಷ್ಠಾನ ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಳ್ಳಬೇಕು. ಇದರ ಜೊತೆಗೇನೆ, ಇಂದು ದಲಿತ ಸಮುದಾಯವೂ ದಿನದಿನಕ್ಕೂ ಚಲನಶೀಲತೆ ಪಡೆದುಕೊಂಡು ಬದಲಾವಣೆಯಾಗುತ್ತಿರುವುದರಿಂದ ಅದಕ್ಕೆ ತಕ್ಕಂತೆ ಮೀಸಲಾತಿ ಪ್ರಾತಿನಿಧ್ಯವನ್ನು ಸಮತೋಲನ ಮಾಡುವುದಕ್ಕಾಗಿ ಹಾಗೂ ಕಾಲಕಾಲಕ್ಕೆ ಹೊಸ ದತ್ತಾಂಶಗಳಿಂದ ಒಳ ಮೀಸಲಾತಿಯ ಪ್ರಮಾಣವನ್ನು ಪರಿಷ್ಕರಿಸಲು, ಹಿಂದುಳಿದ ವರ್ಗಗಳಿಗೆ ಇರುವಂತೆಯೇ, ಪರಿಶಿಷ್ಟ ಜಾತಿಗಳ ಆಯೋಗಕ್ಕೂ ಅಧಿಕಾರ ಮತ್ತು ಕಾರ್ಯವ್ಯಾಪ್ತಿಯನ್ನು ಒದಗಿಸಬೇಕು ಎಂಬುದು ನನ್ನ ಭಾವನೆ. ಈ ರೀತಿಯಾದರೆ ಆ ಆಯೋಗದ ಮುಂದೆ, ಜಸ್ಟೀಸ್ ನಾಗಮೋಹನ್ ದಾಸ್ ಅವರ ವರದಿಯ ಬಗ್ಗೆ ಇರಬಹುದಾದ ಯಾವುದೇ ಆಕ್ಷೇಪಣೆಗಳನ್ನು ಸಲ್ಲಿಸಲು ಹಾಗೂ ಪರಿಹಾರ ಕಂಡುಕೊಳ್ಳಲು ಸಾಧ್ಯತೆ ಹೆಚ್ಚುತ್ತದೆ.
ಈ ಹಿಂದೆ, ಮೀಸಲಾತಿ ಹೆಚ್ಚಳ ಆಯೋಗದ ಅಧ್ಯಕ್ಷರಾಗಿ ಜಸ್ಟೀಸ್ ನಾಗಮೋಹನ್ ದಾಸ್ ಅವರು ಸಲ್ಲಿಸಿದ ವರದಿಯಲ್ಲಿ ‘ಪರಿಶಿಷ್ಟ ಜಾತಿ ಸಮುದಾಯವು 17.98%, ಪರಿಶಿಷ್ಟ ಪಂಗಡವು 7.41% ಜನಸಂಖ್ಯೆ ಇರುವುದರಿಂದ ಎಸ್ಸಿಗೆ 18% ಹಾಗೂ ಎಸ್ಟಿಗೆ 7.50% ನೀಡುವುದು ಸೂಕ್ತ’ ಎಂದಿದ್ದರು. (ಆದರೆ, ಅಂದು ಆ ಆಯೋಗದ ಮುಂದೆ 17%ಗೆ ಏರಿಸುವ ವಿಚಾರವಷ್ಟೇ ಇದ್ದುದರಿಂದ, ಶಿಫಾರಸ್ಸು ಅಷ್ಟಕ್ಕೆ ಸೀಮಿತವಾಗಿತ್ತು). ತಾವು 1% ಹೆಚ್ಚಳದ ನಿರ್ಧಾರ ಕೈಗೊಂಡರೆ ಹೆಚ್ಚುವರಿಯಾಗಿ ಸಿಗುವ 1% ನಿಂದ ಇಂದಿನ ಗೊಂದಲಗಳನ್ನು ಪರಿಹರಿಸಿಕೊಳ್ಳಬಹುದಾದ ಸಾಧ್ಯತೆ ಇದೆ. ಇದು ಸರ್ಕಾರದ ಕೈಯಲ್ಲೇ ಇದೆ ಎಂದುಕೊಂಡಿದ್ದೇನೆ. ನೀವು ಈ ಕುರಿತು ಆಶ್ವಾಸನೆ ನೀಡಿದರೂ ದಲಿತ ಸಮುದಾಯ ನಂಬುತ್ತದೆ.
01-08-2024ರ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಪರಿಶಿಷ್ಟ ಜಾತಿಗಳು ವೈವಿಧ್ಯಮಯ ಭಿನ್ನರೂಪತೆಯ (Heterogeneous) ಗುಂಪುಗಳಾಗಿವೆ ಎಂದು ಅಭಿಪ್ರಾಯ ನೀಡಿದೆ. ವರ್ಗೀಕರಣ ನಿರ್ಧರಿಸುವಾಗ ಸರ್ವಾಂಗೀಣ ಹಿಂದುಳಿದಿರುವಿಕೆಯನ್ನೂ ಪರಿಗಣಿಸಿ ನಿರ್ಧರಿಸಬೇಕಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಜಸ್ಟೀಸ್ ನಾಗಮೋಹನ್ ದಾಸ್ರವರ ವರದಿಯನ್ನು ಗಮನಿಸಿದರೆ ಅದು ಸುಪ್ರೀಂ ಕೋರ್ಟ್ ಆಶಯಕ್ಕೆ ತಕ್ಕಂತೆಯೇ ಇರುವಂತೆ ಕಾಣಿಸುತ್ತದೆ.
ಇದಲ್ಲದೆ, ಜಸ್ಟೀಸ್ ನಾಗಮೋಹನ್ ದಾಸ್ ವರದಿಯು ಸಮಗ್ರ ಸಮೀಕ್ಷೆ ಮಾಡುವ ಮೂಲಕವೇ ಅಂಕಿ-ಅಂಶಗಳನ್ನು ಸಂಗ್…