ಬೆಂಗಳೂರು, ಅ 01: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಅಕ್ರಮ ಹಂಚಿಕೆ ಪ್ರಕರಣದ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಸೋಮವಾರ ‘ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ’ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡ ಬೆನ್ನಲ್ಲೇ ಈ ಪ್ರಕರಣವೂ ದಾಖಲಾಗಿದ್ದು,ಸಿದ್ದರಾಮಯ್ಯ ವಿರುದ್ಧದಕಾನೂನು ಉರುಳು ಮತ್ತಷ್ಟು ಬಿಗಿಯಾಗಿದೆ.
ಇಡಿಯು ಇಸಿಐಆರ್ (ಎನ್ಫೋರ್ಸ್ಮೆಂಟ್ ಕೇಸ್ ಇನ್ಫರ್ಮೇಷನ್ ರಿಪೋರ್ಟ್) ದಾಖಲಿಸಿದೆ
ಎಫ್ಐಆರ್ನಲ್ಲಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಬಿಎಂ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ದೇವರಾಜು ಹೆಸರು ಉಲ್ಲೇಖಿಸಲಾಗಿತ್ತು. ದೇವರಾಜು ಅವರಿಂದ ಮಲ್ಲಿಕಾರ್ಜುನ ಸ್ವಾಮಿ ಜಮೀನು ಖರೀದಿಸಿ ಅದನ್ನು ಪಾರ್ವತಿ ಅವರಿಗೆ ಉಡುಗೊರೆಯಾಗಿ ನೀಡಿದ್ದರು.
ಮುಡಾದಿಂದ ಪಾರ್ವತಿ ಅವರಿಗೆ 14 ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ಅವರು ತನಿಖೆಗೆ ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಸಿಎಂಗೆ ಹಿನ್ನಡೆಯಾಗಿತ್ತು. ರಾಜ್ಯಪಾಲರ ನಿರ್ಧಾರವನ್ನು ಉಚ್ಚ ನ್ಯಾಯಾಲಯ ಎತ್ತಿ ಹಿಡಿದಿತ್ತು. ಬಳಿಕ ಲೋಕಾಯುಕ್ತ ತನಿಖೆಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಆದೇಶ ನೀಡಿತ್ತು.ಪಿಎಂಎಲ್ಎ ಕೇಸ್, ಸಿಎಂಗೆ ಹೆಚ್ಚಿದ ಸಂಕಷ್ಟಜಾರಿ ನಿರ್ದೇಶನಾಲಯ ತನ್ನ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ)ಯ ಸೆಕ್ಷನ್ಗಳನ್ನು ಉಲ್ಲೇಖಿಸಿರುವುದರಿಂದ ಇಡಿಯು ವ್ಯಕ್ತಿಗಳನ್ನು ವಿಚಾರಣೆಗೆ ಕರೆಸಿಕೊಳ್ಳಬಹುದಾಗಿದೆ.
5 ಪ್ರತಿಕ್ರಿಯೆಗಳು
where buy generic clomiphene cost generic clomiphene for sale can i buy clomid without prescription clomid prices in south africa cost of clomiphene pill cost cheap clomid pills clomid chance of twins
This website absolutely has all of the bumf and facts I needed to this thesis and didn’t comprehend who to ask.
buy inderal pill – order clopidogrel 150mg without prescription purchase methotrexate pills
buy amoxicillin cheap – order valsartan pills ipratropium over the counter
buy azithromycin 500mg pills – order nebivolol online cheap nebivolol 5mg uk