Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೂರಜ್ ರೇವಣ್ಣ ಪುರುಷತ್ವ ಪರೀಕ್ಷೆ ಹೇಗೆ ನಡೆಯಿತು ಗೊತ್ತಾ..
    Trending

    ಸೂರಜ್ ರೇವಣ್ಣ ಪುರುಷತ್ವ ಪರೀಕ್ಷೆ ಹೇಗೆ ನಡೆಯಿತು ಗೊತ್ತಾ..

    vartha chakraBy vartha chakraಜೂನ್ 25, 2024ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.25-
    ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಬಂಧಿತನಾಗಿರುವ ಮಾಜಿ ಸಚಿವ ಎಚ್. ಡಿ.ರೇವಣ್ಣ ಅವರ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣ ಅವರಿಗೂ ಪುರುಷತ್ವ ಪರೀಕ್ಷೆ ನಡೆಸಲಾಯಿತು.
    ಬೆದರಿಕೆಯೊಡ್ಡಿ ಸಲಿಂಗಕಾಮಕ್ಕೆ ಬಳಸಿಕೊಳ್ಳುವ ಮೂಲಕ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಸಿಐಡಿ ಕಸ್ಟಡಿಯಲ್ಲಿರುವ ಸೂರಜ್‌ ರೇವಣ್ಣ ಅವರಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಲಾಯಿತು.
    ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಇವರ ತಮ್ಮ ಹಾಗೂ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಈಗಾಗಲೇ ಪುರುಷತ್ವ ಪರೀಕ್ಷೆ ಮಾಡಲಾಗಿದೆ. ಆದರೆ ಇವರಿಗೆ ಮಾಡಲಾಗದ ಪರೀಕ್ಷೆ ಮತ್ತು ಸೂರಜ್ ರೇವಣ್ಣ ಅವರಿಗೆ ಮಾಡಿದ ಪರೀಕ್ಷೆ ಸಂಪೂರ್ಣ ಭಿನ್ನವಾಗಿದೆ.
    ಈ ಪ್ರಕರಣ ಸ್ವಲ್ಪ ಭಿನ್ನವಾಗಿದ್ದು, ಆರೋಪಿ ಪುರುಷರ ಜೊತೆಗೆ ಲೈಂಗಿಕ ಕ್ರಿಯೆ ನಡೆಸಬಲ್ಲನೇ ಎಂಬುದನ್ನು ಪರೀಕ್ಷಿಸಲಾಗುತ್ತದೆ. ಸೂರಜ್‌ ಮೇಲೆ ಬಂದಿರುವ ಆರೋಪ ಬೆದರಿಕೆ ಹಾಕಿ ಸಲಿಂಗಕಾಮ ಎಸಗಿದ್ದಾಗಿರುವುದರಿಂದ, ಆರೋಪಿಗೆ ಸಲಿಂಗಕಾಮ ಸಹಜವಾದುದೇ ಎಂದು ಪರೀಕ್ಷಿಸಲು ಕೆಲವು ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಹೀಗಾಗಿ ಇದು ತಮ್ಮ ಪ್ರಜ್ವಲ್‌ಗೆ ನಡೆಸಿದ ಪರೀಕ್ಷೆಗಳಿಗಿಂತ ಸ್ವಲ್ಪ ಭಿನ್ನ. ಪ್ರಜ್ವಲ್‌ ಪ್ರಕರಣದಲ್ಲಿ ಸಂತ್ರಸ್ತರು ಮಹಿಳೆಯರಾಗಿದ್ದರು.ಸೂರಜ್‌ ಪ್ರಕರಣದಲ್ಲಿ ಸಂತ್ರಸ್ತ ಪುರುಷನಾಗಿದ್ದಾನೆ
    ಈ ಹಿನ್ನೆಲೆಯಲ್ಲಿ ಸಿಐಡಿ ಪೊಲೀಸರು ಈಗಾಗಲೇ ಸಂತ್ರಸ್ತನ ವಿಚಾರಣೆ ಹಾಗೂ ವೈದ್ಯಕೀಯ ಪರೀಕ್ಷೆಯನ್ನು ನಡೆಸಿದ್ದಾರೆ. ಮುಂದುವರಿದ ಭಾಗವಾಗಿ, ಸೂರಜ್ ರೇವಣ್ಣ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಸಂತ್ರಸ್ತನ ಮೇಲೆ ಲೈಂಗಿಕ ಆಕ್ರಮಣ ನಡೆಸಿರುವ ಸಾಧ್ಯತೆಗಳನ್ನು ಶೋಧಿಸಲಾಯಿತು.
    ಐಪಿಸಿ ಸೆಕ್ಷನ್ 377 ಹಾಕಿರುವ ಪ್ರಕರಣದಲ್ಲಿ ವೈದ್ಯಕೀಯ ಪರೀಕ್ಷೆ ಬಹಳ ಮುಖ್ಯವಾಗಿದೆ. ಇಲ್ಲಿ ಸಂತ್ರಸ್ತ ಹಾಗೂ ಆರೋಪಿ ಇಬ್ಬರ ವೈದ್ಯಕೀಯ ಪರೀಕ್ಷೆಯೂ ಮುಖ್ಯವಾಗಿದೆ. ಸಂತ್ರಸ್ತ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದಾನೆ. ಆರೋಪಿ ಸೂರಜ್ ರೇವಣ್ಣ ಸದ್ಯ ಸಿಐಡಿ ಕಸ್ಟಡಿಯಲ್ಲಿ ಇದ್ದಾರೆ.
    ತಮ್ಮ ಪ್ರಜ್ವಲ್‌ ರೇವಣ್ಣಗೆ ಮೂರು ಬಾರಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿತ್ತು. ಮೂರು ಬೇರೆ ಬೇರೆ ಪ್ರಕರಣಗಳಲ್ಲಿ ಈ ಪರೀಕ್ಷೆ ನಡೆಸಲಾಗಿದ್ದು, “ಪದೇ ಪದೆ ಖಾಸಗಿ ಅಂಗವನ್ನು ತೋರಿಸಲು ಮುಜುಗರವಾಗುತ್ತದೆ” ಎಂದು ನ್ಯಾಯಾಧೀಶರ ಮುಂದೆ ಪ್ರಜ್ವಲ್‌ ಅಲವತ್ತುಕೊಂಡಿದ್ದರು. ಇದೀಗ ಅಣ್ಣನೂ ಈ ಪರೀಕ್ಷೆಗೆ ಗುರಿಯಾಗಿದ್ದಾರೆ. ಸೂರಜ್‌ ಎಷ್ಟು ಬಾರಿ ಪರೀಕ್ಷೆಗೊಳಗಾಗಲಿದ್ದಾನೆ ಎಂದು ನೋಡಬೇಕಿದೆ.
    ಆಪ್ತನ ವಿರುದ್ಧವೂ ದೂರು:
    ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಡಾ.ಸೂರಜ್‌ ರೇವಣ್ಣ ಆಪ್ತ, ನಾಪತ್ತೆಯಾಗಿರುವ ಶಿವಕುಮಾರ್‌ ವಿರುದ್ಧವೂ ಸಂತ್ರಸ್ತ ದೂರು ದಾಖಲಿಸಿದ್ದಾರೆ. ನನಗೆ ಆಗಿರುವ ಅನ್ಯಾಯದ ಬಗ್ಗೆ ಶಿವಕುಮಾರ್ ಬಳಿ ಹೇಳಿದ್ದೆ, ನನಗೆ ದೈಹಿಕ ಹಿಂಸೆ ಆಗಿದ್ದರೂ ಶಿವಕುಮಾರ್ ಆಸ್ಪತ್ರೆಗೆ ಹೋಗಲು ಬಿಟ್ಟಿರಲಿಲ್ಲ ಎಂದು ಸಂತ್ರಸ್ತ ಆರೋಪಿಸಿದ್ದಾರೆ.
    ಪ್ರಕರಣದಲ್ಲಿ ಎರಡನೇ ಆರೋಪಿಯಾಗಿ ಸೂರಜ್‌ ಆಪ್ತ ಶಿವಕುಮಾರ್ ಹೆಸರು ಸೇರ್ಪಡೆ ಮಾಡಲಾಗಿದೆ. ಶಿವಕುಮಾರ್ ಹೊಳೆನರಸೀಪುರ ತಾಲೂಕಿನ ಹನುಮನಹಳ್ಳಿ ಗ್ರಾಮದವನು. ಸೂರಜ್‌ ರೇವಣ್ಣ ವಿರುದ್ಧ ಸಂತ್ರಸ್ತ ದೂರು ನೀಡಿದ ಬಳಿಕ, ಸಂತ್ರಸ್ತನ ವಿರುದ್ಧ ದೂರು ಶಿವಕುಮಾರ್ ನಾಪತ್ತೆಯಾಗಿದ್ದಾನೆ.

    Verbattle
    Verbattle
    Verbattle
    #JDS Bangalore crime Government Karnataka News Politics Trending Varthachakra ಅಪಘಾತ ಅಪರಾಧ ಸುದ್ದಿ ಕಾನೂನು ನ್ಯಾಯ ಪ್ರಜ್ವಲ್ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಹಾಲು ಮಾರಾಟ ದರ ಹೆಚ್ಚಳ ಮಾಡಿದ KMF.
    Next Article ದರ್ಶನ್ ವಿರುದ್ಧ Chargsheet ಸಿದ್ದ
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RicardoCor ರಲ್ಲಿ ಕಾಲ್ ಗರ್ಲ್ ಎಂದು ತನ್ನ ಪತ್ನಿಯ ಫೋಟೋ ಹಾಕಿದ ಪತಿ | Call Girl
    • Williamfus ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • RichardLorum ರಲ್ಲಿ ಚುನಾವಣೆಯಲ್ಲಿ ವಲಸಿಗರ ದರ್ಬಾರ್ | Lok Sabha 2024
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.