ಬೆಂಗಳೂರು,ಮಾ.26:
ರಾಜ್ಯದ ನಗರ ಪ್ರದೇಶಗಳ ಸಮಗ್ರ ಮೂಲ ಸೌಕರ್ಯ ಅಭಿವೃದ್ಧಿ ದೃಷ್ಟಿಯಿಂದ ಕೇಂದ್ರ ಸರ್ಕಾರ ಸ್ಥಾಪನೆ ಮಾಡಿದ್ದ ಸ್ಮಾರ್ಟ್ ಸಿಟಿ ಸಂಸ್ಥೆಗಳು ಕಣ್ಮರೆಯಾಗಲಿವೆ.
ಬೆಳಗಾವಿ ತುಮಕೂರು ಬೆಂಗಳೂರು ಮಂಗಳೂರು ದಾವಣಗೆರೆ ಶಿವಮೊಗ್ಗ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗಳನ್ನು ಸ್ಮಾರ್ಟ್ ಸಿಟಿಯಾಗಿ ಅಭಿವೃದ್ಧಿ ಪಡಿಸಲು ತೀರ್ಮಾನಿಸಿದ್ದ ಕೇಂದ್ರ ಸರ್ಕಾರ ಏಳು ಮಹಾನಗರ ಪಾಲಿಕೆಗಳಲ್ಲಿ ಸ್ಮಾರ್ಟ್ ಸಿಟಿ ಸಂಸ್ಥೆಗಳನ್ನು ಅಸ್ತಿತ್ವಕ್ಕೆ ತಂದಿತ್ತು.
ಕೇಂದ್ರ ಸರ್ಕಾರ ನಗರ ಪ್ರದೇಶದ ಮೂಲ ಸೌಕರ್ಯ ಅಭಿವೃದ್ಧಿಗೆ ನೀಡುವ ಅನುದಾನ ಸ್ಮಾರ್ಟ್ ಸಿಟಿಗೆ ಬರಲಿದ್ದು ಅದಕ್ಕೆ ನಿರ್ದಿಷ್ಟ ಪಡಿಸಿದ ಅನುಪಾತದ ಅನ್ವಯ ರಾಜ್ಯ ಸರ್ಕಾರ ಕೂಡ ಹಣ ಬಿಡುಗಡೆ ಮಾಡಬೇಕಿತ್ತು ಈ ಹಣದಲ್ಲಿ ಸ್ಮಾರ್ಟ್ ಸಿಟಿ ಸಂಸ್ಥೆ ತಮ್ಮ ನಗರ ವ್ಯಾಪ್ತಿಯಲ್ಲಿ ಮೂಲ ಸೌಕರ್ಯ ಕಲ್ಪಿಸಲು ಹಲವು ಯೋಜನೆಗಳನ್ನು ಸಿದ್ಧಪಡಿಸಿ ಅವುಗಳನ್ನು ಅನುಷ್ಠಾನಕ್ಕೆ ತರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದವು.
ಕೇವಲ ಐದು ವರ್ಷಗಳ ಅವಧಿಗೆ ಮಾತ್ರ ಎಂದು ಘೋಷಿಸಿ ಸ್ಮಾರ್ಟ್ ಸಿಟಿ ಸಂಸ್ಥೆಗಳನ್ನು ಹುಟ್ಟುಹಾಕಿದ ಕೇಂದ್ರ ಸರ್ಕಾರ ಇದರ ಅವಧಿಯನ್ನು ಮತ್ತೆ ಐದು ವರ್ಷಕ್ಕೆ ವಿಸ್ತರಿಸಿತ್ತು ಆದರೆ ಈಗ ಇವುಗಳ ಅವಧಿಯನ್ನು ವಿಸ್ತರಿಸಲು ನಿರಾಕರಿಸಿದ್ದು ಆರ್ಥಿಕ ಅನುದಾನ ಕೂಡ ಸ್ಥಗಿತಗೊಳಿಸಿದೆ. ಪ್ರಸಕ್ತ ಬಜೆಟ್ ನಲ್ಲಿ ಯಾವುದೇ ಸ್ಮಾರ್ಟ್ ಸಿಟಿಗೆ ಕೇಂದ್ರ ಸರ್ಕಾರ ಅನುದಾನ ನಿಗದಿ ಮಾಡಿಲ್ಲ. ನಗರ ಪ್ರದೇಶಗಳ ಸ್ಥಳೀಯ ಆಡಳಿತ ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ ಹೀಗಾಗಿ ರಾಜ್ಯ ಸರ್ಕಾರಗಳು ಈಗಾಗಲೇ ಚಾಲನೆಯಲ್ಲಿರುವ ಯೋಜನೆಗಳನ್ನು ಮುಂದುವರಿಸಬೇಕು ಮತ್ತು ಹೊಸದಾಗಿ ಯೋಜನೆಗಳನ್ನು ಕೈಗೊಳ್ಳಲು ಸ್ವಾತಂತ್ರ್ಯವಿದೆ ಹೀಗಾಗಿ ಸ್ಮಾರ್ಟ್ ಸಿಟಿ ಸಂಸ್ಥೆಗಳನ್ನು ಉಳಿಸಿಕೊಳ್ಳುವುದು ಅಥವಾ ಮುಚ್ಚುವುದು ಅವುಗಳ ವಿವೇಚನೆಗೆ ಬಿಟ್ಟಿದ್ದು ಎಂದು ತಿಳಿಸಿದೆ.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಎಲ್ಲಾ ಸ್ಮಾರ್ಟ್ ಸಿಟಿಗಳ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಿದರು.
ಈ ಸಭೆಯಲ್ಲಿ ಸ್ಮಾರ್ಟ್ ಸಿಟಿ ಗಳು ಕೈಗೊಂಡಿರುವ ಯೋಜನೆಗಳು ಮತ್ತು ಅವುಗಳ ಪ್ರಗತಿಯನ್ನು ಪರಿಶೀಲ ನಡೆಸಿದ ನಂತರ ಇನ್ನು ಮುಂದೆ ನಮಗೆ ಸ್ಮಾರ್ಟ್ ಸಿಟಿ ಸಂಸ್ಥೆಗಳ ಅಗತ್ಯವಿಲ್ಲ ಇವುಗಳು ನಿರ್ವಹಿಸುತ್ತಿದ್ದ ಎಲ್ಲ ಕೆಲಸವನ್ನು ಸಂಬಂಧಪಟ್ಟ ಪಾಲಿಕೆಗಳಿಗೆ ವರ್ಗಾಯಿಸಬಹುದಾಗಿದೆ ಎಂದು ಹೇಳಿದ ಅವರು ಈ ಬಗ್ಗೆ ವರದಿ ನೀಡುವಂತೆ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದರು ಎಂದು ಗೊತ್ತಾಗಿದೆ.
ಒಟ್ಟಾರೆ ವಿದ್ಯಮಾನಗಳನ್ನು ಗಮನಿಸಿದಾಗ ತುಮಕೂರು, ಬೆಳಗಾವಿ, ಮಂಗಳೂರು ಸೇರಿದಂತೆ ರಾಜ್ಯದ ಏಳು ಮಹಾನಗರ ಪಾಲಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸ್ಮಾರ್ಟ್ ಸಿಟಿ ಸಂಸ್ಥೆಗಳು ಇನ್ನೊಂದೆರಡು ತಿಂಗಳಲ್ಲಿ ಸ್ಥಗಿತಗೊಳ್ಳಲಿವೆ. ಇದರ ಪರಿಣಾಮ ಈ ಏಳು ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸುಮಾರು 300ಕ್ಕೂ ಹೆಚ್ಚು ಮಂದಿ ನೌಕರರು ಕೆಲಸ ಕಳೆದುಕೊಳ್ಳಲಿದ್ದಾರೆ.
Previous Articleಬಿಜೆಪಿಯಿಂದ ಯತ್ನಾಳ್ ಉಚ್ಚಾಟನೆ
Next Article ಸತೀಶ್ ಜಾರಕಿಹೊಳಿಗೆ ದೇವೇಗೌಡರು ಹೇಳಿದ ಗುಟ್ಟೇನು ಗೊತ್ತಾ

3 ಪ್ರತಿಕ್ರಿಯೆಗಳು
Unveil a tapestry of games woven with luck and skill. crown coin casino provides forums for player interactions. Connect, compete, and collect wins!
Unveil a tapestry of games woven with luck and skill. crown coin casino provides forums for player interactions. Connect, compete, and collect wins!
Unveil a tapestry of games woven with luck and skill. crown coin casino provides forums for player interactions. Connect, compete, and collect wins!