Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಾಲು ದರ ಹೆಚ್ಚಳಕ್ಕೆ ಸಿಎಂ ರೆಡ್ ಸಿಗ್ನಲ್
    ಸುದ್ದಿ

    ಹಾಲು ದರ ಹೆಚ್ಚಳಕ್ಕೆ ಸಿಎಂ ರೆಡ್ ಸಿಗ್ನಲ್

    vartha chakraBy vartha chakraಮಾರ್ಚ್ 27, 202527 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.24:
    ನೌಕರರ ವೇತನ ಹೆಚ್ಚಳ ಸಾಗಾಣಿಕೆ ವೆಚ್ಚ ಮತ್ತು ಹಾಲು ಉತ್ಪಾದಕರಿಗೆ ನೀಡುತ್ತಿರುವ ಹೆಚ್ಚುವರಿ ದರಕ್ಕೆ ಅನುಗುಣವಾಗಿ ಹಾಲು ಮಾರಾಟ ದರ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಕೆಎಂಎಫ್ ಮಾಡಿರುವ ಮನವಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ.
    ಪ್ರತಿ ಲೀಟರ್ ಹಾಲು, ಮಾರಾಟ ದರ ಐದು ರೂಪಾಯಿ ಹೆಚ್ಚಳ ಮಾಡುವಂತೆ ಕೋರಿ ಎಲ್ಲಾ ಹಾಲು ಒಕ್ಕೂಟಗಳು ಮನವಿ ಸಲ್ಲಿಸಿವೆ.ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಶುಸಂಗೋಪನೆ ಸಚಿವ ಕೆ ವೆಂಕಟೇಶ್ ಅವರೊಂದಿಗೆ ಹಾಲು ಒಕ್ಕೂಟದ ಪದಾಧಿಕಾರಿಗಳು ಮತ್ತು ಅಧಿಕಾರಿಗಳ ಜೊತೆ ಸಭೆಯ ನಡೆಸಿದರು.
    ಈ ಸಭೆಯಲ್ಲಿ ಹಾಲು ಒಕ್ಕೂಟಗಳು ಇರುವುದು ರೈತರಿಗೆ ಅನುಕೂಲ ಮಾಡುವುದಕ್ಕೆ ಮಾತ್ರ, ಲಾಭ ಮಾಡುವುದಕ್ಕಲ್ಲ ಎಂದು ಹೇಳಿದ ಅವರು ದರ ಏರಿಕೆಯ ಪ್ರಸ್ತಾಪದ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
    ಸಭೆಯಲ್ಲಿ ಹಾಲು ಒಕ್ಕೂಟಗಳ ಪ್ರತಿನಿಧಿಗಳು ಹೆಚ್ಚಳ ಮಾಡಲಾಗುವ ಐದು ರೂಪಾಯಿಯಲ್ಲಿ ಮೂರು ರೂಪಾಯಿಯನ್ನು ಹಾಲು ಉತ್ಪಾದಕರಿಗೆ ನೀಡಲಾಗುವುದು ಉಳಿದ ಎರಡು ರೂಪಾಯಿ ಒಕ್ಕೂಟಗಳು ಉಳಿಸಿಕೊಳ್ಳಲಿವೆ ಎಂದು ಮನವರಿಕೆ ಮಾಡಿಕೊಟ್ಟಿದ್ದು ನಷ್ಟದಿಂದ ಒಕ್ಕೂಟಗಳು ಹೊರಬರಬೇಕಾದರೆ ದರ ಹೆಚ್ಚಳ ಅನಿವಾರ್ಯ ಎಂದು ಪ್ರತಿಪಾದಿಸಿದ್ದಾರೆ
    ಆದರೆ,ಒಕ್ಕೂಟಗಳ ದರ ಏರಿಕೆಯ ಒತ್ತಡಕ್ಕೆ ಮಣಿಯದ ಸಿಎಂಹೆಚ್ಚಳದ ಹಣ ಸಂಪೂರ್ಣವಾಗಿ ರೈತರಿಗೆ ವರ್ಗಾಯಿಸಲೇಬೇಕು ಎನ್ನುವ ನಿಲುವಿಗೆ ಅಂಟಿಕೊಂಡರು. ಹೀಗಾಗಿ ದರ ಹೆಚ್ಚಳದ ಬಗ್ಗೆ ಯಾವುದೇ ತೀರ್ಮಾನ ಕೈಗೊಳ್ಳದ ಸಭೆ ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿದ ಬಳಿಕ ದರ ಹೆಚ್ಚಳದ ಬಗ್ಗೆ ತೀರ್ಮಾನ ಕೈಗೊಳ್ಳಲು ನಿರ್ಧರಿಸಿದೆ.
    ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾಲು ಒಕ್ಕೂಟಗಳು ಖರ್ಚು ವೆಚ್ಚ ಕಡಿಮೆ ಮಾಡಬೇಕು. ಪಾರದರ್ಶಕತೆಯನ್ನು ಪಾಲಿಸಬೇಕು. ಒಕ್ಕೂಟಗಳು ಅಗತ್ಯಕ್ಕಿಂತ ಹೆಚ್ಚು ಜನರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಬಾರದು. ಇದರಿಂದಾಗಿಯೇ ವೆಚ್ಚ ಹೆಚ್ಚಾಗುತ್ತಿದೆ. ಅನಗತ್ಯ ಆಡಳಿತಾತ್ಮಕ ವೆಚ್ಚಗಳಿಂದಾಗಿಯೇ ಕೆಲವು ಒಕ್ಕೂಟಗಳು ನಷ್ಟ ಅನುಭವಿಸುವಂತಾಗಿದೆ ಎಂದು ಹೇಳಿದರು
    ಆಡಳಿತಾತ್ಮಕ ವೆಚ್ಚ ಯಾವುದೇ ಕಾರಣಕ್ಕೂ ಶೇ.2ಕ್ಕಿಂತ ಹೆಚ್ಚಾಗಬಾರದು ಎಂದು ಸಲಹೆ ಮಾಡಿದ ಅವರು ಮುಂದಿನ ಮೂರು ತಿಂಗಳಲ್ಲಿ ಆಡಳಿತಾತ್ಮಕ ವೆಚ್ಚವನ್ನು 2.5% ಕಡ್ಡಾಯವಾಗಿ ಇಳಿಸಬೇಕು. ಅಲ್ಲಿಂದ ಮುಂದಿನ ಮೂರು ತಿಂಗಳ ಒಳಗಾಗಿ ಎಲ್ಲಾ ಒಕ್ಕೂಟಗಳು ಆಡಳಿತಾತ್ಮಕ ವೆಚ್ಚವನ್ನು ಶೇ.2ಕ್ಕಿಂತ ಕೆಳಗೆ ಇಳಿಸಲೇಬೇಕು ಎಂದು ತಾಕೀತು ಮಾಡಿದರು
    ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆಯಿದೆ. ಹಾಲಿನ ದರ ಹೆಚ್ಚಳ ಮಾಡಿದರೆ ಉತ್ಪಾದನೆ ಹೆಚ್ಚಾಗುತ್ತದೆ. ಇದರ ಲಾಭ ಪೂರ್ಣವಾಗಿ ರೈತರಿಗೆ ತಲುಪಬೇಕು ಎಂಬುವುದು ಸರ್ಕಾರದ ನಿಲುವು ಎಂದು ಹೇಳಿದರು.

    ಬೆಂಗಳೂರು ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬೇಸಿಗೆಯಲ್ಲಿ ಎಷ್ಟು ವಿದ್ಯುತ್ ಬೇಕು ಗೊತ್ತಾ
    Next Article ಶಾಸಕರ ಹತ್ಯೆಗೆ ಸುಪಾರಿ.?
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://mellstroy-casino.io ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • DonaldBrose ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • compare prescription drug prices ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe