Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹುಬ್ಬಳ್ಳಿ ಗಲಭೆ–ಡಿಜಿಟಲ್ ಸಾಕ್ಷ್ಯ..
    ಸುದ್ದಿ

    ಹುಬ್ಬಳ್ಳಿ ಗಲಭೆ–ಡಿಜಿಟಲ್ ಸಾಕ್ಷ್ಯ..

    vartha chakraBy vartha chakraಏಪ್ರಿಲ್ 25, 2022Updated:ಏಪ್ರಿಲ್ 25, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹುಬ್ಬಳ್ಳಿ : ಏ.25-ಹಳೆ ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿ ಎಐಎಂಐಎಂ ಪಕ್ಷದ ನಗರ ಘಟಕದ ಅಧ್ಯಕ್ಷ ದಾದಾಪೀರ್‌ ಬೆಟಗೇರಿ ಜೊತೆಗೆ ಸಿಕ್ಕಿಬಿದ್ದಿರುವ ಎಂಟು ಆರೋಪಿಗಳನ್ನು ನಗರ ಪೊಲೀ​ಸರು ತೀವ್ರ ವಿಚಾರಣೆ ನಡೆ​ಸಿ​ದ್ದಾ​ರೆ.

    ದಾದಾಪೀರ್‌ ಬೆಟಗೇರಿ ಜೊತೆಗೆ ಮಹಮ್ಮದ್‌ ರಫಿಕ್‌ ಪಿಂಜಾರ, ಇಮ್ರಾನ್‌ಖಾನ್‌ ಸೌದಾಗರ್‌, ಅಕ್ಬರ್‌ಲಿ ಯಾದವಾಡ, ಸಮೀರ ಹರಿಹರ, ಸಾದಿಕ್‌ ಖಾನ್‌ ಪಠಾಣ್‌, ಸೈಫ್‌ಖಾನ್‌ ಜಾಗೀರ್‌ದಾರ್‌, ಸಾದಿಕ್‌ ಮಕಾಂದಾರ್‌ ನನ್ನು ತೀವ್ರ ವಿಚಾರಣೆ ನಡೆಸಿ‌ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.

    ಇಲ್ಲಿಯವರೆಗೆ ಗಲಭೆಗೆ ಕಾರಣರಾದ ಎಐ​ಎಂಐ​ಎಂನ ಮೂವರು ಪ್ರಮು​ಖ​ರು ಸೇರಿ  146 ಮಂದಿಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಲಾಬೂರಾಮ್ ಅವರು ತಿಳಿಸಿದ್ದಾರೆ.

    ಡಿಜಿಟಲ್‌ ಸಾಕ್ಷ್ಯ:

    ಇನ್ನೊಂದೆಡೆ ಇಡೀ ಗಲ​ಭೆಯ ಮಾಸ್ಟರ್‌ಮೈಂಡ್‌ ಎನ್ನಲಾಗುತ್ತಿರುವ ವಸೀಂ ಪಠಾಣ್‌ ಟ್ಯಾಬ್‌ ವಶಪಡಿಸಿಕೊಂಡಿರುವ ಪೊಲೀಸರು ಡಿಜಿಟಲ್‌ ಸಾಕ್ಷ್ಯ ಕಲೆಹಾಕುವ ಕೆಲಸ ಆರಂಭಿ​ಸಿ​ದ್ದಾ​ರೆ. ಗಲಭೆ ಬಳಿಕ ವಸೀಂ ಪಠಾಣ್‌ ತನ್ನ ಮೊಬೈಲ್‌ ಹಾಗು ಸಿಮ್‌ ಅನ್ನು ಬದಲಿಸಿದ್ದಾನೆ. ವಶಪಡಿಸಿಕೊಂಡ ಟ್ಯಾಬ್‌ನಲ್ಲಿ ಕೆಲ ಸಂಘಟನೆಗಳ ಜತೆ ನಡೆಸಿರುವ ಇ-ಮೇಲ್‌ ಕೂಡ ಪತ್ತೆಯಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

    ಇನ್ನು ಗಲಭೆ ವೇಳೆ ಕೆಲಹೊತ್ತು ಸಂಘಟನೆಯೊಂದರ ನೀಲಿ ಧ್ವಜ ಕೂಡ ಹಾರಾಡಿದೆ. ಈ ಕುರಿತು ವಿಡಿಯೋ ಸಹ ಹರಿದಾಡುತ್ತಿದ್ದು, ಇದಕ್ಕೆ ಸಂಬಂಧಿಸಿ ಕೆಲವರನ್ನು ಪೊಲೀಸರು ತನಿಖೆಗೆ ಒಳಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    12 ಸಾವಿರಕ್ಕೂ ಹೆಚ್ಚು ಕಾಲ್‌:

    ಗಲಭೆ ನಡೆದ ಏ.16ರಂದು ಹಳೇಹುಬ್ಬಳ್ಳಿ ಪೊಲೀಸ್‌ ಠಾಣೆ ಸುತ್ತಲಿನ ನಾಲ್ಕೈದು ಟವರ್‌ಗಳಿಂದ ರಾತ್ರಿ 8ರಿಂದ 12 ರವರೆಗೆ 12 ಸಾವಿರಕ್ಕೂ ಹೆಚ್ಚು ಮೊಬೈಲ್‌ ಕರೆಗಳು ಹೋಗಿವೆ ಎಂಬುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ರಾತ್ರಿ ವಿನಿಮಯವಾಗಿರುವ ಕರೆಗಳ ಮಾಹಿತಿ ಸಂಗ್ರಹಕ್ಕಾಗಿಯೇ ಪ್ರತ್ಯೇಕ ತಂಡ ರಚಿಸಲಾಗಿದೆ. ಪ್ರತಿನಿತ್ಯ ಅಲ್ಲಿರುವ ಮೊಬೈಲ್‌ ಟವರ್‌ ಮೂಲಕ ಗರಿಷ್ಠ 80 ಸಾವಿರ ಕರೆಗಳು ವಿನಿಮಯವಾಗುತ್ತಿದ್ದವು. ಆದರೆ, ಗಲಭೆ ನಡೆದ ದಿನ 90 ಸಾವಿ​ರಕ್ಕೂ ಹೆಚ್ಚು ಕರೆಗಳು ಹೋಗಿವೆ.

    ಮುಲಾಜಿಲ್ಲದೆ ಕ್ರಮ:

    ಹಳೇ ಹುಬ್ಬಳ್ಳಿ ಗಲಭೆ ಪ್ರಕಪ್ರಕ​ರ​ಣದಲ್ಲಿ ಆರೋ​ಪಿ​ಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿಂದೆ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದ ಕೆಲವರು ಗಲಭೆಯಲ್ಲಿ ಪಾಲ್ಗೊಂಡಿರುವುದು ಕಂಡುಬಂದಿದೆ. ಅಲ್ಲದೆ, ನಗರದ ಇತರೆಡೆ ಕೂಡ ಕ್ರಿಮಿನಲ್‌ ಪ್ರಕರಣದಲ್ಲಿ ಪಾಲ್ಗೊಂಡರೂ ಗೂಂಡಾ ಕಾಯ್ದೆ​ಯಡಿ ಕಠಿಣ ಕ್ರಮ ವಹಿಸಲಾಗುವುದು. ಬಂಧಿತರಲ್ಲಿ ಇಬ್ಬರು ರೌಡಿ ಶೀಟರ್‌ಗಳಿದ್ದಾರೆ.

    ಹೊಸದಾಗಿ ರೌಡಿ ಶೀಟರ್‌ ತೆರೆಯುವ ಕುರಿತು ಕ್ರಮ ಕೈಗೊಳ್ಳಲಾಗುವುದು. ವಿಡಿಯೋ, ಸಿಸಿಟಿವಿ ಫುಟೇಜ್‌ ಸೇರಿ ಇತರ ಸಾಕ್ಷ್ಯ ಆಧರಿಸಿ ಬಂಧನ ಮುಂದುವರಿದಿದೆ ಎಂದು ಕಮಿಷನರ್‌ ಲಾಬೂರಾಮ್‌ ತಿಳಿ​ಸಿ​ದ್ದಾ​ರೆ.

    Verbattle
    Verbattle
    Verbattle
    #Hubli
    Share. Facebook Twitter Pinterest LinkedIn Tumblr Email WhatsApp
    Previous Articleಅಣ್ಣಾವ್ರ ಚಿತ್ರದ ಸಾಲುಗಳು ಈತನಿಗೆ ಕಂಠಪಾಠ!!!
    Next Article ಕೋವಿಡ್ ಇದೆ ..ಮಾಸ್ಕ್ ಹಾಕಿ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Scyocv ರಲ್ಲಿ ಕುಡಿದು ಮಾಡಿದ ರಂಪಾಟ.
    • LinwoodGah ರಲ್ಲಿ ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    • Scyocv ರಲ್ಲಿ ಕುಡಿದು ಮಾಡಿದ ರಂಪಾಟ.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.