Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಒಂದೇ ದಿನದಲ್ಲಿ ಚಾಲನೆ ಪಡೆದ 108 Namma Clinic ಗಳು
    ಬೆಂಗಳೂರು

    ಒಂದೇ ದಿನದಲ್ಲಿ ಚಾಲನೆ ಪಡೆದ 108 Namma Clinic ಗಳು

    vartha chakraBy vartha chakraಫೆಬ್ರವರಿ 10, 2023Updated:ಮಾರ್ಚ್ 20, 2023160 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬಡವರು, ಮಧ್ಯಮ ವರ್ಗದವರು, ಕೂಲಿಕಾರ್ಮಿಕರು ಸೇರಿದಂತೆ ಎಲ್ಲ ವರ್ಗದ ಜನರಿಗೂ ಅತಿ ಕಡಿಮೆ ವೆಚ್ಚದಲ್ಲಿ ಉತ್ತಮ ವೈದ್ಯಕೀಯ ಸೇವೆ ಒದಗಿಸುವ ಮಹತ್ವಾಕಾಂಕ್ಷೆಯಿಂದ ರಾಜ್ಯ ಸರ್ಕಾರವು ಫೆಬ್ರವರಿ 7, 2023 ರಂದು ರಾಜ್ಯಾದ್ಯಂತ ವಿವಿಧ ನಗರಗಳಲ್ಲಿ ಒಂದೇ ದಿನದಲ್ಲಿ  108 ನಮ್ಮ ಕ್ಲಿನಿಕ್  (Namma Clinic) ಗಳಿಗೆ ಚಾಲನೆ ನೀಡಿದೆ.

    ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ (Mahalakshmi Layout) ವಿಧಾನಸಭಾ ಕ್ಷೇತ್ರದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಚಿವರಾದ ಗೋಪಾಲಯ್ಯ (K Gopalaiah), ಡಾ.ಕೆ.ಸುಧಾಕರ್ (Dr K Sudhakar), ಸಮ್ಮುಖದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು (Basavaraj Bommai) ಎಲ್ಲ 108 ‘ನಮ್ಮ ಕ್ಲಿನಿಕ್’ ಗಳಿಗೂ ಅಧಿಕೃತವಾಗಿ ಚಾಲನೆ ನೀಡಿದರು. ಇದೇ ಕಾರ್ಯಕ್ರಮದಲ್ಲಿ, ಮಹಾಲಕ್ಷ್ಮಿ ಲೇಔಟ್‌ನ ಮಹಾಲಕ್ಷ್ಮಿಪುರ ವಾರ್ಡ್‌ನಲ್ಲಿ ಹೊಸದಾಗಿ ಸ್ಥಾಪಿಸಲಾದ ನಮ್ಮ ಕ್ಲಿನಿಕ್ ಅನ್ನು ಉದ್ಘಾಟಿಸಿ ಮತ್ತುಳಿದ 107 ಕ್ಲಿನಿಕ್ ಗಳಿಗೆ ಆನ್ಲೈನ್ ಮೂಲಕ ಚಾಲನೆ ನೀಡಿದರು.

    ರಾಜ್ಯ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮಾತನಾಡಿ, “108 ನಮ್ಮ ಕ್ಲಿನಿಕ್ ಗಳ ಪ್ರಾರಂಭವು ಸಾರ್ವತ್ರಿಕ ಮತ್ತು ಸಮಗ್ರ ಪ್ರಾಥಮಿಕ ಆರೋಗ್ಯ ರಕ್ಷಣೆಯ ಹೊಸ ಯುಗಕ್ಕೆ ನಾಂದಿ ಹಾಡಿದೆ. ನಮ್ಮ ಚಿಕಿತ್ಸಾಲಯಗಳ ಉದ್ದೇಶವು ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒಂದೇ ಸೂರಿನಡಿ ಸಂಯೋಜಿಸುವುದು ಮತ್ತು ಜನರಿಗೆ ಗುಣಮಟ್ಟದ ಪ್ರಾಥಮಿಕ ಆರೈಕೆಯನ್ನು ಒದಗಿಸುವುದು. ಈ ಹಿಂದೆ ನಗರ ಪ್ರದೇಶಗಳಲ್ಲಿಯೂ 50-60 ಸಾವಿರ ಜನಸಂಖ್ಯೆಗೆ ಕೇವಲ ಒಂದು ಕ್ಲಿನಿಕ್ ಮಾತ್ರ ಕಾರ್ಯನಿರ್ವಹಿಸುತ್ತಿತ್ತು. ನಮ್ಮ ಕ್ಲಿನಿಕ್ ಸ್ಥಾಪನೆಯಿಂದ ಪ್ರತಿ ಕ್ಲಿನಿಕ್ 15-20 ಸಾವಿರ ಜನರಿಗೆ ಸೇವೆ ಒದಗಿಸಬಹುದು. ನಮ್ಮ ಕ್ಲಿನಿಕ್‍ಗಳಲ್ಲಿ ರೆಫರಲ್ ಸೇವೆಗಳನ್ನು ಒದಗಿಸುವ ಮುಖಾಂತರ ದ್ವಿತೀಯ ಮತ್ತು ತೃತೀಯ ಹಂತದ ಆಸ್ಪತ್ರೆಗಳಿಗೂ ಇವು ಸಂಪರ್ಕ ಕಲ್ಪಿಸುತ್ತಿವೆ. ಆರೋಗ್ಯ ಸೇವೆಗಳನ್ನು ಪಡೆಯಲು ತಗುಲುವ ವೆಚ್ಚ ಕಡಿಮೆ ಮಾಡಲು ಸಹಕಾರಿಯಾಗಲಿದೆ. ನಗರ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ವಿಕೇಂದ್ರೀಕರಿಸಲಾಗುತ್ತಿದೆ” ಎಂದು ಹೇಳಿದರು.

    ಇವುಗಳ ವಿಶೇಷತೆ ಏನು?

    • ಎಲ್ಲಾ ವಯೋಮಾನದವರ ರೋಗಪತ್ತೆ, ಚಿಕಿತ್ಸೆ, ಆರೈಕೆ, ಲಸಿಕಾಕರಣ ಮತ್ತು ಪ್ರಯೋಗಾಲಯದ ಸೇವೆ
    • ಹೆಚ್ಚುವರಿ ಆರೋಗ್ಯ ಸೌಲಭ್ಯಗಳು
    • ಪ್ರಸವಪೂರ್ವ, ಪ್ರಸವಪೂರ್ವ ಆರೈಕೆ, ಮಾನಸಿಕ ಆರೋಗ್ಯ, ವೃದ್ಧರ ಆರೈಕೆ ಗಳನ್ನು ಒಳಗೊಂಡು 12 ಆರೋಗ್ಯ ಸೇವೆಗಳ ಪ್ಯಾಕೇಜ್
    • ಸಂಪೂರ್ಣ ಉಚಿತ ಸೇವೆ
    • ಹೆಚ್ಚುವರಿ ಚಿಕಿತ್ಸೆಗೆ ವಿಶೇಷ ಆಸ್ಪತ್ರೆಗಳಿಗೆ ಉಚಿತ ರೆಫರಲ್ ಸೇವೆಗಳು (ಅಗತ್ಯವಿದ್ದಲ್ಲಿ ಮಾತ್ರ)

    ಸೌಕರ್ಯಗಳು –

    ನಿರೀಕ್ಷಣಾ ಸ್ಥಳ, ಹೊರ ರೋಗಿಗಳ ತಪಾಸಣೆ ಕೊಠಡಿ (OPD), ವ್ಯಾಕ್ಸಿನೇಷನ್ ಕೊಠಡಿ (Vaccination Room), ಪ್ರಯೋಗಶಾಲೆ (Laboratory), ಯೋಗ, ಔಷಧಿ ದಾಸ್ತಾನು ಮತ್ತು ವಿತರಣಾ ಕೊಠಡಿ (Dispensary), ಆಡಳಿತ ಕಚೇರಿ, ಆಸ್ಪತ್ರೆ ಸಿಬ್ಬಂದಿ, ಮಹಿಳೆ ಮತ್ತು ಪುರುಷ ರೋಗಿಗಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ.

    ಸಿಬ್ಬಂದಿ –

    ನಮ್ಮ ಕ್ಲಿನಿಕ್‍ಗಳಲ್ಲಿ ತಲಾ ಒಬ್ಬರು ವ್ಯೆದ್ಯಾಧಿಕಾರಿ, ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು, ಡಿ-ದರ್ಜೆ ನೌಕರರು ಇರಲಿದ್ದಾರೆ.

    ಸೇವಾ ಸಮಯ –

    ನಮ್ಮ ಕ್ಲಿನಿಕ್‍ಗಳು ಸೋಮವಾರದಿಂದ ಶನಿವಾರದವರೆಗೆ  ಬೆಳಗ್ಗೆ 9 ಗಂಟೆಯಿಂದ ಸಂಜೆ 4.30ರವರೆಗೆ ಕಾರ್ಯಾನಿರ್ವಹಿಸುತ್ತಿವೆ.

    #bangalore #drsudhakar #karnataka basavaraj bommai bommai HAL m Mahalakshmi Layout mi minister k gopalaiah namma clinic SAR ಆರೋಗ್ಯ ಬೊಮ್ಮಾಯಿ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous ArticleEgg ಗೂ ದಿಲ್ ಗೂ ಸಂಬಂಧವಿದೆ!
    Next Article ಜನ ಮೆಚ್ಚುಗೆಯ DK Shivakumar ಭಾಷಣ
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

    ಡಿಸೆಂಬರ್ 20, 2025

    482 ಎಕರೆ ಅರಣ್ಯಭೂಮಿ ಕಬಳಿಸಿದವ ಏನಾದ ಗೊತ್ತಾ?

    ಡಿಸೆಂಬರ್ 16, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RonaldMog ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • rylonnie shtori na plastikovie okna s elektroprivodom_hwSn ರಲ್ಲಿ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ಸಿಗೋದು ಡೌಟು
    • elektricheskie jaluzi_myot ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe