Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಒಂದೇ ದಿನದಲ್ಲಿ ಚಾಲನೆ ಪಡೆದ 108 Namma Clinic ಗಳು
    ಬೆಂಗಳೂರು

    ಒಂದೇ ದಿನದಲ್ಲಿ ಚಾಲನೆ ಪಡೆದ 108 Namma Clinic ಗಳು

    vartha chakraBy vartha chakraಫೆಬ್ರವರಿ 10, 2023Updated:ಮಾರ್ಚ್ 20, 202333 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬಡವರು, ಮಧ್ಯಮ ವರ್ಗದವರು, ಕೂಲಿಕಾರ್ಮಿಕರು ಸೇರಿದಂತೆ ಎಲ್ಲ ವರ್ಗದ ಜನರಿಗೂ ಅತಿ ಕಡಿಮೆ ವೆಚ್ಚದಲ್ಲಿ ಉತ್ತಮ ವೈದ್ಯಕೀಯ ಸೇವೆ ಒದಗಿಸುವ ಮಹತ್ವಾಕಾಂಕ್ಷೆಯಿಂದ ರಾಜ್ಯ ಸರ್ಕಾರವು ಫೆಬ್ರವರಿ 7, 2023 ರಂದು ರಾಜ್ಯಾದ್ಯಂತ ವಿವಿಧ ನಗರಗಳಲ್ಲಿ ಒಂದೇ ದಿನದಲ್ಲಿ  108 ನಮ್ಮ ಕ್ಲಿನಿಕ್  (Namma Clinic) ಗಳಿಗೆ ಚಾಲನೆ ನೀಡಿದೆ.

    ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ (Mahalakshmi Layout) ವಿಧಾನಸಭಾ ಕ್ಷೇತ್ರದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಚಿವರಾದ ಗೋಪಾಲಯ್ಯ (K Gopalaiah), ಡಾ.ಕೆ.ಸುಧಾಕರ್ (Dr K Sudhakar), ಸಮ್ಮುಖದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು (Basavaraj Bommai) ಎಲ್ಲ 108 ‘ನಮ್ಮ ಕ್ಲಿನಿಕ್’ ಗಳಿಗೂ ಅಧಿಕೃತವಾಗಿ ಚಾಲನೆ ನೀಡಿದರು. ಇದೇ ಕಾರ್ಯಕ್ರಮದಲ್ಲಿ, ಮಹಾಲಕ್ಷ್ಮಿ ಲೇಔಟ್‌ನ ಮಹಾಲಕ್ಷ್ಮಿಪುರ ವಾರ್ಡ್‌ನಲ್ಲಿ ಹೊಸದಾಗಿ ಸ್ಥಾಪಿಸಲಾದ ನಮ್ಮ ಕ್ಲಿನಿಕ್ ಅನ್ನು ಉದ್ಘಾಟಿಸಿ ಮತ್ತುಳಿದ 107 ಕ್ಲಿನಿಕ್ ಗಳಿಗೆ ಆನ್ಲೈನ್ ಮೂಲಕ ಚಾಲನೆ ನೀಡಿದರು.

    ರಾಜ್ಯ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮಾತನಾಡಿ, “108 ನಮ್ಮ ಕ್ಲಿನಿಕ್ ಗಳ ಪ್ರಾರಂಭವು ಸಾರ್ವತ್ರಿಕ ಮತ್ತು ಸಮಗ್ರ ಪ್ರಾಥಮಿಕ ಆರೋಗ್ಯ ರಕ್ಷಣೆಯ ಹೊಸ ಯುಗಕ್ಕೆ ನಾಂದಿ ಹಾಡಿದೆ. ನಮ್ಮ ಚಿಕಿತ್ಸಾಲಯಗಳ ಉದ್ದೇಶವು ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒಂದೇ ಸೂರಿನಡಿ ಸಂಯೋಜಿಸುವುದು ಮತ್ತು ಜನರಿಗೆ ಗುಣಮಟ್ಟದ ಪ್ರಾಥಮಿಕ ಆರೈಕೆಯನ್ನು ಒದಗಿಸುವುದು. ಈ ಹಿಂದೆ ನಗರ ಪ್ರದೇಶಗಳಲ್ಲಿಯೂ 50-60 ಸಾವಿರ ಜನಸಂಖ್ಯೆಗೆ ಕೇವಲ ಒಂದು ಕ್ಲಿನಿಕ್ ಮಾತ್ರ ಕಾರ್ಯನಿರ್ವಹಿಸುತ್ತಿತ್ತು. ನಮ್ಮ ಕ್ಲಿನಿಕ್ ಸ್ಥಾಪನೆಯಿಂದ ಪ್ರತಿ ಕ್ಲಿನಿಕ್ 15-20 ಸಾವಿರ ಜನರಿಗೆ ಸೇವೆ ಒದಗಿಸಬಹುದು. ನಮ್ಮ ಕ್ಲಿನಿಕ್‍ಗಳಲ್ಲಿ ರೆಫರಲ್ ಸೇವೆಗಳನ್ನು ಒದಗಿಸುವ ಮುಖಾಂತರ ದ್ವಿತೀಯ ಮತ್ತು ತೃತೀಯ ಹಂತದ ಆಸ್ಪತ್ರೆಗಳಿಗೂ ಇವು ಸಂಪರ್ಕ ಕಲ್ಪಿಸುತ್ತಿವೆ. ಆರೋಗ್ಯ ಸೇವೆಗಳನ್ನು ಪಡೆಯಲು ತಗುಲುವ ವೆಚ್ಚ ಕಡಿಮೆ ಮಾಡಲು ಸಹಕಾರಿಯಾಗಲಿದೆ. ನಗರ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ವಿಕೇಂದ್ರೀಕರಿಸಲಾಗುತ್ತಿದೆ” ಎಂದು ಹೇಳಿದರು.

    ಇವುಗಳ ವಿಶೇಷತೆ ಏನು?

    • ಎಲ್ಲಾ ವಯೋಮಾನದವರ ರೋಗಪತ್ತೆ, ಚಿಕಿತ್ಸೆ, ಆರೈಕೆ, ಲಸಿಕಾಕರಣ ಮತ್ತು ಪ್ರಯೋಗಾಲಯದ ಸೇವೆ
    • ಹೆಚ್ಚುವರಿ ಆರೋಗ್ಯ ಸೌಲಭ್ಯಗಳು
    • ಪ್ರಸವಪೂರ್ವ, ಪ್ರಸವಪೂರ್ವ ಆರೈಕೆ, ಮಾನಸಿಕ ಆರೋಗ್ಯ, ವೃದ್ಧರ ಆರೈಕೆ ಗಳನ್ನು ಒಳಗೊಂಡು 12 ಆರೋಗ್ಯ ಸೇವೆಗಳ ಪ್ಯಾಕೇಜ್
    • ಸಂಪೂರ್ಣ ಉಚಿತ ಸೇವೆ
    • ಹೆಚ್ಚುವರಿ ಚಿಕಿತ್ಸೆಗೆ ವಿಶೇಷ ಆಸ್ಪತ್ರೆಗಳಿಗೆ ಉಚಿತ ರೆಫರಲ್ ಸೇವೆಗಳು (ಅಗತ್ಯವಿದ್ದಲ್ಲಿ ಮಾತ್ರ)

    ಸೌಕರ್ಯಗಳು –

    ನಿರೀಕ್ಷಣಾ ಸ್ಥಳ, ಹೊರ ರೋಗಿಗಳ ತಪಾಸಣೆ ಕೊಠಡಿ (OPD), ವ್ಯಾಕ್ಸಿನೇಷನ್ ಕೊಠಡಿ (Vaccination Room), ಪ್ರಯೋಗಶಾಲೆ (Laboratory), ಯೋಗ, ಔಷಧಿ ದಾಸ್ತಾನು ಮತ್ತು ವಿತರಣಾ ಕೊಠಡಿ (Dispensary), ಆಡಳಿತ ಕಚೇರಿ, ಆಸ್ಪತ್ರೆ ಸಿಬ್ಬಂದಿ, ಮಹಿಳೆ ಮತ್ತು ಪುರುಷ ರೋಗಿಗಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ.

    ಸಿಬ್ಬಂದಿ –

    ನಮ್ಮ ಕ್ಲಿನಿಕ್‍ಗಳಲ್ಲಿ ತಲಾ ಒಬ್ಬರು ವ್ಯೆದ್ಯಾಧಿಕಾರಿ, ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು, ಡಿ-ದರ್ಜೆ ನೌಕರರು ಇರಲಿದ್ದಾರೆ.

    ಸೇವಾ ಸಮಯ –

    ನಮ್ಮ ಕ್ಲಿನಿಕ್‍ಗಳು ಸೋಮವಾರದಿಂದ ಶನಿವಾರದವರೆಗೆ  ಬೆಳಗ್ಗೆ 9 ಗಂಟೆಯಿಂದ ಸಂಜೆ 4.30ರವರೆಗೆ ಕಾರ್ಯಾನಿರ್ವಹಿಸುತ್ತಿವೆ.

    Verbattle
    Verbattle
    Verbattle
    #bangalore #drsudhakar #karnataka basavaraj bommai bommai HAL m Mahalakshmi Layout mi minister k gopalaiah namma clinic SAR ಆರೋಗ್ಯ ಬೊಮ್ಮಾಯಿ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous ArticleEgg ಗೂ ದಿಲ್ ಗೂ ಸಂಬಂಧವಿದೆ!
    Next Article ಜನ ಮೆಚ್ಚುಗೆಯ DK Shivakumar ಭಾಷಣ
    vartha chakra
    • Website

    Related Posts

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    ಫೆಬ್ರವರಿ 11, 2026

    ಬೆಂಗಳೂರಿನಲ್ಲಿ ಸಖಿ ಆಟೋ

    ಫೆಬ್ರವರಿ 9, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Gjudhf ರಲ್ಲಿ ಸರ್ಕಾರಕ್ಕೆ ಮುಜುಗರ ತಂದ ಬಿ.ಆರ್.ಪಾಟೀಲ್ ಲೆಟರ್ ಬಾಂಬ್ | BR Patil
    • onyxstormepubCow ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • Ejuntz ರಲ್ಲಿ Plastic ಬಳಕೆ ಬೇಡ ಎಂದ ಈಶ್ವರ ಖಂಡ್ರೆ | Eshwar Khandre
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.