Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದ 195 ತಾಲ್ಲೂಕುಗಳು ಬರ ಪೀಡಿತ | Drought
    Viral

    ರಾಜ್ಯದ 195 ತಾಲ್ಲೂಕುಗಳು ಬರ ಪೀಡಿತ | Drought

    vartha chakraBy vartha chakraಸೆಪ್ಟೆಂಬರ್ 13, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.13 – ಈ ಬಾರಿ ಮುಂಗಾರು ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಸದ ಪರಿಣಾಮ ರಾಜ್ಯದಲ್ಲಿ ಬರಗಾಲದ (Drought) ಛಾಯೆ ಆವರಿಸಿದೆ.ಈ ಸಂಬಂಧ ಅಧಿಕಾರಿಗಳ ವರದಿ ಆಧರಿಸಿ 195 ತಾಲ್ಲೂಕುಗಳನ್ನು ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡಲು ತೀರ್ಮಾನಿಸಿದೆ.
    ಬರ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾಮಗಾರಿ ಸೇರಿದಂತೆ ಹಲವು ವಿಷಯಗಳ ಕುರಿತು ಕಂದಾಯ ಸಚಿವ ಕೃಷ್ಣಭೈರೇಗೌಡ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
    ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೃಷ್ಣ ಬೈರೇಗೌಡ,ರಾಜ್ಯದ ಒಟ್ಟು 195 ತಾಲ್ಲೂಕುಗಳನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಬೇಕಾಗಿದೆ. ಇದರಲ್ಲಿ 161 ತಾಲ್ಲೂಕು ತೀವ್ರ ಬರಪೀಡಿತವಾಗಿವೆ.34 ತಾಲ್ಲೂಕುಗಳು ಸಾಧಾರಣ ಬರಪೀಡಿತ ತಾಲ್ಲೂಕುಗಳಾಗಿವೆ. ಮತ್ತೆ ಪರಿಶೀಲನೆ ನಡೆಸಿ ಇನ್ನೂ 40 ತಾಲ್ಲೂಕುಗಳನ್ನು ಹೆಚ್ಚುವರಿಯಾಗಿ ಬರಪೀಡಿತವೆಂದು ಘೋಷಣೆ ಮಾಡಲಾಗುತ್ತದೆ ಎಂದು ವಿವರಿಸಿದರು.

    ರಾಜ್ಯದಲ್ಲಿ ಶೇ.28ರಷ್ಟು ಮಳೆ ಕೊರತೆ ಇದೆ. ಅದರಲ್ಲೂ ಮಲೆನಾಡಿನಲ್ಲಿ ಶೇ.40ರಷ್ಟು, ದಕ್ಷಿಣ ಒಳನಾಡಿನಲ್ಲೂ ತೀವ್ರ ಕೊರತೆ ಇದೆ.ಬರ ಪೀಡಿತ ಪ್ರದೇಶಗಳಲ್ಲಿ ‌ಜಾನುವಾರುಗಳ ಮೇವಿಗೆ 20 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಸದ್ಯ ಜಿಲ್ಲಾಧಿಕಾರಿಗಳ ಬಳಿ 480 ಕೋಟಿ ರೂಪಾಯಿ ಹಣವಿದೆ. ಸದ್ಯಕ್ಕೆ ರಾಜ್ಯದಲ್ಲಿ ಎಲ್ಲೂ ಕೂಡ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದರು.
    ಬರಪೀಡಿತ ಪ್ರದೇಶಗಳಿಗೆ ನೆರವು ಕೋರಿ ಕೇಂದ್ರ ಸರ್ಕಾರಕ್ಕೆ 10 ದಿನದಲ್ಲಿ ಮನವಿ ಪತ್ರ ಸಲ್ಲಿಸಲಾಗುವುದು.ಬರಪೀಡಿತ ಪ್ರದೇಶಗಳ ಘೋಷಣೆಗೆ ಸಂಬಂಧಿಸಿದಂತೆ ಇರುವ ಮಾರ್ಗಸೂಚಿಗಳನ್ನು ಬದಲಾಯಿಸಲು ಜುಲೈನಲ್ಲಿ ಪ್ರಧಾನಿಯವರಿಗೆ ಮುಖ್ಯಮಂತ್ರಿಗಳು ಪತ್ರ ಬರೆದಿದ್ದು, ಪ್ರಧಾನಿಯವರ ಸಮಯವನ್ನು ಕೋರಿದ್ದು, ಸಮಯ ಸಿಕ್ಕರೆ ಮಾರ್ಗಸೂಚಿ ಬದಲಾವಣೆ ಮಾಡುವಂತೆ ಒತ್ತಾಯ ಮಾಡಲಾಗುತ್ತದೆ ಎಂದು ಹೇಳಿದರು.

    ಸದ್ಯ ಬರಪೀಡಿತ ತಾಲೂಕುಳಿಗೆ ಸಂಬಂಧಿಸಿದಂತೆ ಸಿದ್ಧ ಪಡಿಸಿರುವ ಪಟ್ಟಿ ಅಂತಿಮವಲ್ಲ ಇನ್ನು 15 ದಿನಗಳ ಕಾಯ್ದು ಎರಡನೇ ಸುತ್ತಿನಲ್ಲಿ ಬರ ಘೋಷಣೆ ಮಾಡಲಾಗುವುದು. ಪ್ರಸ್ತುತ ಸಮೀಕ್ಷೆ ಅನ್ವಯ ಲಭ್ಯವಿರುವ ವರದಿ ಅನ್ವಯ 195 ತಾಲೂಕುಗಳು ಬರ ಪೀಡಿತ ಪ್ರದೇಶಗಳಾಗಿವೆ. ಆದರೆ ಈಗಿರುವ ತಾಲೂಕುಗಳಿಗಿಂತ ಇನ್ನು ಹೆಚ್ಚಿನ ಪ್ರದೇಶಗಳು ಬರಪೀಡಿತ ಪ್ರದೇಶಗಳಿಗೆ ಒಳಪಡಬಹುದಾದ ಸಾಧ್ಯತೆ. ಮಲೆನಾಡು ಭಾಗದಲ್ಲೂ ತೀವ್ರ ನೀರಿನ ಕೊರತೆ ಉಂಟಾಗಿದ್ದು, ನಮಗೆ ನೀರು ದೊರಕುತ್ತಿಲ್ಲ ಎಂದ ಅವರು, ರಾಜ್ಯದಲ್ಲಿ ಒಟ್ಟಾರೆ ಶೇ.40 ರಷ್ಟು ಬರದ ಪರಿಸ್ಥಿತಿ ಇದ್ದು, ದಕ್ಷಿಣ ಒಳನಾಡಿನಲ್ಲೂ ಬರದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ತಿಳಿಸಿದರು.

    ಗ್ರಾಮೀಣ ಅಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ದುಡಿಯುವ ದಿನಗಳನ್ನು 100ರಿಂದ 150 ದಿನಗಳಿಗೆ ಹೆಚ್ಚಿಸಲಾಗಿದೆ. ರಾಜ್ಯದಲ್ಲಿ ತೀವ್ರ ಬರಪರಿಸ್ಥಿತಿ ಇರುವ ಹಿನ್ನಲೆಯಲ್ಲಿ ಹೆಚ್ಚಳ ಮಾಡಲಾಗಿದೆ. ಆದರೆ ಕೂಲಿ ಪ್ರಮಾಣ 307 ರೂ. ಮಾತ್ರ ಇರಲಿದೆ.ಇದನ್ನು ಹೆಚ್ಚು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು. ಮುಂದಿನ ವಾರ ದೆಹಲಿಗೆ ತೆರಳಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಈ ಸಂಬಂಧ ಮನವಿ ಮಾಡಲಾಗುವುದು ಎಂದು ಹೇಳಿದರು.

    Verbattle
    Verbattle
    Verbattle
    drought Karnataka News Trending
    Share. Facebook Twitter Pinterest LinkedIn Tumblr Email WhatsApp
    Previous Articleಮಧ್ಯಪ್ರದೇಶದ ಹನಿಟ್ರ್ಯಾಪ್ ಕಿಂಗ್ ಪಿನ್ ಅರೆಸ್ಟ್ | Honey Trap
    Next Article ಟಿಕೆಟ್ ವಂಚನೆಯಲ್ಲಿ ಬಿಜೆಪಿ, ಸಂಘ ಪರಿವಾರ ಮುಖಂಡರು..? | Chaitra Kundapura
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RicardoCor ರಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    • Daviddek ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • RicardoCor ರಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.