Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ
    ರಾಜಕೀಯ

    AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ

    vartha chakraBy vartha chakraಅಕ್ಟೋಬರ್ 17, 2022Updated:ಅಕ್ಟೋಬರ್ 17, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಅ.17- ನೆಹರು, ಗಾಂಧಿ ಕುಟುಂಬದ ಹೊರತಾಗಿ ಕಾಂಗ್ರೆಸ್ ಪಕ್ಷದ ನಾಯಕತ್ವಕ್ಕೆ ಚುನಾವಣೆ ನಡೆದಿದ್ದು ರಾಜ್ಯದ ಮುತ್ಸದ್ಧಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ.
    ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷರಾದ ರಾಜ್ಯದ ಎರಡನೆ ಹಾಗೂ ದೇಶದ ಎರಡನೇ ದಲಿತ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೊದಲು ರಾಜ್ಯದ ದಿವಂಗತ ಎಸ್. ನಿಜಲಿಂಗಪ್ಪ ಮತ್ತು ದಲಿತ ನಾಯಕ ದಿವಂಗತ ಬಾಬು ಜಗಜೀವನ್ ರಾಮ್ ಈ ಹುದ್ದೆ ಅಲಂಕರಿಸಿದ್ದರು
    ಎಐಸಿಸಿ ಅಧ್ಯಕ್ಷರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ದೇಶಾದ್ಯಂತ ಸುಮಾರು 9 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಮತದಾನ ಮಾಡಿದ್ದಾರೆ. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇರಳದ ಸಂಸದ ಶಶಿ ತರೂರ್ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಸೇರಿದಂತೆ ಗಾಂಧಿ ಕುಟುಂಬದ ಯಾರೂ ಸ್ಪರ್ಧೆ ಮಾಡುವುದಿಲ್ಲ ಎಂಬ ನಿರ್ಧಾರದ ಬಳಿಕ ಚುನಾವಣೆ ಸ್ವರೂಪವೇ ಬದಲಾಯಿತು.
    ಅಬ್ಬರ, ಆಡಂಬರವಿಲ್ಲದೆ ಪ್ರಚಾರ ನಡೆಯಿತು
    ಬ್ಲಾಕ್ ಕಾಂಗ್ರೆಸ್‍ನಿಂದ ತಲಾ ಒಬ್ಬರಂತೆ ಪಿಸಿಸಿ ಸದಸ್ಯರು ಚುನಾಯಿತರಾಗಿದ್ದಾರೆ. ಅವರು ಈ ಚುನಾವಣೆಯಲ್ಲಿ ಮತದಾನ ಮಾಡಿದ್ದು, ಕರ್ನಾಟಕದಲ್ಲಿ 500ಕ್ಕೂ ಹೆಚ್ಚು ಮಂದಿ ಮತದಾರರು ಹಕ್ಕು ಚಲಾಯಿಸಿದ್ದಾರೆ.
    ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ ಐಕ್ಯತಾ ಯಾತ್ರೆ ನಡೆಯುತ್ತಿದ್ದು, ಒಂದಿಷ್ಟು ಮಂದಿ ಪ್ರತಿನಿಧಿಗಳು ಭಾರತ ಮತ್ತು ರಾಜ್ಯದ ಯಾತ್ರಿಗಳಾಗಿ ಭಾಗವಹಿಸಿದ್ದಾರೆ. ಅವರ ಮತದಾನಕ್ಕೆ ಅನುಕೂಲವಾಗುವಂತೆ ಬಳ್ಳಾರಿಯಲ್ಲೇ ಮತಗಟ್ಟೆ ಸ್ಥಾಪಿಸಲಾಗಿತ್ತು
    ಉಳಿದಂತೆ ಎಲ್ಲರಿಗೂ ಪಕ್ಷದ ಕೇಂದ್ರ ಕಚೇರಿಯಲ್ಲಿ ಮತದಾನಕ್ಕೆ ಸೂಚನೆ ನೀಡಲಾಗಿತ್ತು ಅಖಿಲ ಭಾರತ ಮಟ್ಟದಲ್ಲಿ ಎಐಸಿಸಿಯ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ತಮ್ಮ ತವರು ರಾಜ್ಯದಲ್ಲಿ ಅಥವಾ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಮತದಾನಕ್ಕೆ ಅವಕಾಶ ಕಲ್ಪಸಲಾಗಿತ್ತು.
    ಅಕ್ಟೋಬರ್ 19ರಂದು ಮತ ಎಣಿಕೆ ನಡೆಯಲಿದೆ. ಗಾಂಧಿ ಕುಟುಂಬದ ಪರೋಕ್ಷ ಬೆಂಬಲವಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೇಶದೆಲ್ಲೆಡೆ ಕಾಂಗ್ರೆಸ್ ಮತದಾರರು ಒಲವು ತೋರಿದರೆ,ರಾಜ್ಯದ ಎಲ್ಲಾ ಮತದಾರರು ಖರ್ಗೆ ಅವರ ಪರವಾಗಿ ಹಕ್ಕು ಚಲಾಯಿಸಿದ್ದಾರೆಂದು ಹೇಳಲಾಗಿದೆ ಹೀಗಾಗಿ ಖರ್ಗೆ ಅವರ ಆಯ್ಕೆ ಖಚಿತವಾದಂತಾಗಿದೆ.

    ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಮನುಷ್ಯರು ಹೀಗೂ ಮಾಡ್ತಾರಾ?
    Next Article Special Report : ಎಲ್ಲರಿಗೂ ಪ್ರಿಯ ಈ ಮೀಸಲಾತಿ!
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • nc4ha ರಲ್ಲಿ ಧಾರ್ಮಿಕ ಸಂಸ್ಥೆಯ ಆಡಳಿತ ಮಂಡಳಿಯಾದ ಕೇಂದ್ರ ಸರ್ಕಾರ | HC Mahadevappa
    • ul81n ರಲ್ಲಿ ‘ Pulwama ದಾಳಿಗೆ ಕೇಂದ್ರ ಸರ್ಕಾರವೇ ಹೊಣೆ ‘ – ಸತ್ಯಪಾಲ್ ಮಾಲಿಕ್ | Satyapal Malik
    • sgdph ರಲ್ಲಿ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್.
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe